Homeಮುಖಪುಟಮೋದಿ ಚಿತ್ರವುಳ್ಳ ಚೀಲಗಳ ಖರೀದಿಗೆ ₹15 ಕೋಟಿ ವ್ಯಯಿಸಿದ ಕೇಂದ್ರ: ವರದಿ

ಮೋದಿ ಚಿತ್ರವುಳ್ಳ ಚೀಲಗಳ ಖರೀದಿಗೆ ₹15 ಕೋಟಿ ವ್ಯಯಿಸಿದ ಕೇಂದ್ರ: ವರದಿ

- Advertisement -
- Advertisement -

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ನೀಡಲಾಗುವ ಆಹಾರ ಧಾನ್ಯಗಳ ಚೀಲದಲ್ಲಿ ಪ್ರಧಾನಿ ಮೋದಿಯ ಚಿತ್ರ ಹಾಕಲು ಕೇಂದ್ರ ಸರ್ಕಾರ 15 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಅದು ಕೂಡಾ ಬರೀ ಐದು ರಾಜ್ಯಗಳಿಗಾಗಿ ಇಷ್ಟು ದೊಡ್ಡ ಮೊತ್ತ ವ್ಯಯಿಸಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಆರ್‌ಟಿಐ ಕಾರ್ಯಕರ್ತ ಅಜಯ್ ಬೋಸ್ ಸಲ್ಲಿಸಿದ್ದ ಅರ್ಜಿಗೆ ನೀಡಲಾಗಿರುವ ಉತ್ತರದಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಆರ್‌ಟಿಐ ಮಾಹಿತಿ ಪ್ರಕಾರ, ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ) ರಾಜಸ್ಥಾನ, ಮಿಜೋರಾಂ, ಸಿಕ್ಕಿಂ, ತ್ರಿಪುರಾ, ಮೇಘಾಲಯದಲ್ಲಿ ಆಹಾರ ಧಾನ್ಯವನ್ನು ವಿತರಿಸಲು ‘ಪ್ರಧಾನಿ ಮೋದಿ ಚಿತ್ರ ಒಳಗೊಂಡಿರುವ ಲೋಗೋ ಇರುವ ನೇಯ್ದ ಚೀಲಗಳನ್ನು ಖರೀದಿ ಮಾಡಲು ಟೆಂಡರ್ ಅಂತಿಮಗೊಳಿಸಿದೆ. ಪಶ್ಚಿಮ ಬಂಗಾಳ ರಾಜ್ಯಕ್ಕೆ ಟೆಂಡರ್ ಪ್ರಕ್ರಿಯೆ ಇನ್ನೂ ಅಂತಿಮಗೊಂಡಿಲ್ಲ.

ರಾಜ್ಯಸ್ಥಾನ ಎಫ್‌ಸಿಐ ಕಚೇರಿ ಮೋದಿ ಚಿತ್ರವಿರುವ 1.07 ಕೋಟಿ ಸಿಂಥೆಟಿಕ್ ಬ್ಯಾಗ್‌ಗಳಿಗೆ 13.29 ಕೋಟಿ ರೂಪಾಯಿ ವೆಚ್ಚ ಮಾಡಿದರೆ, ತ್ರಿಪುರಾ 5.98 ಲಕ್ಷ ಕೋಟಿ ಬ್ಯಾಗ್‌ಗಳಿಗೆ 85.51 ಲಕ್ಷ ರೂಪಾಯಿ ವ್ಯಯಿಸುತ್ತಿದೆ. ಇನ್ನು ಮೇಘಾಲಯದ ಎಫ್‌ಸಿಐ ಸ್ಥಳೀಯ ಕಚೇರಿ 4.22 ಲಕ್ಷ ಬ್ಯಾಗ್‌ಗಳಿಗೆ 52.75 ಲಕ್ಷ ರೂಪಾಯಿ ವೆಚ್ಚ ಮಾಡುತ್ತಿದೆ. 1.75 ಲಕ್ಷ ಬ್ಯಾಗ್‌ಗಳಿಗೆ ಮಿಜೋರಾಂ 25 ಲಕ್ಷ ರೂಪಾಯಿ ಖರ್ಚು ಮಾಡುತ್ತಿದೆ ಎಂದು ಆರ್‌ಟಿಐ ಮಾಹಿತಿಯಿಂದ ತಿಳಿದು ಬಂದಿದೆ.

ಸಿಕ್ಕಿಂನಲ್ಲಿ ವಿತರಣೆಗೆ ಖಾಸಗಿ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದ್ದು ಈ ಪ್ರಕ್ರಿಯೆ ಇನ್ನೂ ಪೂರ್ಣವಾಗಿಲ್ಲ. ದಿ ಹಿಂದೂ ವರದಿಯ ಪ್ರಕಾರ ಈಶಾನ್ಯ ರಾಜ್ಯಗಳಲ್ಲಿ ಕೇಂದ್ರ ಸರ್ಕಾರವು 98,000 ಬ್ಯಾಗ್‌ಗಳನ್ನು ತಲಾ 14.65 ರೂಪಾಯಿಯಂತೆ ಉತ್ಪಾದಿಸುವ ಮಾತುಕತೆ ನಡೆಸುತ್ತಿದೆ.

ಪ್ರತಿ ರಾಜ್ಯದಲ್ಲಿ ಈ ಲೋಗೋ ಕೊಂಚ ಬದಲಾವಣೆ ಹೊಂದಿದೆ. ಮಿಜೋರಾಂನಲ್ಲಿ ಪ್ರತಿ ಬ್ಯಾಗ್‌ 14.65 ರೂಪಾಯಿ, ತ್ರಿಪುರಾದಲ್ಲಿ 14.30 ರೂಪಾಯಿ, ಮೇಘಾಲಯದಲ್ಲಿ 12.5 ರೂಪಾಯಿ, ರಾಜಸ್ಥಾನದಲ್ಲಿ 12.375 ರೂ. ಗೆ ಟೆಂಡರ್ ನೀಡಲಾಗಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...