Homeಕರ್ನಾಟಕಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೈತ ಹೋರಾಟದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರದಿಂದ ತಡೆ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೈತ ಹೋರಾಟದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರದಿಂದ ತಡೆ

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ದೆಹಲಿ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ತಡೆ ಒಡ್ಡಿದೆ.

ಸೆನ್ಸಾರ್ ಮಾಡಿಸದ ಚಿತ್ರಗಳ ಪ್ರದರ್ಶನಕ್ಕೆ ಮುನ್ನ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಅನುಮತಿ ಪಡೆದುಕೊಳ್ಳಬೇಕು. ಹಾಗಾಗಿ, ಅನುಮತಿ ಪಡೆಯಲು ರಾಜ್ಯ ಸರ್ಕಾರ ಪಟ್ಟಿ ಕಳುಹಿಸಿತ್ತು. ಈ ವೇಳೆ ಕಿಸಾನ್ ಸತ್ಯಾಗ್ರಹ ಸಾಕ್ಷ್ಯಚಿತ್ರ, ಇಸ್ರೇಲ್ ಮತ್ತು ಉಕ್ರೇನ್‌ನ ಎರಡು ಸಿನಿಮಾಗಳ ಪ್ರದರ್ಶನಕ್ಕೆ ಸಚಿವಾಲಯ ತಡೆ ನೀಡಿದೆ ಎಂದು ತಿಳಿದು ಬಂದಿದೆ.

ಈ ಕುರಿತು ನಾನುಗೌರಿ ಜೊತೆ ಮಾತನಾಡಿರುವ ಸಾಕ್ಷ್ಯಚಿತ್ರ ನಿರ್ದೇಶಕ ಕೇಸರಿ ಹರವು, “ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯದಿಂದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರದಿಂದ ನನಗೆ ಮಾಹಿತಿ ಬಂದಿದೆ. ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರ ಪಡೆಯದ ಚಿತ್ರಗಳ ಪ್ರದರ್ಶನ ಚಲನಚಿತ್ರೋತ್ಸವದಲ್ಲಿ ಮಾಡುವಂತಿಲ್ಲ ಎಂಬ ನಿಯಮ ಇಲ್ಲ. ಆದರೆ, ಪ್ರಮಾಣ ಪತ್ರ ಪಡೆಯದ ಸಿನಿಮಾ, ಸಾಕ್ಷ್ಯಚಿತ್ರಗಳ ಪ್ರದರ್ಶನಕ್ಕೆ ಮುನ್ನ ಕೇಂದ್ರಕ್ಕೆ ಪಟ್ಟಿ ನೀಡಬೇಕಿದೆ. ಅದರಂತೆ ರಾಜ್ಯ ಸರ್ಕಾರ ಪಟ್ಟಿ ಕಳಿಸಿತ್ತು. ಪ್ರಮಾಣ ಪತ್ರ ಪಡೆದಿಲ್ಲ ಎಂಬ ಕಾರಣ ನೀಡಿ ಪ್ರದರ್ಶನಕ್ಕೆ ತಡೆ ನೀಡಿದ್ದಾರೆ ಎಂಬ ಮಾಹಿತಿ ದೊರೆತಿದೆ” ಎಂದಿದ್ದಾರೆ.

“ನಮ್ಮ ಸಾಕ್ಷ್ಯಚಿತ್ರದ ಜೊತೆಗೆ ಉಕ್ರೇನ್ ಮತ್ತು ಇಸ್ರೇಲ್‌ನ ಎರಡು ಸಿನಿಮಾಗಳ ಪ್ರದರ್ಶನಕ್ಕೆ ತಡೆ ಒಡ್ಡಲಾಗಿದೆ. ಅವುಗಳೂ ಕೂಡ ಯುದ್ಧಕ್ಕೆ ಸಂಬಂಧಿಸಿದ್ದಾಗಿವೆ” ಎಂದು ಹರವು ಹೇಳಿದ್ದಾರೆ.

“ಕಳೆದ ವರ್ಷ ನಮ್ಮ ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಅವಕಾಶ ಕೋರಿದ್ದೆವು. ಆಗ ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸುವುದಿಲ್ಲ ಎಂದು ಸರ್ಕಾರದ ಕಡೆಯಿಂದ ತಿಳಿಸಿದ್ದರು. ಬಳಿಕ, ಅವರು ಕೆಲ ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಿದ್ದಾರೆ. ನನಗೆ ಅವರು ಸುಳ್ಳು ಹೇಳಿದ್ದರು. ಈ ಬಾರಿ ನಾವು ಪ್ರದರ್ಶನಕ್ಕೆ ಮನವಿ ಮಾಡಿರಲಿಲ್ಲ. ಆದರೆ, ಸರ್ಕಾರದ ಕಡೆಯಿಂದಲೇ ಪ್ರದರ್ಶನಕ್ಕೆ ಅನುಮತಿ ಕೇಳಿದ್ದರು. ಚಲನಚಿತ್ರೋತ್ಸವದ ಮಾಹಿತಿ ಕೈಪಿಡಿಯ 236ನೇ ಪುಟದಲ್ಲಿ ನಮ್ಮ ಚಿತ್ರ ಪ್ರದರ್ಶನದ ಬಗ್ಗೆ ಪ್ರಕಟಿಸಲಾಗಿದೆ. ಆದರೆ, ಈಗ ಕೇಂದ್ರದಿಂದ ತಡೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ನಮ್ಮದು ದೆಹಲಿಯ ರೈತ ಹೋರಾಟದ ಕುರಿತ ಸಾಕ್ಷ್ಯ ಚಿತ್ರ. ಉಕ್ರೇನ್ ಮತ್ತು ಇಸ್ರೇಲ್‌ನದ್ದು ಅಲ್ಲಿನ ಯುದ್ಧ ಭೀಕರತೆಯ ಕುರಿತ ಚಿತ್ರಗಳಾಗಿವೆ. ಈ ಮೂರು ಚಿತ್ರಗಳ ಪ್ರದರ್ಶನದ ತಡೆ ಹಿಡಿದಿರುವುದರ ಹಿಂದೆ ದುರುದ್ದೇಶವಿದೆ” ಎಂದು ಹರವು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...