Homeಮುಖಪುಟರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

ರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ‘ದರೋಡೆಕೋರ’ ಎಂದು ಬಿಂಬಿಸಿದ್ದ ಕಾಲ್ಪನಿಕ ವಿಡಿಯೋವನ್ನು ತೆಗೆದು ಹಾಕುವಂತೆ ಹಿಂದಿ ಸುದ್ದಿ ವಾಹಿನಿ ಆಜ್‌ತಕ್‌ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (ಎನ್‌ಬಿಡಿಎಸ್‌ಎ) ಗುರುವಾರ ನಿರ್ದೇಶನ ನೀಡಿದೆ.

ಕಾಲ್ಪನಿಕ ವಿಡಿಯೋ ಉತ್ತಮ ಅಭಿರುಚಿಯನ್ನು ಹೊಂದಿಲ್ಲ ಎಂದಿರುವ ಎನ್‌ಬಿಡಿಎಸ್‌ಎ, ತನ್ನ ಚಾನೆಲ್, ಯೂಟ್ಯೂಬ್ ಮತ್ತು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋ ತೆಗೆದು ಹಾಕುವಂತೆ ಆಜ್‌ತಕ್‌ಗೆ ಆದೇಶಿಸಿದೆ.

ಮೋದಿ ಉಪನಾಮೆ ಹೇಳಿಕೆ ಕುರಿತ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2023ರ ಮಾರ್ಚ್ 23 ರಂದು ಗುಜರಾತ್‌ನ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಆ ಬಳಿಕ ಮಾರ್ಚ್ 24, 2023ರಂದು ಪ್ರಸಾರವಾದ ‘ಬ್ಲ್ಯಾಕ್ ಅಂಡ್ ವೈಟ್’ ಎಂಬ ಶೋನಲ್ಲಿ ಆಜ್‌ತಕ್‌ ರಾಹುಲ್ ಗಾಂಧಿಯನ್ನು ದರೋಡೆಕೋರ ಎಂದು ಬಿಂಬಿಸಿತ್ತು.

ಮಾರ್ಚ್ 31,2023ರಂದು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರು ಆಜ್‌ತಕ್‌ ವಿರುದ್ಧ ಎನ್‌ಬಿಡಿಎಸ್‌ಎಗೆ ದೂರು ಸಲ್ಲಿಸಿದ್ದರು. ವಿವಾದಿತ ವಿಡಿಯೋವನ್ನು ಆಜ್‌ತಕ್‌ ಮೊದಲು ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿತ್ತು. ಬಳಿಕ ಬ್ಲ್ಯಾಕ್ ಅಂಡ್ ವೈಟ್ ಶೋನಲ್ಲಿ ಪ್ರಸಾರ ಮಾಡಿತ್ತು. ಈ ಕಾರ್ಯಕ್ರಮವನ್ನು ಆಜ್‌ತಕ್‌ನ ಸಲಹಾ ಸಂಪಾದಕ ಸುಧೀರ್ ಚೌಧರಿ ನಿರೂಪಿಸಿದ್ದರು ಎಂದು ಶ್ರೀನಿವಾಸ್ ಆರೋಪಿಸಿದ್ದರು.

ರಾಹುಲ್ ಗಾಂಧಿಯವರು ಮೋದಿ ಎಂಬ ಉಪನಾಮೆ ಬಳಸಿ ವಾಗ್ದಾಳಿ ನಡೆಸಿರುವುದು ನೀರವ್ ಮೋದಿಗೆ ಎಂಬುವುದು ಸುಧೀರ್ ಚೌಧರಿಗೆ ಚೆನ್ನಾಗಿ ಗೊತ್ತಿತ್ತು. ಆದರೂ, ದುರುದ್ದೇಶಪೂರ್ವಕವಾಗಿ ಯಾರೋ ದರೋಡೆ ಆರೋಪಿಗಳೊಂದಿಗೆ ರಾಹುಲ್ ಗಾಂಧಿಯವರನ್ನು ಹೋಲಿಕೆ ಮಾಡಿದ್ದರು. ಈ ಮೂಲಕ ರಾಹುಲ್ ಗಾಂಧಿ ಗಂಭೀರ ಅಪರಾಧ ಎಸಗಿದ್ದಾರೆ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಲು ಪ್ರಯತ್ನಿಸಲಾಗಿತ್ತು ಎಂದು ಶ್ರೀನಿವಾಸ್ ಹೇಳಿದ್ದರು.

ಆರೋಪಿಗಳು ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ವಿಡಿಯೋ ಪ್ರಸಾರ ಮಾಡಿದ್ದರು. ನೇರವಾಗಿ ಕಾಂಗ್ರೆಸ್ ಪಕ್ಷ ಮತ್ತು ಭಾರತೀಯ ಯುವ ಕಾಂಗ್ರೆಸ್‌ನ ಪ್ರತಿಷ್ಠೆಯನ್ನು ಗುರಿಯಾಗಿಸಿಕೊಂಡು ಲಕ್ಷಾಂತರ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರು ಎಂದು ದೂರಿದ್ದರು.

ಈ ಸಂಬಂಧ ಆಜ್‌ತಕ್‌ ಚಾನೆಲ್‌ನಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಮತ್ತು ಟೆಲಿಕಾಸ್ಟ್ ಜೊತೆಗೆ ಇಂಟರ್‌ನೆಟ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಸ್ಟ್ ಮಾಡಿರುವ ಅವಹೇಳನಕಾರಿ ವಿಡಿಯೋವನ್ನು ತಕ್ಷಣವೇ ಡಿಲಿಟ್ ಮಾಡಿಸಲು ಶ್ರೀನಿವಾಸ್ ಆಗ್ರಹಿಸಿದ್ದರು.

ಶ್ರೀನಿವಾಸ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಆಜ್‌ತಕ್‌, ರಾಹುಲ್ ಗಾಂಧಿ ಕುರಿತು ನಾವು ಯಾವುದೇ ದುರುದ್ದೇಶಪೂರ್ವಕ ಹೇಳಿಕೆ ನೀಡಿಲ್ಲ. ಅವರನ್ನು ದರೋಡೆ ಆರೋಪಿಯನ್ನಾಗಿ ಬಿಂಬಿಸಿಲ್ಲ ಎಂದಿತ್ತು. ಚಾನೆಲ್‌ನಲ್ಲಿ ಪ್ರಸಾರವಾದ ವಿಡಿಯೋದ ಸಂಪೂರ್ಣ ಅಂಶವು ಪ್ರಿಯಾಂಕಾ ಗಾಂಧಿಯವರು ಎಕ್ಸ್‌ನಲ್ಲಿ ಮಾಡಿರುವ ಪೋಸ್ಟನ್ನು ಆಧರಿಸಿತ್ತು ಎಂದು ಚಾನೆಲ್ ವಾದಿಸಿತ್ತು.

ಚಾನೆಲ್ ನಿರೂಪಕ ಪ್ರಿಯಾಂಕಾ ಗಾಂಧಿಯವ ಎಕ್ಸ್‌ ಪೋಸ್ಟ್‌ಗೆ ವಿಭಿನ್ನ ನಿರೂಪಣೆ ನೀಡಿದ್ದರೂ, ಪ್ರಿಯಾಂಕಾ ಗಾಂಧಿ ಮಾಡಿದ್ದ ಪೋಸ್ಟ್‌ಗಳನ್ನು ನಿಖರವಾಗಿ ಪ್ರಸಾರ ಮಾಡಿದ್ದಾರೆ ಎಂದು ಎರಡೂ ಕಡೆಯವರು ಒಪ್ಪಿಕೊಂಡಿದ್ದರು ಎಂದು ಎನ್‌ಬಿಡಿಎಸ್‌ಎ ಗಮನಿಸಿದೆ.

ಚಾನೆಲ್‌ನಲ್ಲಿ ಪ್ರಸಾರವಾದ ಕಾಲ್ಪನಿಕ ವಿಡಿಯೋದಲ್ಲಿ ಚಿತ್ರಿಸಲಾದ ದರೋಡೆಕೋರನ ಕಥೆ ರಾಹುಲ್ ಗಾಂಧಿ ಮೇಲಿನ ಅಪರಾಧಕ್ಕೆ ಸಂಬಂಧಿಸಿದೆ. ವಿಡಿಯೋದಲ್ಲಿ ಮಾಡಲಾದ ಆರೋಪಗಳು ಉತ್ತಮ ಅಭಿರುಚಿಯಲ್ಲಿಲ್ಲ. ಹಾಗಾಗಿ, ಈ ರೀತಿಯ ಕಾರ್ಯಕ್ರಮಗಳನ್ನು ಪುನರಾವರ್ತಿಸಬಾರದು ಎಂದು ಎನ್‌ಬಿಡಿಎಸ್‌ಎ ಆಜ್‌ತಕ್‌ಗೆ ಹೇಳಿದೆ.

ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ವಿಡಿಯೋವನ್ನು ತೆಗೆದು ಹಾಕುವಂತೆ ಸೂಚಿಸಿದೆ. ಮುಂದಿನ ಪ್ರಸಾರಗಳಲ್ಲಿ ಅಂತಹ ಕಾಲ್ಪನಿಕ ವಿಡಿಯೋಗಳನ್ನು ಪ್ರಸಾರ ಮಾಡುವಾಗ ಜಾಗರೂಕರಾಗಿರಿ ಎಂದು ಆಜ್‌ತಕ್‌ ಚಾನೆಲ್‌ಗೆ ನಿರ್ದೇಶಿಸಿದೆ.

ದೂರುದಾರರ ಪರ ವಕೀಲ ಕಪಿಲ್ ಮದನ್ ವಾದ ಮಂಡಿಸಿದ್ದರು.

ಇದನ್ನೂ ಓದಿ : ಕೋಮು ದ್ವೇಷ ಹರಡುವ ಕಾರ್ಯಕ್ರಮ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌ 18ಗೆ ದಂಡ, ಆಜ್‌ತಕ್‌ಗೆ ಎಚ್ಚರಿಕೆ ನೀಡಿದ ಎನ್‌ಬಿಡಿಎಸ್‌ಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...