Homeಮುಖಪುಟಮೋದಿ ತವರು ರಾಜ್ಯದಲ್ಲಿ ಗಣನೀಯವಾಗಿ ಮುಚ್ಚಲ್ಪಟ್ಟ ಸರಕಾರಿ ಶಾಲೆಗಳು!

ಮೋದಿ ತವರು ರಾಜ್ಯದಲ್ಲಿ ಗಣನೀಯವಾಗಿ ಮುಚ್ಚಲ್ಪಟ್ಟ ಸರಕಾರಿ ಶಾಲೆಗಳು!

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯ ತವರು ರಾಜ್ಯ ಗುಜರಾತ್‌ನಲ್ಲಿ ಕಳೆದ ಮೂರು ವರ್ಷಗಳಲ್ಲಿ 170 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗಿದೆ ಎಂಬಂತಹ ಸ್ಪೋಟಕ ವರದಿ ಬಹಿರಂಗವಾಗಿದೆ.

ಗುಜರಾತ್‌ನಲ್ಲಿನ ದೇವಭೂಮಿ ದ್ವಾರಕಾ, ಗಿರ್ ಸೋಮನಾಥ್ ಮತ್ತು ಕಚ್ ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದ್ದು, ವಿದ್ಯಾರ್ಥಿಗಳ ಕೊರತೆಯಿಂದ 329 ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

ಫೆಬ್ರವರಿ 26ರಂದು ಗುಜರಾತ್ ವಿಧಾನಸಭೆಗೆ ಸರ್ಕಾರವು ನೀಡಿದ ಅಂಕಿಅಂಶಗಳ ಪ್ರಕಾರ, 2020-21ಕ್ಕೆ ಹೋಲಿಸಿದರೆ 2021-22ರಲ್ಲಿ ಮುಚ್ಚಲಾದ ಶಾಲೆಗಳ ಸಂಖ್ಯೆ ಬಹುಪಟ್ಟು ಹೆಚ್ಚಾಗಿದೆ. 2020-21ರಲ್ಲಿ 20 ಶಾಲೆಗಳನ್ನು ಮುಚ್ಚಿದ್ದರೆ, 2021-22ರಲ್ಲಿ ಈ ಸಂಖ್ಯೆ 133ಕ್ಕೆ ಏರಿದೆ. ಆದರೆ 2022-23ರಲ್ಲಿ ಈ ಸಂಖ್ಯೆ 17ಕ್ಕೆ ಇಳಿದಿದೆ ಎಂದು ತಿಳಿಸಿದೆ.

ಸದನದಲ್ಲಿ ಈ ವಿಷಯದಲ್ಲಿ ಪ್ರಶ್ನೆಯನ್ನು ಕೇಳಿದ್ದ ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲಾ ಮಾದ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಮತ್ತು ಹೊಸ ಶಾಲೆಗಳನ್ನು ತೆರೆಯುತ್ತಿಲ್ಲ. ಒಂದು ಕಡೆ, ಸರ್ಕಾರವು  ತನ್ನ ಶಾಲೆಗಳಲ್ಲಿ 100 ಪ್ರತಿಶತ ದಾಖಲಾತಿಯನ್ನು ಸಾಧಿಸುವುದಾಗಿ ಹೇಳಿಕೊಂಡಿದೆ. ಇದು ಶಾಲೆಗಳನ್ನು ಮುಚ್ಚುತ್ತಿದೆ, ವಿಶೇಷವಾಗಿ ಮಕ್ಕಳಿಗೆ ಬೇರೆ ಯಾವುದೇ ಆಯ್ಕೆಗಳಿಲ್ಲದ ಪ್ರದೇಶಗಳಲ್ಲಿಈ ಬೆಳವಣಿಗೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಮಾಹಿತಿಯ ಪ್ರಕಾರ, ಶಾಲೆಗಳಾದ್ಯಂತ I ಮತ್ತು VIII ನೇ ತರಗತಿಗಳ ನಡುವಿನ 329 ತರಗತಿಗಳನ್ನು ಈ ಮೂರು ವರ್ಷಗಳಲ್ಲಿ ಮುಚ್ಚಲಾಗಿದೆ. 2021-22ರಲ್ಲಿ 266 ತರಗತಿಗಳನ್ನು ಮುಚ್ಚಲಾಗಿದೆ. ನಂತರ 2021-22 ರಲ್ಲಿ 53 ಮತ್ತು 2022-23ರಲ್ಲಿ 10 ತರಗತಿಗಳನ್ನು ವಿದ್ಯಾರ್ಥಿಗಳಿಲ್ಲದೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ದೇವಭೂಮಿ ದ್ವಾರಕಾದಲ್ಲಿ 42 ಶಾಲೆಗಳನ್ನು ಮುಚ್ಚಲಾಗಿದ್ದು, 107 ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.  ಗಿರ್ ಸೋಮನಾಥ್‌ನಲ್ಲಿ ಎಂಟು ಶಾಲೆಗಳನ್ನು ಬಂದ್ ಮಾಡಲಾಗಿದ್ದು, 76 ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.  ಕಚ್‌ನಲ್ಲಿ 9 ಶಾಲೆಗಳನ್ನು ಬಂದ್‌ ಮಾಡಲಾಗಿದ್ದು, 47 ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ನಿರ್ದಿಷ್ಟ ತರಗತಿಗಳಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳ ಕಾರಣದಿಂದಾಗಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಸರ್ಕಾರ ಉಲ್ಲೇಖಿಸಿದೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ಕಾರಣ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನಗೊಳಿಸಲಾಗಿದೆ ಎಂದು ಕಚ್ ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿ ಭೂಪೇಂದ್ರ ವಘೇಲಾ ಹೇಳಿದ್ದಾರೆ.

ದೇವಭೂಮಿ ದ್ವಾರಕಾ ಮತ್ತು ಕಚ್ ಜಿಲ್ಲೆಗಳಲ್ಲಿ 10%ಕ್ಕಿಂತ ಹೆಚ್ಚು ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಒಬ್ಬ ಶಿಕ್ಷಕರು ನಡೆಸುತ್ತಿದ್ದಾರೆ. ಸರ್ಕಾರಿ ಅಂಕಿಅಂಶಗಳ ಪ್ರಕಾರ, ದೇವಭೂಮಿ ದ್ವಾರಕಾದಲ್ಲಿ 17.72 ಪ್ರತಿಶತದಷ್ಟು ಇಂತಹ ಶಾಲೆಗಳಿವೆ, ಕಚ್‌ನ ಅಂಕಿ ಅಂಶವು 10.54 ಪ್ರತಿಶತದಷ್ಟಿದೆ.

ರಾಜ್ಯದಲ್ಲಿ ಇರುವ 30,510 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1,595 ಶಾಲೆಗಳು (ಶೇ. 5.22) ಒಬ್ಬ ಶಿಕ್ಷಕರೊಂದಿಗೆ ನಡೆಯುತ್ತಿವೆ. ಗುಜರಾತ್‌ನಲ್ಲಿ ಕೇವಲ ಒಬ್ಬ ಶಿಕ್ಷಕರನ್ನು ಹೊಂದಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳ ಸಂಖ್ಯೆ ಕಳೆದ ಎರಡು ವರ್ಷಗಳಲ್ಲಿ ಸುಮಾರು 700 ರಿಂದ 1,606ಕ್ಕೆ ಏರಿಕೆಯಾಗಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಧರ್ಮ, ಜಾತಿ ಆಧಾರದಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...