Homeಮುಖಪುಟಲೋಕಸಭೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದಲ್ಲಿ ಆದಿವಾಸಿಗಳ ನಿರ್ಮೂಲನೆಯಾಗಲಿದೆ: ಜಾರ್ಖಂಡ್ ಸಿಎಂ

ಲೋಕಸಭೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದಲ್ಲಿ ಆದಿವಾಸಿಗಳ ನಿರ್ಮೂಲನೆಯಾಗಲಿದೆ: ಜಾರ್ಖಂಡ್ ಸಿಎಂ

- Advertisement -
- Advertisement -

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷವನ್ನು ಸೋಲಿಸದಿದ್ದಲ್ಲಿ ಬಿಜೆಪಿ ಆದಿವಾಸಿಗಳ ಭೂಮಿಯನ್ನು ಲೂಟಿ ಮಾಡಿ ಅರಣ್ಯ ಮತ್ತು ಕಲ್ಲಿದ್ದಲು ಪ್ರದೇಶಗಳಿಂದ ಅವರನ್ನು ಹೊರಹಾಕಲಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಶನಿವಾರ ಆರೋಪಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರವು ಬುಡಕಟ್ಟು ಹಕ್ಕುಗಳನ್ನು ರಕ್ಷಿಸುವ ವಿವಿಧ ಕಾನೂನುಗಳನ್ನು ತಿದ್ದುಪಡಿ ಮಾಡಲು ಪ್ರಯತ್ನಿಸಿದೆ ಆದರೆ ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರವು ಅಂತಹ ಪ್ರಯತ್ನಗಳ ವಿರುದ್ಧ ಪ್ರತಿಭಟಿಸಲಿದೆ ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದ ಕೊನೆಯ ದಿನ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಸದನದಲ್ಲಿ ಭಾಷಣವನ್ನು ಮಾಡಿದ್ದು, ಬಿಜೆಪಿ ಶಾಸಕರು ಸದನದಿಂದ ಹೊರ ನಡೆದಿದ್ದಾರೆ.

ಫೆಬ್ರವರಿ 23ರಿಂದ ಆರಂಭವಾದ ವಿಧಾನಸಭೆಯ ಏಳು ದಿನಗಳ ಬಜೆಟ್ ಅಧಿವೇಶನವನ್ನು ಸ್ಪೀಕರ್ ರವೀಂದ್ರ ನಾಥ್ ಮಹತೋ ಅವರು ಮುಂದೂಡಿದ್ದರು. ಅಧಿವೇಶನದ ಕೊನೆಯ ದಿನ ಅಂತರಾಷ್ಟ್ರೀಯ ವಿಶ್ವವಿದ್ಯಾನಿಲಯ ಮಸೂದೆ-2024 ಸೇರಿದಂತೆ ನಾಲ್ಕು ಮಸೂದೆಗಳನ್ನು ಸದನದಲ್ಲಿ ಅಂಗೀಕರಿಸಲಾಗಿದೆ.

ಈ ಬಜೆಟ್ ಅಧಿವೇಶನವು ಕಳೆದ ನಾಲ್ಕು ವರ್ಷಗಳ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸುತ್ತದೆ. 2024-25ನೇ ಹಣಕಾಸು ವರ್ಷಕ್ಕೆ 1,28,900 ಕೋಟಿ ರೂಪಾಯಿಗಳ ಬಜೆಟ್‌ನ್ನು ಅಂಗೀಕರಿಸಲಾಗಿದೆ ಮತ್ತು 2029-30 ರ ವೇಳೆಗೆ ಜಾರ್ಖಂಡ್‌ನ್ನು 10 ಲಕ್ಷ ಕೋಟಿ ಆರ್ಥಿಕತೆಯನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತಂದಿದ್ದು, ಅದರ ಅಡಿಯಲ್ಲಿ ಗ್ರಾಮ ಸಭೆಯ ಅಧಿಕಾರವನ್ನು ಕಸಿದುಕೊಳ್ಳಲಾಗಿದೆ. ಅದೇ ರೀತಿ ಕಲ್ಲಿದ್ದಲು ಪ್ರದೇಶ (ಸ್ವಾಧೀನ ಮತ್ತು ಅಭಿವೃದ್ಧಿ) ಕಾಯ್ದೆ ಮತ್ತು ಚೋಟಾನಾಗಪುರಕ್ಕೆ ತಿದ್ದುಪಡಿ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಚಂಪೈ ಸೊರೆನ್ ಹೇಳಿದ್ದಾರೆ.

ತಿದ್ದುಪಡಿಗಳ ಮೂಲಕ ಅರಣ್ಯ, ಕಲ್ಲಿದ್ದಲು ಹೊಂದಿರುವ ಪ್ರದೇಶಗಳು ಮತ್ತು ಇತರ ಸ್ಥಳಗಳಿಂದ ಬುಡಕಟ್ಟು ಜನಾಂಗದವರನ್ನು ವ್ಯವಸ್ಥಿತವಾಗಿ ಓಡಿಸಲು ಕೇಂದ್ರವು ಯೋಜಿಸಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದರೆ ಆದಿವಾಸಿಗಳನ್ನು ಅವರ ನಿರ್ನಾಮ ಮಾಡುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಯ ಈ ಉದ್ದೇಶದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಅವರು ಆಡಳಿತಾರೂಢ ಮೈತ್ರಿಕೂಟದ ಶಾಸಕರನ್ನು ಒತ್ತಾಯಿಸಿದ್ದು, ಬಿಜೆಪಿಯ ತಂತ್ರಗಾರಿಕೆಯನ್ನು ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅರ್ಥಮಾಡಿಕೊಂಡಿದ್ದಾರೆ. ಹೀಗಾಗಿ ಜಮೀನು ವಿಚಾರದಲ್ಲಿ ಅವರಿಗೆ ಜೈಲು ಸೇರಿಸಲಾಗಿದೆ, ಅವರ ಹೆಸರು ಎಲ್ಲಿಯೂ ಇಲ್ಲ. ಸಮ್ಮಿಶ್ರ ಸರ್ಕಾರವು ರಾಜ್ಯದ ಶಿಕ್ಷಣ, ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯನ್ನು ಬಲಪಡಿಸಲು ಕೆಲಸ ಮಾಡಿದೆ,  ಎಲ್ಲರಿಗೂ ಆಹಾರವನ್ನು ಖಾತ್ರಿಪಡಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಲ್ಕಿಸ್ ಬಾನು ಪ್ರಕರಣ: ಕ್ಷಮಾಧಾನ ರದ್ದುಪಡಿಸಿದ ತೀರ್ಪು ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ ಅಪರಾಧಿಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...