Homeಕರ್ನಾಟಕಮತ್ತೊಬ್ಬರನ್ನು ಕನಿಷ್ಠ ಎನ್ನುವವರು ಮನುಷ್ಯರೇ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮತ್ತೊಬ್ಬರನ್ನು ಕನಿಷ್ಠ ಎನ್ನುವವರು ಮನುಷ್ಯರೇ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದ ಅವರು, ‘ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು. ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು’ ಎಂದರು.

‘ಸಮಾಜದಲ್ಲಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ದೀವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು. ಚತುರ್ವರ್ಣ ವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡಿ ಮನುಕುಲ ನೋಡಿದೆ’ ಎಂದರು.

‘ನಾವು ಅಂಬೇಡ್ಕರ್, ಬುದ್ಧ, ಬಸವ, ಕುವೆಂಪು ಮುಂತಾದವರ ವಿಚಾರಗಳನ್ನು ಹೆಚ್ಚೆಚ್ಚು ಪಾಲಿಸುತ್ತಾ ತಾರತಮ್ಯದ ಸಮಾಜವನ್ನು ಹೋಗಲಾಡಿಸಬೇಕು. ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು, ಶೂದ್ರರಿಗೆ ಶಿಕ್ಷಣ ಸಿಕ್ಕಿದ್ದು ಇವರೆಲ್ಲಾ ಮಹನೀಯರ ಹೋರಾಟದಿಂದ’ ಎಂದು ಹೇಳಿದರು.

‘ಈ ಚರಿತ್ರೆಯನ್ನು ನೆನಪಿಸುವುದಕ್ಕೇ ನಾನು ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಅವರ ಹೆಸರು ಇಟ್ಟಿದ್ದು. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಕೂಡ ಬಸವೇಶ್ವರರ ಕಾಯಕ ದಾಸೋಹ ತತ್ವದ ಮೇಲೆ ರಚನೆಯಾದದ್ದು. ನಾವು ಯಾವತ್ತೂ ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ. ರಾಮನನ್ನು ಒಂಟಿ ಮಾಡುವುದಲ್ಲ. ಸಕುಂಟುಂಬ ಸಮೇತನಾದ ಸೀತಾರಾಮ ನಮ್ಮವ’ ಎಂದು ಬಿಜೆಪಿಗೆ ತಿರುಗೇಟು ಕೊಟ್ಟರು.

‘ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು. ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಸರ್ವೋದಯ, ಸರ್ವಧರ್ಮ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಈ ದಿಕ್ಕಿನಲ್ಲೇ ನಮ್ಮ ಸರ್ಕಾರ ಮುನ್ನಡೆಯಲಿದೆ; ಕೊಪ್ಪಳ ನನ್ನದೇ ಕ್ಷೇತ್ರ. ಈ ಜಿಲ್ಲೆಯ ಜನರ ಪ್ರೀತಿಗೆ ನಾನು ಸದಾ ಋಣಿ’ ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...