Homeಮುಖಪುಟ33 ಕ್ಷೇತ್ರಗಳಲ್ಲಿ ಹಾಲಿ ಸಂಸದರ ಬದಲಿಗೆ ಹೊಸ ಮುಖಗಳಿಗೆ ಮಣೆ ಹಾಕಿದ ಬಿಜೆಪಿ

33 ಕ್ಷೇತ್ರಗಳಲ್ಲಿ ಹಾಲಿ ಸಂಸದರ ಬದಲಿಗೆ ಹೊಸ ಮುಖಗಳಿಗೆ ಮಣೆ ಹಾಕಿದ ಬಿಜೆಪಿ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದ್ದು, ವಿವಿಧ ರಾಜ್ಯಗಳಲ್ಲಿ ಗಮನಾರ್ಹ ಬದಲಾವಣೆಗಳೊಂದಿಗೆ ಬಿಜೆಪಿ 33 ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ. ಇದರಿಂದ ಪಕ್ಷದೊಳಗೆ ಅಸಮಾಧಾನ ಉದ್ಭವಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಸರಿ ಪಕ್ಷದ ಲೋಕಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕೇಂದ್ರ ಸಚಿವರು ಸೇರಿದಂತೆ ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ರಾಜ್ಯಗಳಿಗೆ ಸ್ಪರ್ಧೆಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಪಟ್ಟಿಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 95 ಹೆಸರುಗಳಿವೆ.

ಬಿಜೆಪಿ ಅಸ್ಸಾಂನಲ್ಲಿ ಐದು ಹೊಸ ಮುಖಗಳನ್ನು ಕಣಕ್ಕಿಳಿಸಿದೆ ಮತ್ತು ಇತರ 6 ಹಾಲಿ ಸಂಸದರಿಗೆ ಟಿಕೆಟ್‌ ನೀಡಿದೆ. ಸಿಲ್ಚಾರ್ ಕ್ಷೇತ್ರದಲ್ಲಿ ಬಿಜೆಪಿಯು ರಾಜ್‌ದೀಪ್ ರಾಯ್ ಬದಲಿಗೆ ಪರಿಮಳಾ ಸುಕ್ಲಬೈಧ್ಯ ಅವರನ್ನು ಕಣಕ್ಕಿಳಿಸಿದೆ. ಸಂಸದ ಹೋರೆನ್ ಸಿಂಗ್ ಬೇ ಬದಲಿಗೆ ಅಮರ್ ಸಿಂಗ್ ಟಿಸ್ಸೊಗೆ ಟಿಕೆಟ್‌ ನೀಡಿದೆ. ಕ್ವೀನ್ ಓಜಾ ಸಂಸದರ ಗೌಹಾಟಿ ಲೋಕಸಭಾ ಕ್ಷೇತ್ರಕ್ಕೆ ಬಿಜುಲಿ ಕಲಿತಾ ಮೇಧಿ ಸ್ಪರ್ಧಿಸಲಿದ್ದು, ಪಲ್ಲಬ್ ಲೋಚನ್ ದಾಸ್ ಹಾಲಿ ಸಂಸದರಾಗಿರುವ ತೇಜ್‌ಪುರದಿಂದ ರಂಜಿತ್ ದತ್ತಾ ಸ್ಪರ್ಧಿಸಲಿದ್ದಾರೆ. ಕೇಂದ್ರ ಸಚಿವ ಸರ್ಬಾನಂದ್ ಸೋನೊವಾಲ್ ಅವರು ಸಂಸದ ರಾಮೇಶ್ವರ್ ತೇಲಿ ಅವರ ಬದಲಿಗೆ ದಿಬ್ರುಗಢದಲ್ಲಿ ಸ್ಪರ್ಧಿಸಲಿದ್ದಾರೆ.

ಛತ್ತೀಸ್‌ಗಢದಲ್ಲಿ ಪಕ್ಷವು ನಾಲ್ಕು ಹೊಸ ಮುಖಗಳನ್ನು ಹೆಸರಿಸಿದೆ. ರಾಯ್‌ಪುರ ಕ್ಷೇತ್ರವನ್ನು ಸುನಿಲ್‌ಕುಮಾರ್‌ ಸೋನಿ ಅವರ ಬದಲಿಗೆ ಬಿಜೆಪಿಯ ಹಿರಿಯ ನಾಯಕ ಬ್ರಿಜ್‌ಮೋಹನ್‌ ಅಗರವಾಲ್‌ ಅವರಿಗೆ ನೀಡಲಾಗಿದೆ. ಕಮಲೇಶ್ ಜಂಗ್ಡೆ ಅವರು ಹಾಲಿ ಸಂಸದ ಗುಹರಾಮ್ ಅಜ್ಗಲ್ಲಿ ಬದಲಿಗೆ ಜಾಂಜ್ಗೀರ್ ಚಂಪಾ (ಎಸ್ಸಿ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಂಸದ ಚುನ್ನಿ ಲಾಲ್ ಸಾಹು ಅವರನ್ನು ಕೈಬಿಟ್ಟಿದ್ದು ರೂಪ್ ಕುಮಾರಿ ಚೌಧರಿ ಮಹಾಸಮುಂಡ್‌ನ ಅಭ್ಯರ್ಥಿಯಾಗಿದ್ದಾರೆ. ಕಂಕೇರ್‌ನಲ್ಲಿ (ಎಸ್‌ಟಿ) ಮೋಹನ್ ಮಾಂಡವಿ ಬದಲಿಗೆ ಭೋಜರಾಜ್ ನಾಗ್ ಅವರಿಗೆ ಟಿಕೆಟ್‌ ನೀಡಲಾಗಿದೆ.

ದೆಹಲಿಯಲ್ಲಿ ಹೆಸರಿಸಲಾದ ಬಿಜೆಪಿ ಅಭ್ಯರ್ಥಿಗಳ ಪೈಕಿ ನಾಲ್ವರು ಹಾಲಿ ಸಂಸದರಿಗೆ ಟಕೆಟ್‌ ನಿರಾಕರಿಸಲಾಗಿದೆ.  ಚಾಂದನಿ ಚೌಕ್ ಲೋಕಸಭಾ ಕ್ಷೇತ್ರದಿಂದ ಮಾಜಿ ಕೇಂದ್ರ ಸಚಿವ ಹರ್ಷವರ್ಧನ್ ಅವರನ್ನು ಕೈಬಿಡಲಾಗಿದ್ದು, ಪ್ರವೀಣ್ ಖಂಡೇಲ್ವಾಲ್ ಅವರಿಗೆ ಟಿಕೆಟ್‌ ನೀಡಲಾಗಿದೆ. ಪಶ್ಚಿಮ ದೆಹಲಿ ಕ್ಷೇತ್ರದಲ್ಲಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಬದಲಿಗೆ ಕಮಲಜೀತ್ ಸೆಹ್ರಾವತ್ ಅವರನ್ನು ನೇಮಿಸಲಾಗಿದೆ. ಬಿಜೆಪಿಯ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ನವದೆಹಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದು, ಹಾಲಿ ಸಂಸದೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಸಂಸತ್ತಿನಲ್ಲಿ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ರಮೇಶ್ ಬಿದುರಿ ಅವರನ್ನು ದಕ್ಷಿಣ ದೆಹಲಿಯಿಂದ ಕೈಬಿಡಲಾಗಿದೆ ಮತ್ತು ಅವರ ಸ್ಥಾನದಿಂದ ರಾಮವೀರ್ ಸಿಂಗ್ ಬಿಧುರಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಗುಜರಾತ್‌ನಲ್ಲಿ 15 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದ್ದು, ಬಿಜೆಪಿ 5 ಹಾಲಿ ಸಂಸದರನ್ನು ಕೈಬಿಟ್ಟಿದೆ. ಹಾಲಿ ಸಂಸದ ಪ್ರಭಾತಭಾಯ್ ಸಾವಭಾಯಿ ಪಟೇಲ್ ಬದಲಿಗೆ ರೇಖಾಬೆನ್ ಹಿತೇಶ್ ಭಾಯ್ ಚೌಧರಿ ಬನಸ್ಕಾಂತ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಂಸದ ಕಿರಿತ್ ಸೋಲಂಕಿ ಅವರ ಬದಲಿಗೆ ಅಹಮದಾಬಾದ್ ವೆಸ್ಟ್‌ನಿಂದ ದಿನೇಶ್‌ಭಾಯ್ ಕಿದರ್‌ಭಾಯ್ ಮಕ್ವಾನಾ ಅವರು ಸ್ಪರ್ಧಿಸಲಿದ್ದಾರೆ.

ರಾಜ್‌ಕೋಟ್‌ನಲ್ಲಿ ಹಾಲಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರನ್ನು ಕೈಬಿಟ್ಟು ಕೇಂದ್ರ ಸಚಿವ ಪರ್ಷೋತ್ತಮ್ ರೂಪಾಲಾ ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಹೆಸರಿಸಿದೆ. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಪೋರ್ಬಂದರ್ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದು, ಪ್ರಸ್ತುತ ಪಕ್ಷದ ಸಂಸದ ರಮೇಶ್ಭಾಯ್ ಲವ್ಜಿಭಾಯಿ ಧದುಕ್ ಅವರನ್ನು ಕೈಬಿಡಲಾಗಿದೆ. ಹಾಲಿ ಸಂಸದ ರತನ್‌ಸಿನ್ಹ್ ಮಗನ್‌ಸಿನ್ಹ್ ರಾಥೋಡ್ ಅವರನ್ನು ಕೈಬಿಟ್ಟಿದ್ದರಿಂದ ರಾಜ್‌ಪಾಲ್‌ಸಿಂಗ್ ಮಹೇಂದ್ರಸಿಂಗ್ ಜಾಧವ್ ಪಂಚಮಹಲ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮನೀಶ್ ಜೈಸ್ವಾಲ್ ಅವರಿಗೆ ಟಿಕೆಟ್‌ ನೀಡಿದ್ದು, ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರ ಪುತ್ರ ಜಯಂತ್ ಸಿನ್ಹಾ ಅವರನ್ನು ಕೈಬಿಟ್ಟಿದ್ದಾರೆ. ಬಿಜೆಪಿಯ ಪಟ್ಟಿ ಘೋಷಣೆಗೆ ಒಂದು ದಿನ ಮೊದಲು ಸಿನ್ಹಾ ಅವರು ಲೋಕಸಭೆ ಚುನಾವಣೆಯಿಂದ ಹೊರಗುಳಿಯುತ್ತಿರುವುದಾಗಿ ಹೇಳಿದ್ದರು. ಲೋಹರ್ದಗಾದಲ್ಲಿ ಮೂರು ಬಾರಿ ಸಂಸದರಾಗಿದ್ದ ಸುದರ್ಶನ್ ಭಗತ್ ಬದಲಿಗೆ ಸಮೀರ್ ಓರಾನ್ ಅವರಿಗೆ ಟಿಕೆಟ್‌ ನೀಡಲಾಗಿದೆ.

ಬಿಜೆಪಿಯ ಮಧ್ಯಪ್ರದೇಶ ಪಟ್ಟಿಯಲ್ಲಿ ಏಳು ಹೊಸ ಮುಖಗಳಿವೆ. ಪಕ್ಷದ ಹಾಲಿ ಸಂಸದ ವಿವೇಕ್ ನಾರಾಯಣ ಶೇಜ್ವಾಲ್ಕರ್ ಬದಲಿಗೆ ಭರತ್ ಸಿಂಗ್ ಕುಶ್ವಾಹಾ ಗ್ವಾಲಿಯರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಗುನಾದಿಂದ ಹಾಲಿ ಸಂಸದ ಕೃಷ್ಣಪಾಲ್ ಸಿಂಗ್ ಯಾದವ್ ಬದಲಿಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ನೇಮಿಸಲಾಗಿದೆ. ಪ್ರಸ್ತುತ ರಾಜಬಹದ್ದೂರ್ ಸಿಂಗ್ ಅವರು ಹೊಂದಿರುವ ಸಾಗರ್ ಲೋಕಸಭಾ ಕ್ಷೇತ್ರದಿಂದ ಲತಾ ವಾಂಖೆಡೆ ಅವರನ್ನು ಹೆಸರಿಸಲಾಗಿದೆ. ವೀರೇಂದ್ರ ಖಾಟಿಕ್ ಅವರು ಟಿಕಮ್‌ಗಢ (ಎಸ್‌ಸಿ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ವಿದಿಶಾ ಸಂಸದ ರಮಾಕಾಂತ್ ಭಾರ್ಗವ ಅವರನ್ನು ಕೈಬಿಡಲಾಗಿದ್ದು, ಆ ಸ್ಥಾನವನ್ನು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹಂಚಿಕೆ ಮಾಡಲಾಗಿದೆ.

ಭೋಪಾಲ್‌ನಲ್ಲಿ ಅಲೋಕ್ ಶರ್ಮಾ ಸ್ಪರ್ಧಿಸಲಿದ್ದಾರೆ. ಪ್ರಸ್ತುತ ಸ್ಥಾನವನ್ನು ಸಾಧ್ವಿ ಪ್ರಜ್ಞಾ ಸಿಂಗ್ ಹೊಂದಿದ್ದಾರೆ. ಪ್ರಸ್ತುತ ಬಿಜೆಪಿ ಸಂಸದ ಗುಮನ್ ಸಿಂಗ್ ದಾಮೋರ್ ಹೊಂದಿರುವ ರತ್ಲಾಮ್ (ಎಸ್‌ಟಿ) ಸ್ಥಾನವನ್ನು ಅನಿತಾ ನಗರ್ ಸಿಂಗ್ ಚೌಹಾಣ್ ಅವರಿಗೆ ನೀಡಲಾಗಿದೆ.

ರಾಜಸ್ಥಾನದಲ್ಲಿ 15 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದ್ದು, ಪಕ್ಷವು ರಾಜಸ್ಥಾನದಲ್ಲಿ ಐದು ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ. ಚುರು, ಭರತ್‌ಪುರ, ಜಲೋರ್, ಉದಯಪುರ ಮತ್ತು ಬನ್ಸ್ವಾರಾ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಟಿಕೆಟ್‌ ನೀಡಲಾಗಿದೆ.

ತ್ರಿಪುರಾದಲ್ಲಿ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು ಪ್ರಸ್ತುತ ಪಕ್ಷದ ಸಂಸದೆ ಪ್ರತಿಮಾ ಭೂಮಿಕ್ ಅವರು ಪ್ರತಿನಿಧಿಸುವ ತ್ರಿಪುರ ಪಶ್ಚಿಮ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಅಲಿಪುರ್ದೂರ್ ಸಂಸದ ಜಾನ್ ಬಾರ್ಲಾ ಅವರ ಬದಲಿಗೆ ಮನೋಜ್ ತಿಗ್ಗಾ ಅವರನ್ನು ಸ್ಪರ್ಧೆಗಿಳಿಸಲಾಗಿದೆ.

ಇದನ್ನು ಓದಿ: ಸೌಜನ್ಯ ಪ್ರಕರಣ: ಸೋನಿಯಾ ಗಾಂಧಿ ನಿವಾಸದ ಬಳಿ ಪ್ರತಿಭಟನೆ   

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...