HomeUncategorizedಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

ಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

- Advertisement -
- Advertisement -

150 ವರ್ಷಗಳಷ್ಟು ಹಳೆಯದಾದ ಸುನೆಹ್ರಿ ಬಾಗ್ ಮಸೀದಿ ಧ್ವಂಸದ ಕುರಿತ ಪ್ರಕರಣ ನಗರಾಭಿವೃದ್ಧಿ ಸಚಿವಾಲಯದ ಪಾರಂಪರಿಕ ಸಂರಕ್ಷಣಾ ಸಮಿತಿಗೆ (ಎಚ್‌ಸಿಸಿ) ವಹಿಸಲಾಗಿದೆ ಎಂದು ದೆಹಲಿ ಟ್ರಾಫಿಕ್ ಪೊಲೀಸರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ದೆಹಲಿಯ ಟ್ರಾಫಿಕ್ ಪೋಲೀಸರಿಂದ  ಮನವಿಯನ್ನು ಸ್ವೀಕರಿಸಿದ ನಂತರ ನವದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ (NDMC) ಡಿಸೆಂಬರ್‌ನಲ್ಲಿ ಮಧ್ಯಕಾಲೀನ ಯುಗದ ಮಸೀದಿಯನ್ನು ತೆಗೆದುಹಾಕುವ ಬಗ್ಗೆ ಸಾರ್ವಜನಿಕ ಸೂಚನೆಯನ್ನು ನೀಡಿತ್ತು. ನಂತರ ಎನ್‌ಡಿಎಂಸಿ ಮಸೀದಿಯನ್ನು ತೆಗೆದುಹಾಕುವ ಉದ್ದೇಶಿತ ಕ್ರಮಕ್ಕೆ ಸಾರ್ವಜನಿಕ ಅಭಿಪ್ರಾಯವನ್ನು ಕೇಳಿದೆ.

ಎನ್‌ಡಿಎಂಸಿ ಪಾರಂಪರಿಕ ರಚನೆಯ ಭಾಗಗಳನ್ನು ಕೆಡವದಂತೆ ಅಥವಾ ಮಾರ್ಪಡಿಸದಂತೆ ತಡೆಯಲು ಕೋರಿ ದೆಹಲಿ ವಕ್ಫ್ ಬೋರ್ಡ್ (ಡಿಡಬ್ಲ್ಯೂಬಿ) ಮಾಡಿದ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಈ ಸೂಚನೆ ಬಂದಿತ್ತು. ಈ ನೋಟಿಸ್‌ ಪ್ರಶ್ನಿಸಿ ಮಸೀದಿಯ ಇಮಾಮ್‌ ಅಬ್ದುಲ್‌ ಅಜೀಜ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ. ದುರುದ್ದೇಶಪೂರಿತ ಉದ್ದೇಶದಿಂದ ನೋಟಿಸ್ ನೀಡಲಾಗಿದೆ ಮತ್ತು ಮಸೀದಿಯ ಉಪಸ್ಥಿತಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ ಎಂಬುವುದಕ್ಕೆ ಪುರಾವೆಗಳು ಇಲ್ಲ ಎಂದು ಅಜೀಜ್ ವಾದಿಸಿದ್ದರು.

ನ್ಯಾಯಾಲಯದ ಕಲಾಪದಲ್ಲಿ ಸಂಚಾರಿ ಪೊಲೀಸರನ್ನು ಪ್ರತಿನಿಧಿಸುವ ಹಿರಿಯ ವಕೀಲ ಸಂಜಯ್ ಜೈನ್, ಎನ್‌ಡಿಎಂಸಿ ಸೂಚನೆಯನ್ನು ಪ್ರಶ್ನಿಸುವ ಅರ್ಜಿಯು ಪರಿಣಾಮಕಾರಿಯಾಗಿ ಇತ್ಯರ್ಥಗೊಂಡಿದೆ ಎಂದು ಪೀಠಕ್ಕೆ ತಿಳಿಸಿದ್ದಾರೆ. ಸಾರ್ವಜನಿಕ ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ ವಿಷಯವನ್ನು ಎಚ್‌ಸಿಸಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಅಜೀಜ್ ಮತ್ತು ಡಿಡಬ್ಲ್ಯೂಬಿ ಅವರನ್ನು ಪ್ರತಿನಿಧಿಸಿದ ವಕೀಲ ವಿರಾಜ್ ದಾತಾರ್ ಮತ್ತು ಹಿರಿಯ ವಕೀಲ ಸಂಜೋಯ್ ಘೋಸ್ , ಕಾನೂನಿನ ನಿಬಂಧನೆಗಳ ಅಡಿಯಲ್ಲಿ ನೋಟಿಸ್ ನೀಡಲಾಗಲಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಎಚ್‌ಸಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ನಿರ್ಣಯವನ್ನು ಎಚ್‌ಸಿಸಿ ತೆಗೆದುಕೊಳ್ಳಬೇಕು, ನಾವಲ್ಲ, ಎಚ್‌ಸಿಸಿ ಅನುಮತಿಯಿಲ್ಲದೆ ನಾವು ಒಂದು ಇಟ್ಟಿಗೆಯನ್ನು ಕೂಡ ಮುಟ್ಟಲು ಸಹ ಸಾಧ್ಯವಿಲ್ಲ ಎಂದು ಇದಕ್ಕೂ ವಕೀಲ ಶ್ರೀಹರ್ಷ ಪೀಚರ ಮೂಲಕ ಎನ್‌ಡಿಎಂಸಿ ಕೋರ್ಟ್‌ಗೆ ಹೇಳಿತ್ತು.

ಇತಿಹಾಸಕಾರರ ರಾಷ್ಟ್ರೀಯ ಮಟ್ಟದ ಸಂಘಟನೆಯಾದ ಇಂಡಿಯನ್ ಹಿಸ್ಟರಿ ಕಾಂಗ್ರೆಸ್ (IHC), ಎನ್‌ಡಿಎಂಸಿಯ ನಿರ್ಧಾರವನ್ನು ಸ್ವೀಕಾರಾರ್ಹವಲ್ಲ ಮತ್ತು ಅವಿವೇಕದ ಪರಮಾವಧಿ ಎಂದು ಕರೆದಿದೆ ಮತ್ತು ಈ ವರ್ಷದ ಆರಂಭದಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ ಇತ್ತೀಚಿನ ದಿನಗಳಲ್ಲಿ ನಮ್ಮ ಮಧ್ಯಕಾಲೀನ ವಾಸ್ತುಶಿಲ್ಪದ ಪರಂಪರೆಯನ್ನು ನಾಶಮಾಡಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದೆ.

ವೃತ್ತವನ್ನು ತೆಗೆದುಹಾಕುವ ಪ್ರಸ್ತಾಪವು ಸ್ವೀಕಾರಾರ್ಹವಲ್ಲ ಮತ್ತು ಇದು ನವ ದೆಹಲಿಯ ರಸ್ತೆ ಯೋಜನೆಯ ಬಗೆಗಿನ ಅವಿವೇಕದ ಕ್ರಮ, ಈ ಮಸೀದಿಯು 2009ರಲ್ಲಿ ಐತಿಹಾಸಿಕ ಪ್ರಾಮುಖ್ಯತೆಗಾಗಿ ಹೆರಿಟೇಜ್ III ಸ್ಥಾನಮಾನವನ್ನು ಪಡೆದಿದೆ. ಸುನೆಹ್ರಿ ಬಾಗ್ ಮಸೀದಿ ಕೇವಲ ಮಸೀದಿ ಅಲ್ಲ, ಇದು ನಮ್ಮ ಹಲವಾರು ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸವನ್ನು ಹೊಂದಿದೆ. ನಮ್ಮ ಸಂವಿಧಾನ ಸಭೆಯ ಸದಸ್ಯರಾದ ಹಸರತ್ ಮೊಹಾನಿ ಅವರು ಸಭೆಗಳಿಗೆ ಹಾಜರಾಗುವಾಗ ಇಲ್ಲಿಯೇ ಇರುತ್ತಿದ್ದರು, ಅದರ ಸುಪ್ರಸಿದ್ಧ ಇತಿಹಾಸದ ಬಗ್ಗೆ ಕಾಳಜಿ ವಹಿಸಿ ಎಂದು ಇತಿಹಾಸಕಾರ ಎಸ್.ಇರ್ಫಾನ್ ಹಬೀಬ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...