Homeಮುಖಪುಟಜ್ಞಾನವಾಪಿಯಲ್ಲಿ ಪೂಜೆಗೆ ಅವಕಾಶ ಕೊಟ್ಟಿದ್ದ ನ್ಯಾಯಾಧೀಶರಿಗೆ ಪ್ರಮುಖ ಹುದ್ದೆ ನೀಡಿದ ಯುಪಿ ಸರ್ಕಾರ

ಜ್ಞಾನವಾಪಿಯಲ್ಲಿ ಪೂಜೆಗೆ ಅವಕಾಶ ಕೊಟ್ಟಿದ್ದ ನ್ಯಾಯಾಧೀಶರಿಗೆ ಪ್ರಮುಖ ಹುದ್ದೆ ನೀಡಿದ ಯುಪಿ ಸರ್ಕಾರ

- Advertisement -
- Advertisement -

ತಮ್ಮ ಕರ್ತವ್ಯದ ಕೊನೆಯ ದಿನವಾದ ಜನವರಿ 31ರಂದು ಜ್ಞಾನವಾಪಿ ಮಸೀದಿಯ ನೆಲ ಮಹಡಿಯಲ್ಲಿ(ವ್ಯಾಸ್ ಜಿ ಕಾ ತೆಹ್ಖಾನಾ) ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿ ತೀರ್ಪು ಪ್ರಕಟಿಸಿದ್ಧ ನಿವೃತ್ತ ನ್ಯಾಯಾಧೀಶ ವಾರಣಾಸಿ ಎ ಕೆ ವಿಶ್ವೇಶ ಅವರನ್ನು ಉತ್ತರ ಪ್ರದೇಶ ಸರ್ಕಾರ ಸ್ಥಾಪಿಸಿರುವ ಲಕ್ನೋದ ಡಾ. ಶಕುಂತಳಾ ಮಿಶ್ರಾ ನ್ಯಾಷನಲ್ ರಿಹ್ಯಾಬಿಲಿಟೇಶನ್ ವಿಶ್ವವಿದ್ಯಾಲಯಕ್ಕೆ ಲೋಕ್‌ಪಾಲ್‌ ಆಗಿ ಸರ್ಕಾರ ನೇಮಿಸಿದೆ.

ಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶ ಹೊಂದಿರುವ ಈ ವಿಶ್ವವಿದ್ಯಾಲಯದ ಒಂಬುಡ್ಸ್‌ಮನ್ ಆಗಿ ನಿವೃತ್ತ ನ್ಯಾಯಾಧೀಶ ವಿಶ್ವೇಶ ಅವರು ಕಾರ್ಯನಿರ್ವಹಿಸಲಿದ್ದು, ಮೂರು ವರ್ಷಗಳ ಅಧಿಕಾರವಧಿಯಲ್ಲಿ ಅವರು ವಿದ್ಯಾರ್ಥಿಗಳ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.

ಜನವರಿ 31ರಂದು, ಜ್ಞಾನವಾಪಿ ಮಸೀದಿ ಸಂಕೀರ್ಣದ ಒಳಗೆ ಮುಚ್ಚಿದ ನೆಲಮಾಳಿಗೆ (ವ್ಯಾಸ್ ಜಿ ಕಾ ತೆಹ್ಖಾನಾ)ಯಲ್ಲಿ ಹಿಂದೂಗಳು ಪೂಜಾ ವಿಧಿವಿಧಾನಗಳನ್ನು ನಡೆಸಲು ಅವಕಾಶ ನೀಡಿ ನ್ಯಾಯಾಧೀಶ ವಿಶ್ವೇಶ ಅವರು ಆದೇಶಿಸಿದ್ದರು. ಮುಂದಿನ 7 ದಿನಗಳಲ್ಲಿ ಹಿಂದೂಗಳ ಪೂಜೆಗೆ ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದರು. ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ನೆಲಮಾಳಿಗೆಯಲ್ಲಿ(ತೆಹ್ಖಾನಾ) ಪೂಜೆ ಮಾಡುವ ಹಕ್ಕನ್ನು ಕೋರಿ ಹಿಂದೂಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಈ ಆದೇಶ ನೀಡಲಾಗಿತ್ತು. ಈ ಸ್ಥಳದಲ್ಲಿ ನಡೆಯುತ್ತಿದ್ದ ಪೂಜೆಯನ್ನು 1993 ರಲ್ಲಿ ನಿಲ್ಲಿಸಲಾಯಿತು ಎಂದು ಹೇಳಲಾಗ್ತಿದೆ.

ವಿಶ್ವವಿದ್ಯಾನಿಲಯದೊಂದಿಗೆ ಸಂಯೋಜಿತವಾಗಿರುವ ಕಾಲೇಜುಗಳು ಅಥವಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಕುಂದುಕೊರತೆಗಳ ಪರಿಹಾರಕ್ಕಾಗಿ ಒಂಬುಡ್ಸ್‌ಮನ್‌ಗಳನ್ನು ನೇಮಿಸಬೇಕು ಎಂಬ ಯುಜಿಸಿಯ ಕಡ್ಡಾಯ ನಿಯಮದ ಪ್ರಕಾರ ನಿವೃತ್ತ ನ್ಯಾಯಧೀಶ ವಾರಣಾಸಿ ಎ ಕೆ ವಿಶ್ವೇಶ ಅವರನ್ನು ನೇಮಕ ಮಾಡಲಾಗಿದೆ. ಯುಜಿಸಿ ಸುತ್ತೋಲೆ ಪ್ರಕಾರ, ಲೋಕಪಾಲರು, ನಿವೃತ್ತ ಉಪಕುಲಪತಿಗಳು, ನಿವೃತ್ತ ಪ್ರಾಧ್ಯಾಪಕರು ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರನ್ನು ಈ ಹುದ್ದೆಗೆ ನೇಮಿಸಬಹುದು.

ಇದನ್ನೂ ಓದಿ: 1993ರ ಸರಣಿ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ʼತುಂಡಾʼ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...