Homeಕರ್ನಾಟಕರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

- Advertisement -
- Advertisement -

ವ್ಯಾಪಾರ ಪೈಪೋಟಿ, ಮುಂಬರುವ ಚುನಾವಣೆಗಳು ಮತ್ತು ರಾಜ್ಯದಲ್ಲಿ ಸ್ಥಿರ ಸರ್ಕಾರದ ದೃಷ್ಟಿಯಿಂದ ಬೆಂಗಳೂರಿಗೆ ಬರುತ್ತಿರುವ ಹೂಡಿಕೆದಾರರನ್ನು ಭಯಭೀತಗೊಳಿಸುವುದು ನಗರದ ಉಪಾಹಾರ ಗೃಹ ಸ್ಫೋಟಕ್ಕೆ ಸಂಬಂಧಿಸಿದ ಕೆಲವು ಕೋನಗಳನ್ನು ಭೇದಿಸಲು ಪೊಲೀಸರು ಶ್ರಮಿಸುತ್ತಿದ್ದಾರೆ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.

ಪೂರ್ವ ಬೆಂಗಳೂರಿನ ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದೆ. ತಲೆಗೆ ಟೋಪಿ, ಮುಖವಾಡ ಮತ್ತು ಕನ್ನಡಕವನ್ನು ಧರಿಸಿರುವ ವ್ಯಕ್ತಿ ಪ್ರಕರಣದ ಪ್ರಮುಖ ಶಂಕಿತನಾಗಿದ್ದು, ಆತ ಇನ್ನೂ ಪತ್ತೆಯಾಗಿಲ್ಲ.

ಗೃಹ ಸಚಿವರ ಪ್ರಕಾರ, ಎಂಟು ತಂಡಗಳು ಪ್ರಕರಣವನ್ನು ಭೇದಿಸಲು ಕೆಲಸ ಮಾಡುತ್ತಿವೆ ಮತ್ತು ಅವರ ಜೊತೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ, ರಾಷ್ಟ್ರೀಯ ಭದ್ರತಾ ಗುಂಪು (ಎನ್‌ಎಸ್‌ಜಿ) ಮತ್ತು ಗುಪ್ತಚರ ಬ್ಯೂರೋ (ಐಬಿ) ತಂಡಗಳಿಗೆ ಸಹಾಯ ಮಾಡುತ್ತಿವೆ ಎಂದರು.

ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರನ್ನು ಭಯಭೀತಗೊಳಿಸಬಹುದೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ಪರಮೇಶ್ವರ ಹೇಳಿದರು. ‘ಚುನಾವಣೆಗಳು ಸಮೀಪಿಸುತ್ತಿವೆ, ಯಾವುದೇ ಸಂಘಟನೆಯು ಅದರ ಹಿಂದೆ ಇದ್ದರೆ ಅಥವಾ ಬೆಂಗಳೂರನ್ನು ಅಸುರಕ್ಷಿತವಾಗಿ ಕಾಣುವಂತೆ ಜನರನ್ನು ಭಯಭೀತಗೊಳಿಸುವ ಇತರ ಉದ್ದೇಶಗಳು ಇದರ ಹಿಂದೆ ಇದೆಯೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ’ ಎಂದು ಹೇಳಿದರು.

‘ಸ್ಥಿರ ಸರ್ಕಾರದ ದೃಷ್ಟಿಯಿಂದ ಅನೇಕ ಹೂಡಿಕೆದಾರರು ಇಲ್ಲಿಗೆ ಬರುತ್ತಿದ್ದಾರೆ, ಹೂಡಿಕೆದಾರರು ಬೆಂಗಳೂರಿಗೆ ಬರುವುದನ್ನು ತಡೆಯಲು ಅಥವಾ ಇತರ ಕೆಲವು ಅಪರಿಚಿತ ಕಾರಣಗಳಿಂದ ಇದನ್ನು ಮಾಡಿರಬಹುದು’ ಎಂದು ಪರಮೇಶ್ವರ ಹೇಳಿದರು.

ವ್ಯಾಪಾರ ಪ್ರತಿಸ್ಪರ್ಧಿಗಳು ಅಸೂಯೆಯಿಂದ ಇದನ್ನು ಮಾಡಿರಬಹುದು ಎಂಬ ಬಗ್ಗೆಯೂ ಸಚಿವರು ಅನುಮಾನ ವ್ಯಕ್ತಪಡಿಸಿದರು. ಇದು ಒಂದು ಕಾರಣ ಇರಬಹುದು, ಈ ಕೋನದಲ್ಲಿಯೂ ಇದನ್ನು ಸಹ ಚರ್ಚಿಸಲಾಗುತ್ತಿದೆ ಎಂದರು.

ರಾಮೇಶ್ವರಂ ಕೆಫೆಯು 11 ಘಟಕಗಳನ್ನು ಹೊಂದಿದೆ ಮತ್ತು ಮಾಲೀಕರು ತಮ್ಮ 12 ನೇ ಘಟಕವನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ. ಇದಕ್ಕಾಗಿ ಮುಂಗಡ ಠೇವಣಿ ಸಹ ಪಾವತಿಸಲಾಗಿದೆ ಎಂದು ಅವರು ಹೇಳಿದರು.

‘ನಾವು ಪ್ರಕರಣವನನ್ನು ಭೇದಿಸುತ್ತೇವೆ; ಇದನ್ನು ಬಿಡುವುದಿಲ್ಲ. ಈ ಪ್ರಕರಣ ಎಷ್ಟೇ ಕಷ್ಟಕರವಾಗಿದ್ದರೂ, ನಮ್ಮ ಇಲಾಖೆ ಅದನ್ನು ಭೇದಿಸುತ್ತದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪೊಲೀಸರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುವ ಹೇಳಿಕೆಗಳ ಮೇಲೆ ಮಾತ್ರ ಜನ ಅವಲಂಬಿತರಾಗಬೇಕು; ಊಹಾಪೋಹಗಳ ಮೇಲೆ ಭರವಸೆ ಇಡಬಾರದು’ ಎಂದು ಸಚಿವರು ಮನವಿ ಮಾಡಿದರು.

ನವೆಂಬರ್ 19, 2022 ರಂದು ಮಂಗಳೂರಿನಲ್ಲಿ ಪ್ರೆಶರ್ ಕುಕ್ಕರ್ ಸ್ಫೋಟಕ್ಕೆ ಸಂಬಂಧಿಸಿದ ಪ್ರಶ್ನೆಗೆ, ಮಂಗಳೂರಿನಲ್ಲಿ ನಡೆದ ಘಟನೆಯಂತೆಯೇ ಸ್ಫೋಟಕಗಳು ಮತ್ತು ಇತರ ಸಲಕರಣೆಗಳ ಜೋಡಣೆ ರಾಮೇಶ್ವರಂ ಕೆಫೆ ಸ್ಫೋಟದಲ್ಲೂ ಇದೆ. ಆದರೆ, ಹೋಲಿಕೆ ಎಂದರೆ ಅದೇ ಗ್ಯಾಂಗ್ ಹಿಂದೆ ಇದೆ ಎಂದು ಅರ್ಥವಲ್ಲ ಎಂದರು.

‘ಬ್ಯಾಟರಿ ಮತ್ತು ಟೈಮರ್ ಅನ್ನು ಬಳಸಿದ ರೀತಿಯು ಹೋಲುತ್ತದೆ. ನಾವು ಅದನ್ನು (ತನಿಖೆ) ಮುಂದಕ್ಕೆ ಕೊಂಡೊಯ್ಯಬೇಕು. ಅದೇ ಸಂಸ್ಥೆ ಮಾಡಿದೆಯೋ ಅಥವಾ ಅದೇ ಜನರು ಮಾಡಿದೆಯೋ ನಮಗೆ ತಿಳಿದಿಲ್ಲ’ ಎಂದು ಸಚಿವರು ಹೇಳಿದರು.

ಬಳಸಲಾದ ಸ್ಫೋಟಕಗಳು ಕಡಿಮೆ ತೀವ್ರತೆಯನ್ನು ಹೊಂದಿರುವುದರಿಂದ ಮತ್ತು ಪಸ್ಪೋಟದ ಪ್ರಮಾಣವು ಕಡಿಮೆ ಇರಬಹುದು. ಸ್ಪೋಟ್ ಪ್ರಮಾಣ ಹೆಚ್ಚಿದ್ದರೆ ತೀವ್ರತೆ ಹೆಚ್ಚಾಗುತ್ತಿತ್ತು’ ಎಂದು ಅವರು ಹೇಳಿದರು.

‘ಬಾಂಬ್ ಲಂಬವಾಗಿ ಅಲ್ಲ, ಅಡ್ಡಲಾಗಿ ಸ್ಫೋಟಗೊಂಡಿದ್ದರೆ ಸಾವುನೋವುಗಳು ಸಂಭವಿಸಬಹುದು. ಸ್ಥಳಕ್ಕೆ ನಾನೂ ಕೂಡ ಭೇಟಿ ನೀಡಿದ್ದೆ; ಅಲ್ಲಿ ಬೋಲ್ಟ್‌ಗಳು ಮತ್ತು ಮೊಳೆಗಳನ್ನು ನೋಡಿದೆ. ಅವೆಲ್ಲವೂ ಮೇಲಕ್ಕೆ ಹೋಗಿವೆ. ಅವೆಲ್ಲಾ ಅಡ್ಡಲಾಗಿ ಹೋಗಿದ್ದರೆ ಅನೇಕ ಜನರಿಗೆ ಗಾಯವಾಗುತ್ತಿತ್ತು. ಇದರಿಂದ ಸಾವು ಸಂಭವಿಸಬಹುದು. ಅದೃಷ್ಟವಶಾತ್ ಮೊಳೆ ಮತ್ತು ಬೋಲ್ಟ್‌ಗಳು ಮೇಲಕ್ಕೆ ಹೋದವು’ ಎಂದು ಪರಮೇಶ್ವರ ವಿವರಿಸಿದರು.

ಶಂಕಿತ ವ್ಯಕ್ತಿಯ ಬಗ್ಗೆ ಮಾತನಾಡಿದ ಸಚಿವರು, ಪೊಲೀಸರು ಸುಮಾರು 40 ರಿಂದ 50 ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ. “ಅವನು ಬಸ್ಸಿನಲ್ಲಿ ಬಂದಿದ್ದಾನೆ ಎಂಬ ಮಾಹಿತಿ ಇದೆ … ಆ ಸಮಯದಲ್ಲಿ ಸುಮಾರು 26 ಬಸ್ಸುಗಳು ಹಾದುಹೋದವು. ನಾವು ಎಲ್ಲಾ 26 ಬಸ್ಸುಗಳನ್ನು ಹಾದು ಪರಿಶಿಲಿಸಿದ್ದೇವೆ. ಆತ ಪ್ರಯಾಣಿಸಿದ ಬಸ್ ಅನ್ನು ನಾವು ಕಂಡುಕೊಂಡಿದ್ದೇವೆ, ಅವನು ಕ್ಯಾಪ್, ಮಾಸ್ಕ್ ಮತ್ತು ಕನ್ನಡಕ ಧರಿಸಿದ್ದಾನೆ; ಅಲ್ಲಿಯೂ ಸ್ಪಷ್ಟತೆ ಸಿಗುತ್ತಿಲ್ಲ’ ಎಂದರು.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಸಮಾಜ ದ್ರೋಹಿಗಳ ಬಗ್ಗೆ ಸಹಾನುಭೂತಿ ಇಲ್ಲದೆ ಕ್ರಮ ಜರುಗಿಸಿ ಎಂದು ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...