HomeUncategorizedಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

ಸುನೆಹ್ರಿ ಬಾಗ್ ಮಸೀದಿ ಪ್ರಕರಣ HCCಗೆ ವಹಿಸಲಾಗಿದೆ: ಹೈಕೋರ್ಟ್‌ಗೆ ತಿಳಿಸಿದ ಪೊಲೀಸರು

- Advertisement -
- Advertisement -

150 ವರ್ಷಗಳಷ್ಟು ಹಳೆಯದಾದ ಸುನೆಹ್ರಿ ಬಾಗ್ ಮಸೀದಿ ಧ್ವಂಸದ ಕುರಿತ ಪ್ರಕರಣ ನಗರಾಭಿವೃದ್ಧಿ ಸಚಿವಾಲಯದ ಪಾರಂಪರಿಕ ಸಂರಕ್ಷಣಾ ಸಮಿತಿಗೆ (ಎಚ್‌ಸಿಸಿ) ವಹಿಸಲಾಗಿದೆ ಎಂದು ದೆಹಲಿ ಟ್ರಾಫಿಕ್ ಪೊಲೀಸರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ದೆಹಲಿಯ ಟ್ರಾಫಿಕ್ ಪೋಲೀಸರಿಂದ  ಮನವಿಯನ್ನು ಸ್ವೀಕರಿಸಿದ ನಂತರ ನವದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ (NDMC) ಡಿಸೆಂಬರ್‌ನಲ್ಲಿ ಮಧ್ಯಕಾಲೀನ ಯುಗದ ಮಸೀದಿಯನ್ನು ತೆಗೆದುಹಾಕುವ ಬಗ್ಗೆ ಸಾರ್ವಜನಿಕ ಸೂಚನೆಯನ್ನು ನೀಡಿತ್ತು. ನಂತರ ಎನ್‌ಡಿಎಂಸಿ ಮಸೀದಿಯನ್ನು ತೆಗೆದುಹಾಕುವ ಉದ್ದೇಶಿತ ಕ್ರಮಕ್ಕೆ ಸಾರ್ವಜನಿಕ ಅಭಿಪ್ರಾಯವನ್ನು ಕೇಳಿದೆ.

ಎನ್‌ಡಿಎಂಸಿ ಪಾರಂಪರಿಕ ರಚನೆಯ ಭಾಗಗಳನ್ನು ಕೆಡವದಂತೆ ಅಥವಾ ಮಾರ್ಪಡಿಸದಂತೆ ತಡೆಯಲು ಕೋರಿ ದೆಹಲಿ ವಕ್ಫ್ ಬೋರ್ಡ್ (ಡಿಡಬ್ಲ್ಯೂಬಿ) ಮಾಡಿದ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಈ ಸೂಚನೆ ಬಂದಿತ್ತು. ಈ ನೋಟಿಸ್‌ ಪ್ರಶ್ನಿಸಿ ಮಸೀದಿಯ ಇಮಾಮ್‌ ಅಬ್ದುಲ್‌ ಅಜೀಜ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ. ದುರುದ್ದೇಶಪೂರಿತ ಉದ್ದೇಶದಿಂದ ನೋಟಿಸ್ ನೀಡಲಾಗಿದೆ ಮತ್ತು ಮಸೀದಿಯ ಉಪಸ್ಥಿತಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ ಎಂಬುವುದಕ್ಕೆ ಪುರಾವೆಗಳು ಇಲ್ಲ ಎಂದು ಅಜೀಜ್ ವಾದಿಸಿದ್ದರು.

ನ್ಯಾಯಾಲಯದ ಕಲಾಪದಲ್ಲಿ ಸಂಚಾರಿ ಪೊಲೀಸರನ್ನು ಪ್ರತಿನಿಧಿಸುವ ಹಿರಿಯ ವಕೀಲ ಸಂಜಯ್ ಜೈನ್, ಎನ್‌ಡಿಎಂಸಿ ಸೂಚನೆಯನ್ನು ಪ್ರಶ್ನಿಸುವ ಅರ್ಜಿಯು ಪರಿಣಾಮಕಾರಿಯಾಗಿ ಇತ್ಯರ್ಥಗೊಂಡಿದೆ ಎಂದು ಪೀಠಕ್ಕೆ ತಿಳಿಸಿದ್ದಾರೆ. ಸಾರ್ವಜನಿಕ ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ ವಿಷಯವನ್ನು ಎಚ್‌ಸಿಸಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಅಜೀಜ್ ಮತ್ತು ಡಿಡಬ್ಲ್ಯೂಬಿ ಅವರನ್ನು ಪ್ರತಿನಿಧಿಸಿದ ವಕೀಲ ವಿರಾಜ್ ದಾತಾರ್ ಮತ್ತು ಹಿರಿಯ ವಕೀಲ ಸಂಜೋಯ್ ಘೋಸ್ , ಕಾನೂನಿನ ನಿಬಂಧನೆಗಳ ಅಡಿಯಲ್ಲಿ ನೋಟಿಸ್ ನೀಡಲಾಗಲಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಎಚ್‌ಸಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ನಿರ್ಣಯವನ್ನು ಎಚ್‌ಸಿಸಿ ತೆಗೆದುಕೊಳ್ಳಬೇಕು, ನಾವಲ್ಲ, ಎಚ್‌ಸಿಸಿ ಅನುಮತಿಯಿಲ್ಲದೆ ನಾವು ಒಂದು ಇಟ್ಟಿಗೆಯನ್ನು ಕೂಡ ಮುಟ್ಟಲು ಸಹ ಸಾಧ್ಯವಿಲ್ಲ ಎಂದು ಇದಕ್ಕೂ ವಕೀಲ ಶ್ರೀಹರ್ಷ ಪೀಚರ ಮೂಲಕ ಎನ್‌ಡಿಎಂಸಿ ಕೋರ್ಟ್‌ಗೆ ಹೇಳಿತ್ತು.

ಇತಿಹಾಸಕಾರರ ರಾಷ್ಟ್ರೀಯ ಮಟ್ಟದ ಸಂಘಟನೆಯಾದ ಇಂಡಿಯನ್ ಹಿಸ್ಟರಿ ಕಾಂಗ್ರೆಸ್ (IHC), ಎನ್‌ಡಿಎಂಸಿಯ ನಿರ್ಧಾರವನ್ನು ಸ್ವೀಕಾರಾರ್ಹವಲ್ಲ ಮತ್ತು ಅವಿವೇಕದ ಪರಮಾವಧಿ ಎಂದು ಕರೆದಿದೆ ಮತ್ತು ಈ ವರ್ಷದ ಆರಂಭದಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ ಇತ್ತೀಚಿನ ದಿನಗಳಲ್ಲಿ ನಮ್ಮ ಮಧ್ಯಕಾಲೀನ ವಾಸ್ತುಶಿಲ್ಪದ ಪರಂಪರೆಯನ್ನು ನಾಶಮಾಡಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದೆ.

ವೃತ್ತವನ್ನು ತೆಗೆದುಹಾಕುವ ಪ್ರಸ್ತಾಪವು ಸ್ವೀಕಾರಾರ್ಹವಲ್ಲ ಮತ್ತು ಇದು ನವ ದೆಹಲಿಯ ರಸ್ತೆ ಯೋಜನೆಯ ಬಗೆಗಿನ ಅವಿವೇಕದ ಕ್ರಮ, ಈ ಮಸೀದಿಯು 2009ರಲ್ಲಿ ಐತಿಹಾಸಿಕ ಪ್ರಾಮುಖ್ಯತೆಗಾಗಿ ಹೆರಿಟೇಜ್ III ಸ್ಥಾನಮಾನವನ್ನು ಪಡೆದಿದೆ. ಸುನೆಹ್ರಿ ಬಾಗ್ ಮಸೀದಿ ಕೇವಲ ಮಸೀದಿ ಅಲ್ಲ, ಇದು ನಮ್ಮ ಹಲವಾರು ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸವನ್ನು ಹೊಂದಿದೆ. ನಮ್ಮ ಸಂವಿಧಾನ ಸಭೆಯ ಸದಸ್ಯರಾದ ಹಸರತ್ ಮೊಹಾನಿ ಅವರು ಸಭೆಗಳಿಗೆ ಹಾಜರಾಗುವಾಗ ಇಲ್ಲಿಯೇ ಇರುತ್ತಿದ್ದರು, ಅದರ ಸುಪ್ರಸಿದ್ಧ ಇತಿಹಾಸದ ಬಗ್ಗೆ ಕಾಳಜಿ ವಹಿಸಿ ಎಂದು ಇತಿಹಾಸಕಾರ ಎಸ್.ಇರ್ಫಾನ್ ಹಬೀಬ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...