Homeಕರ್ನಾಟಕ'ಆತ್ಮಸಾಕ್ಷಿಗೂ ದರ ಇದೆಯೇ?' ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದರು. “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ” ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರು. ಈ ಬಗ್ಗೆ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌  ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು  ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ಸುರೇಶ್‌ ಕುಮಾರ್‌ಗೆ ಸರಿಯಾಗಿ ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಮಾಧ್ಯಮಗಳ ಜೊತೆ ಮಾತನಾಡಿದ್ದ ಎಸ್‌ಟಿ ಸೋಮಶೇಖರ್‌, “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ. “ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೋ, ಅವರಿಗೆ ಮತ ಹಾಕಿದ್ದೇನೆ. ಇದುವರೆಗೆ ಪಕ್ಷ ಹೇಳಿದ ಹಾಗೆ ಕೇಳಿದ್ದೇನೆ. ಆದರೆ, ಈ ಬಾರಿ ನನ್ನ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದವರ ಪರ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪ್ರಶ್ನಿಸಿದ್ದರು. ಇದಕ್ಕೆ ಎಕ್ಸ್‌ ಬಳಕೆದಾರರು ಸುರೇಶ್‌ ಕುಮಾರ್‌ಗೆ ಹಲವು ಘಟನೆಗಳನ್ನು ನೆನೆಪಿಸಿ ಮಂಗಳಾರತಿ ಮಾಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಸುರೇಶ್‌ ಕುಮಾರ್‌ ಅವರಿಗೆ ಪ್ರತಿಕ್ರಿಯಿಸಿರುವ ಚೆನ್ನ ಸೋಮೇಶ್ವರ ಎಂಬವರು, ಆತ್ಮಸಾಕ್ಷಿಗೆ ದರವಿಲ್ಲಾ… ದರ ಕಟ್ಟಲು ಪ್ರಯತ್ನಿಸಿದವರಿಗೆ ಆತ್ಮರಾಮನಿಂದ ತಪ್ಪಿಸಿಕೊಂಡರೂ ಕಾನೂನಿನ ಆಯಾಮದಿಂದ ತಪ್ಪಿಸಿಕೊಳ್ಳಲಾಗದು. ಸಂವಿಧಾನದ ಆತ್ಮವೇ ಪ್ರಜಾಪ್ರಭುತ್ವ, ಅದನ್ನು ತೆಲಂಗಾಣದಲ್ಲಿ, ಇತ್ತೀಚೆಗೆ ಚಂಡೀಗಡದಲ್ಲಿ ಮಾರಣಹೋಮ ಮಾಡಲೆತ್ನಿಸಿದ್ದಾಗಿದೆ ಎಂದು ಬಿಜೆಪಿಯ ಬಿಎಲ್‌ ಸಂತೋಷ್‌ಗೆ ಟಿಆರ್‌ಎಸ್‌ ಶಾಸಕರನ್ನು ಖರೀದಿಸಲು ಯತ್ನಿಸಿರುವ ಕುರಿತ ಸುದ್ದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದಾರೆ.

ಇದಲ್ಲದೆ ಕಳೆದ ಅವಧಿಯಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರಕಾರವನ್ನು ಉರುಳಿಸಿ 14 ಮಂದಿ ಕಾಂಗ್ರೆಸ್‌ ಶಾಸಕರು, ಮೂವರು ಜೆಡಿಎಸ್‌ ಶಾಸಕರು ಸೇರಿ ಒಟ್ಟು 17 ಮಂದಿ ಶಾಸಕರು ಆಪರೇಷನ್‌ ಕಮಲಕ್ಕೆ ಒಳಗಾಗಿ  ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಸರಕಾರವನ್ನು ರಚಿಸಿದ್ದರು. ಈ ವೇಳೆ ನಿಮ್ಮ ಆತ್ಮಸಾಕ್ಷಿ ಎಲ್ಲಿಗೆ ಹೋಗಿತ್ತು ಎಂದು ಹಲವರು ಸರೇಶ್‌ ಕುಮಾರ್‌ಗೆ ಪ್ರಶ್ನೆಯನ್ನು ಮಾಡಿದ್ದಾರೆ.

ರೋಹನ್‌ ಗೌಡ ಎಂಬವರು ಈ ಕುರಿತು ಪ್ರತಿಕ್ರಿಯಿಸಿದ್ದು, ನೀವು ಆತ್ಮಸಾಕ್ಷಿಯನ್ನು ನಿಮ್ಮ ಪಕ್ಷಕ್ಕೆ ಕರೆತಂದಾಗ ದರ ನಿಗದಿ ಆಗಿ ವಿಲೇವಾರಿ ಕೂಡ ಆಗಿತ್ತು ಎಂದು ಹೇಳಿದ್ದಾರೆ. ಸಾಗರ್‌ ಕಟೀಲ್‌ ಎಂಬವರು ಪ್ರತಿಕ್ರಿಯಿಸಿದ್ದು, ನಿಮ್ಮನ್ನೇ ಕೇಳಬೇಕು, ಹೋದ ಸರಕಾರದಲ್ಲಿ 18 ಶಾಸಕರನ್ನು ಖರೀದಿ ಮಾಡಿದ್ರಲ್ಲ, ಅವರ ಹತ್ತಿರ ಕೇಲ್ನೋಡಿ ಎಂದು ಪ್ರತಿಕ್ರಿಯಿಸಿದ್ದಾರೆ. ಗುರು ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು,  ಬಿಎಲ್ ಸಂತೋಷ್‌ ಅವರನ್ನು ಕೇಳಿ, ಅವರಿಗೆ ಷರತ್ತು, ದರ ಎಲ್ಲಾ ಚೆನ್ನಾಗಿ ಗೊತ್ತು, ಸಿಕ್ಕರೆ ತಪ್ಪಿಸಿಕೊಳ್ಳುವ ದಾರಿಗಳು ಕೂಡ ಗೊತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

ಭಾಸ್ಕರ್‌ ಎಂಬವರು ಈ ಕುರಿತು ಪ್ರತಿಕ್ರಿಯಿಸಿದ್ದು, ದರದ ಮುಂದೆ ಆತ್ಮಸಾಕ್ಷಿ ಓಡಿ ಹೋಗುತ್ತದೆ, ನಿಮ್ಮ ಸಹೋದ್ಯೋಗಿಗಳಿಗೆ ಒಮ್ಮೆ ಕೇಳಿ ನೋಡಿ ಎಂದು ಸುರೇಶ್‌ ಕುಮಾರ್‌ಗೆ ಕಾಲೆಳೆದಿದ್ದಾರೆ. ಅರುಣ್‌ ಎಂಬವರು ಪ್ರತಿಕ್ರಿಯಿಸಿ, ನೀವೇ ಅಲ್ವ ರೇಟ್‌ ಫಿಕ್ಸ್‌ ಮಾಡುವವರು, ನಿಮಗೆ ಮರೆತು ಹೋಯ್ತಾ ಎಂದು ಪ್ರಶ್ನಿಸಿದ್ದಾರೆ. ಕೃಷ್ಣ ಎಂಬವರು ಪ್ರತಿಕ್ರಿಯಿಸಿದ್ದು, ಆಪರೇಷನ್‌ ಕಮಲದಲ್ಲಿ ಆತ್ಮಸಾಕ್ಷಿಗೆ ದರ ನಿಗದಿ ಮಾಡಿದಂತಿದೆ ಎಂದು ಪೋಸ್ಟ್‌ ಮಾಡಿದ್ದಾರೆ. ಹಾರಿಸ್‌ ಎಂಬವರು ಪ್ರತಿಕ್ರಿಯಿಸಿ, ಮೊದಲು ನಿಮ್ಮನ್ನು ನೀವೇ ಕೇಳ್ಕೊಳ್ಳಿ ಎಂದು ಹೇಳಿದ್ದಾರೆ.

ಮುರಳಿ ರಮೇಶ್‌ ಎಂಬವರು, ಕಾಂಗ್ರೆಸ್‌ನಿಂದ ಬಂದು ಬಿಜೆಪಿ ಸೇರಿದಾಗ ನಿನ್ನ ಆತ್ಮಸಾಕ್ಷಿ ಏನಾಯ್ತು ಎಂದ ಸುರೇಶ್‌ ಕುಮಾರ್‌ಗೆ ಪ್ರಶ್ನಿಸಿದ್ದಾರೆ. ಅಪ್ಪು ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೊದಲ ಬಾರಿ ಅಂದರೆ 2008ರಲ್ಲಿ ಯಡಿಯೂರಪ್ಪ ಆಪರೇಷನ್ ಕಮಲ ಮಾಡಿ ಶಾಸಕರನ್ನು ಕರೆದುಕೊಂಡು ಸರ್ಕಾರ ಮಾಡಿದ್ರಲ್ಲ ಅವನನ್ನ ಕೇಳು ಎಂದು ಸುರೇಶ್‌ ಕುಮಾರ್‌ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ, ಕರ್ನಾಟಕ ಅಲ್ಲದೆ ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಆಪರೇಷನ್‌ ಕಮಲ ಮೂಲಕ ಈ ಮೊದಲು ಸರಕಾರವನ್ನು ರಚಿಸಿತ್ತು. ಇದರ ಇತ್ತೀಚಿನ ನಿದರ್ಶನ ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿದೆ. ಬಿಜೆಪಿ ಸರಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ಪ್ರತಿಪಕ್ಷಗಳ ನಾಯಕರನ್ನು ಪಕ್ಷಕ್ಕೆ ಸೇರುವಂತೆ ಒತ್ತಡ ಹಾಕುತ್ತಿದೆ ಎಂಬ ಆರೋಪಗಳು ಕೂಡ ಈ ಮೊದಲು ಕೇಳಿ ಬಂದಿತ್ತು. ತೆಲಂಗಾಣದಲ್ಲಿ ಬಿಎಲ್‌ ಸಂತೋಷ್‌ ಟಿಆರ್‌ಎಸ್‌ ಶಾಸಕರನ್ನು ಖರೀದಿಸಲು ಯತ್ನವನ್ನು ಮಾಡಿ ಸಿಕ್ಕಿಬಿದ್ದಿದ್ದರು. ಈ ಕುರಿತ ಪ್ರಕರಣವನ್ನು ಅವರು ಇದೀಗ ಎದುರಿಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ರಾಜ್ಯಸಭೆ ಚುನಾವಣೆಯಲ್ಲಿ ಎಸ್‌ಟಿ ಸೋಮಶೇಖರ್‌ ಅಡ್ಡ ಮತದಾನ ಮಾಡಿದ್ದಕ್ಕೆ ಕೇಳಿದ ‘ಆತ್ಮಸಾಕ್ಷಿಯ ಪ್ರಶ್ನೆಗೆ ಸಾಮಾಜಿಕ ಜಾಲತಾಣ ಬಳಕೆದಾರರು ಸರಿಯಾಗಿ ಪಾಠ ಮಾಡಿದ್ದಾರೆ.

 ಇದನ್ನು ಓದಿ: ರಾಜ್ಯಸಭಾ ಚುನಾವಣೆ: ಅಡ್ಡ ಮತದಾನ ಮಾಡಿದ ಎಸ್‌.ಟಿ ಸೋಮಶೇಖರ್: ವರದಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...