Homeಮುಖಪುಟಬಿಜೆಪಿ ಸುಳ್ಳಿನ ಕಾರ್ಖಾನೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ: ತೇಜಸ್ವಿ ಯಾದವ್

ಬಿಜೆಪಿ ಸುಳ್ಳಿನ ಕಾರ್ಖಾನೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ: ತೇಜಸ್ವಿ ಯಾದವ್

- Advertisement -
- Advertisement -

ಬಿಜೆಪಿಯನ್ನು ‘ಸುಳ್ಳಿನ ಕಾರ್ಖಾನೆ’ ಎಂದು ವಾಗ್ದಾಳಿ ನಡೆಸಿದ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ನಮ್ಮ ಆರ್‌ಜೆಡಿ ಪಕ್ಷವು ‘ಹಕ್ಕುಗಳು, ಉದ್ಯೋಗಗಳು ಮತ್ತು ಅಭಿವೃದ್ಧಿ’ಗಾಗಿ ನಿಂತಿದೆ ಎಂದು ಭಾನುವಾರ ಪ್ರತಿಪಾದಿಸಿದ್ದಾರೆ.

ಪಾಟ್ನಾದ ಗಾಂಧಿ ಮೈದಾನದಲ್ಲಿ ‘ಜನ್ ವಿಶ್ವಾಸ್ ಮಹಾ ರ‍್ಯಾಲಿ’ಯನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ, ‘ಬಿಜೆಪಿ ಸುಳ್ಳಿನ ಕಾರ್ಖಾನೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ… ಆದರೆ, ಆರ್‌ಜೆಡಿ ‘ಹಕ್ಕುಗಳು, ಉದ್ಯೋಗಗಳು ಮತ್ತು ಅಭಿವೃದ್ಧಿ’ಗಾಗಿ ಹೋರಾಡುತ್ತಿದೆ. ಬಿಜೆಪಿ ನಾಯಕರು ಸುಳ್ಳು ಭರವಸೆಗಳನ್ನು ನೀಡುತ್ತಾರೆ (ಜುಮ್ಲಾ ಕರ್ತೇ ಹೈನ್)… ಆದರೆ, ನಾವು ಬಿಹಾರ ಮತ್ತು ದೇಶದ ಜನರ ಹಕ್ಕುಗಳು, ಉದ್ಯೋಗಗಳಿಗಾಗಿ ಹೋರಾಡುತ್ತೇವೆ’ ಎಂದು ಅವರು ಹೇಳಿದರು.

ಆರ್‌ಜೆಡಿ ಎಂದರೆ ಎಂ-ವೈ (ಮುಸ್ಲಿಂ ಮತ್ತು ಯಾದವ್) ಪಕ್ಷ ಎಂದು ಕೆಲವರು ಪ್ರತಿಪಾದಿಸಿದ್ದಾರೆ. ಆದರೆ ನಮ್ಮದು ವಾಸ್ತವವಾಗಿ ಎಂ-ವೈ ಮತ್ತು ಬಿಎಎಪಿಯ ಪಕ್ಷವಾಗಿದೆ. ಅಲ್ಲಿ ‘ಬಿ’ ಎಂದರೆ ಬಹುಜನ, ‘ಎ’ ಎಂದರೆ ‘ಅಗ್ಡಾ’ (ಮೇಲ್ಜಾತಿ) ‘ಆದಿ ಆಬಾದಿ’ (ಮಹಿಳೆಯರಿಗೆ) ಮತ್ತು ಬಡವರಿಗೆ ‘ಪಿ’ ಎಂದರು.

ಬಿಹಾರದಲ್ಲಿ ಆರ್‌ಜೆಡಿ ನೇತೃತ್ವದ ಮಹಾಮೈತ್ರಿಕೂಟ ತೊರೆದು ಎನ್‌ಡಿಎಗೆ ಮರಳಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ ಮಹಾಘಟಬಂಧನ್ ಸರ್ಕಾರ ಏನು ಮಾಡಿದೆ? ನಿತೀಶ್ ಅವರು ಕಳೆದ 17 ವರ್ಷಗಳಲ್ಲಿ ಬಿಜೆಪಿ ಜೊತೆಗೆ ಏನನ್ನೂ ಮಾಡಲಾಗಲಿಲ್ಲ’ ಎಂದರು.

ಹಿಂದಿ ಚಲನಚಿತ್ರ ಗೀತೆ ‘ಇಧರ್ ಚಲಾ ಮೈನ್ ಉಧರ್ ಚಲಾ’ ಹಾಡನ್ನು ಉಲ್ಲೇಖಿಸಿದರು ಯಾದವ್, ‘ನಿತೀಶ್ ಚಾಚಾ (ಚಿಕ್ಕಪ್ಪ) ಈ ರೀತಿ ಮಾಡುತ್ತಾರೆ ಮತ್ತು ಆಗಾಗ್ಗೆ ಗುಂಪು ಬದಲಾಯಿಸುತ್ತಾರೆ’ ಎಂದು ಹೇಳಿದರು.

ನಿತೀಶ್ ಕುಮಾರ್ ಸಂಪುಟದಲ್ಲಿರುವ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಸದ್ಯ ಬಿಹಾರದಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳಿದ್ದು, ಒಬ್ಬರದ್ದು ಕೊಳಕಾದ ಬಾಯಿ ಮತ್ತೊಂದು ಜೋರು ಬಾಯಿ. ಉಪ ಮುಖ್ಯಮಂತ್ರಿ ಅವರು ಕಳೆದ 14 ವರ್ಷಗಳಲ್ಲಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ, ಅವರು ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದು ಆರ್‌ಜೆಡಿ ಟಿಕೆಟ್‌ನಲ್ಲಿ’ ಎಂದು ಸಾಮ್ರಾಟ್ ಚೌಧರಿ ಅವರನ್ನು ಉಲ್ಲೇಖಿಸಿ ಕಿಡಿಕಾರಿದರು.

ಬಿಜೆಪಿ ನೇತೃತ್ವದ ಎನ್‌ಡಿಎ ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ಅವರು, ‘ಮಹಾಮೈತ್ರಿಕೂಟಕ್ಕೆ ಯಾವುದೇ ವ್ಯತ್ಯಾಸವಾಗುವುದಿಲ್ಲ, ಚುನಾವಣೆಯಲ್ಲಿ ಜನರು ಅವರ ಭವಿಷ್ಯವನ್ನು ನಿರ್ಧರಿಸುತ್ತಾರೆ. ಆರ್‌ಜೆಡಿಯ ಐವರು ಶಾಸಕರು ಇತ್ತೀಚೆಗೆ ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ’ ಎಂದರು.

ರ‍್ಯಾಲಿಗಾಗಿ ರಾಜ್ಯ ರಾಜಧಾನಿಯಾದ್ಯಂತ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಹಾಕಲಾಯಿತು. ಆರ್‌ಜೆಡಿ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬೆಳಿಗ್ಗೆ ತುಂತುರು ಮಳೆಯ ನಡುವೆಯೂ ಕಾರ್ಯಕರ್ತರು ಮತ್ತು ವಿರೋಧ ಪಕ್ಷದ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ರ‍್ಯಾಲಿಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ; ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿಗರು ಒಮ್ಮೆ ಕನ್ನಡಿ ನೋಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...