Homeಮುಖಪುಟ33 ಕ್ಷೇತ್ರಗಳಲ್ಲಿ ಹಾಲಿ ಸಂಸದರ ಬದಲಿಗೆ ಹೊಸ ಮುಖಗಳಿಗೆ ಮಣೆ ಹಾಕಿದ ಬಿಜೆಪಿ

33 ಕ್ಷೇತ್ರಗಳಲ್ಲಿ ಹಾಲಿ ಸಂಸದರ ಬದಲಿಗೆ ಹೊಸ ಮುಖಗಳಿಗೆ ಮಣೆ ಹಾಕಿದ ಬಿಜೆಪಿ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದ್ದು, ವಿವಿಧ ರಾಜ್ಯಗಳಲ್ಲಿ ಗಮನಾರ್ಹ ಬದಲಾವಣೆಗಳೊಂದಿಗೆ ಬಿಜೆಪಿ 33 ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ. ಇದರಿಂದ ಪಕ್ಷದೊಳಗೆ ಅಸಮಾಧಾನ ಉದ್ಭವಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಸರಿ ಪಕ್ಷದ ಲೋಕಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕೇಂದ್ರ ಸಚಿವರು ಸೇರಿದಂತೆ ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ರಾಜ್ಯಗಳಿಗೆ ಸ್ಪರ್ಧೆಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಪಟ್ಟಿಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 95 ಹೆಸರುಗಳಿವೆ.

ಬಿಜೆಪಿ ಅಸ್ಸಾಂನಲ್ಲಿ ಐದು ಹೊಸ ಮುಖಗಳನ್ನು ಕಣಕ್ಕಿಳಿಸಿದೆ ಮತ್ತು ಇತರ 6 ಹಾಲಿ ಸಂಸದರಿಗೆ ಟಿಕೆಟ್‌ ನೀಡಿದೆ. ಸಿಲ್ಚಾರ್ ಕ್ಷೇತ್ರದಲ್ಲಿ ಬಿಜೆಪಿಯು ರಾಜ್‌ದೀಪ್ ರಾಯ್ ಬದಲಿಗೆ ಪರಿಮಳಾ ಸುಕ್ಲಬೈಧ್ಯ ಅವರನ್ನು ಕಣಕ್ಕಿಳಿಸಿದೆ. ಸಂಸದ ಹೋರೆನ್ ಸಿಂಗ್ ಬೇ ಬದಲಿಗೆ ಅಮರ್ ಸಿಂಗ್ ಟಿಸ್ಸೊಗೆ ಟಿಕೆಟ್‌ ನೀಡಿದೆ. ಕ್ವೀನ್ ಓಜಾ ಸಂಸದರ ಗೌಹಾಟಿ ಲೋಕಸಭಾ ಕ್ಷೇತ್ರಕ್ಕೆ ಬಿಜುಲಿ ಕಲಿತಾ ಮೇಧಿ ಸ್ಪರ್ಧಿಸಲಿದ್ದು, ಪಲ್ಲಬ್ ಲೋಚನ್ ದಾಸ್ ಹಾಲಿ ಸಂಸದರಾಗಿರುವ ತೇಜ್‌ಪುರದಿಂದ ರಂಜಿತ್ ದತ್ತಾ ಸ್ಪರ್ಧಿಸಲಿದ್ದಾರೆ. ಕೇಂದ್ರ ಸಚಿವ ಸರ್ಬಾನಂದ್ ಸೋನೊವಾಲ್ ಅವರು ಸಂಸದ ರಾಮೇಶ್ವರ್ ತೇಲಿ ಅವರ ಬದಲಿಗೆ ದಿಬ್ರುಗಢದಲ್ಲಿ ಸ್ಪರ್ಧಿಸಲಿದ್ದಾರೆ.

ಛತ್ತೀಸ್‌ಗಢದಲ್ಲಿ ಪಕ್ಷವು ನಾಲ್ಕು ಹೊಸ ಮುಖಗಳನ್ನು ಹೆಸರಿಸಿದೆ. ರಾಯ್‌ಪುರ ಕ್ಷೇತ್ರವನ್ನು ಸುನಿಲ್‌ಕುಮಾರ್‌ ಸೋನಿ ಅವರ ಬದಲಿಗೆ ಬಿಜೆಪಿಯ ಹಿರಿಯ ನಾಯಕ ಬ್ರಿಜ್‌ಮೋಹನ್‌ ಅಗರವಾಲ್‌ ಅವರಿಗೆ ನೀಡಲಾಗಿದೆ. ಕಮಲೇಶ್ ಜಂಗ್ಡೆ ಅವರು ಹಾಲಿ ಸಂಸದ ಗುಹರಾಮ್ ಅಜ್ಗಲ್ಲಿ ಬದಲಿಗೆ ಜಾಂಜ್ಗೀರ್ ಚಂಪಾ (ಎಸ್ಸಿ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಂಸದ ಚುನ್ನಿ ಲಾಲ್ ಸಾಹು ಅವರನ್ನು ಕೈಬಿಟ್ಟಿದ್ದು ರೂಪ್ ಕುಮಾರಿ ಚೌಧರಿ ಮಹಾಸಮುಂಡ್‌ನ ಅಭ್ಯರ್ಥಿಯಾಗಿದ್ದಾರೆ. ಕಂಕೇರ್‌ನಲ್ಲಿ (ಎಸ್‌ಟಿ) ಮೋಹನ್ ಮಾಂಡವಿ ಬದಲಿಗೆ ಭೋಜರಾಜ್ ನಾಗ್ ಅವರಿಗೆ ಟಿಕೆಟ್‌ ನೀಡಲಾಗಿದೆ.

ದೆಹಲಿಯಲ್ಲಿ ಹೆಸರಿಸಲಾದ ಬಿಜೆಪಿ ಅಭ್ಯರ್ಥಿಗಳ ಪೈಕಿ ನಾಲ್ವರು ಹಾಲಿ ಸಂಸದರಿಗೆ ಟಕೆಟ್‌ ನಿರಾಕರಿಸಲಾಗಿದೆ.  ಚಾಂದನಿ ಚೌಕ್ ಲೋಕಸಭಾ ಕ್ಷೇತ್ರದಿಂದ ಮಾಜಿ ಕೇಂದ್ರ ಸಚಿವ ಹರ್ಷವರ್ಧನ್ ಅವರನ್ನು ಕೈಬಿಡಲಾಗಿದ್ದು, ಪ್ರವೀಣ್ ಖಂಡೇಲ್ವಾಲ್ ಅವರಿಗೆ ಟಿಕೆಟ್‌ ನೀಡಲಾಗಿದೆ. ಪಶ್ಚಿಮ ದೆಹಲಿ ಕ್ಷೇತ್ರದಲ್ಲಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಬದಲಿಗೆ ಕಮಲಜೀತ್ ಸೆಹ್ರಾವತ್ ಅವರನ್ನು ನೇಮಿಸಲಾಗಿದೆ. ಬಿಜೆಪಿಯ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ನವದೆಹಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದು, ಹಾಲಿ ಸಂಸದೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಸಂಸತ್ತಿನಲ್ಲಿ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ರಮೇಶ್ ಬಿದುರಿ ಅವರನ್ನು ದಕ್ಷಿಣ ದೆಹಲಿಯಿಂದ ಕೈಬಿಡಲಾಗಿದೆ ಮತ್ತು ಅವರ ಸ್ಥಾನದಿಂದ ರಾಮವೀರ್ ಸಿಂಗ್ ಬಿಧುರಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಗುಜರಾತ್‌ನಲ್ಲಿ 15 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದ್ದು, ಬಿಜೆಪಿ 5 ಹಾಲಿ ಸಂಸದರನ್ನು ಕೈಬಿಟ್ಟಿದೆ. ಹಾಲಿ ಸಂಸದ ಪ್ರಭಾತಭಾಯ್ ಸಾವಭಾಯಿ ಪಟೇಲ್ ಬದಲಿಗೆ ರೇಖಾಬೆನ್ ಹಿತೇಶ್ ಭಾಯ್ ಚೌಧರಿ ಬನಸ್ಕಾಂತ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಂಸದ ಕಿರಿತ್ ಸೋಲಂಕಿ ಅವರ ಬದಲಿಗೆ ಅಹಮದಾಬಾದ್ ವೆಸ್ಟ್‌ನಿಂದ ದಿನೇಶ್‌ಭಾಯ್ ಕಿದರ್‌ಭಾಯ್ ಮಕ್ವಾನಾ ಅವರು ಸ್ಪರ್ಧಿಸಲಿದ್ದಾರೆ.

ರಾಜ್‌ಕೋಟ್‌ನಲ್ಲಿ ಹಾಲಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರನ್ನು ಕೈಬಿಟ್ಟು ಕೇಂದ್ರ ಸಚಿವ ಪರ್ಷೋತ್ತಮ್ ರೂಪಾಲಾ ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಹೆಸರಿಸಿದೆ. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಪೋರ್ಬಂದರ್ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದು, ಪ್ರಸ್ತುತ ಪಕ್ಷದ ಸಂಸದ ರಮೇಶ್ಭಾಯ್ ಲವ್ಜಿಭಾಯಿ ಧದುಕ್ ಅವರನ್ನು ಕೈಬಿಡಲಾಗಿದೆ. ಹಾಲಿ ಸಂಸದ ರತನ್‌ಸಿನ್ಹ್ ಮಗನ್‌ಸಿನ್ಹ್ ರಾಥೋಡ್ ಅವರನ್ನು ಕೈಬಿಟ್ಟಿದ್ದರಿಂದ ರಾಜ್‌ಪಾಲ್‌ಸಿಂಗ್ ಮಹೇಂದ್ರಸಿಂಗ್ ಜಾಧವ್ ಪಂಚಮಹಲ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮನೀಶ್ ಜೈಸ್ವಾಲ್ ಅವರಿಗೆ ಟಿಕೆಟ್‌ ನೀಡಿದ್ದು, ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರ ಪುತ್ರ ಜಯಂತ್ ಸಿನ್ಹಾ ಅವರನ್ನು ಕೈಬಿಟ್ಟಿದ್ದಾರೆ. ಬಿಜೆಪಿಯ ಪಟ್ಟಿ ಘೋಷಣೆಗೆ ಒಂದು ದಿನ ಮೊದಲು ಸಿನ್ಹಾ ಅವರು ಲೋಕಸಭೆ ಚುನಾವಣೆಯಿಂದ ಹೊರಗುಳಿಯುತ್ತಿರುವುದಾಗಿ ಹೇಳಿದ್ದರು. ಲೋಹರ್ದಗಾದಲ್ಲಿ ಮೂರು ಬಾರಿ ಸಂಸದರಾಗಿದ್ದ ಸುದರ್ಶನ್ ಭಗತ್ ಬದಲಿಗೆ ಸಮೀರ್ ಓರಾನ್ ಅವರಿಗೆ ಟಿಕೆಟ್‌ ನೀಡಲಾಗಿದೆ.

ಬಿಜೆಪಿಯ ಮಧ್ಯಪ್ರದೇಶ ಪಟ್ಟಿಯಲ್ಲಿ ಏಳು ಹೊಸ ಮುಖಗಳಿವೆ. ಪಕ್ಷದ ಹಾಲಿ ಸಂಸದ ವಿವೇಕ್ ನಾರಾಯಣ ಶೇಜ್ವಾಲ್ಕರ್ ಬದಲಿಗೆ ಭರತ್ ಸಿಂಗ್ ಕುಶ್ವಾಹಾ ಗ್ವಾಲಿಯರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಗುನಾದಿಂದ ಹಾಲಿ ಸಂಸದ ಕೃಷ್ಣಪಾಲ್ ಸಿಂಗ್ ಯಾದವ್ ಬದಲಿಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ನೇಮಿಸಲಾಗಿದೆ. ಪ್ರಸ್ತುತ ರಾಜಬಹದ್ದೂರ್ ಸಿಂಗ್ ಅವರು ಹೊಂದಿರುವ ಸಾಗರ್ ಲೋಕಸಭಾ ಕ್ಷೇತ್ರದಿಂದ ಲತಾ ವಾಂಖೆಡೆ ಅವರನ್ನು ಹೆಸರಿಸಲಾಗಿದೆ. ವೀರೇಂದ್ರ ಖಾಟಿಕ್ ಅವರು ಟಿಕಮ್‌ಗಢ (ಎಸ್‌ಸಿ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ವಿದಿಶಾ ಸಂಸದ ರಮಾಕಾಂತ್ ಭಾರ್ಗವ ಅವರನ್ನು ಕೈಬಿಡಲಾಗಿದ್ದು, ಆ ಸ್ಥಾನವನ್ನು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹಂಚಿಕೆ ಮಾಡಲಾಗಿದೆ.

ಭೋಪಾಲ್‌ನಲ್ಲಿ ಅಲೋಕ್ ಶರ್ಮಾ ಸ್ಪರ್ಧಿಸಲಿದ್ದಾರೆ. ಪ್ರಸ್ತುತ ಸ್ಥಾನವನ್ನು ಸಾಧ್ವಿ ಪ್ರಜ್ಞಾ ಸಿಂಗ್ ಹೊಂದಿದ್ದಾರೆ. ಪ್ರಸ್ತುತ ಬಿಜೆಪಿ ಸಂಸದ ಗುಮನ್ ಸಿಂಗ್ ದಾಮೋರ್ ಹೊಂದಿರುವ ರತ್ಲಾಮ್ (ಎಸ್‌ಟಿ) ಸ್ಥಾನವನ್ನು ಅನಿತಾ ನಗರ್ ಸಿಂಗ್ ಚೌಹಾಣ್ ಅವರಿಗೆ ನೀಡಲಾಗಿದೆ.

ರಾಜಸ್ಥಾನದಲ್ಲಿ 15 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದ್ದು, ಪಕ್ಷವು ರಾಜಸ್ಥಾನದಲ್ಲಿ ಐದು ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ. ಚುರು, ಭರತ್‌ಪುರ, ಜಲೋರ್, ಉದಯಪುರ ಮತ್ತು ಬನ್ಸ್ವಾರಾ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಟಿಕೆಟ್‌ ನೀಡಲಾಗಿದೆ.

ತ್ರಿಪುರಾದಲ್ಲಿ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು ಪ್ರಸ್ತುತ ಪಕ್ಷದ ಸಂಸದೆ ಪ್ರತಿಮಾ ಭೂಮಿಕ್ ಅವರು ಪ್ರತಿನಿಧಿಸುವ ತ್ರಿಪುರ ಪಶ್ಚಿಮ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಅಲಿಪುರ್ದೂರ್ ಸಂಸದ ಜಾನ್ ಬಾರ್ಲಾ ಅವರ ಬದಲಿಗೆ ಮನೋಜ್ ತಿಗ್ಗಾ ಅವರನ್ನು ಸ್ಪರ್ಧೆಗಿಳಿಸಲಾಗಿದೆ.

ಇದನ್ನು ಓದಿ: ಸೌಜನ್ಯ ಪ್ರಕರಣ: ಸೋನಿಯಾ ಗಾಂಧಿ ನಿವಾಸದ ಬಳಿ ಪ್ರತಿಭಟನೆ   

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...