Homeಮುಖಪುಟಬ್ರಿಟನ್: ಉಪಚುನಾವಣೆಯಲ್ಲಿ ಎಡಪಂಥೀಯ ನಾಯಕ ಗ್ಯಾಲೋವೇಗೆ ಗೆಲುವು

ಬ್ರಿಟನ್: ಉಪಚುನಾವಣೆಯಲ್ಲಿ ಎಡಪಂಥೀಯ ನಾಯಕ ಗ್ಯಾಲೋವೇಗೆ ಗೆಲುವು

ಗಾಝಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಗ್ಯಾಲೋವೇ ಖಂಡಿಸಿದ್ದರು

- Advertisement -
- Advertisement -

ಬ್ರಿಟನ್ ಸಂಸತ್‌ಗೆ ನಡೆದ ಉಪ ಚುನಾವಣೆಯಲ್ಲಿ ಹಿರಿಯ ಎಡಪಂಥೀಯ ನಾಯಕ ಜಾರ್ಜ್ ಗ್ಯಾಲೋವೇ ಜಯಗಳಿಸಿದ್ದಾರೆ. ಈ ಮೂಲಕ ಉತ್ತರ ಇಂಗ್ಲೆಂಡ್‌ನ ರೋಚ್‌ಡೇಲ್‌ ಕ್ಷೇತ್ರದ ನೂತನ ಸಂಸದನಾಗಿ ಅವರು ಆಯ್ಕೆಯಾಗಿದ್ದಾರೆ.

ಲೇಬರ್ ಪಕ್ಷದ ನಾಯಕರಾಗಿರುವ ಗ್ಯಾಲೋವೇ, ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣವನ್ನು ಕಟುವಾಗಿ ವಿರೋಧಿಸಿದ್ದರು. ಇದೇ ವಿಷಯವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಸ್ಪರ್ಧಿಸಿದ್ದರು. ಗ್ಯಾಲೋವೇ ಅವರ ಗೆಲುವು ಇಸ್ರೇಲ್ ಬಗ್ಗೆ ಮೃಧು ಧೋರಣೆ ತಾಳಿರುವ ಪ್ರಧಾನಿ ರಿಶಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟು ಮಾಡಿದೆ.

ಗ್ಯಾಲೋವೆ ಅವರ ಅವರ ವರ್ಣರಂಜಿತ ಮತ್ತು ವಿವಾದಾತ್ಮಕ ರಾಜಕೀಯ ವೃತ್ತಿ ಜೀವನದ ಕೆಲವು ಗಮನಾರ್ಹ ವಿಷಯಗಳು ಇಲ್ಲಿವೆ.

ಸದ್ದಾಂ ಹುಸೇನ್ ಭೇಟಿ

ಸ್ಕಾಟಿಷ್ ನಗರವಾದ ಡುಂಡಿಯಲ್ಲಿ ಜನಿಸಿದ ಗ್ಯಾಲೋವೇ ಅವರು 1987ರಲ್ಲಿ ಲೇಬರ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಬ್ರಿಟನ್ ಸಂಸತ್ ಪ್ರವೇಶಿಸಿದ್ದರು. ಆ ಬಳಿಕ ಕೆಲವು ವಿವಾದಗಳಿಂದ ಅವರು ಪ್ರಸಿದ್ದಿ ಪಡೆದರು.

1994ರಲ್ಲಿ ಇರಾಕಿನ ನಾಯಕ ಸದ್ದಾಂ ಹುಸೇನ್ ಅವರನ್ನು ಭೇಟಿಯಾಗಿದ್ದ ಗ್ಯಾಲೋವೇ, “ಸರ್, ನಿಮ್ಮ ಧೈರ್ಯ, ಶಕ್ತಿ, ಮತ್ತು ಅವಿಶ್ರಾಂತತೆಗೆ ನಾನು ನಮಸ್ಕರಿಸುತ್ತೇನೆ” ಎಂದಿದ್ದರು. ಇದು ಭಾರೀ ಟೀಕೆಗೆ ಕಾರಣವಾಗಿತ್ತು.

ಇರಾಕ್ ಯುದ್ಧ 

ಗ್ಯಾಲೋವೇ ಅವರು ಇರಾಕ್ ಯುದ್ಧದಲ್ಲಿ ಬ್ರಿಟನ್‌ ಪಾಲ್ಗೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ್ದರು. ಇದು 2003ರಲ್ಲಿ ಲೇಬರ್‌ ಪಕ್ಷದಿಂದ ಅವರ ಅಮಾನತಿಗೆ ಕಾರಣವಾಯಿತು. 2005ರಲ್ಲಿ ಯುದ್ಧ ವಿರೋಧಿ ರೆಸ್ಪೆಕ್ಟ್ ಪಾರ್ಟಿಗೆ ಸೇರಿದ ಗ್ಯಾಲೋವೇ, ಅದೇ ವರ್ಷ ನಡೆದ ಸಾರ್ವತ್ರಿ ಚುನಾವಣೆಯಲ್ಲಿ ಲಂಡನ್‌ನ ಬೆತ್ನಾಲ್ ಗ್ರೀನ್ ಮತ್ತು ಬೋ ಕ್ಷೇತ್ರದಿಂದ ಜಯಗಳಿಸಿದ್ದರು.

ಸೆನೆಟ್ ವಿಚಾರಣೆ

ಇರಾಕ್‌ನ ನಾಯಕ ಸದ್ದಾಂ ಹುಸೇನ್ ಸುಪರ್ದಿಯಲ್ಲಿದ್ದ ತೈಲ ಕಂಪನಿಗಳ ಕುರಿತ ಪ್ರಕರಣವೊಂದರಕ್ಕೆ ಸಂಬಂಧಪಟ್ಟಂತೆ 2005ರಲ್ಲಿ ಯುಎಸ್ ಸೆನೆಟ್ ವಿಚಾರಣೆಗೆ ಗ್ಯಾಲೋವೇ ಹಾಜರಾಗಿದ್ದರು.

ಸೆಲೆಬ್ರಿಟಿ ಬಿಗ್ ಬ್ರದರ್

2006ರಲ್ಲಿ ಗ್ಯಾಲೋವೇ ಅವರು ಸೆಲೆಬ್ರಿಟಿ ಬಿಗ್ ಬ್ರದರ್‌ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಅದರಲ್ಲಿ ಬೆಕ್ಕಿನಂತೆ ನಟಿಸಿ, ನಟಿ ರುಲಾ ಲೆನ್ಸ್ಕಾ ಅವರ ಕೈಯಿಂದ ಹಾಲು ಕುಡಿದ ವಿಚಾರಕ್ಕೆ ಗ್ಯಾಲೋವೇ ಸುದ್ದಿಯಾಗಿದ್ದರು.

2012ರಲ್ಲಿ ನಡೆದ ಉಪಚುನಾವಣೆಯಲ್ಲಿ ಗ್ಯಾಲೋವೇ ಬ್ರಾಡ್‌ಫೋರ್ಡ್ ವೆಸ್ಟ್ ಕ್ಷೇತ್ರದಿಂದ ಗೆಲುವು ದಾಖಲಿಸಿದ್ದರು. ಆ ಬಳಿಕ ಈ ಬಾರಿಯ ವಿಜಯದವರೆಗೆ ಒಂಬತ್ತು ವರ್ಷಗಳ ಕಾಲ ಅವರು ಸಂಸತ್ತಿನಿಂದ ಹೊರಗಿದ್ದರು.

ಇವಿಷ್ಟು ಮಾತ್ರವಲ್ಲದೆ ಹಲವು ವಿಚಾರಗಳಲ್ಲಿ ಗ್ಯಾಲೋವೇ ಬ್ರಿಟನ್ ಪ್ರಸಿದ್ದ ರಾಜಕೀಯ ನಾಯಕರಾಗಿದ್ದಾರೆ. ಅವರ ಗೆಲುವು ರಿಶಿ ಸುನಕ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ ಎನ್ನಬಹುದು.

ಇದನ್ನೂ ಓದಿ : ಹಿಮಾಚಲ ಸಿಎಂ ವಿರುದ್ಧ ಬಂಡಾಯ ಶಾಸಕ ವಾಗ್ದಾಳಿ; ದೆಹಲಿಗೆ ತೆರಳುವ ಮುನ್ನ ವಿಕ್ರಮಾದಿತ್ಯ ಸಿಂಗ್ ಭೇಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...