Homeಮುಖಪುಟಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

- Advertisement -
- Advertisement -

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಅವರು ಆಯ್ಕೆಯಾಗಿದ್ದಾರೆ. ಶೆಹಬಾಝ್ ಷರೀಫ್ ಅವರ ಎರಡನೇ ಬಾರಿಗೆ ಪಾಕಿಸ್ತಾನದಲ್ಲಿ ಪ್ರಧಾನಿಯಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

201 ಮತಗಳನ್ನು ಪಡೆಯುವ ಮೂಲಕ ಶೆಹಬಾಝ್ ಷರೀಫ್ ಗೆಲುವನ್ನು ಸಾಧಿಸಿದ್ದಾರೆ. ಇಮ್ರಾನ್ ಖಾನ್ ಬೆಂಬಲಿತ ಪಿಟಿಐ ಅಭ್ಯರ್ಥಿ ಓಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಮಾತ್ರ ಪಡೆದುಕೊಂಡು ಸೋಲನ್ನು ಅನುಭವಿಸಿದ್ದಾರೆ. ಶೆಹಬಾಝ್ ಕಳೆದ ತಿಂಗಳ ಚುನಾವಣೆಗೆ ಮುನ್ನ ಆಗಸ್ಟ್‌ನಲ್ಲಿ ಸಂಸತ್ತು ವಿಸರ್ಜನೆಗೊಳ್ಳುವವರೆಗೂ ಪ್ರಧಾನಿಯಾಗಿದ್ದರು.

ಭಾನುವಾರದ ಮತದಾನದಲ್ಲಿ ಒಟ್ಟು 293 ಮತಗಳಲ್ಲಿ 201 ಮತಗಳನ್ನು ಪಡೆಯುವ ಮೂಲಕ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್ ಘೋಷಿಸಿದ್ದಾರೆ. ಷರೀಫ್ ಅವರ ಏಕೈಕ ಪ್ರತಿಸ್ಪರ್ಧಿ ಸುನ್ನಿ ಇತ್ತೆಹಾದ್ ಕೌನ್ಸಿಲ್ (SIC) ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಜಂಟಿ ಅಭ್ಯರ್ಥಿ ಒಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಪಡೆದಿದ್ದರು.

ಶೆಹಬಾಝ್‌ ತಮ್ಮ ವಿಜಯ ಭಾಷಣದಲ್ಲಿ ನವಾಜ್ ಷರೀಫ್ ಅವರನ್ನು ನೆನಪಿಸಿಕೊಂಡಿದ್ದಾರೆ.  ಮಿತ್ರಪಕ್ಷಗಳಿಗೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಭಾನಾಯಕನನ್ನಾಗಿ ಮಾಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಪಾಕಿಸ್ತಾನವನ್ನು ಕಟ್ಟಿದ್ದು ನವಾಜ್ ಷರೀಫ್ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ.

ಶೆಹಬಾಝ್ ಅವರು ಮಾತನಾಡುವಾಗ, ಪಿಟಿಐ ಬೆಂಬಲಿತ ಶಾಸಕರು  ‘ಕಳ್ಳ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷವು ಆರೋಪಿಸಿದೆ. ಇತರೆ ಅಭ್ಯರ್ಥಿಗಳು ಹೆಚ್ಚಿನ ಮತಗಳನ್ನು ಪಡೆದರೂ ಪಿಎಂಎಲ್-ಎನ್ ಮತ್ತು ಪಿಪಿಪಿಯ ಹಲವು ಅಭ್ಯರ್ಥಿಗಳನ್ನು ವಿಜೇತರೆಂದು ಘೋಷಿಸಲಾಗಿದೆ ಎಂದು ಇಮ್ರಾನ್ ಖಾನ್ ಅವರ ಪಿಟಿಐ ಆರೋಪಿಸಿದೆ. ಅನೇಕ ಪಿಟಿಐ ನಾಯಕರು ಚುನಾವಣಾ ಅಧಿಕಾರಿಗಳು ಜನರ ಆದೇಶವನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದಕ್ಕೆ ಮೊದಲು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಹಾಗೂ ಉಪ ಸ್ಪೀಕರ್ ಹುದ್ದೆಗಳಿಗೆ ಪಿಎಂಎಲ್‌–ಎನ್‌, ಪಿಪಿಪಿ ಜೊತೆಯಾಗಿ ಕಣಕ್ಕಿಳಿಸಿದಿದ್ದ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲುವು ಸಾಧಿಸಿದ್ದರು. ಗೆಲುವಿನ ಬಳಿಕ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪ್ರಧಾನಿಯಾಗಿ ಷರೀಫ್ ಅವರನ್ನು ಘೋಷಿಸಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ. ಷರೀಫ್ ಅವರು PML-N, ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಾರ್ಲಿಮೆಂಟೇರಿಯನ್ಸ್, ಮುತ್ತಹಿದಾ ಕ್ವಾಮಿ ಮೂವ್ಮೆಂಟ್-ಪಾಕಿಸ್ತಾನ ಮತ್ತು ಇತರ ಮಿತ್ರಪಕ್ಷಗಳಿಂದ ಮತಗಳನ್ನು ಪಡೆದಿದ್ದರು.

ಫೆ.8ರಂದು ನಡೆದಿದ್ದ ಪಾಕಿಸ್ತಾನ ಸಂಸತ್‌ ಚುನಾವಣೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆದುಕೊಂಡಿಲ್ಲ. ಪಿಟಿಐ ಬೆಂಬಲಿತ ಪಕ್ಷೇತರರು 101, ಪಿಎಂಎಲ್‌-ಎನ್‌ (ನವಾಜ್‌) 75, ಪಿಪಿಪಿ (ಭುಟ್ಟೊ) 54, ಇತರೆ ಪ್ರಾದೇಶಿಕ ಪಕ್ಷಗಳು 34 ಸ್ಥಾನಗಳಲ್ಲಿ ಜಯ ಗಳಿಸಿವೆ.

ಪ್ರಧಾನಿ ಹುದ್ದೆ ನೀಡಿದರೆ ಸಮ್ಮಿಶ್ರ ಸರಕಾರ ರಚನೆಗೆ ಬೆಂಬಲ ನೀಡುವುದಾಗಿ ಹೇಳಿದ್ದ ಪಿಪಿಪಿ ಮುಖ್ಯಸ್ಥ ಬಿಲಾವಲ್‌ ಭುಟ್ಟೋ ಜರ್ದಾರಿ, ಮಂಗಳವಾರ ಪ್ರಧಾನಿ ರೇಸ್‌ನಿಂದ ಹಿಂದೆ ಸರಿದಿದ್ದರು. ಹೊಸ ಸರಕಾರ ರಚನೆಗೆ ಪಿಎಂಎನ್‌ಎಲ್‌ ಪಕ್ಷಕ್ಕೆ ಷರತ್ತುಬದ್ಧ ಬೆಂಬಲ ನೀಡುವುದಾಗಿ ಹೇಳಿರುವ ಭುಟ್ಟೋ ಅವರು ಮಾಜಿ ಪ್ರಧಾನಿ ನವಾಜ್ ಷರೀಫ್‌ ಆಯ್ಕೆ ಮಾಡುವ ಅಭ್ಯರ್ಥಿಗೆ ನಮ್ಮ ಪಕ್ಷ ವಿಷಯಾಧಾರಿತ ಬೆಂಬಲ ನೀಡಲಿದೆ. ಆದರೆ, ಸರಕಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಣೆ ಮಾಡಿದ್ದರು.

ಇದನ್ನು ಓದಿ: ಅದಾನಿಯ 16 ಲಕ್ಷ ಕೋಟಿ ರೂ. ಮನ್ನಾ: ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...