HomeUncategorizedಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

ಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

- Advertisement -
- Advertisement -

150 ವರ್ಷಗಳಷ್ಟು ಹಳೆಯದಾದ ಸುನೆಹ್ರಿ ಬಾಗ್ ಮಸೀದಿ ಧ್ವಂಸದ ಕುರಿತ ಪ್ರಕರಣ ನಗರಾಭಿವೃದ್ಧಿ ಸಚಿವಾಲಯದ ಪಾರಂಪರಿಕ ಸಂರಕ್ಷಣಾ ಸಮಿತಿಗೆ (ಎಚ್‌ಸಿಸಿ) ವಹಿಸಲಾಗಿದೆ ಎಂದು ದೆಹಲಿ ಟ್ರಾಫಿಕ್ ಪೊಲೀಸರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ದೆಹಲಿಯ ಟ್ರಾಫಿಕ್ ಪೋಲೀಸರಿಂದ  ಮನವಿಯನ್ನು ಸ್ವೀಕರಿಸಿದ ನಂತರ ನವದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ (NDMC) ಡಿಸೆಂಬರ್‌ನಲ್ಲಿ ಮಧ್ಯಕಾಲೀನ ಯುಗದ ಮಸೀದಿಯನ್ನು ತೆಗೆದುಹಾಕುವ ಬಗ್ಗೆ ಸಾರ್ವಜನಿಕ ಸೂಚನೆಯನ್ನು ನೀಡಿತ್ತು. ನಂತರ ಎನ್‌ಡಿಎಂಸಿ ಮಸೀದಿಯನ್ನು ತೆಗೆದುಹಾಕುವ ಉದ್ದೇಶಿತ ಕ್ರಮಕ್ಕೆ ಸಾರ್ವಜನಿಕ ಅಭಿಪ್ರಾಯವನ್ನು ಕೇಳಿದೆ.

ಎನ್‌ಡಿಎಂಸಿ ಪಾರಂಪರಿಕ ರಚನೆಯ ಭಾಗಗಳನ್ನು ಕೆಡವದಂತೆ ಅಥವಾ ಮಾರ್ಪಡಿಸದಂತೆ ತಡೆಯಲು ಕೋರಿ ದೆಹಲಿ ವಕ್ಫ್ ಬೋರ್ಡ್ (ಡಿಡಬ್ಲ್ಯೂಬಿ) ಮಾಡಿದ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಈ ಸೂಚನೆ ಬಂದಿತ್ತು. ಈ ನೋಟಿಸ್‌ ಪ್ರಶ್ನಿಸಿ ಮಸೀದಿಯ ಇಮಾಮ್‌ ಅಬ್ದುಲ್‌ ಅಜೀಜ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ. ದುರುದ್ದೇಶಪೂರಿತ ಉದ್ದೇಶದಿಂದ ನೋಟಿಸ್ ನೀಡಲಾಗಿದೆ ಮತ್ತು ಮಸೀದಿಯ ಉಪಸ್ಥಿತಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ ಎಂಬುವುದಕ್ಕೆ ಪುರಾವೆಗಳು ಇಲ್ಲ ಎಂದು ಅಜೀಜ್ ವಾದಿಸಿದ್ದರು.

ನ್ಯಾಯಾಲಯದ ಕಲಾಪದಲ್ಲಿ ಸಂಚಾರಿ ಪೊಲೀಸರನ್ನು ಪ್ರತಿನಿಧಿಸುವ ಹಿರಿಯ ವಕೀಲ ಸಂಜಯ್ ಜೈನ್, ಎನ್‌ಡಿಎಂಸಿ ಸೂಚನೆಯನ್ನು ಪ್ರಶ್ನಿಸುವ ಅರ್ಜಿಯು ಪರಿಣಾಮಕಾರಿಯಾಗಿ ಇತ್ಯರ್ಥಗೊಂಡಿದೆ ಎಂದು ಪೀಠಕ್ಕೆ ತಿಳಿಸಿದ್ದಾರೆ. ಸಾರ್ವಜನಿಕ ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ ವಿಷಯವನ್ನು ಎಚ್‌ಸಿಸಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಅಜೀಜ್ ಮತ್ತು ಡಿಡಬ್ಲ್ಯೂಬಿ ಅವರನ್ನು ಪ್ರತಿನಿಧಿಸಿದ ವಕೀಲ ವಿರಾಜ್ ದಾತಾರ್ ಮತ್ತು ಹಿರಿಯ ವಕೀಲ ಸಂಜೋಯ್ ಘೋಸ್ , ಕಾನೂನಿನ ನಿಬಂಧನೆಗಳ ಅಡಿಯಲ್ಲಿ ನೋಟಿಸ್ ನೀಡಲಾಗಲಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಎಚ್‌ಸಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ನಿರ್ಣಯವನ್ನು ಎಚ್‌ಸಿಸಿ ತೆಗೆದುಕೊಳ್ಳಬೇಕು, ನಾವಲ್ಲ, ಎಚ್‌ಸಿಸಿ ಅನುಮತಿಯಿಲ್ಲದೆ ನಾವು ಒಂದು ಇಟ್ಟಿಗೆಯನ್ನು ಕೂಡ ಮುಟ್ಟಲು ಸಹ ಸಾಧ್ಯವಿಲ್ಲ ಎಂದು ಇದಕ್ಕೂ ವಕೀಲ ಶ್ರೀಹರ್ಷ ಪೀಚರ ಮೂಲಕ ಎನ್‌ಡಿಎಂಸಿ ಕೋರ್ಟ್‌ಗೆ ಹೇಳಿತ್ತು.

ಇತಿಹಾಸಕಾರರ ರಾಷ್ಟ್ರೀಯ ಮಟ್ಟದ ಸಂಘಟನೆಯಾದ ಇಂಡಿಯನ್ ಹಿಸ್ಟರಿ ಕಾಂಗ್ರೆಸ್ (IHC), ಎನ್‌ಡಿಎಂಸಿಯ ನಿರ್ಧಾರವನ್ನು ಸ್ವೀಕಾರಾರ್ಹವಲ್ಲ ಮತ್ತು ಅವಿವೇಕದ ಪರಮಾವಧಿ ಎಂದು ಕರೆದಿದೆ ಮತ್ತು ಈ ವರ್ಷದ ಆರಂಭದಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ ಇತ್ತೀಚಿನ ದಿನಗಳಲ್ಲಿ ನಮ್ಮ ಮಧ್ಯಕಾಲೀನ ವಾಸ್ತುಶಿಲ್ಪದ ಪರಂಪರೆಯನ್ನು ನಾಶಮಾಡಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದೆ.

ವೃತ್ತವನ್ನು ತೆಗೆದುಹಾಕುವ ಪ್ರಸ್ತಾಪವು ಸ್ವೀಕಾರಾರ್ಹವಲ್ಲ ಮತ್ತು ಇದು ನವ ದೆಹಲಿಯ ರಸ್ತೆ ಯೋಜನೆಯ ಬಗೆಗಿನ ಅವಿವೇಕದ ಕ್ರಮ, ಈ ಮಸೀದಿಯು 2009ರಲ್ಲಿ ಐತಿಹಾಸಿಕ ಪ್ರಾಮುಖ್ಯತೆಗಾಗಿ ಹೆರಿಟೇಜ್ III ಸ್ಥಾನಮಾನವನ್ನು ಪಡೆದಿದೆ. ಸುನೆಹ್ರಿ ಬಾಗ್ ಮಸೀದಿ ಕೇವಲ ಮಸೀದಿ ಅಲ್ಲ, ಇದು ನಮ್ಮ ಹಲವಾರು ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸವನ್ನು ಹೊಂದಿದೆ. ನಮ್ಮ ಸಂವಿಧಾನ ಸಭೆಯ ಸದಸ್ಯರಾದ ಹಸರತ್ ಮೊಹಾನಿ ಅವರು ಸಭೆಗಳಿಗೆ ಹಾಜರಾಗುವಾಗ ಇಲ್ಲಿಯೇ ಇರುತ್ತಿದ್ದರು, ಅದರ ಸುಪ್ರಸಿದ್ಧ ಇತಿಹಾಸದ ಬಗ್ಗೆ ಕಾಳಜಿ ವಹಿಸಿ ಎಂದು ಇತಿಹಾಸಕಾರ ಎಸ್.ಇರ್ಫಾನ್ ಹಬೀಬ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...