Homeಕರ್ನಾಟಕಮಾಜಿ ಐಎಎಸ್‌ ಅಧಿಕಾರಿ, ನಟ ಕೆ ಶಿವರಾಮ್ ನಿಧನ

ಮಾಜಿ ಐಎಎಸ್‌ ಅಧಿಕಾರಿ, ನಟ ಕೆ ಶಿವರಾಮ್ ನಿಧನ

- Advertisement -
- Advertisement -

ಮಾಜಿ ಐಎಎಸ್‌ ಅಧಿಕಾರಿ, ನಟ ಕೆ ಶಿವರಾಮ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆ ಶಿವರಾಮ್ ಅವರು ಮೊದಲ ಬಾರಿಗೆ ಕನ್ನಡದಲ್ಲಿ ಪರೀಕ್ಷೆ ಬರೆದು ಐಎಎಸ್‌ ಅಧಿಕಾರಿಯಾಗಿದ್ದರು.

ನಟ ಕೆ ಶಿವರಾಮ್ ಅವರಿಗೆ ನಿನ್ನೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಸ್ವಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮು, 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ ಕನ್ನಡದಲ್ಲಿಯೇ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯೂ ಆಗಿದ್ದರು. ಆ ಮೂಲಕ ಕನ್ನಡದಲ್ಲಿ ಐಎಎಸ್‌ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

ಸಿನಿಮಾ ರಂಗದಲ್ಲೂ ತೊಡಗಿಸಿಕೊಂಡಿದ್ದ ಕೆ.ಶಿವರಾಮ್ 1993ರಲ್ಲಿ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿದ್ದರು.

2013ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್‌ನಿಂದ ರಾಜಕೀಯ ಜೀವನ ಆರಂಭಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಬಳಿಕ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು.

ಶಿವರಾಮ್‌ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂತಾಪವನ್ನು ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.  ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಪರೀಕ್ಷೆ ಬರೆದು ಭಾರತೀಯ ಆಡಳಿತ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀ ಕೆ.ಶಿವರಾಮ್ ಅವರು ಇಂದು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ನಟರಾಗಿಯೂ ಹಲವು ಚಿತ್ರಗಳಲ್ಲಿ ನಟಿಸಿ, ಕನ್ನಡ ಚಿತ್ರರಂಗಕ್ಕೆ ಅವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...