Homeಮುಖಪುಟಚುನಾವಣಾ ಬಾಂಡ್ ಖರೀದಿಸಲು ಆರೆಸ್ಸೆಸ್‌ನವರು ಎನ್ನಲಾದ ವ್ಯಕ್ತಿಗಳಿಗೆ ರೂ. 2.5 ಕೋಟಿ ನೀಡಿದ್ದ ಮಾಜಿ ನ್ಯಾಯಾಧೀಶರಿಗೆ...

ಚುನಾವಣಾ ಬಾಂಡ್ ಖರೀದಿಸಲು ಆರೆಸ್ಸೆಸ್‌ನವರು ಎನ್ನಲಾದ ವ್ಯಕ್ತಿಗಳಿಗೆ ರೂ. 2.5 ಕೋಟಿ ನೀಡಿದ್ದ ಮಾಜಿ ನ್ಯಾಯಾಧೀಶರಿಗೆ ವಂಚನೆ

- Advertisement -
- Advertisement -

ತಮ್ಮ ಕುಟುಂಬಕ್ಕೆ ಸಹಾಯ ಮಾಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಸಂಘಟನೆಗೆ ಸೇರಿದವರು ಎನ್ನಲಾದ ಇಬ್ಬರು ವ್ಯಕ್ತಿಗಳಿಗೆ ಕೋಟ್ಯಾಂತರ ರೂಪಾಯಿ ಹಣ ಕೊಟ್ಟ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರು ವಂಚನೆಗೆ ಒಳಗಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಆಂಧ್ರ ಪ್ರದೇಶ ಹೈಕೋರ್ಟ್ ಮತ್ತು ಇನ್ನೊಂದು ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ನ್ಯಾಯಾಧೀಶರು, ಬಿಜೆಪಿಗೆ ಚುನಾವಣಾ ಬಾಂಡ್ ಖರೀದಿಸಲು ಎಂದು ಭಾವಿಸಿ ಇಬ್ಬರು ವ್ಯಕ್ತಿಗಳಿಗೆ 2.5 ಕೋಟಿ ರೂ. ನೀಡಿದ್ದರು. ಇದಕ್ಕೆ ಪ್ರತಿಯಾಗಿ ಆ ವ್ಯಕ್ತಿಗಳು ಯುಎಸ್‌ನಲ್ಲಿ ಅವರ ಮೊಮ್ಮಕ್ಕಳಿಗೆ ಉದ್ಯೋಗ ನೀಡುವ ಭರವಸೆ ಕೊಟ್ಟಿದ್ದರು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಹೈದರಾಬಾದ್‌ನಲ್ಲಿ ನೆಲೆಸಿರುವ ಅನಿಲ್ ಮತ್ತು ಶ್ರೀಧರ್ (ಹೆಸರು ಬದಲಿಸಲಾಗಿದೆ) ಎಂಬ ವ್ಯಕ್ತಿಗಳಿಗೆ ನಾನು ಹಣ ನೀಡಿದ್ದೇನೆ. ಎರಡು ವರ್ಷಗಳಿಂದ ಆ ಹಣವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ನ್ಯಾಯಾಧೀಶರು ಅಸಹಾಯಕತೆ ತೋಡಿಕೊಂಡಿರುವುದಾಗಿ ನ್ಯೂಸ್ ಮಿನಿಟ್ ಹೇಳಿದೆ. ಇಬ್ಬರು ವ್ಯಕ್ತಿಗಳ ವಿರುದ್ದ ನ್ಯಾಯಾಧೀಶರು ದೂರು ದಾಖಲಿಸಿದ್ದಾರೆ. ಈ ಪೈಕಿ ಒಬ್ಬನಿಗೆ ಜಾಗತಿಕ ಹಿಂದೂ ಕಾಂಗ್ರೆಸ್ ಸಂಘಟನೆಯೊಂದಿಗೆ ಸಂಪರ್ಕವಿದೆ ಎನ್ನಲಾಗಿದೆ.

ಚುನಾವಣಾ ಬಾಂಡ್‌ಗಳು ಬಡ್ಡಿ ರಹಿತ ಬಾಂಡ್‌ಗಳಾಗಿವೆ. ಇದನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ನಾಗರಿಕರು ಅಥವಾ ಕಾರ್ಪೊರೇಟ್ ಸಂಸ್ಥೆಗಳು ಯಾವುದೇ ಮೌಲ್ಯಕ್ಕೆ ಖರೀದಿಸಬಹುದು ಮತ್ತು ನೋಂದಾಯಿತ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ನೀಡಬಹುದು. ಇತ್ತೀಚಿನ ಐತಿಹಾಸಿಕ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದೆ. ಅದು ಅಸಂವಿಧಾನಿಕ ಎಂದಿದೆ. ಇದರಿಂದ ಅಪರಿಚಿತರಿಗೆ ಹಣ ಕೊಟ್ಟಿರುವ ನ್ಯಾಯಾಧೀಶರು ಬಾಂಡ್‌ಗಳನ್ನು ಪಡೆಯಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ ಪಡೆದ ಇಬ್ಬರ ವಿರುದ್ದ ವಂಚನೆ ದೂರು ದಾಖಲಿಸಿದ್ದಾರೆ.

ನ್ಯಾಯಾಧೀಶರ ಪ್ರಕಾರ, ತಾವು ದೂರು ನೀಡಿರುವ ಅನಿಲ್ ಎಂಬ ವ್ಯಕ್ತಿಯು ತನ್ನ ಅಳಿಯನಿಗೆ ಪರಿಚಿತನಿದ್ದ. ಅವರು ನಾವು ಆರೆಸ್ಸೆಸ್‌ನ ಪ್ರಮುಖ ನಾಯಕರು ಎಂಬಂತೆ ಬಿಂಬಿಸಿಕೊಂಡಿದ್ದರು. ನಾವು ಹಣದೊಂದಿಗೆ ಚುನಾವಣಾ ಬಾಂಡ್ ಗಳನ್ನು ಖರೀದಿಸಬಲ್ಲೆವು. ಅದಕ್ಕೆ ಪ್ರತಿಯಾಗಿ ಅಮೆರಿಕಾದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರುವ ನಿಮ್ಮ ಮೊಮ್ಮಕ್ಕಳಿಗೆ ಉದ್ಯೋಗ ದೊರಕಿಸಿಕೊಡಬಲ್ಲೆವು ಎಂದು ಭರವಸೆ ನೀಡಿದ್ದರು ಎಂದು ಹೇಳಲಾಗಿದೆ.

ಈ ಭರವಸೆಯನ್ನು ನಂಬಿದ್ದ 72 ವರ್ಷದ ನ್ಯಾಯಾಧೀಶರು ತಮ್ಮ ಪತ್ನಿ ಹಾಗೂ ತಮ್ಮ ಖಾತೆಯಿಂದ ಹಣವನ್ನು ಡ್ರಾ ಮಾಡಿ, ಆ ಇಬ್ಬರು ವ್ಯಕ್ತಿಗಳಿಗೆ ನೀಡಿದ್ದರು. ನಾನು ನೀಡಿದ ಪ್ರತಿ ಪೈಸೆಯೂ ಬಿಳಿ ಹಣವಾಗಿತ್ತು ಎಂದು ತಮ್ಮ ವಹಿವಾಟಿನ ಕುರಿತು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ. ಹಣ ಕೊಟ್ಟ ಬಳಿಕ ಚುನಾವಣಾ ಬಾಂಡ್‌ಗಳನ್ನು ಪಡೆಯಲು ಹಾಗೂ ಆ ಇಬ್ಬರು ವ್ಯಕ್ತಿಗಳು ತಮ್ಮ ಭರವಸೆ ಈಡೇರಿಸುತ್ತಾರೆ ಎಂದು ಕಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನ್ಯಾಯಾಧೀಶರು ಅಳಲು ತೋಡಿಕೊಂಡಿದ್ದಾರೆ.

ಹೈದಾರಾಬಾದ್‌ನ ಫಿಲ್ಮ್ ನಗರ್ ಪೊಲೀಸ್ ಠಾಣೆಗೆ ದೂರು ನೀಡಿರುವ ನ್ಯಾಯಾಧೀಶರು, “ಇಬ್ಬರು ವ್ಯಕ್ತಿಗಳ ಮಾತನ್ನು ನಂಬಿ ನನ್ನ ಪತ್ನಿ ಮತ್ತು ಪುತ್ರಿಯರು ಕಾಲ ಕಾಲಕ್ಕೆ ಅವರ ಖಾತೆಗೆ ಸುಮಾರು 2.5 ಕೋಟಿ ರೂ. ಹಣ ಕಳುಹಿಸಿದ್ದಾರೆ. ಇದಕ್ಕೆ ನನ್ನ ಬಳಿ ವಾಟ್ಸಾಪ್ ಸಂದೇಶ ಸಾಕ್ಷಿಯಿದೆ. ನಾವು ದೊಡ್ಡ ಮೊತ್ತ ನೀಡಿ ಮನವಿ ಮಾಡಿಕೊಂಡರೂ ಅವರು ನಮಗೆ ಯಾವುದೇ ಬಾಂಡ್ ಕೊಟ್ಟಿಲ್ಲ. ಅಲ್ಲದೆ, ನಮ್ಮ ಮೊಮ್ಮಕ್ಕಳಿಗೆ ಯುಎಸ್‌ನಲ್ಲಿ ಉದ್ಯೋಗ ಕೊಡಿಸುವ ಭರವಸೆಯನ್ನೂ ಈಡೇರಿಸಿಲ್ಲ. ಇದು ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ಹಣ ಸಂಗ್ರಹಿಸುವುದನ್ನು ವಿರೋಧಿಸುವ ಸುಪ್ರೀಂ ಕೋರ್ಟ್ ಇತ್ತೀಚಿನ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಯಾವುದೇ ಬಾಂಡ್‌ಗಳನ್ನು ನೀಡದೆ ನನ್ನ ಬಳಿಯಿಂದ ಬರೋಬ್ಬರಿ 2.5 ಕೋಟಿ ರೂ. ಮೊತ್ತ ಸಂಗ್ರಹಿಸಿರುವುದು ಹಣ ದುರುಪಯೋಗಪಡಿಸಿಕೊಂಡಿರುವುದನ್ನು ಸ್ಪಷ್ಟಪಡಿಸುತ್ತದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಬಿಜೆಪಿ ಇಂತಹ ವಂಚನೆ ಮಾಡುತ್ತದೆ ಎಂದು ನಾನು ಭಾವಿಸುವುದಿಲ್ಲ. ಇಬ್ಬರು ವ್ಯಕ್ತಿಗಳು ಆರ್‌ಎಸ್‌ಎಸ್ ಮತ್ತು ಬಿಜೆಪಿ ಹೆಸರು ಬಳಸಿಕೊಂಡು ನಮಗೆ ವಂಚಿಸಿದ್ದಾರೆ. ನಾನು ಯಾವುದೇ ರಾಜಕೀಯ ಪಕ್ಷದ ಬೆಂಬಲಿಗ ಅಲ್ಲ. ನನ್ನ ಮೊಮ್ಮಕ್ಕಳಿಗಾಗಿ ಇದೆಲ್ಲವನ್ನು ಮಾಡಿದ್ದೇನೆ. ಈ 74ನೇ ವಯಸ್ಸಿನಲ್ಲಿ ನಾನು ನನಗಾಗಿ ಏನು ಬಯಸಲು ಸಾಧ್ಯ? ನನ್ನ ಮೊಮ್ಮಕ್ಕಳು ಕೆಲಸ ಪಡೆದು ಅವರ ಫೋಷಕರನ್ನು ಚೆನ್ನಾಗಿ ನೋಡಿಕೊಳ್ಳಲಿ ಎಂಬ ಉದ್ದೇಶದಿಂದ ಇದನ್ನು ಮಾಡಿದೆ ಎಂದಿದ್ದಾರೆ.

ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿರುವ ಫೆಬ್ರವರಿ 15,2024 ರ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿದ ನ್ಯಾಯಾಧೀಶರು, ನನಗೆ ಬಾಂಡ್‌ಗಳನ್ನು ನೀಡಬೇಕೆಂದು ನಾನು ಒತ್ತಾಯಿಸಿದರೂ, ನೀಡದೆ ಹಣ ಸಂಗ್ರಹಿಸಿರುವುದು ಅಪರಾಧವಾಗಿದೆ. ಇದು ನಂಬಿಕೆಯ ಉಲ್ಲಂಘನೆ, ಕ್ರಿಮಿನಲ್ ದುರ್ಬಳಕೆ, ವಂಚನೆಯಾಗಿದೆ. ಆರೋಪಿಗಳು ಈ ವಿಷಯವನ್ನು ಇತ್ಯರ್ಥಪಡಿಸಿದರೆ, ನಾನು ಪ್ರಕರಣವನ್ನು ಹಿಂಪಡೆಯುತ್ತೇನೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ನ್ಯೂಸ್‌ ಮಿನಿಟ್ ಸುದ್ದಿ ಸಂಸ್ಥೆಯು ನ್ಯಾಯಾಧೀಶರು ಹೆಸರಿಸಿರುವ ಅನಿಲ್ ಅವರನ್ನು ಸಂಪರ್ಕಿಸಿದಾಗ ಅವರು ಆರೋಪಗಳನ್ನು ಅಲ್ಲಗಳೆದಿದ್ದಾರೆ. “ನ್ಯಾಯಾಧೀಶರ ಆರೋಪ ಸುಳ್ಳಾಗಿದೆ. ನಾನೊಬ್ಬ ಸಣ್ಣ ವ್ಯಕ್ತಿ. ನನಗೆ ಆರ್‌ಎಸ್‌ಎಸ್‌ ಅಥವಾ ಬಿಜೆಪಿಯೊಂದಿಗೆ ಯಾವುದೇ ಸಂಪರ್ಕವಿಲ್ಲ. ನಾವು ಎಂದಿಗೂ ಹಣ ಪಡೆದುಕೊಂಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ತನಗೆ ಮಾಜಿ ನ್ಯಾಯಾಧೀಶರ ಪರಿಚಯವಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಎಲ್ಲರನ್ನೂ ಬಲ್ಲಂತೆ ನನಗೆ ನ್ಯಾಯಾಧೀಶರ ಪರಿಚಯವಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಆದರೆ, ಅನಿಲ್ ಅವರ ಲಿಂಕ್ಡ್ ಇನ್ ವ್ಯಕ್ತಿ ವಿವರದ ಪ್ರಕಾರ, ಅವರು ಆರೆಸ್ಸೆಸ್ ನೊಂದಿಗೆ ನಿಕಟವಾಗಿ ಕಾರ್ಯಾಚರಿಸುವ ವಿಶ್ವ ಹಿಂದೂ ಆರ್ಥಿಕ ವೇದಿಕೆಯ ಭಾಗವಾದ ವಿಶ್ವ ಹಿಂದೂ ಕಾಂಗ್ರೆಸ್ ಸಂಘಟನೆಯ ಸಮನ್ವಯಕಾರರಾಗಿದ್ದಾರೆ ಎಂದು ತಿಳಿದು ಬಂದಿದೆ.

ಫಿಲ್ಮ್ ನಗರ್ ಠಾಣೆ ಪೊಲೀಸರು ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 406 (ಕ್ರಿಮಿನಲ್ ವಿಶ್ವಾಸಘಾತುಕತನ), ಸೆಕ್ಷನ್420(ವಂಚನೆಯ ಕೆಲಸ)ದೊಂದಿಗೆ ಸೆಕ್ಷನ್ 34 (ಸಾಮಾನ್ಯ ಉದ್ದೇಶದೊಂದಿಗೆ ಹಲವಾರು ವ್ಯಕ್ತಿಗಳಿಗೆ ಎಸಗುವ ವಂಚನೆ) ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ.

ಆದರೆ, ನ್ಯೂಸ್ ಮಿನಿಟ್‌ನಲ್ಲಿ ವರದಿ ಪ್ರಕಟವಾಗುತ್ತಿದ್ದಂತೆಯೆ, ನ್ಯಾಯಾಧೀಶರು ಪೊಲೀಸ್ ಠಾಣೆಯಿಂದ ತಮ್ಮ ದೂರನ್ನು ಹಿಂಪಡೆದಿದ್ದಾರೆ. ದೂರನ್ನು ಮುಕ್ತಾಯಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...