Homeಕರ್ನಾಟಕಮತ್ತೊಬ್ಬರನ್ನು ಕನಿಷ್ಠ ಎನ್ನುವವರು ಮನುಷ್ಯರೇ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮತ್ತೊಬ್ಬರನ್ನು ಕನಿಷ್ಠ ಎನ್ನುವವರು ಮನುಷ್ಯರೇ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದ ಅವರು, ‘ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು. ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು’ ಎಂದರು.

‘ಸಮಾಜದಲ್ಲಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ದೀವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು. ಚತುರ್ವರ್ಣ ವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡಿ ಮನುಕುಲ ನೋಡಿದೆ’ ಎಂದರು.

‘ನಾವು ಅಂಬೇಡ್ಕರ್, ಬುದ್ಧ, ಬಸವ, ಕುವೆಂಪು ಮುಂತಾದವರ ವಿಚಾರಗಳನ್ನು ಹೆಚ್ಚೆಚ್ಚು ಪಾಲಿಸುತ್ತಾ ತಾರತಮ್ಯದ ಸಮಾಜವನ್ನು ಹೋಗಲಾಡಿಸಬೇಕು. ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು, ಶೂದ್ರರಿಗೆ ಶಿಕ್ಷಣ ಸಿಕ್ಕಿದ್ದು ಇವರೆಲ್ಲಾ ಮಹನೀಯರ ಹೋರಾಟದಿಂದ’ ಎಂದು ಹೇಳಿದರು.

‘ಈ ಚರಿತ್ರೆಯನ್ನು ನೆನಪಿಸುವುದಕ್ಕೇ ನಾನು ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಅವರ ಹೆಸರು ಇಟ್ಟಿದ್ದು. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಕೂಡ ಬಸವೇಶ್ವರರ ಕಾಯಕ ದಾಸೋಹ ತತ್ವದ ಮೇಲೆ ರಚನೆಯಾದದ್ದು. ನಾವು ಯಾವತ್ತೂ ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ. ರಾಮನನ್ನು ಒಂಟಿ ಮಾಡುವುದಲ್ಲ. ಸಕುಂಟುಂಬ ಸಮೇತನಾದ ಸೀತಾರಾಮ ನಮ್ಮವ’ ಎಂದು ಬಿಜೆಪಿಗೆ ತಿರುಗೇಟು ಕೊಟ್ಟರು.

‘ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು. ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಸರ್ವೋದಯ, ಸರ್ವಧರ್ಮ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಈ ದಿಕ್ಕಿನಲ್ಲೇ ನಮ್ಮ ಸರ್ಕಾರ ಮುನ್ನಡೆಯಲಿದೆ; ಕೊಪ್ಪಳ ನನ್ನದೇ ಕ್ಷೇತ್ರ. ಈ ಜಿಲ್ಲೆಯ ಜನರ ಪ್ರೀತಿಗೆ ನಾನು ಸದಾ ಋಣಿ’ ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...