Homeಮುಖಪುಟಮೌಲಾನಾ ಆಝಾದ್ ಎಜುಕೇಶನ್‌ ಫೌಂಡೇಶನ್‌ ಮುಚ್ಚಲು ಆದೇಶಿಸಿದ ಕೇಂದ್ರ?

ಮೌಲಾನಾ ಆಝಾದ್ ಎಜುಕೇಶನ್‌ ಫೌಂಡೇಶನ್‌ ಮುಚ್ಚಲು ಆದೇಶಿಸಿದ ಕೇಂದ್ರ?

- Advertisement -
- Advertisement -

ಮುಸ್ಲಿಮ್‌ ಸಮುದಾಯಕ್ಕೆ ಶಿಕ್ಷಣವನ್ನು ಉತ್ತೇಜಿಸುವ ದೃಷ್ಟಿಯಿಂದ ಸ್ಥಾಪಿಸಲಾಗಿದ್ದ ಮೌಲಾನಾ ಆಝಾದ್ ಶಿಕ್ಷಣ ಪ್ರತಿಷ್ಠಾನವನ್ನು(MAEF)  ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಮುಚ್ಚುವಂತೆ ಆದೇಶಿಸಿದೆ ಎಂದು hindustantimes.com ವರದಿ ಮಾಡಿದೆ.

ಫೆಬ್ರವರಿ 7 ರಂದು ಅಲ್ಪಸಂಖ್ಯಾತ ಸಚಿವಾಲಯದ ಅಧೀನ ಕಾರ್ಯದರ್ಶಿ ಧೀರಜ್ ಕುಮಾರ್ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಸಚಿವಾಲಯದ ಹಿರಿಯ ಅಧಿಕಾರಿಗಳು ಇದನ್ನು ಸಧ್ಯ ಆಂತರಿಕ ವಿಷಯ ಎಂದು ಹೇಳಿದ್ದಾರೆ. ಈ ಬಗ್ಗೆ ಇನ್ನೂ ಸಾರ್ವಜನಿಕರಿಗೆ ಬಹಿರಂಗಪಡಿಸಲಾಗಿಲ್ಲ. ಪ್ರತಿಷ್ಠಾನದ ಸದಸ್ಯರೋರ್ವರ ಪ್ರಕಾರ, ಈ ಬಗ್ಗೆ ಆಂತರಿಕ ಚರ್ಚೆಗಳು ನಡೆಯುತ್ತಿವೆ ಮತ್ತು ಆದೇಶವನ್ನು ಇನ್ನೂ ಬಹಿರಂಗಗೊಳಿಸಲಾಗಿಲ್ಲ. ಮಾರ್ಚ್ 4ರಂದು ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಇನ್ನೋರ್ವ ಸದಸ್ಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ಸಚಿವಾಲಯವನ್ನು ಮತ್ತು ಸೆಂಟ್ರಲ್ ವಕ್ಫ್ ಕೌನ್ಸಿಲ್‌ನ್ನು ಸಮೀಪಿಸಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹಿಂದೂಸ್ಥಾನ್‌ ಟೈಮ್ಸ್ ವರದಿ ತಿಳಿಸಿದೆ.

ಆದೇಶದ ಪ್ರಕಾರ, ನವೆಂಬರ್‌ 30, 2023ರಲ್ಲಿದ್ದಂತೆ ಫೌಂಡೇಶನ್‌ ಬಳಿ ರೂ.1,073.26 ಕೋಟಿ ನಿಧಿ ಇದ್ದು, ಬಾಧ್ಯತೆಗಳು ರೂ.40,355 ಕೋಟಿ ಆಗಿವೆ ಹಾಗೂ ಈ ಮೊತ್ತ ಕಳೆದರೆ ಉಳಿಯುವ ಮೊತ್ತ ರೂ 669.71 ಕೋಟಿ ಆಗಿದೆ. ಈ ನಿಧಿಯನ್ನು ಕನ್ಸಾಲಿಡೇಟೆಡ್‌ ಫಂಡ್ಸ್‌ ಆಫ್‌ ಇಂಡಿಯಾಗೆ ವರ್ಗಾಯಿಸುವ ಹಾಗೂ ಬಾಧ್ಯತೆಗಳನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಅಭಿವೃದ್ಧಿ ಮತ್ತು ಹಣಕಾಸು ಆಯೋಗಕ್ಕೆ ವರ್ಗಾಯಿಸುವ ಪ್ರಸ್ತಾಪವನ್ನು ಆದೇಶದಲ್ಲಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಮೌಲಾನಾ ಅಬ್ಧುಲ್‌ ಕಲಾಂ ಆಝಾದ್‌ ಪೌಂಡೇಶನ್‌ ಮುಸ್ಲಿಂ ಸಮುದಾಯದ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಡುವೆ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಸರ್ಕಾರದಿಂದ ಅನುದಾನಿತ ಸಂಸ್ಥೆಯಾಗಿದೆ. ಇದನ್ನು ಮೊದಲ ಶಿಕ್ಷಣ ಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಅವರ ಜನ್ಮ ಶತಮಾನೋತ್ಸವದಂದು 1989ರಲ್ಲಿ ಸ್ಥಾಪಿಸಲಾಗಿತ್ತು. ಇದರಡಿಯಲ್ಲಿ ಜೂನಿಯರ್ ಸಂಶೋಧನಾ ವಿದ್ಯಾರ್ಥಿಗಳಿಗೆ (ಜೆಆರ್‌ಎಫ್) ಮೊದಲ ಎರಡು ವರ್ಷಗಳವರೆಗೆ ಮಾಸಿಕ ರೂ.31,000 ನೀಡಿದರೆ, ಹಿರಿಯ ಸಂಶೋಧನಾ ವಿದ್ಯಾರ್ಥಿಗಳಿಗೆ (ಎಸ್‌ಆರ್‌ಎಫ್) ಉಳಿದ ಅವಧಿಗೆ ತಿಂಗಳಿಗೆ ರೂ.35,000 ನೀಡಲಾಗುತ್ತದೆ. 2021-22ರ ವರದಿಯಂತೆ ಮೌಲಾನಾ ಆಝಾದ್ ರಾಷ್ಟ್ರೀಯ ಫೆಲೋಶಿಪ್ 6,700 ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ, ಇದರ ಮೊತ್ತ 738.85 ಕೋಟಿ ರೂ.ಎಂದು ಹೇಳಲಾಗಿದೆ. ಆದರೆ ಈ ಯೋಜನೆಯನ್ನು 2022ರಲ್ಲಿ ನಿಲ್ಲಿಸಲಾಗಿತ್ತು. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

2006ರಲ್ಲಿ ಸಾಚಾರ್ ಸಮಿತಿಯ ವರದಿಯು ಮುಸ್ಲಿಮರ ಸ್ಥಿತಿಗತಿ ಪರಿಶಿಷ್ಟ ಜಾತಿ/ಪರಿಶಿಷ್ಟ ಬುಡಕಟ್ಟುಗಳಿಗಿಂತ ಸ್ವಲ್ಪ ಸುಧಾರಿತವಾಗಿದ್ದರೂ ಇತರೆ ಹಿಂದುಳಿದ ವರ್ಗ, ಇತರ ಅಲ್ಪಸಂಖ್ಯಾತರಿಗಿಂತ ಅತ್ಯಂತ ಕೆಳಮಟ್ಟದಲ್ಲಿದೆ ಎಂದು ಹೇಳಿದೆ. ಈ ಸಂಶೋಧನೆಗಳಿಗೆ ಪ್ರತಿಕ್ರಿಯೆಯಾಗಿ 2006ರಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಸ್ಥಾಪಿಸಲಾಯಿತು, ನಂತರ MAEF ಸಚಿವಾಲಯದ ಅಧೀನಕ್ಕೆ ಬಂದಿದೆ. ಮೋದಿ ಆಡಳಿತದಲ್ಲಿ ಮೌಲಾನಾ ಅಬ್ಧುಲ್‌ ಕಲಾಂ ಆಝಾದ್‌ ಪೌಂಡೇಶನ್‌ ಗಮನಾರ್ಹ ಬಜೆಟ್ ಕಡಿತವನ್ನು ಅನುಭವಿಸಿದೆ. ಅನುದಾನದಲ್ಲಿ 2021-22 ರಲ್ಲಿ ರೂ.90 ಕೋಟಿಯಿಂದ 2022-23ರಲ್ಲಿ ರೂ.1 ಲಕ್ಷ ಕೋಟಿ ಮೀಸಲಿಟ್ಟಿದೆ, ಆದರೆ ತರುವಾಯ 2024-25ನೇ ಪ್ರಸಕ್ತ ವರ್ಷದಲ್ಲಿ ಸರಕಾರ ಯಾವುದೇ ಅನುದಾನ ಮೀಸಲಿಟ್ಟಿಲ್ಲ.

ಈ ಬೆಳವಣಿಗೆಯ ಕುರಿತು ಮಾತನಾಡಿದ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕರು, ಭಾರತದ ಮುಸ್ಲಿಂ ಸಮುದಾಯದ ನಡುವೆ ಶಿಕ್ಷಣವನ್ನು ಉತ್ತೇಜಿಸುವ MAEF ಮೇಲಿನ ಈ ಕ್ರಮವು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪ್ರತಿಷ್ಠಾನದ ಅಡಿಯಲ್ಲಿ ಹಲವಾರು ವಿದ್ಯಾರ್ಥಿಗಳು ಪ್ರಯೋಜನ ಪಡೆದರು ಮತ್ತು ಪ್ರತಿಷ್ಠಾನವನ್ನು ಮುಚ್ಚುತ್ತಿರುವುದು ದುರದೃಷ್ಟಕರವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...