Homeಮುಖಪುಟಅಂಬಾನಿ ಪುತ್ರನ ಮದುವೆ ನಿಮಿತ್ತ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ

ಅಂಬಾನಿ ಪುತ್ರನ ಮದುವೆ ನಿಮಿತ್ತ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಸ್ಥಾನಮಾನ

ವಾಯುಪಡೆಯ ಸೂಕ್ಷ್ಮ ರಕ್ಷಣಾ ವಿಮಾನ ನಿಲ್ದಾಣ ಖಾಸಗಿ ಕಾರ್ಯಕ್ರಮಕ್ಕೆ ಬಳಕೆ

- Advertisement -
- Advertisement -

ಉದ್ಯಮಿ ಮುಖೇಶ್ ಅಂಬಾನಿ ಪುತ್ರನ ಮಗನ ವಿವಾಹ ಪೂರ್ವ ಕಾರ್ಯಕ್ರಮಗಳ ಹಿನ್ನೆಲೆ ಗುಜರಾತ್‌ನ ಜಾಮ್‌ನಗರ ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ 10 ದಿನಗಳ ಕಾಲ ಅಂತಾರಾಷ್ಟ್ರೀಯ ಸ್ಥಾನಮಾನ ನೀಡಿದೆ ಎಂದು ವರದಿಯಾಗಿದೆ.

ದಿ ವೈರ್ ವರದಿಯ ಪ್ರಕಾರ, ಪಾಕಿಸ್ತಾನದ ಗಡಿಯ ಸಮೀಪದಲ್ಲಿರುವ ಜಾಮ್‌ನಗರ ಪಟ್ಟಣದ ಭಾರತೀಯ ವಾಯುಪಡೆಯ ಸೂಕ್ಷ್ಮ ರಕ್ಷಣಾ ವಿಮಾನ ನಿಲ್ದಾಣಕ್ಕೆ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ಅಂತಾರಾಷ್ಟ್ರೀಯ ಸ್ಥಾನಮಾನ ನೀಡಲಾಗಿದೆ. ಇದರಿಂದ ಅಂಬಾನಿ ಮಗನ ಮದುವೆ ಸಂಬಂಧಿತ ಕಾರ್ಯಕ್ರಮಗಳಿಗೆ ಆಗಮಿಸುವವರು ಈ ವಿಮಾನ ನಿಲ್ದಾಣಕ್ಕೆ ಬಂದಿಳಿಯಬಹುದು.

ಉದ್ಯಮಿ ಮುಖೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ವಿವಾಹ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಗುಜರಾತಿ ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ನಡೆಯಲಿದೆ. ಮದುವೆ ಸಂಬಂಧಿತ ಕಾರ್ಯಕ್ರಮಗಳಿಗೆ ದೇಶ, ವಿದೇಶಗಳಿಂದ ಅತಿಥಿಗಳು ಆಗಮಿಸುತ್ತಿದ್ದಾರೆ.

ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಫೆಬ್ರವರಿ 28 ರಿಂದ ಮಾರ್ಚ್ 4ರ ನಡುವೆ, ಜಾಮ್‌ನಗರ ವಿಮಾನ ನಿಲ್ದಾಣವು ಕನಿಷ್ಠ 150 ವಿಮಾನಗಳನ್ನು ಸ್ವೀಕರಿಸುವ ನಿರೀಕ್ಷೆಯಿದೆ. ಇವುಗಳಲ್ಲಿ 50 ವಿದೇಶಿ ಸ್ಥಳಗಳಿಂದ ನೇರವಾಗಿ ವಿಮಾನಗಳು ಆಗಮಿಸಲಿದೆ. ಐದು ದಿನಗಳಲ್ಲಿ ವಿಮಾನ ನಿಲ್ದಾಣದ ಮೂಲಕ 300ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸುವ ಸಾಧ್ಯತೆಯಿದೆ ಎಂದು ಜಾಮ್‌ನಗರದ ವಿಮಾನ ನಿಲ್ದಾಣದ ನಿರ್ದೇಶಕ ಡಿ.ಕೆ. ಸಿಂಗ್ ತಿಳಿಸಿರುವುದಾಗಿ ದಿ ಹಿಂದೂ ಬಿಸಿನೆಸ್‌ಲೈನ್‌ ವರದಿ ಮಾಡಿದೆ.

ಅನಂತ್ ಅಂಬಾನಿಯ ವಿವಾಹ ಕಾರ್ಯಕ್ರಮದಲ್ಲಿ ಮುಂಬೈ, ದೆಹಲಿ ಸೇರಿದಂತೆ ದೇಶ ವಿದೇಶಗಳಿಂದ ಸುಮಾರು 2 ಸಾವಿರ ಅತಿಥಿಗಳು ಆಗಮಿಸುವ ನಿರೀಕ್ಷೆಯಿದೆ. ಇವರೆಲ್ಲೂ ಜಾಮ್‌ನಗರ ವಿಮಾನ ನಿಲ್ದಾಣವನ್ನೇ ಆಶ್ರಯಿಸಲಿದ್ದಾರೆ. ಇದರಿಂದ ವಿಮಾನ ನಿಲ್ದಾಣದ ಮೇಲಿನ ಒತ್ತಡ ಹಲವು ಪಟ್ಟು ಹೆಚ್ಚಾಗಿಲಿದೆ. ಪ್ರಸ್ತುತ ವಿಮಾನ ನಿಲ್ಧಾಣ ಸರಾಸರಿ ಮೂರು ನಿಗದಿತ ಮತ್ತು ಐದು ನಿಗದಿತವಲ್ಲದ ವಿಮಾನಗಳ ಪ್ರತಿದಿನ ಸ್ವೀಕರಿಸುತ್ತಿದೆ ಎಂದು ವರದಿ ತಿಳಿಸಿದೆ.

“ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯ, ಹಣಕಾಸು ಸಚಿವಾಲಯ ಮತ್ತು ಗೃಹ ವ್ಯವಹಾರಗಳ ಸಚಿವಾಲಯವು ವಿಮಾನ ನಿಲ್ದಾಣದಲ್ಲಿ ಕಸ್ಟಮ್, ಇಮಿಗ್ರೇಷನ್ ಮತ್ತು ಕ್ವಾರಂಟೈನ್ (CIQ)ಸೌಲಭ್ಯವನ್ನು ಸ್ಥಾಪಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರಿದೆ” ಎಂದು ದಿ ಹಿಂದೂ ವರದಿ ಮಾಡಿದೆ.

ಅಂಬಾನಿ ಮಗನ ಮದುವೆ ಹಿನ್ನೆಲೆ ಭಾರತೀಯ ವಾಯುಪಡೆ ತನ್ನ ಸೂಕ್ಷ್ಮ ತಾಂತ್ರಿಕ ಪ್ರದೇಶಕ್ಕೆ ಖಾಸಗಿ ವಿಮಾನಗಳನ್ನು ಅನುಮತಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಅತಿಥಿಗಳನ್ನು ಸ್ವೀಕರಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಗಾತ್ರವನ್ನು ವಿಸ್ತರಿಸಿದೆ. ಜಾಮ್‌ನಗರ ವಿಮಾನ ನಿಲ್ದಾಣದಲ್ಲಿ ಪ್ರಸ್ತುತ ಇರುವ ಪ್ರಯಾಣಿಕ ಕಟ್ಟಡ 475 ಚದರ ಕಿ.ಮೀ ನಿಂದ 900 ಚದರ ಮೀಟರ್‌ ವರೆಗೆ ಗಾತ್ರವನ್ನು ಹೊಂದಿದೆ. ಇದು ಕನಿಷ್ಠ 180 ಮತ್ತು ಗರಿಷ್ಠ ಸುಮಾರು 360 ಪ್ರಯಾಣಿಕರನ್ನು ಸ್ವೀಕರಿಸುವ ಸಾಮಾರ್ಥ್ಯ ಹೊಂದಿದ.

ವಿಮಾನ ನಿಲ್ಧಾನ ವಿಸ್ತರಣೆ ಕಾರ್ಯವನ್ನು ಬಹಳ ಹಿಂದೆಯೇ ಪ್ರಾರಂಭಿಸಲಾಗಿತ್ತು. ಆದರೆ, ಅಂಬಾನಿ ಮಗನ ಮದುವೆ ಹಿನ್ನೆಲೆ ಕಾಮಗಾರಿ ತ್ವರಿತಗೊಳಿಸಲಾಯಿತು ಎಂದು ಗೌಪ್ಯ ಮೂಲವನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.

“ಈಗಿರುವ 16 ಮಂದಿಯೊಂದಿಗೆ ಮೂವತ್ತೈದು ಗೃಹರಕ್ಷಕ ಸಿಬ್ಬಂದಿಯನ್ನು ವಿಮಾನ ನಿಲ್ಧಾನದಲ್ಲಿ ನಿಯೋಜಿಸಲಾಗಿದೆ. ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರ ಭದ್ರತಾ ಸಿಬ್ಬಂದಿಯ ನಿಯೋಜನೆಯನ್ನು 35 ರಿಂದ 70ಕ್ಕೆ ದ್ವಿಗುಣಗೊಳಿಸಿದೆ. ಗ್ರೌಂಡ್ ಹ್ಯಾಂಡ್ಲಿಂಗ್ ಏಜೆನ್ಸಿಗಳು ತಮ್ಮ ಸಿಬ್ಬಂದಿಯ ಸಂಖ್ಯೆಯನ್ನು 65ರಿಂದ 125ಕ್ಕೆ ಹೆಚ್ಚಿಸಿದ್ದಾರೆ” ಎಂದು ದಿ ಹಿಂದೂ ಒತ್ತಿ ಹೇಳಿದೆ.

ವಿವಾಹಪೂರ್ವ ಕಾರ್ಯಕ್ರಮಕ್ಕೆ ಬರುವ ಗಣ್ಯರನ್ನು ಬರಮಾಡಿಕೊಳ್ಳಲು ರಕ್ಷಣಾ ವಿಮಾನ ನಿಲ್ದಾಣದ ಬಳಿ ವಿಶೇಷ ವ್ಯವಸ್ಥೆ ಮಾಡಲು ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್‌ಗೆ ಅನುಮತಿ ನೀಡಲಾಗಿದೆ ಎಂದು ದಿ ಹಿಂದೂ ಬಿಸಿನೆಸ್‌ಲೈನ್ ವರದಿ ತಿಳಿಸಿದೆ.

ಕಳೆದ ನವೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಮನ್ ಕಿ ಬಾತ್ ರೇಡಿಯೋ ಭಾಷಣದಲ್ಲಿ ಶ್ರೀಮಂತ ಭಾರತೀಯರಿಗೆ ‘ಭಾರತದಲ್ಲಿ ವಿವಾಹವಾಗಲು’ ಮನವಿ ಮಾಡಿದ್ದರು. ಅವರ ಸರ್ಕಾರವು ಅಂಬಾನಿ ಪುತ್ರನ ಮದುವೆಗಾಗಿ ಜಾಮ್‌ನಗರ ರಕ್ಷಣಾ ವಿಮಾನ ನಿಲ್ದಾಣದಲ್ಲಿ ನಡೆಸುತ್ತಿದ್ದ ವಿಶೇಷ ಸಿದ್ಧತೆಗಳನ್ನು ಉದ್ದೇಶಿಸಿ ಈ ಮನವಿ ಮಾಡಲಾಗಿತ್ತಾ ಎಂದು ಮಾಧ್ಯಮಗಳು ಪ್ರಶ್ನೆ ಎತ್ತಿವೆ.

ಡಿಸೆಂಬರ್ 29 ರಂದು ರಾಜಸ್ಥಾನದ ದೇವಸ್ಥಾನದಲ್ಲಿ ಅಂಬಾನಿ ಪುತ್ರನ ನಿಶ್ಚಿತಾರ್ಥ ನಡೆದೆ. ಜುಲೈ 12, 2024ರಂದು ವಿವಾಹ ನಡೆಲಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ರಾಹುಲ್ ಗಾಂಧಿ ಕುರಿತ ವಿಡಿಯೋ ತೆಗೆದು ಹಾಕಲು ಆಜ್‌ತಕ್‌ ಚಾನೆಲ್‌ಗೆ ಎನ್‌ಬಿಡಿಎಸ್‌ಎ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...