Homeಮುಖಪುಟರಾಜ್ಯಸಭೆಯಲ್ಲಿ ಬಹುಮತ ಪಡೆಯುವಲ್ಲಿ ಬಿಜೆಪಿ ನೇತೃತ್ವದ NDA ವಿಫಲ

ರಾಜ್ಯಸಭೆಯಲ್ಲಿ ಬಹುಮತ ಪಡೆಯುವಲ್ಲಿ ಬಿಜೆಪಿ ನೇತೃತ್ವದ NDA ವಿಫಲ

- Advertisement -
- Advertisement -

240 ಸದಸ್ಯ ಬಲದ ರಾಜ್ಯಸಭೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಒಕ್ಕೂಟವು ಬಹುಮತದ 121 ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದು, ಬಹುಮತಕ್ಕೆ ಎನ್‌ಡಿಎಗೆ ಇನ್ನೂ ನಾಲ್ಕು ಸ್ಥಾನಗಳ ಅಗತ್ಯವಿದೆ.

ಮಂಗಳವಾರ ಬಿಜೆಪಿ 10 ರಾಜ್ಯಸಭಾ ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಮೊದಲು 20 ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿತ್ತು. 30 ಸ್ಥಾನಗಳ ಗೆಲುವಿನೊಂದಿಗೆ ರಾಜ್ಯಸಭೆಯಲ್ಲಿ ಬಿಜೆಪಿಯ ಸಂಸದರ ಸಂಖ್ಯೆ 97ಕ್ಕೆ ಮತ್ತು ಎನ್‌ಡಿಎ ಬಲ 117ಕ್ಕೆ ಏರಿಕೆಯಾಗಿದೆ.

ಐವರು ನಾಮನಿರ್ದೇಶಿತ ಸಂಸದರು ಸೇರಿದಂತೆ 97 ಸದಸ್ಯರೊಂದಿಗೆ ಬಿಜೆಪಿ ರಾಜ್ಯಸಭೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಉಳಿದಿದೆ, ಕಾಂಗ್ರೆಸ್ 29 ಸದಸ್ಯರನ್ನು ಹೊಂದಿದೆ. ಮೂರು ರಾಜ್ಯಗಳಲ್ಲಿ 15 ಸ್ಥಾನಗಳಿಗೆ ನಡೆದ ರಾಜ್ಯಸಭಾ ಚುನಾವಣೆಯು ಅಡ್ಡ ಮತದಾನ ಕೂಡ ನಡೆದಿದೆ. ಬಿಜೆಪಿ 10 ಸ್ಥಾನಗಳನ್ನು, ಕಾಂಗ್ರೆಸ್ ಮೂರು ಮತ್ತು ಸಮಾಜವಾದಿ ಪಕ್ಷವು ಎರಡು ಸ್ಥಾನಗಳನ್ನು ಗೆದ್ದಿದೆ. ಉತ್ತರಪ್ರದೇಶದಲ್ಲಿ ಮತ್ತು ಹಿಮಾಚಲ ಪ್ರದೇಶದಲ್ಲಿ ಹೆಚ್ಚುವರಿ ಗೆಲುವು ಬಿಜೆಪಿಗೆ ಪ್ರಮುಖ ಲಾಭದಾಯಕವಾಗಿದೆ.

ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನ ಆರು ಶಾಸಕರು ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಸೋತಿದ್ದರು. ಬಿಜೆಪಿಯ ಹರ್ಷವರ್ಧನ್ ಜಯಗಳಿಸಿದ್ದರು. ಈ ಫಲಿತಾಂಶವು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಬಹುಮತವನ್ನು ಕಳೆದುಕೊಂಡಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಎಂಟು ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಮೂರು ಅಭ್ಯರ್ಥಿಗಳನ್ನು ಹಾಕಿದ್ದ ಸಮಾಜವಾದಿ ಪಕ್ಷವು ಕೇವಲ ಎರಡು ಸ್ಥಾನಗಳನ್ನು  ಗೆದ್ದುಕೊಂಡಿದೆ. ಉತ್ತರ ಪ್ರದೇಶದಲ್ಲಿ ಮಾಜಿ ಕೇಂದ್ರ ಸಚಿವ ಆರ್‌ಪಿಎನ್‌ ಸಿಂಗ್‌, ಮಾಜಿ ಸಂಸದ ಚೌಧರಿ ತೇಜ್‌ವೀರ್‌ ಸಿಂಗ್‌, ಅಮರ್‌ಪಾಲ್‌ ಮೌರ್ಯ, ಸಂಗೀತಾ ಬಲ್ವಂತ್‌, ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ, ಮಾಜಿ ಶಾಸಕ ಸಾಧನಾ ಸಿಂಗ್‌, ನವೀನ್‌ ಜೈನ್‌ ಮತ್ತು ಸಂಜಯ್‌ ಸೇಠ್‌ ಗೆದ್ದ 8 ಬಿಜೆಪಿ ಅಭ್ಯರ್ಥಿಗಳು. ಸಮಾಜವಾದಿ ಪಕ್ಷದ ಜಯಾ ಬಚ್ಚನ್ ಮತ್ತು ರಾಮ್‌ಜಿ ಲಾಲ್ ಸುಮನ್ ಕೂಡ ಗೆದ್ದಿದ್ದಾರೆ. ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದ ಮೂರನೇ ಅಭ್ಯರ್ಥಿ ಅಲೋಕ್ ರಂಜನ್ ಸೋಲು ಅನುಭವಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮೂರು ಸ್ಥಾನಗಳನ್ನು ಮತ್ತು ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದರು. ಹಿಮಾಚಲ ಪ್ರದೇಶದಲ್ಲಿ, ರಾಜ್ಯದಿಂದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷದ ಆರು ಶಾಸಕರು ಸೇರಿದಂತೆ ಒಂಬತ್ತು ಶಾಸಕರು ಅಡ್ಡ ಮತದಾನ ಮಾಡಿದ್ದರಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿತ್ತು.

ಇದನ್ನು ಓದಿ: ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...