Homeಮುಖಪುಟಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

- Advertisement -
- Advertisement -

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಜೀವ ಉಳಿಸಿದ ರ್ಯಾಟ್‌ ಕಾರ್ಯಾಚರಣೆಯ(Rat Miner) ಭಾಗವಾಗಿದ್ದ ವಕೀಲ್‌ ಹಸನ್‌ ಅವರ ಮನೆಯನ್ನು ದಿಲ್ಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಬುಧವಾರ ಬೆಳಿಗ್ಗೆ ನೆಲಸಮಗೊಳಿಸಿದೆ.

ಈಶಾನ್ಯ ದಿಲ್ಲಿಯ ಖಜೂರಿ ಖಸ್‌ ಗ್ರಾಮದಲ್ಲಿ ಜಮೀನಿನ ಒತ್ತುವರಿ ಆರೋಪದಲ್ಲಿ ವಕೀಲ್‌ ಹಸನ್‌ ಅವರ ಮನೆಯನ್ನು ತೆರವುಗೊಳಿಸಲಾಗಿದೆ. ಈ ಜಮೀನು ಸರಕಾರಿ ಜಮೀನು ಎಂದು ಡಿಡಿಎ ಹೇಳಿಕೊಂಡಿದೆ.

ಈ ಕುರಿತು ಮಾದ್ಯಮಗಳಿಗೆ ಹೇಳಿಕೆ ನೀಡಿರುವ ಹಸನ್‌ ಅವರು, ಮನೆ ನೆಲಸಮಗೊಳಿಸುವ ಕುರಿತಂತೆ ಯಾವುದೇ ನೋಟಿಸ್‌ ದೊರೆತಿಲ್ಲ. ಸಕ್ರಮ ಕಾಲನಿಯಲ್ಲಿ ನಾವು ವಾಸಿಸುತ್ತಿದ್ದೇವೆ. 2012-13ರಲ್ಲಿ ನನ್ನ ಮನೆ ನಿರ್ಮಿಸಿದ್ದೆ. ತೆರವು ವೇಳೆ ನಾನು ಮತ್ತು ನನ್ನ ಪತ್ನಿ ಮನೆಯಲ್ಲಿರಲಿಲ್ಲ. ಡಿಡಿಎ ಅಧಿಕಾರಿಗಳು ಬರುವಾಗ ನಮ್ಮ ಮೂವರು ಮಕ್ಕಳು ಮಾತ್ರ ಮನೆಯಲ್ಲಿದ್ದರು. ಅವರಿಗೆ ತೆರವು ಕಾರ್ಯಾಚರಣೆ ವೇಳೆ ತೊಂದರೆಯಾಗಿದೆ. ಈಗ ಎಲ್ಲಿಗೆ ಹೋಗುವುದೆಂದು ತಿಳಿದಿಲ್ಲ. ನಾನು ಮನೆಯತ್ತ ಬಂದಾಗ ಹತ್ತಿರದ ಠಾಣೆಗೆ ನನ್ನನ್ನು ಕರೆದೊಯ್ಯಲಾಯಿತು. ಅಲ್ಲಿ ನನ್ನ ಫೋನ್‌ ವಶಪಡಿಸಿಕೊಂಡಿದ್ದಾರೆ. ಬಾಡಿಗೆಗೆ ಮನೆ ಕೂಡ ಈಗ ದೊರೆಯುತ್ತಿಲ್ಲ ಎಂದು ಹಸನ್‌ ಹೇಳಿಕೊಂಡಿದ್ದಾರೆ.

ಮನೆ ಕೆಡವುವ ಮುನ್ನ ಡಿಡಿಎ ಯಾವುದೇ ನೋಟಿಸ್ ನೀಡಿಲ್ಲ. ನನ್ನ ಮನೆಯನ್ನು ಮಾತ್ರ ನಾನು ಬಹುಮಾನವಾಗಿ ಕೇಳಿದ್ದೆ, ಆದರೆ ಡಿಡಿಎ ಯಾವುದೇ ಸೂಚನೆ ನೀಡದೆ ನನ್ನ ಮನೆಯನ್ನು ಕೆಡವಿದೆ, ಆದರೆ ಈ ಮೊದಲು ಮನೆಯನ್ನು ಮುಟ್ಟುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿತ್ತು ಎಂದು ಅವರು ಹೇಳಿದರು.

ಈಶಾನ್ಯ ದೆಹಲಿ ಸಂಸದ ಮನೋಜ್‌ ತಿವಾರಿ ಈ ಕುರಿತು ಪ್ರತಿಕ್ರಿಯಿಸಿದ್ದು, ಹಸನ್‌ ಅವರಿಗೆ ಪ್ರಧಾನ್‌ ಮಂತ್ರಿ ಆವಾಸ್‌ ಯೋಜನೆಯ ಪ್ರಯೋಜನ ದೊರೆಯುವಂತೆ ಮಾಡುವುದಾಗಿ ತಿಳಿಸಿದ್ದಾರೆ.

ಟಿಎಂಸಿಯ ರಾಜ್ಯಸಭಾ ಸಂಸದೆ ಸಾಗರಿಕಾ ಘೋಸ್ ಅವರು ಹಸನ್‌ ಮನೆ ಧ್ವಂಸವನ್ನು ದುರಂತ ಮತ್ತು ನಾಚಿಕೆಗೇಡು ಎಂದು ಬಣ್ಣಿಸಿದ್ದಾರೆ. ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಬಿದ್ದಿದ್ದ 41 ಕಾರ್ಮಿಕರನ್ನು ತನ್ನ ತಂಡದೊಂದಿಗೆ ರಕ್ಷಿಸಿದ ಧೀರ ವಕೀಲ್ ಹಾಸನ್ ಅವರ ಮನೆಯನ್ನು ಕೆಡವಲಾಗಿದೆ. ಒಮ್ಮೆ ಹೀರೋ ಆಗಿದ್ದವರು ಇಂದು ನಿರಾಶ್ರಿತರಾಗಿದ್ದಾರೆ. ನಮ್ಮ ಧೈರ್ಯಶಾಲಿ ನಾಗರಿಕರಿಗೆ ನಾವು ಈ ರೀತಿ ಪ್ರತಿಫಲ ನೀಡುವುದಾ ಎಂದು ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ ನಲ್ಲಿ ಪ್ರಶ್ನಿಸಿದ್ದಾರೆ.

ಕಳೆದ ವರ್ಷ ನವೆಂಬರ್ 15ರಂದು ಕುಸಿದ ಸುರಂಗದಿಂದ ಸಿಕ್ಕಿಬಿದ್ದ 41 ಕಾರ್ಮಿಕರನ್ನು ರಕ್ಷಿಸುವ ಎಲ್ಲಾ ಪ್ರಯತ್ನಗಳು ಅಪೇಕ್ಷಿತ ಫಲಿತಾಂಶಗಳನ್ನು ನೀಡದಿದ್ದಾಗ ಹಸನ್‌ ಅವರ ರ್ಯಾಟ್‌ ಕಾರ್ಯಾಚರಣೆಯ  ತಂಡವನ್ನು ಸಿಲ್ಕ್ಯಾರಾಕ್ಕೆ ಕರೆಸಲಾಯಿತು. ಅವರ ತಂಡವು ಸುರಂಗದಲ್ಲಿ ಸಿಕ್ಕಿಬಿದ್ದಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ಸ್ಥಳಾಂತರಿಸಿತ್ತು. ತಮ್ಮ ಅಮೋಘ ಕಾರ್ಯಾಚರಣೆಗೆ  ಉತ್ತರಾಖಂಡ ಮುಖ್ಯಮಂತ್ರಿ ಘೋಷಿಸಿದ ಪರಿಹಾರ ಮೊತ್ತವನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದರು.

ಇದನ್ನು ಓದಿ: ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...