Homeಮುಖಪುಟಶೇ.33 ಹಾಲಿ ರಾಜ್ಯಸಭಾ ಸಂಸದರ ಮೇಲಿದೆ ಕ್ರಿಮಿನಲ್ ಕೇಸ್: ವರದಿ

ಶೇ.33 ಹಾಲಿ ರಾಜ್ಯಸಭಾ ಸಂಸದರ ಮೇಲಿದೆ ಕ್ರಿಮಿನಲ್ ಕೇಸ್: ವರದಿ

- Advertisement -
- Advertisement -

ರಾಜ್ಯಸಭೆಯ 225 ಹಾಲಿ ಸದಸ್ಯರ ಪೈಕಿ, ಶೇಕಡಾ 33ರಷ್ಟು ಜನರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಹಾಲಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹19,602 ಕೋಟಿಗಳಷ್ಟಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌(ಎಡಿಆರ್)ನ ವಿಶ್ಲೇಷಣೆ ತಿಳಿಸಿದೆ.

ಇಬ್ಬರು ರಾಜ್ಯಸಭಾ ಹಾಲಿ ಸದಸ್ಯರು ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆಗೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ನಾಲ್ವರು ಸದಸ್ಯರ ಮೇಲೆ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳಿವೆ. ಒಟ್ಟು ಸದಸ್ಯರ ಪೈಕಿ 31 ಮಂದಿ, ಅಂದರೆ ಶೇ.14ರಷ್ಟು ಜನರು ಕೋಟ್ಯಾಧಿಪತಿಗಳಾಗಿದ್ದಾರೆ ಎಂದು ಎಡಿಆರ್ ವರದಿ ತಿಳಿಸಿದೆ.

ರಾಜ್ಯಸಭೆಯ 225 ಹಾಲಿ ಸಂಸದರ ಪೈಕಿ 75 (ಶೇ. 33) ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ. 40 (ಶೇ. 18) ಮಂದಿ ಸಂಸದರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ಎಡಿಆರ್ ವಿಶ್ಲೇಷಣೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಎಷ್ಟು ಜನ ರಾಜ್ಯಸಭಾ ಸದಸ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂಬುವುದನ್ನು ತಿಳಿಸಿದೆ. ಅದರಂತೆ, ಬಿಜೆಪಿಯ 90 (ಶೇ.23), ಕಾಂಗ್ರೆಸ್‌ನ 28 (ಶೇ. 50) ಸದಸ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ.

ಟಿಎಂಸಿಯ 13 ರಾಜ್ಯಸಭಾ ಸದಸ್ಯರ ಪೈಕಿ 5 (ಶೇ. 38), ಆರ್‌ಜೆಡಿಯ 6 ಸದಸ್ಯರಲ್ಲಿ 4 (ಶೇ. 67), ಸಿಪಿಐಎಂನ 5 ಸದಸ್ಯರಲ್ಲಿ 4 (ಶೇ.80), ಎಎಪಿಯ 10 ಸದಸ್ಯರ ಪೈಕಿ 3 (ಶೇ.10), ವೈಎಸ್‌ಆರ್‌ಸಿಪಿಯ 11 ಸದಸ್ಯರ ಪೈಕಿ 4 (ಶೇ.36) ಮತ್ತು ಡಿಎಂಕೆಯ 10 ಸದಸ್ಯರಲ್ಲಿ 2 (ಶೇ.20) ಮಂದಿ ಚುನಾವಣಾ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ ಎಂದು ಎಡಿಆರ್‌ ವಿಶ್ಲೇಷಣೆ ತಿಳಿಸಿದೆ.

ಬಿಜೆಪಿಯ 90 ಸದಸ್ಯರ ಪೈಕಿ 10 (ಶೇ.11), ಕಾಂಗ್ರೆಸ್‌ನ 28 ಸದಸ್ಯರ ಪೈಕಿ 9 (ಶೇ.32), ಟಿಎಂಸಿಯ 13 ಸದಸ್ಯರ ಪೈಕಿ 3 (ಶೇ.23), ಆರ್‌ಜೆಡಿಯ 6 ಸದಸ್ಯರ ಪೈಕಿ 2 (ಶೇ.33) ಸಿಪಿಐಎಂನ 5 ಸದಸ್ಯರ ಪೈಕಿ 2 (ಶೇ. 40), ಎಎಪಿಯ 10 ಸದಸ್ಯರ ಪೈಕಿ 1 (ಶೇ.10), ವೈಎಸ್‌ಆರ್‌ಸಿಪಿಯ 11 ಸದಸ್ಯರ ಪೈಕಿ 3(ಶೇ.27) ಮತ್ತು ಡಿಎಂಕೆಯ 10 ಸದಸ್ಯರ ಪೈಕಿ ಒಬ್ಬರು (ಶೇ.10) ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ ಎಂದು ವರದಿ ಹೇಳಿದೆ.

ರಾಜ್ಯವಾರು ಸಂಸದರ ವಿಶ್ಲೇಷಣೆ ನೋಡುವುದಾದರೆ, ಮಹಾರಾಷ್ಟ್ರದ 18 ಸಂಸದರಲ್ಲಿ 11 (ಶೇ.61), ಬಿಹಾರದ 16 ಸಂಸದರಲ್ಲಿ 8 (ಶೇ.50), ಉತ್ತರ ಪ್ರದೇಶದ 31 ಸಂಸದರಲ್ಲಿ 9 (ಶೇ.29), ತಮಿಳುನಾಡಿನ 18 ಸಂಸದರ ಪೈಕಿ 6 (ಶೇ.33), ಕೇರಳದ 9 ಸಂಸದರ ಪೈಕಿ 6 (ಶೇ.67) ಮತ್ತು ಪಶ್ಚಿಮ ಬಂಗಾಳದ 16 ಸಂಸದರ ಪೈಕಿ 7(ಶೇ.44) ಮಂದಿ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ಇರುವುದಾಗಿ ಘೋಷಿಸಿದ್ದಾರೆ.

ವಿಶ್ಲೇಷಣೆಯು 233 ರಾಜ್ಯಸಭಾ ಸದಸ್ಯರ ಪೈಕಿ 225 ಮಂದಿಯನ್ನು ಒಳಗೊಂಡಿದೆ. ಮಹಾರಾಷ್ಟ್ರದಿಂದ ಒಂದು ಸ್ಥಾನ ಖಾಲಿಯಾಗಿದೆ, ಜಮ್ಮು ಕಾಶ್ಮೀರದ ನಾಲ್ವರನ್ನು ವಿಶ್ಲೇಷಣೆಗೆ ಒಳಪಡಿಸಿಲ್ಲ. ಕರ್ನಾಟಕ, ಪುದುಚ್ಚೇರಿ ಮತ್ತು ಅಸ್ಸಾಂನ ತಲಾ ಒಬ್ಬ ಸಂಸದರ ಅಫಿಡವಿಟ್‌ಗಳ ಅಲಭ್ಯತೆಯಿಂದಾಗಿ ವಿಶ್ಲೇಷಣೆ ಮಾಡಿಲ್ಲ ಎಂದು ಎಡಿಆರ್ ಹೇಳಿದೆ.

ಕ್ರಿಮಿನಲ್ ಪ್ರಕರಣಗಳ ಜೊತೆಗೆ ರಾಜ್ಯಸಭಾ ಸದಸ್ಯರ ಆಸ್ತಿ ಮೌಲ್ಯವನ್ನೂ ವಿಶ್ಲೇಷಿಸಲಾಗಿದೆ. ಪ್ರತಿ ಸಂಸದರ ಸರಾಸರಿ ಆಸ್ತಿ ಮೌಲ್ಯ ₹87.12 ಕೋಟಿಗಳಷ್ಟಿದೆ ಎಂದು ತಿಳಿದು ಬಂದಿದೆ. ದತ್ತಾಂಶಗಳನ್ನು ಮತ್ತಷ್ಟು ವಿಭಜಿಸಿ ವಿಶ್ಲೇಷಿಸಿದಾಗ ವಿವಿಧ ರಾಜಕೀಯ ಪಕ್ಷಗಳ ಸದಸ್ಯರ ಆಸ್ತಿ ಮೌಲ್ಯಗಳ ನಡುವೆ ಗಮನಾರ್ಹ ವ್ಯತ್ಯಾಸಗಳು ಕಂಡು ಬಂದಿವೆ.

ಪ್ರಮುಖ ಪಕ್ಷಗಳ ಪೈಕಿ, ಬಿಜೆಪಿಯ 90 ಸದಸ್ಯರಲ್ಲಿ 9 (ಶೇ.10), ಕಾಂಗ್ರೆಸ್‌ನ 28 ಸದಸ್ಯರಲ್ಲಿ 4 (ಶೇ.14), ವೈಎಸ್‌ಆರ್‌ಸಿಪಿಯ 11 ಸದಸ್ಯರಲ್ಲಿ 5 (ಶೇ.45), ಎಎಪಿಯ 10 ಸದಸ್ಯರಲ್ಲಿ 2 (ಶೇ.20) ಟಿಆರ್‌ಎಸ್‌ನ 4 ಸದಸ್ಯರಲ್ಲಿ 3 (ಶೇ.75) ಮತ್ತು ಆರ್‌ಜೆಡಿಯ 6 ಸದಸ್ಯರಲ್ಲಿ 2 (ಶೇ.33) ಮಂದಿ ₹100 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ.

ಪ್ರಮುಖ ಪಕ್ಷಗಳ ಸಂಸದರ ಸರಾಸರಿ ಆಸ್ತಿ ಮೌಲ್ಯ ಹೀಗಿದೆ : ಬಿಜೆಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹37.34 ಕೋಟಿ, ಕಾಂಗ್ರೆಸ್ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹40.70 ಕೋಟಿ, ಟಿಎಂಸಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹10.25 ಕೋಟಿ, ವೈಎಸ್‌ಆರ್‌ಸಿಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹357.68 ಕೋಟಿ, ಟಿಆರ್‌ಎಸ್ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹1,383.74 ಕೋಟಿ, ಡಿಎಂಕೆ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹6.37 ಕೋಟಿ ಮತ್ತು ಎಎಪಿ ಸದಸ್ಯರ ಸರಾಸರಿ ಆಸ್ತಿ ಮೌಲ್ಯ ₹114.81 ಕೋಟಿಯಾಗಿದೆ. ಇದಲ್ಲದೆ, ವಿಶ್ಲೇಷಿಸಲಾದ ರಾಜ್ಯಸಭೆಯ ಹಾಲಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹19,602 ಕೋಟಿಗಳಷ್ಟಿದೆ

ಪಕ್ಷವಾರು ವಿಂಗಡಿಸಿದಾಗ ವಿಶ್ಲೇಷಿಸಿದ ಸಂಸದರ ಒಟ್ಟು ಆಸ್ತಿ ಮೌಲ್ಯ ಹೀಗಿದೆ : ಬಿಜೆಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹3,360 ಕೋಟಿ, ಕಾಂಗ್ರೆಸ್ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹1,139 ಕೋಟಿ, ವೈಎಸ್‌ಆರ್‌ಸಿಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹3,934 ಕೋಟಿ, ಬಿಆರ್‌ಎಸ್ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹5,534 ಕೋಟಿ ಆಸ್ತಿ ಮತ್ತು ಎಎಪಿ ಸದಸ್ಯರ ಒಟ್ಟು ಆಸ್ತಿ ಮೌಲ್ಯ ₹ 1,148 ಕೋಟಿ.

ಇದನ್ನೂ ಓದಿ : ಬಿಜೆಪಿಯ ಚುನಾವಣಾ ಬಾಂಡ್‌ ವಂಚನೆ ಪ್ರಕರಣ: ದೂರು ಹಿಂಪಡೆದ ಜಡ್ಜ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....