Homeಮುಖಪುಟಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

- Advertisement -
- Advertisement -

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಅವರು ಆಯ್ಕೆಯಾಗಿದ್ದಾರೆ. ಶೆಹಬಾಝ್ ಷರೀಫ್ ಅವರ ಎರಡನೇ ಬಾರಿಗೆ ಪಾಕಿಸ್ತಾನದಲ್ಲಿ ಪ್ರಧಾನಿಯಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

201 ಮತಗಳನ್ನು ಪಡೆಯುವ ಮೂಲಕ ಶೆಹಬಾಝ್ ಷರೀಫ್ ಗೆಲುವನ್ನು ಸಾಧಿಸಿದ್ದಾರೆ. ಇಮ್ರಾನ್ ಖಾನ್ ಬೆಂಬಲಿತ ಪಿಟಿಐ ಅಭ್ಯರ್ಥಿ ಓಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಮಾತ್ರ ಪಡೆದುಕೊಂಡು ಸೋಲನ್ನು ಅನುಭವಿಸಿದ್ದಾರೆ. ಶೆಹಬಾಝ್ ಕಳೆದ ತಿಂಗಳ ಚುನಾವಣೆಗೆ ಮುನ್ನ ಆಗಸ್ಟ್‌ನಲ್ಲಿ ಸಂಸತ್ತು ವಿಸರ್ಜನೆಗೊಳ್ಳುವವರೆಗೂ ಪ್ರಧಾನಿಯಾಗಿದ್ದರು.

ಭಾನುವಾರದ ಮತದಾನದಲ್ಲಿ ಒಟ್ಟು 293 ಮತಗಳಲ್ಲಿ 201 ಮತಗಳನ್ನು ಪಡೆಯುವ ಮೂಲಕ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್ ಘೋಷಿಸಿದ್ದಾರೆ. ಷರೀಫ್ ಅವರ ಏಕೈಕ ಪ್ರತಿಸ್ಪರ್ಧಿ ಸುನ್ನಿ ಇತ್ತೆಹಾದ್ ಕೌನ್ಸಿಲ್ (SIC) ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಜಂಟಿ ಅಭ್ಯರ್ಥಿ ಒಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಪಡೆದಿದ್ದರು.

ಶೆಹಬಾಝ್‌ ತಮ್ಮ ವಿಜಯ ಭಾಷಣದಲ್ಲಿ ನವಾಜ್ ಷರೀಫ್ ಅವರನ್ನು ನೆನಪಿಸಿಕೊಂಡಿದ್ದಾರೆ.  ಮಿತ್ರಪಕ್ಷಗಳಿಗೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಭಾನಾಯಕನನ್ನಾಗಿ ಮಾಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಪಾಕಿಸ್ತಾನವನ್ನು ಕಟ್ಟಿದ್ದು ನವಾಜ್ ಷರೀಫ್ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ.

ಶೆಹಬಾಝ್ ಅವರು ಮಾತನಾಡುವಾಗ, ಪಿಟಿಐ ಬೆಂಬಲಿತ ಶಾಸಕರು  ‘ಕಳ್ಳ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷವು ಆರೋಪಿಸಿದೆ. ಇತರೆ ಅಭ್ಯರ್ಥಿಗಳು ಹೆಚ್ಚಿನ ಮತಗಳನ್ನು ಪಡೆದರೂ ಪಿಎಂಎಲ್-ಎನ್ ಮತ್ತು ಪಿಪಿಪಿಯ ಹಲವು ಅಭ್ಯರ್ಥಿಗಳನ್ನು ವಿಜೇತರೆಂದು ಘೋಷಿಸಲಾಗಿದೆ ಎಂದು ಇಮ್ರಾನ್ ಖಾನ್ ಅವರ ಪಿಟಿಐ ಆರೋಪಿಸಿದೆ. ಅನೇಕ ಪಿಟಿಐ ನಾಯಕರು ಚುನಾವಣಾ ಅಧಿಕಾರಿಗಳು ಜನರ ಆದೇಶವನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದಕ್ಕೆ ಮೊದಲು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಹಾಗೂ ಉಪ ಸ್ಪೀಕರ್ ಹುದ್ದೆಗಳಿಗೆ ಪಿಎಂಎಲ್‌–ಎನ್‌, ಪಿಪಿಪಿ ಜೊತೆಯಾಗಿ ಕಣಕ್ಕಿಳಿಸಿದಿದ್ದ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲುವು ಸಾಧಿಸಿದ್ದರು. ಗೆಲುವಿನ ಬಳಿಕ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪ್ರಧಾನಿಯಾಗಿ ಷರೀಫ್ ಅವರನ್ನು ಘೋಷಿಸಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ. ಷರೀಫ್ ಅವರು PML-N, ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಾರ್ಲಿಮೆಂಟೇರಿಯನ್ಸ್, ಮುತ್ತಹಿದಾ ಕ್ವಾಮಿ ಮೂವ್ಮೆಂಟ್-ಪಾಕಿಸ್ತಾನ ಮತ್ತು ಇತರ ಮಿತ್ರಪಕ್ಷಗಳಿಂದ ಮತಗಳನ್ನು ಪಡೆದಿದ್ದರು.

ಫೆ.8ರಂದು ನಡೆದಿದ್ದ ಪಾಕಿಸ್ತಾನ ಸಂಸತ್‌ ಚುನಾವಣೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆದುಕೊಂಡಿಲ್ಲ. ಪಿಟಿಐ ಬೆಂಬಲಿತ ಪಕ್ಷೇತರರು 101, ಪಿಎಂಎಲ್‌-ಎನ್‌ (ನವಾಜ್‌) 75, ಪಿಪಿಪಿ (ಭುಟ್ಟೊ) 54, ಇತರೆ ಪ್ರಾದೇಶಿಕ ಪಕ್ಷಗಳು 34 ಸ್ಥಾನಗಳಲ್ಲಿ ಜಯ ಗಳಿಸಿವೆ.

ಪ್ರಧಾನಿ ಹುದ್ದೆ ನೀಡಿದರೆ ಸಮ್ಮಿಶ್ರ ಸರಕಾರ ರಚನೆಗೆ ಬೆಂಬಲ ನೀಡುವುದಾಗಿ ಹೇಳಿದ್ದ ಪಿಪಿಪಿ ಮುಖ್ಯಸ್ಥ ಬಿಲಾವಲ್‌ ಭುಟ್ಟೋ ಜರ್ದಾರಿ, ಮಂಗಳವಾರ ಪ್ರಧಾನಿ ರೇಸ್‌ನಿಂದ ಹಿಂದೆ ಸರಿದಿದ್ದರು. ಹೊಸ ಸರಕಾರ ರಚನೆಗೆ ಪಿಎಂಎನ್‌ಎಲ್‌ ಪಕ್ಷಕ್ಕೆ ಷರತ್ತುಬದ್ಧ ಬೆಂಬಲ ನೀಡುವುದಾಗಿ ಹೇಳಿರುವ ಭುಟ್ಟೋ ಅವರು ಮಾಜಿ ಪ್ರಧಾನಿ ನವಾಜ್ ಷರೀಫ್‌ ಆಯ್ಕೆ ಮಾಡುವ ಅಭ್ಯರ್ಥಿಗೆ ನಮ್ಮ ಪಕ್ಷ ವಿಷಯಾಧಾರಿತ ಬೆಂಬಲ ನೀಡಲಿದೆ. ಆದರೆ, ಸರಕಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಣೆ ಮಾಡಿದ್ದರು.

ಇದನ್ನು ಓದಿ: ಅದಾನಿಯ 16 ಲಕ್ಷ ಕೋಟಿ ರೂ. ಮನ್ನಾ: ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...