Homeಫ್ಯಾಕ್ಟ್‌ಚೆಕ್Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

- Advertisement -
- Advertisement -

“ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಮಟ್ಟ ಗಗನಕ್ಕೇರಿದೆ. ಅದನ್ನು ಸಂಪೂರ್ಣವಾಗಿ ಕುಗ್ಗಿಸುವುದು ರೈತ ಹೋರಾಟ ಅಥವಾ ದೆಹಲಿ ಚಲೋ ಹೋರಾಟದ ಉದ್ದೇಶ” ಎಂದು ರೈತ ಮುಖಂಡ ಜಗಜೀತ್ ಸಿಂಗ್ ದಲ್ಲೆವಾಲ್ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ.

ಬಿಜೆಪಿ ನಾಯಕರು, ಬಲಪಂಥೀಯ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಹಿಂದಿ, ಇಂಗ್ಲಿಷ್ ಭಾಷೆಗಳ ಮುಖ್ಯವಾಹಿನಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದು, ‘ರೈತರ ಚಳವಳಿಯ ಏಕೈಕ ಉದ್ದೇಶ ಮೋದಿ ಸರ್ಕಾರದ ವರ್ಚಸ್ಸನ್ನು ಕುಂದಿಸುವುದು’ ಎಂದಿದ್ದಾರೆ.

ನ್ಯೂಸ್ 18 ಹಿಂದಿ ಚಾನೆಲ್‌ನಲ್ಲಿ ದಲ್ಲೆವಾಲ್ ಅವರ ಹೇಳಿಕೆಯ ವಿಡಿಯೋವನ್ನು ಬ್ರೇಕಿಂಗ್ ನ್ಯೂಸ್ ಆಗಿ ಪ್ರಸಾರ ಮಾಡಲಾಗಿದ್ದು, “ರೈತರ ಚಳವಳಿಯ ಹಿಂದಿನ ಉದ್ದೇಶ ‘ರಾಜಕೀಯ’ ಎಂದು ಸುದ್ದಿ ನಿರೂಪಕಿ ರುಬಿಕಾ ಲಿಯಾಖತ್ ಹೇಳಿದ್ದಾರೆ.

ವೈರಲ್ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ನ್ಯೂಸ್ 18 ಚಾನೆಲ್‌ನ ನಿರೂಪಕ ಅಮಿಶ್ ದೇವಗನ್ “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸುವುದು ರೈತ ಚಳವಳಿಯ ಹಿಂದಿನ ಉದ್ದೇಶವಾಗಿದೆ” ಎಂದು ಬರೆದುಕೊಂಡಿದ್ದಾರೆ.

‘ಇಂಡಿಯಾ ಟಿವಿ’ಯಲ್ಲಿ ವೈರಲ್ ವಿಡಿಯೋವನ್ನು ಪ್ರಸಾರ ಮಾಡುವಾಗ, ನಿರೂಪಕಿ ಮೀನಾಕ್ಷಿ ಜೋಶಿ ಅವರು “ನರೇಂದ್ರ ಮೋದಿಯವರ ಜನ ಪ್ರಿಯತೆಯನ್ನು ಕುಗ್ಗಿಸಲು ರೈತರು ಚಳವಳಿ ಪ್ರಾರಂಭಿಸಿದ್ದಾರೆ” ಎಂದು ಹೇಳಿದ್ದಾರೆ. “ಈ ವಿಡಿಯೋ ರೈತ ಚಳವಳಿ ಪ್ರಾರಂಭವಾಗುವ ಕೆಲವು ದಿನಗಳ ಹಿಂದಿನದ್ದು” ಎಂದಿದ್ದಾರೆ.

‘ಝೀ ನ್ಯೂಸ್’ ನಿರೂಪಕಿ ಶಿವಾಂಗಿ ಠಾಕೂರ್ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚುತ್ತಿರುವುದು ರೈತರ ದೆಹಲಿ ಚಲೋಗೆ ಪ್ರತಿಭಟನೆಗೆ ಕಾರಣವೇ? ಎಂದು ಪ್ರಶ್ನಿಸಿದ್ದಾರೆ. ನಂತರ, ಅದೇ ವರದಿಯಲ್ಲಿ, ಝೀ ನ್ಯೂಸ್ ವೀಡಿಯೊದ ಸತ್ಯಾಸತ್ಯತೆಯನ್ನು ಖಚಿತಪಡಿಸಿಲ್ಲ ಎಂದಿದ್ದಾರೆ.

‘ಟೈಮ್ಸ್ ನೌ ನವಭಾರತ್’ ಕೂಡ ವೈರಲ್ ಕ್ಲಿಪ್ ಅನ್ನು ಪ್ರಸಾರ ಮಾಡಿದ್ದು, ನಿರೂಪಕಿ ಹಿಮಾಂಶು ದೀಕ್ಷಿತ್ ಅವರು “ಪ್ರಧಾನಿ ನರೇಂದ್ರ ಮೋದಿಯವರ ಇಮೇಜ್‌ಗೆ ಹಾನಿ ಮಾಡುವುದು ಮತ್ತು ಅವರ ಜನಪ್ರಿಯತೆಯನ್ನು ತಗ್ಗಿಸುವುದು ರೈತರ ಚಳವಳಿಯ ಗುರಿಯಾಗಿದೆ” ಎಂದು ಹೇಳಿದ್ದಾರೆ.

‘ಟೈಮ್ಸ್ ನೌ ನವಭಾರತ್‌’ನ ರಾಷ್ಟ್ರೀಯ ಸಂಪಾದಕ ಅಮಿತ್ ಕುಮಾರ್, “ಪ್ರತಿಭಟನೆ ನಡೆಸುತ್ತಿರುವವರ ಅಜೆಂಡಾಕ್ಕೂ ರೈತರಿಗೂ ಯಾವುದೇ ಸಂಬಂಧವಿಲ್ಲ. ಮೋದಿ ಸರ್ಕಾರದ ಪ್ರತಿಷ್ಠೆಯನ್ನು ಹಾಳು ಮಾಡುವುದು ಮತ್ತು ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳಿಗೆ ಲಾಭ ಮಾಡಿಕೊಡುವುದು ಅವರ ನಿಜವಾದ ಉದ್ದೇಶವಾಗಿದೆ” ಎಂದಿದ್ದಾರೆ.

‘ಇಂಡಿಯಾ ಟುಡೇ’ ಕೂಡ ವೈರಲ್ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತ ಮುಖಂಡರ ಹೇಳಿಕೆಗಳು ರೈತರ ನೈಜ ಕಾರ್ಯಸೂಚಿಗೆ ವಿರುದ್ಧವಾಗಿವೆ” ಎಂದು ನಿರೂಪಕಿ ನಬಿಲಾ ಜಮಾಲ್ ಹೇಳಿದ್ದಾರೆ. “ಎಂಎಸ್‌ಪಿ ಕಾನೂನಿಗೆ ರೈತರು ಧ್ವನಿ ಎತ್ತುತ್ತಿರುವಾಗ ದಲ್ಲೆವಾಲ್ ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸುವ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಅಲ್ಲದೆ, ರೈತರ ನಿಜವಾದ ಅಜೆಂಡಾ ಏನು ಎಂದು ಪ್ರಶ್ನಿಸಿದ್ದಾರೆ.

‘ರಿಪಬ್ಲಿಕ್ ಟಿವಿ’ ಕೂಡ ಈ ವಿಡಿಯೋವನ್ನು ಪ್ರಸಾರ ಮಾಡಿದ್ದು, “ರೈತರು ನಿಜವಾಗಿಯೂ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೋ ಅಥವಾ ಅವರಿಗೆ ಬೇರೆ ಉದ್ದೇಶವಿದೆಯೇ?” ಎಂದು ಪ್ರಶ್ನಿಸಿದೆ.

ಸುದ್ದಿ ಸಂಸ್ಥೆ ಎಎನ್‌ಐ, “ರಾಮ ಮಂದಿರದ ಉದ್ಘಾಟನೆಯ ಬಳಿಕ ಮೋದಿಯವರ ಜನಪ್ರಿಯತೆ ಗಗನಕ್ಕೇರಿದೆ. ಅದನ್ನು ಕುಗ್ಗಿಸಲು ರೈತರು ಹೋರಾಟ ಮಾಡುತ್ತಿರುವುದಾಗಿ ರೈತ ಮುಖಂಡ ದಲ್ಲೇವಾಲ್ ಹೇಳಿದ್ದಾರೆ. ಇದಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪ್ರತಿಕ್ರಿಯೆ ನೀಡಿದ್ದು, “ಇದೊಂದು ರಾಜಕೀಯ ಹೇಳಿಕೆ. ಈ ರೀತಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡರೆ ಜನ ಪ್ರಧಾನಿ ಮೋದಿಯವರನ್ನು ಬೆಂಬಲಿಸುವುದನ್ನು ನಿಲ್ಲಿಸುತ್ತಾರಾ? ಇದು ಪ್ರತಿಭಟನೆ ನಡೆಸುವ ಸರಿಯಾದ ದಾರಿಯಲ್ಲ ಎಂದು ಜನರೆಡೆಯಲ್ಲಿ ಒಂದು ಸಂದೇಶ ಹರಿದಾಡುತ್ತಿದೆ” ಎಂದು ಹೇಳಿದ್ದಾರೆ ಎಂದು ಖಟ್ಟರ್ ಹೇಳಿಕೆಯ ವಿಡಿಯೋ ಪೋಸ್ಟ್ ಮಾಡಿದೆ.

ಮಾಧ್ಯಮಗಳು ಮಾತ್ರವಲ್ಲದೆ ಭಾರತ ಸರ್ಕಾರದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ, ಬಿಜೆಪಿ ಚಂಡೀಗಢ, ಅಂಶುಲ್ ಸಕ್ಸೇನಾ, ರೋಷನ್ ಸಿನ್ಹಾ ಮತ್ತು ಪನ್ ಫ್ಯಾಕ್ಟ್ಸ್ ಇವರ ಎಕ್ಸ್ ಖಾತೆಗಳಲ್ಲೂ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾನುಗೌರಿ.ಕಾಂ ಮೊದಲು ರೈತ ನಾಯಕ ಜಗಜೀತ್ ಸಿಂಗ್ ದಲ್ಲೆವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಹುಡುಕಿದೆ. ಈ ವೇಳೆ ನಮಗೆ ಅನ್ ಮ್ಯೂಟ್ (Unmute) ಎಂಬ ಫೇಸ್‌ಬುಕ್ ಖಾತೆಯಲ್ಲಿ, ದಲ್ಲೇವಾಲ್ ಅವರು ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ವಿಡಿಯೋ ದೊರೆತಿದೆ.

ಒಟ್ಟು 26 ನಿಮಿಷದ ವಿಡಿಯೋದಲ್ಲಿ 18 ನಿಮಿಷ 40 ಸೆಕೆಂಡ್‌ಗೆ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಹೇಳಿಕೆಯನ್ನು ದಲ್ಲೇವಾಲ್ ನೀಡಿದ್ದಾರೆ. ಸಂಪೂರ್ಣ ವಿಡಿಯೋ ಪಂಜಾಬಿ ಭಾಷೆಯಲ್ಲಿ ಇರುವುದರಿಂದ ನಾವು ವಿಡಿಯೋದ ಭಾಷಾಂತರಕ್ಕಾಗಿ ಆಲ್ಟ್‌ ನ್ಯೂಸ್‌ನ ಫ್ಯಾಕ್ಟ್ ಚೆಕ್ ವರದಿಯನ್ನು ಪರಿಶೀಲಿಸಿದ್ದೇವೆ. ವರದಿಯಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ವಿಡಿಯೋವನ್ನು ತಿರುಚಲಾಗಿದೆ ಎಂದು ಹೇಳಲಾಗಿದೆ.

ಆಲ್ಟ್‌ ನ್ಯೂಸ್ ತಿಳಿಸಿದಂತೆ, ಮೋದಿಯವರ ಜನಪ್ರಿಯತೆ ರಾಮ ಮಂದಿರ ಉದ್ಘಾಟನೆಯ ಬಳಿಕ ಹೆಚ್ಚಾಗಿದೆ. ಅದನ್ನು ಕುಗ್ಗಿಸಬೇಕು ಎಂದು ದಲ್ಲೇವಾಲ್ ಹೇಳಿರುವುದು ನಿಜ. ಆದರೆ, ಅವರು ಅಷ್ಟನ್ನು ಮಾತ್ರ ಹೇಳಿಲ್ಲ. ದಲ್ಲೇವಾಲ್ ಹೇಳಿರುವುದು “ಯಾವುದೇ ರಾಜಕಾರಣಿ ನಮ್ಮ ಸಮಸ್ಯೆಗಳನ್ನು ಆಲಿಸಬೇಕಿದ್ದರೆ ಅವರ ಜನಪ್ರಿಯತೆಗೆ ಕುತ್ತು ಬರಬೇಕು. ಜನಪ್ರಿಯತೆ ಕುಂದುವಾಗ ಅವರು ಜನರ ಬಳಿಗೆ ಬರುತ್ತಾರೆ. ಅದೇ ರೀತಿ ಮೋದಿಯವರು ಈಗ ಭಾರೀ ಜನಪ್ರಿಯತೆಯಲ್ಲಿದ್ದಾರೆ. ಅದನ್ನು ನಾವು ಕುಗ್ಗಿಸಬೇಕು. ಆಗ ಅವರು ನಮ್ಮ ಬೇಡಿಕೆಗಳನ್ನು ಆಲಿಸಲು ಬರುತ್ತಾರೆ” ಎಂದಾಗಿದೆ. ಅಲ್ಲದೆ, ನಮ್ಮ ಹೋರಾಟದ ಉದ್ದೇಶ ಮೋದಿಯವರ ಜನಪ್ರಿಯತೆ ಕುಗ್ಗಿಸುವುದು ಮಾತ್ರ ಎಂದು ಅವರು ಹೇಳಿಲ್ಲ.

ಇಲ್ಲಿ ದಲ್ಲೇವಾಲ್ ಅವರ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಎಡಿಟ್ ಮಾಡಿ, ಅವರು ಮೋದಿಯವರ ಬಗ್ಗೆ ಮಾತನಾಡಿರುವ ಭಾಗವನ್ನು ಮಾತ್ರ ಮಾಧ್ಯಮಗಳು ಪ್ರಸಾರ ಮಾಡಿವೆ. ಅದನ್ನೇ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಳ್ಳಲಾಗಿದೆ. ಈ ಮೂಲಕ ರೈತ ನಾಯಕನ ಹೇಳಿಕೆಗೆ ಬೇರೆಯದ್ದೇ ಬಣ್ಣ ಹಚ್ಚಲಾಗಿದೆ. ರೈತ ಹೋರಾಟದ ಕುರಿತು ಜನರಲ್ಲಿ ತಪ್ಪು ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿ : FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...