HomeUncategorizedಗಾಝಾದಲ್ಲಿನ ಪತ್ರಕರ್ತರಿಗೆ ಒಗ್ಗಟ್ಟು ಪ್ರದರ್ಶಿಸಿ ಪತ್ರ ಬರೆದ ಮಾದ್ಯಮ ಸಂಸ್ಥೆಗಳು

ಗಾಝಾದಲ್ಲಿನ ಪತ್ರಕರ್ತರಿಗೆ ಒಗ್ಗಟ್ಟು ಪ್ರದರ್ಶಿಸಿ ಪತ್ರ ಬರೆದ ಮಾದ್ಯಮ ಸಂಸ್ಥೆಗಳು

- Advertisement -
- Advertisement -

ಗಾಝಾದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿ 30ಕ್ಕೂ ಹೆಚ್ಚು ಸುದ್ದಿ ಸಂಸ್ಥೆಗಳು ಪತ್ರಬರೆದಿದ್ದು, ಪತ್ರಕರ್ತರ ರಕ್ಷಣೆ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಲು ಕರೆ ನೀಡಿವೆ.

ಪತ್ರಕರ್ತರನ್ನು ರಕ್ಷಿಸುವ ಸಮಿತಿಯ(CPJ) ಪತ್ರಕ್ಕೆ ಜಾಗತಿಕ ಸುದ್ದಿ ಸಂಸ್ಥೆಗಳಾದ AFP, AP ಮತ್ತು ರಾಯಿಟರ್ಸ್ ಮತ್ತು ಗಾರ್ಡಿಯನ್, ನ್ಯೂಯಾರ್ಕ್ ಟೈಮ್ಸ್, BBC ನ್ಯೂಸ್ ಮತ್ತು ಇಸ್ರೇಲ್‌ನ ಹಾರೆಟ್ಜ್ ಸೇರಿದಂತೆ ಇತರ ಪ್ರಮುಖ 36ಕ್ಕೂ ಅಧಿಕ ಸುದ್ದಿ ಮಾಧ್ಯಮಗಳು ಸಹಿ ಹಾಕಿ ಒಗ್ಗಟ್ಟನ್ನು ಪ್ರದರ್ಶಿಸಿದೆ.

ಇಸ್ರೇಲ್‌- ಹಮಾಸ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಸುಮಾರು ಐದು ತಿಂಗಳಿನಿಂದ ಗಾಝಾದಲ್ಲಿ ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಭೀತಿಯಿಂದ ಕೆಲಸ ಮಾಡುತ್ತಿದ್ದಾರೆ. ಸಿಪಿಜೆ ಪ್ರಕಾರ, ಗಾಜಾದಲ್ಲಿ ಕನಿಷ್ಠ 89 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಯುದ್ಧದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಅದರಲ್ಲಿ ಹೆಚ್ಚಿನವರು ಪ್ಯಾಲೆಸ್ತೀನ್‌ ಪತ್ರಕರ್ತರು ಎನ್ನುವುದನ್ನು ಇಸ್ರೇಲ್‌ ಬಹಿರಂಗಪಡಿಸಿದೆ.

AFP ಪ್ರಕಾರ, ಇಸ್ರೇಲ್ ಮೇಲೆ ಹಮಾಸ್ ದಾಳಿಯಲ್ಲಿ 1,160 ಜನರು ಮೃತಪಟ್ಟಿದ್ದಾರೆ. ಗಾಝಾ ಆರೋಗ್ಯ ಸಚಿವಾಲಯದ ಪ್ರಕಾರ ಇಸ್ರೇಲ್‌ ನಡೆಸಿದ ಹತ್ಯಾಕಾಂಡಕ್ಕೆ ಗಾಝಾದಲ್ಲಿ 30,035 ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅದರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ.

ಪತ್ರಕರ್ತರು ನಾಗರಿಕರಾಗಿದ್ದಾರೆ. ಇಸ್ರೇಲ್‌ ಅಧಿಕಾರಿಗಳು ಅಂತರಾಷ್ಟ್ರೀಯ ಕಾನೂನಿನ ಪ್ರಕಾರ ಪತ್ರಕರ್ತರನ್ನು ಯುದ್ಧೇತರರಾಗಿ ರಕ್ಷಿಸಬೇಕು ಎಂದು ಪತ್ರವು ಹೇಳಿದ್ದು, ಪತ್ರಕ್ಕೆ ಅಸೋಸಿಯೇಷನ್ ​​ಫಾರ್ ಇಂಟರ್ನ್ಯಾಷನಲ್ ಬ್ರಾಡ್‌ಕಾಸ್ಟರ್ಸ್ ಮತ್ತು ವರ್ಲ್ಡ್ ಅಸೋಸಿಯೇಶನ್ ಆಫ್ ನ್ಯೂಸ್ ಪೇಪರ್ಸ್ ಮತ್ತು ನ್ಯೂಸ್ ಪಬ್ಲಿಷರ್ಸ್ (WAN-IFRA) ಸಹಿ ಮಾಡಿದೆ. ದೀರ್ಘಕಾಲದ ಯಾವುದೇ ಕಾನೂನು ಉಲ್ಲಂಘನೆಗಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಒಗ್ಗಟ್ಟಿನ ಪ್ರದರ್ಶನದಲ್ಲಿ ಹೆಚ್ಚಿನ ಸಂಸ್ಥೆಗಳು ಭಾಗವಹಿಸಲು ಸ್ವಾಗತಾರ್ಹ ಎಂದು ಸಿಪಿಜೆಯ ಮುಖ್ಯ ಕಾರ್ಯನಿರ್ವಾಹಕ ಗಿನ್ಸ್‌ಬರ್ಗ್ ಹೇಳಿದ್ದಾರೆ. ಅಂತರಾಷ್ಟ್ರೀಯ ಪತ್ರಿಕಾ ಸಮುದಾಯ ನಮ್ಮ ಪ್ಯಾಲೆಸ್ತೀನ್‌  ಸಹೋದ್ಯೋಗಿಗಳೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ನಾವು ತೋರಿಸುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

ಪತ್ರದಲ್ಲಿ ಇಸ್ರೇಲ್‌ನ್ನು ಒಮ್ಮೆ ಮಾತ್ರ ಉಲ್ಲೇಖಿಸಲಾಗಿದೆ. ಗಾಝಾದಲ್ಲಿ ಪತ್ರಕರ್ತರಿಗೆ ಹೆಚ್ಚಿನ ಪ್ರವೇಶ ಅವಕಾಶಕ್ಕೆ  ಸಿಪಿಜೆ ಪ್ರತಿಪಾದಿಸಿದ್ದು, ಈ ವಿಚಾರದಲ್ಲಿ ಒಗ್ಗಟ್ಟಿನ ಅಗತ್ಯವಿದೆ ಎಂದು ಗಿನ್ಸ್‌ಬರ್ಗ್ ಹೇಳಿದ್ದಾರೆ.

ಇದನ್ನು ಓದಿ: FACT CHECK: ಬಿಜೆಪಿ ಆರೋಪಿಸಿದಂತೆ ‘ಹಿಂದೂ ದೇವಾಲಯಗಳ ಹಣ’ವನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬಳಸಲಾಗುತ್ತಿದೆಯಾ? ‘ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ಮಸೂದೆ’ ಕುರಿತ ವಾಸ್ತವಾಂಶಗಳೇನು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...