Homeಮುಖಪುಟ33 ಕ್ಷೇತ್ರಗಳಲ್ಲಿ ಹಾಲಿ ಸಂಸದರ ಬದಲಿಗೆ ಹೊಸ ಮುಖಗಳಿಗೆ ಮಣೆ ಹಾಕಿದ ಬಿಜೆಪಿ

33 ಕ್ಷೇತ್ರಗಳಲ್ಲಿ ಹಾಲಿ ಸಂಸದರ ಬದಲಿಗೆ ಹೊಸ ಮುಖಗಳಿಗೆ ಮಣೆ ಹಾಕಿದ ಬಿಜೆಪಿ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದ್ದು, ವಿವಿಧ ರಾಜ್ಯಗಳಲ್ಲಿ ಗಮನಾರ್ಹ ಬದಲಾವಣೆಗಳೊಂದಿಗೆ ಬಿಜೆಪಿ 33 ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ. ಇದರಿಂದ ಪಕ್ಷದೊಳಗೆ ಅಸಮಾಧಾನ ಉದ್ಭವಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಸರಿ ಪಕ್ಷದ ಲೋಕಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕೇಂದ್ರ ಸಚಿವರು ಸೇರಿದಂತೆ ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ರಾಜ್ಯಗಳಿಗೆ ಸ್ಪರ್ಧೆಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಪಟ್ಟಿಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 95 ಹೆಸರುಗಳಿವೆ.

ಬಿಜೆಪಿ ಅಸ್ಸಾಂನಲ್ಲಿ ಐದು ಹೊಸ ಮುಖಗಳನ್ನು ಕಣಕ್ಕಿಳಿಸಿದೆ ಮತ್ತು ಇತರ 6 ಹಾಲಿ ಸಂಸದರಿಗೆ ಟಿಕೆಟ್‌ ನೀಡಿದೆ. ಸಿಲ್ಚಾರ್ ಕ್ಷೇತ್ರದಲ್ಲಿ ಬಿಜೆಪಿಯು ರಾಜ್‌ದೀಪ್ ರಾಯ್ ಬದಲಿಗೆ ಪರಿಮಳಾ ಸುಕ್ಲಬೈಧ್ಯ ಅವರನ್ನು ಕಣಕ್ಕಿಳಿಸಿದೆ. ಸಂಸದ ಹೋರೆನ್ ಸಿಂಗ್ ಬೇ ಬದಲಿಗೆ ಅಮರ್ ಸಿಂಗ್ ಟಿಸ್ಸೊಗೆ ಟಿಕೆಟ್‌ ನೀಡಿದೆ. ಕ್ವೀನ್ ಓಜಾ ಸಂಸದರ ಗೌಹಾಟಿ ಲೋಕಸಭಾ ಕ್ಷೇತ್ರಕ್ಕೆ ಬಿಜುಲಿ ಕಲಿತಾ ಮೇಧಿ ಸ್ಪರ್ಧಿಸಲಿದ್ದು, ಪಲ್ಲಬ್ ಲೋಚನ್ ದಾಸ್ ಹಾಲಿ ಸಂಸದರಾಗಿರುವ ತೇಜ್‌ಪುರದಿಂದ ರಂಜಿತ್ ದತ್ತಾ ಸ್ಪರ್ಧಿಸಲಿದ್ದಾರೆ. ಕೇಂದ್ರ ಸಚಿವ ಸರ್ಬಾನಂದ್ ಸೋನೊವಾಲ್ ಅವರು ಸಂಸದ ರಾಮೇಶ್ವರ್ ತೇಲಿ ಅವರ ಬದಲಿಗೆ ದಿಬ್ರುಗಢದಲ್ಲಿ ಸ್ಪರ್ಧಿಸಲಿದ್ದಾರೆ.

ಛತ್ತೀಸ್‌ಗಢದಲ್ಲಿ ಪಕ್ಷವು ನಾಲ್ಕು ಹೊಸ ಮುಖಗಳನ್ನು ಹೆಸರಿಸಿದೆ. ರಾಯ್‌ಪುರ ಕ್ಷೇತ್ರವನ್ನು ಸುನಿಲ್‌ಕುಮಾರ್‌ ಸೋನಿ ಅವರ ಬದಲಿಗೆ ಬಿಜೆಪಿಯ ಹಿರಿಯ ನಾಯಕ ಬ್ರಿಜ್‌ಮೋಹನ್‌ ಅಗರವಾಲ್‌ ಅವರಿಗೆ ನೀಡಲಾಗಿದೆ. ಕಮಲೇಶ್ ಜಂಗ್ಡೆ ಅವರು ಹಾಲಿ ಸಂಸದ ಗುಹರಾಮ್ ಅಜ್ಗಲ್ಲಿ ಬದಲಿಗೆ ಜಾಂಜ್ಗೀರ್ ಚಂಪಾ (ಎಸ್ಸಿ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಂಸದ ಚುನ್ನಿ ಲಾಲ್ ಸಾಹು ಅವರನ್ನು ಕೈಬಿಟ್ಟಿದ್ದು ರೂಪ್ ಕುಮಾರಿ ಚೌಧರಿ ಮಹಾಸಮುಂಡ್‌ನ ಅಭ್ಯರ್ಥಿಯಾಗಿದ್ದಾರೆ. ಕಂಕೇರ್‌ನಲ್ಲಿ (ಎಸ್‌ಟಿ) ಮೋಹನ್ ಮಾಂಡವಿ ಬದಲಿಗೆ ಭೋಜರಾಜ್ ನಾಗ್ ಅವರಿಗೆ ಟಿಕೆಟ್‌ ನೀಡಲಾಗಿದೆ.

ದೆಹಲಿಯಲ್ಲಿ ಹೆಸರಿಸಲಾದ ಬಿಜೆಪಿ ಅಭ್ಯರ್ಥಿಗಳ ಪೈಕಿ ನಾಲ್ವರು ಹಾಲಿ ಸಂಸದರಿಗೆ ಟಕೆಟ್‌ ನಿರಾಕರಿಸಲಾಗಿದೆ.  ಚಾಂದನಿ ಚೌಕ್ ಲೋಕಸಭಾ ಕ್ಷೇತ್ರದಿಂದ ಮಾಜಿ ಕೇಂದ್ರ ಸಚಿವ ಹರ್ಷವರ್ಧನ್ ಅವರನ್ನು ಕೈಬಿಡಲಾಗಿದ್ದು, ಪ್ರವೀಣ್ ಖಂಡೇಲ್ವಾಲ್ ಅವರಿಗೆ ಟಿಕೆಟ್‌ ನೀಡಲಾಗಿದೆ. ಪಶ್ಚಿಮ ದೆಹಲಿ ಕ್ಷೇತ್ರದಲ್ಲಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಬದಲಿಗೆ ಕಮಲಜೀತ್ ಸೆಹ್ರಾವತ್ ಅವರನ್ನು ನೇಮಿಸಲಾಗಿದೆ. ಬಿಜೆಪಿಯ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ನವದೆಹಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದು, ಹಾಲಿ ಸಂಸದೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಸಂಸತ್ತಿನಲ್ಲಿ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ರಮೇಶ್ ಬಿದುರಿ ಅವರನ್ನು ದಕ್ಷಿಣ ದೆಹಲಿಯಿಂದ ಕೈಬಿಡಲಾಗಿದೆ ಮತ್ತು ಅವರ ಸ್ಥಾನದಿಂದ ರಾಮವೀರ್ ಸಿಂಗ್ ಬಿಧುರಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಗುಜರಾತ್‌ನಲ್ಲಿ 15 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದ್ದು, ಬಿಜೆಪಿ 5 ಹಾಲಿ ಸಂಸದರನ್ನು ಕೈಬಿಟ್ಟಿದೆ. ಹಾಲಿ ಸಂಸದ ಪ್ರಭಾತಭಾಯ್ ಸಾವಭಾಯಿ ಪಟೇಲ್ ಬದಲಿಗೆ ರೇಖಾಬೆನ್ ಹಿತೇಶ್ ಭಾಯ್ ಚೌಧರಿ ಬನಸ್ಕಾಂತ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಂಸದ ಕಿರಿತ್ ಸೋಲಂಕಿ ಅವರ ಬದಲಿಗೆ ಅಹಮದಾಬಾದ್ ವೆಸ್ಟ್‌ನಿಂದ ದಿನೇಶ್‌ಭಾಯ್ ಕಿದರ್‌ಭಾಯ್ ಮಕ್ವಾನಾ ಅವರು ಸ್ಪರ್ಧಿಸಲಿದ್ದಾರೆ.

ರಾಜ್‌ಕೋಟ್‌ನಲ್ಲಿ ಹಾಲಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರನ್ನು ಕೈಬಿಟ್ಟು ಕೇಂದ್ರ ಸಚಿವ ಪರ್ಷೋತ್ತಮ್ ರೂಪಾಲಾ ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಹೆಸರಿಸಿದೆ. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಪೋರ್ಬಂದರ್ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದು, ಪ್ರಸ್ತುತ ಪಕ್ಷದ ಸಂಸದ ರಮೇಶ್ಭಾಯ್ ಲವ್ಜಿಭಾಯಿ ಧದುಕ್ ಅವರನ್ನು ಕೈಬಿಡಲಾಗಿದೆ. ಹಾಲಿ ಸಂಸದ ರತನ್‌ಸಿನ್ಹ್ ಮಗನ್‌ಸಿನ್ಹ್ ರಾಥೋಡ್ ಅವರನ್ನು ಕೈಬಿಟ್ಟಿದ್ದರಿಂದ ರಾಜ್‌ಪಾಲ್‌ಸಿಂಗ್ ಮಹೇಂದ್ರಸಿಂಗ್ ಜಾಧವ್ ಪಂಚಮಹಲ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮನೀಶ್ ಜೈಸ್ವಾಲ್ ಅವರಿಗೆ ಟಿಕೆಟ್‌ ನೀಡಿದ್ದು, ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರ ಪುತ್ರ ಜಯಂತ್ ಸಿನ್ಹಾ ಅವರನ್ನು ಕೈಬಿಟ್ಟಿದ್ದಾರೆ. ಬಿಜೆಪಿಯ ಪಟ್ಟಿ ಘೋಷಣೆಗೆ ಒಂದು ದಿನ ಮೊದಲು ಸಿನ್ಹಾ ಅವರು ಲೋಕಸಭೆ ಚುನಾವಣೆಯಿಂದ ಹೊರಗುಳಿಯುತ್ತಿರುವುದಾಗಿ ಹೇಳಿದ್ದರು. ಲೋಹರ್ದಗಾದಲ್ಲಿ ಮೂರು ಬಾರಿ ಸಂಸದರಾಗಿದ್ದ ಸುದರ್ಶನ್ ಭಗತ್ ಬದಲಿಗೆ ಸಮೀರ್ ಓರಾನ್ ಅವರಿಗೆ ಟಿಕೆಟ್‌ ನೀಡಲಾಗಿದೆ.

ಬಿಜೆಪಿಯ ಮಧ್ಯಪ್ರದೇಶ ಪಟ್ಟಿಯಲ್ಲಿ ಏಳು ಹೊಸ ಮುಖಗಳಿವೆ. ಪಕ್ಷದ ಹಾಲಿ ಸಂಸದ ವಿವೇಕ್ ನಾರಾಯಣ ಶೇಜ್ವಾಲ್ಕರ್ ಬದಲಿಗೆ ಭರತ್ ಸಿಂಗ್ ಕುಶ್ವಾಹಾ ಗ್ವಾಲಿಯರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಗುನಾದಿಂದ ಹಾಲಿ ಸಂಸದ ಕೃಷ್ಣಪಾಲ್ ಸಿಂಗ್ ಯಾದವ್ ಬದಲಿಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ನೇಮಿಸಲಾಗಿದೆ. ಪ್ರಸ್ತುತ ರಾಜಬಹದ್ದೂರ್ ಸಿಂಗ್ ಅವರು ಹೊಂದಿರುವ ಸಾಗರ್ ಲೋಕಸಭಾ ಕ್ಷೇತ್ರದಿಂದ ಲತಾ ವಾಂಖೆಡೆ ಅವರನ್ನು ಹೆಸರಿಸಲಾಗಿದೆ. ವೀರೇಂದ್ರ ಖಾಟಿಕ್ ಅವರು ಟಿಕಮ್‌ಗಢ (ಎಸ್‌ಸಿ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ವಿದಿಶಾ ಸಂಸದ ರಮಾಕಾಂತ್ ಭಾರ್ಗವ ಅವರನ್ನು ಕೈಬಿಡಲಾಗಿದ್ದು, ಆ ಸ್ಥಾನವನ್ನು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹಂಚಿಕೆ ಮಾಡಲಾಗಿದೆ.

ಭೋಪಾಲ್‌ನಲ್ಲಿ ಅಲೋಕ್ ಶರ್ಮಾ ಸ್ಪರ್ಧಿಸಲಿದ್ದಾರೆ. ಪ್ರಸ್ತುತ ಸ್ಥಾನವನ್ನು ಸಾಧ್ವಿ ಪ್ರಜ್ಞಾ ಸಿಂಗ್ ಹೊಂದಿದ್ದಾರೆ. ಪ್ರಸ್ತುತ ಬಿಜೆಪಿ ಸಂಸದ ಗುಮನ್ ಸಿಂಗ್ ದಾಮೋರ್ ಹೊಂದಿರುವ ರತ್ಲಾಮ್ (ಎಸ್‌ಟಿ) ಸ್ಥಾನವನ್ನು ಅನಿತಾ ನಗರ್ ಸಿಂಗ್ ಚೌಹಾಣ್ ಅವರಿಗೆ ನೀಡಲಾಗಿದೆ.

ರಾಜಸ್ಥಾನದಲ್ಲಿ 15 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದ್ದು, ಪಕ್ಷವು ರಾಜಸ್ಥಾನದಲ್ಲಿ ಐದು ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ. ಚುರು, ಭರತ್‌ಪುರ, ಜಲೋರ್, ಉದಯಪುರ ಮತ್ತು ಬನ್ಸ್ವಾರಾ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಟಿಕೆಟ್‌ ನೀಡಲಾಗಿದೆ.

ತ್ರಿಪುರಾದಲ್ಲಿ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು ಪ್ರಸ್ತುತ ಪಕ್ಷದ ಸಂಸದೆ ಪ್ರತಿಮಾ ಭೂಮಿಕ್ ಅವರು ಪ್ರತಿನಿಧಿಸುವ ತ್ರಿಪುರ ಪಶ್ಚಿಮ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಅಲಿಪುರ್ದೂರ್ ಸಂಸದ ಜಾನ್ ಬಾರ್ಲಾ ಅವರ ಬದಲಿಗೆ ಮನೋಜ್ ತಿಗ್ಗಾ ಅವರನ್ನು ಸ್ಪರ್ಧೆಗಿಳಿಸಲಾಗಿದೆ.

ಇದನ್ನು ಓದಿ: ಸೌಜನ್ಯ ಪ್ರಕರಣ: ಸೋನಿಯಾ ಗಾಂಧಿ ನಿವಾಸದ ಬಳಿ ಪ್ರತಿಭಟನೆ   

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...