Homeಕರ್ನಾಟಕರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

- Advertisement -
- Advertisement -

ವ್ಯಾಪಾರ ಪೈಪೋಟಿ, ಮುಂಬರುವ ಚುನಾವಣೆಗಳು ಮತ್ತು ರಾಜ್ಯದಲ್ಲಿ ಸ್ಥಿರ ಸರ್ಕಾರದ ದೃಷ್ಟಿಯಿಂದ ಬೆಂಗಳೂರಿಗೆ ಬರುತ್ತಿರುವ ಹೂಡಿಕೆದಾರರನ್ನು ಭಯಭೀತಗೊಳಿಸುವುದು ನಗರದ ಉಪಾಹಾರ ಗೃಹ ಸ್ಫೋಟಕ್ಕೆ ಸಂಬಂಧಿಸಿದ ಕೆಲವು ಕೋನಗಳನ್ನು ಭೇದಿಸಲು ಪೊಲೀಸರು ಶ್ರಮಿಸುತ್ತಿದ್ದಾರೆ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.

ಪೂರ್ವ ಬೆಂಗಳೂರಿನ ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದೆ. ತಲೆಗೆ ಟೋಪಿ, ಮುಖವಾಡ ಮತ್ತು ಕನ್ನಡಕವನ್ನು ಧರಿಸಿರುವ ವ್ಯಕ್ತಿ ಪ್ರಕರಣದ ಪ್ರಮುಖ ಶಂಕಿತನಾಗಿದ್ದು, ಆತ ಇನ್ನೂ ಪತ್ತೆಯಾಗಿಲ್ಲ.

ಗೃಹ ಸಚಿವರ ಪ್ರಕಾರ, ಎಂಟು ತಂಡಗಳು ಪ್ರಕರಣವನ್ನು ಭೇದಿಸಲು ಕೆಲಸ ಮಾಡುತ್ತಿವೆ ಮತ್ತು ಅವರ ಜೊತೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ, ರಾಷ್ಟ್ರೀಯ ಭದ್ರತಾ ಗುಂಪು (ಎನ್‌ಎಸ್‌ಜಿ) ಮತ್ತು ಗುಪ್ತಚರ ಬ್ಯೂರೋ (ಐಬಿ) ತಂಡಗಳಿಗೆ ಸಹಾಯ ಮಾಡುತ್ತಿವೆ ಎಂದರು.

ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರನ್ನು ಭಯಭೀತಗೊಳಿಸಬಹುದೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ಪರಮೇಶ್ವರ ಹೇಳಿದರು. ‘ಚುನಾವಣೆಗಳು ಸಮೀಪಿಸುತ್ತಿವೆ, ಯಾವುದೇ ಸಂಘಟನೆಯು ಅದರ ಹಿಂದೆ ಇದ್ದರೆ ಅಥವಾ ಬೆಂಗಳೂರನ್ನು ಅಸುರಕ್ಷಿತವಾಗಿ ಕಾಣುವಂತೆ ಜನರನ್ನು ಭಯಭೀತಗೊಳಿಸುವ ಇತರ ಉದ್ದೇಶಗಳು ಇದರ ಹಿಂದೆ ಇದೆಯೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ’ ಎಂದು ಹೇಳಿದರು.

‘ಸ್ಥಿರ ಸರ್ಕಾರದ ದೃಷ್ಟಿಯಿಂದ ಅನೇಕ ಹೂಡಿಕೆದಾರರು ಇಲ್ಲಿಗೆ ಬರುತ್ತಿದ್ದಾರೆ, ಹೂಡಿಕೆದಾರರು ಬೆಂಗಳೂರಿಗೆ ಬರುವುದನ್ನು ತಡೆಯಲು ಅಥವಾ ಇತರ ಕೆಲವು ಅಪರಿಚಿತ ಕಾರಣಗಳಿಂದ ಇದನ್ನು ಮಾಡಿರಬಹುದು’ ಎಂದು ಪರಮೇಶ್ವರ ಹೇಳಿದರು.

ವ್ಯಾಪಾರ ಪ್ರತಿಸ್ಪರ್ಧಿಗಳು ಅಸೂಯೆಯಿಂದ ಇದನ್ನು ಮಾಡಿರಬಹುದು ಎಂಬ ಬಗ್ಗೆಯೂ ಸಚಿವರು ಅನುಮಾನ ವ್ಯಕ್ತಪಡಿಸಿದರು. ಇದು ಒಂದು ಕಾರಣ ಇರಬಹುದು, ಈ ಕೋನದಲ್ಲಿಯೂ ಇದನ್ನು ಸಹ ಚರ್ಚಿಸಲಾಗುತ್ತಿದೆ ಎಂದರು.

ರಾಮೇಶ್ವರಂ ಕೆಫೆಯು 11 ಘಟಕಗಳನ್ನು ಹೊಂದಿದೆ ಮತ್ತು ಮಾಲೀಕರು ತಮ್ಮ 12 ನೇ ಘಟಕವನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ. ಇದಕ್ಕಾಗಿ ಮುಂಗಡ ಠೇವಣಿ ಸಹ ಪಾವತಿಸಲಾಗಿದೆ ಎಂದು ಅವರು ಹೇಳಿದರು.

‘ನಾವು ಪ್ರಕರಣವನನ್ನು ಭೇದಿಸುತ್ತೇವೆ; ಇದನ್ನು ಬಿಡುವುದಿಲ್ಲ. ಈ ಪ್ರಕರಣ ಎಷ್ಟೇ ಕಷ್ಟಕರವಾಗಿದ್ದರೂ, ನಮ್ಮ ಇಲಾಖೆ ಅದನ್ನು ಭೇದಿಸುತ್ತದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪೊಲೀಸರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುವ ಹೇಳಿಕೆಗಳ ಮೇಲೆ ಮಾತ್ರ ಜನ ಅವಲಂಬಿತರಾಗಬೇಕು; ಊಹಾಪೋಹಗಳ ಮೇಲೆ ಭರವಸೆ ಇಡಬಾರದು’ ಎಂದು ಸಚಿವರು ಮನವಿ ಮಾಡಿದರು.

ನವೆಂಬರ್ 19, 2022 ರಂದು ಮಂಗಳೂರಿನಲ್ಲಿ ಪ್ರೆಶರ್ ಕುಕ್ಕರ್ ಸ್ಫೋಟಕ್ಕೆ ಸಂಬಂಧಿಸಿದ ಪ್ರಶ್ನೆಗೆ, ಮಂಗಳೂರಿನಲ್ಲಿ ನಡೆದ ಘಟನೆಯಂತೆಯೇ ಸ್ಫೋಟಕಗಳು ಮತ್ತು ಇತರ ಸಲಕರಣೆಗಳ ಜೋಡಣೆ ರಾಮೇಶ್ವರಂ ಕೆಫೆ ಸ್ಫೋಟದಲ್ಲೂ ಇದೆ. ಆದರೆ, ಹೋಲಿಕೆ ಎಂದರೆ ಅದೇ ಗ್ಯಾಂಗ್ ಹಿಂದೆ ಇದೆ ಎಂದು ಅರ್ಥವಲ್ಲ ಎಂದರು.

‘ಬ್ಯಾಟರಿ ಮತ್ತು ಟೈಮರ್ ಅನ್ನು ಬಳಸಿದ ರೀತಿಯು ಹೋಲುತ್ತದೆ. ನಾವು ಅದನ್ನು (ತನಿಖೆ) ಮುಂದಕ್ಕೆ ಕೊಂಡೊಯ್ಯಬೇಕು. ಅದೇ ಸಂಸ್ಥೆ ಮಾಡಿದೆಯೋ ಅಥವಾ ಅದೇ ಜನರು ಮಾಡಿದೆಯೋ ನಮಗೆ ತಿಳಿದಿಲ್ಲ’ ಎಂದು ಸಚಿವರು ಹೇಳಿದರು.

ಬಳಸಲಾದ ಸ್ಫೋಟಕಗಳು ಕಡಿಮೆ ತೀವ್ರತೆಯನ್ನು ಹೊಂದಿರುವುದರಿಂದ ಮತ್ತು ಪಸ್ಪೋಟದ ಪ್ರಮಾಣವು ಕಡಿಮೆ ಇರಬಹುದು. ಸ್ಪೋಟ್ ಪ್ರಮಾಣ ಹೆಚ್ಚಿದ್ದರೆ ತೀವ್ರತೆ ಹೆಚ್ಚಾಗುತ್ತಿತ್ತು’ ಎಂದು ಅವರು ಹೇಳಿದರು.

‘ಬಾಂಬ್ ಲಂಬವಾಗಿ ಅಲ್ಲ, ಅಡ್ಡಲಾಗಿ ಸ್ಫೋಟಗೊಂಡಿದ್ದರೆ ಸಾವುನೋವುಗಳು ಸಂಭವಿಸಬಹುದು. ಸ್ಥಳಕ್ಕೆ ನಾನೂ ಕೂಡ ಭೇಟಿ ನೀಡಿದ್ದೆ; ಅಲ್ಲಿ ಬೋಲ್ಟ್‌ಗಳು ಮತ್ತು ಮೊಳೆಗಳನ್ನು ನೋಡಿದೆ. ಅವೆಲ್ಲವೂ ಮೇಲಕ್ಕೆ ಹೋಗಿವೆ. ಅವೆಲ್ಲಾ ಅಡ್ಡಲಾಗಿ ಹೋಗಿದ್ದರೆ ಅನೇಕ ಜನರಿಗೆ ಗಾಯವಾಗುತ್ತಿತ್ತು. ಇದರಿಂದ ಸಾವು ಸಂಭವಿಸಬಹುದು. ಅದೃಷ್ಟವಶಾತ್ ಮೊಳೆ ಮತ್ತು ಬೋಲ್ಟ್‌ಗಳು ಮೇಲಕ್ಕೆ ಹೋದವು’ ಎಂದು ಪರಮೇಶ್ವರ ವಿವರಿಸಿದರು.

ಶಂಕಿತ ವ್ಯಕ್ತಿಯ ಬಗ್ಗೆ ಮಾತನಾಡಿದ ಸಚಿವರು, ಪೊಲೀಸರು ಸುಮಾರು 40 ರಿಂದ 50 ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ. “ಅವನು ಬಸ್ಸಿನಲ್ಲಿ ಬಂದಿದ್ದಾನೆ ಎಂಬ ಮಾಹಿತಿ ಇದೆ … ಆ ಸಮಯದಲ್ಲಿ ಸುಮಾರು 26 ಬಸ್ಸುಗಳು ಹಾದುಹೋದವು. ನಾವು ಎಲ್ಲಾ 26 ಬಸ್ಸುಗಳನ್ನು ಹಾದು ಪರಿಶಿಲಿಸಿದ್ದೇವೆ. ಆತ ಪ್ರಯಾಣಿಸಿದ ಬಸ್ ಅನ್ನು ನಾವು ಕಂಡುಕೊಂಡಿದ್ದೇವೆ, ಅವನು ಕ್ಯಾಪ್, ಮಾಸ್ಕ್ ಮತ್ತು ಕನ್ನಡಕ ಧರಿಸಿದ್ದಾನೆ; ಅಲ್ಲಿಯೂ ಸ್ಪಷ್ಟತೆ ಸಿಗುತ್ತಿಲ್ಲ’ ಎಂದರು.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಸಮಾಜ ದ್ರೋಹಿಗಳ ಬಗ್ಗೆ ಸಹಾನುಭೂತಿ ಇಲ್ಲದೆ ಕ್ರಮ ಜರುಗಿಸಿ ಎಂದು ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...