Homeಮುಖಪುಟ8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; 'ನನ್ನ ಮಗ ಎಲ್ಲಿದ್ದಾನೆ..?' ಎಂದು ಕಣ್ಣೀರಿಡುತ್ತಿರುವ ಹೆತ್ತವರು

8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

- Advertisement -
- Advertisement -

ಕರ್ತವ್ಯನಿರತರಾಗಿದ್ದಾಗಲೇ ನಿಗೂಢವಾಗಿ ನಾಪತ್ತೆಯಾಗಿರುವ ಭಾರತೀಯ ನೌಕಾಪಡೆ ಯೋಧ ಸಾಹಿಲ್ ವರ್ಮಾ ಕಣ್ಮರೆಯಾಗಿ ಎಂಟು ದಿನಗಳು ಕಳೆಯುತ್ತಿದ್ದು, ಹಲವಾರು ಹಡಗುಗಳು ಮತ್ತು ವಿಮಾನಗಳನ್ನು ಒಳಗೊಂಡ ಬೃಹತ್ ನೌಕಾಪಡೆಯ ಕಾರ್ಯಚರಣೆ ನಡೆಸಿದರೂ ಈವರೆಗೆ ಪತ್ತೆಯಾಗಿಲ್ಲ. ಇಲಾಖೆಯ ಉತ್ತರಗಳಿಂದ ಹತಾಶರಾಗಿರುವವರ್ಮಾ ಅವರ ಪೋಷಕರು, ‘ನನ್ನ ಮಗ ಎಲ್ಲಿದ್ದಾನೆ?’ ಎಂದು ದುಃಖದಿಂದ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತೀಯ ನೌಕಾಪಡೆಯಿಂದ ಸಮುದ್ರ ನೌಕೆಯಲ್ಲಿ ನಿಯೋಜನೆಗೊಂಡಿದ್ದ ಸಾಹಿಲ್ ವರ್ಮಾ ಎಂಬ ಯೋಧ ಫೆಬ್ರವರಿ 27ರಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎನ್ನಲಾಗಿದೆ.

ವರ್ಮಾ ಅವರ ಪೋಷಕರಾಧ ಸುಬಾಷ್ ಚಂದರ್ ಮತ್ತು ರಾಮ ಕುಮಾರಿ, ಜಮ್ಮುವಿನ ಘೌ ಮನ್ಹಾಸನ್ ಪ್ರದೇಶದಲ್ಲಿ ನೆಲೆಸಿದ್ದಾರೆ. ತಮ್ಮ ಮಗನ ನಿಗೂಢ ನಾಪತ್ತೆ ಪ್ರಕರಣದ ಬಗ್ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಒತ್ತಾಯಿದ್ದಾರೆ. ಕಾಣೆಯಾಗಿರುವ ತಮ್ಮ ಮಗನನ್ನು ಸುರಕ್ಷಿತವಾಗಿ ಹಿಂದಿರುಗಿಸಲು ಕುಟುಂಬವು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಭಾರತ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಂದ ತುರ್ತು ಮಧ್ಯಸ್ಥಿಕೆಯನ್ನು ಕೋರಿದ್ದಾರೆ.

ಕಣ್ಮರೆಯಾಗಿರುವ ಯೋಧ ಸಾಹಿಲ್ ವರ್ಮಾ ಪೋಷಕರು

ನೌಕಾಪಡೆಯ ಹಡಗಿನಿಂದ ಸೈನಿಕನು ಯಾವುದೇ ಕುರುಹು ಇಲ್ಲದೆ ಕಣ್ಮರೆಯಾಗಬಹುದೆ ಎಂದು ಚಂದರ್ ಆಶ್ಚರ್ಯ ವ್ಯಕ್ತಪಡಿಸಿದರು. ‘ಯೋಧನೊಬ್ಬ ತನ್ನ ನೌಕಾ ಹಡಗಿನಿಂದ ನಾಪತ್ತೆಯಾಗಿದ್ದು, ಪತ್ತೆಯಾಗದಿರುವುದು ಆಶ್ಚರ್ಯಕರವಾಗಿದೆ. ಹಡಗಿನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸಮುದ್ರಕ್ಕೆ ಬಿದ್ದವರು ಯಾರೂ ಕಂಡುಬಂದಿಲ್ಲ ಎಂದು ನನಗೆ ತಿಳಿಸಲಾಗಿದೆ. ಹಾಗಾದರೆ ನನ್ನ ಮಗ ಎಲ್ಲಿದ್ದಾನೆ?’ ಚಂದರ್ ಅವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮಗ ನಾಪತ್ತೆಯಾದ ಎಂಟು ದಿನಗಳವರೆಗೆ ಘಟನೆಯ ಬಗ್ಗೆ ಕತ್ತಲಲ್ಲಿಯೇ ಉಳಿದಿರುವ ಕುಟುಂಬವು ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ. ‘ನಮ್ಮ ಮಗ ಹಡಗಿನಲ್ಲಿ ಎರಡು ದಿನಗಳ ಮೊದಲು ನಾಪತ್ತೆಯಾಗಿದ್ದಾರೆ ಎಂದು ನಮಗೆ ಫೆಬ್ರವರಿ 29 ರಂದು ಕರೆ ಬಂದಿತು… ನಾವು ಭಾನುವಾರ (ಫೆಬ್ರವರಿ 25) ಕೊನೆಯದಾಗಿ ಅವರೊಂದಿಗೆ ಮಾತನಾಡಿದ್ದೇವೆ ಮತ್ತು ಅವನಿಗೆ ಏನಾಯಿತು (ಬಗ್ಗೆ) ಏನೂ ತಿಳಿದಿಲ್ಲ’ ಎಂದು ಚಂದರ್ ಹೇಳಿದರು.

ವರ್ಮಾ ಅವರ ಪತ್ತೆಗೆ ಉನ್ನತ ಮಟ್ಟದ ತನಿಖಾ ಮಂಡಳಿಯನ್ನು ಆರಂಭಿಸಲಾಗಿದೆ ಎಂದು ಮುಂಬೈ ಪ್ರಧಾನ ಕಚೇರಿಯ ಪಶ್ಚಿಮ ನೌಕಾ ಕಮಾಂಡ್ ತಿಳಿಸಿದೆ. ‘ದುರಾದೃಷ್ಟಕರ ಘಟನೆಯಲ್ಲಿ, ಫೆಬ್ರವರಿ 27, 2024 ರಿಂದ ನಿಯೋಜನೆಯಲ್ಲಿರುವ ಭಾರತೀಯ ನೌಕಾ ನೌಕೆಯಿಂದ (ಎ) ಸೀಮನ್ II, ಸಾಹಿಲ್ ವರ್ಮಾ ಸಮುದ್ರದಲ್ಲಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನೌಕಾಪಡೆಯು ತಕ್ಷಣವೇ ಹಡಗುಗಳು ಮತ್ತು ವಿಮಾನಗಳೊಂದಿಗೆ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಹುಡುಕಾಟ ಇನ್ನೂ ಚಾಲ್ತಿಯಲ್ಲಿದೆ’ ಇದೆ ಎಂದು ಶನಿವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದೆ.

‘ಮಾಹಿತಿಯನ್ನು ಮರೆಮಾಚಲಾಗುತ್ತಿದೆ’ ಎಂದು ವರ್ಮಾ ಅವರ ತಾಯಿ ರಮಾ ಕುಮಾರಿ ಅವರು ಆರೋಪಿಸಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ.

‘ಹಡಗಿನಲ್ಲಿ 400 ಜನರಿದ್ದರು ಮತ್ತು ನನ್ನ ಮಗ ಮಾತ್ರ ನಾಪತ್ತೆಯಾಗಿದ್ದಾನೆ. ನನ್ನ ಪ್ರಾರ್ಥನೆ ಮತ್ತು ಬೇಡಿಕೆಗಳು ನನ್ನ ಮಗ ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿ ಹಿಂದಿರುಗಲಿ’ ಎಂದು ಅವರು ಹೇಳಿದರು.

ನಾಪತ್ತೆಯಾದ ಸೀಮನ್‌ನ ತಾಯಿಯ ಚಿಕ್ಕಪ್ಪ ಗೌತಮ್, ಹಡಗು ಮತ್ತೆ ನೌಕಾಯಾನ ಮಾಡುವ ಮೊದಲು ಒಂದು ದಿನ ಬೇಸ್‌ಗೆ ಮರಳಿದೆ ಎಂದು ಹೇಳಿದ್ದಾರೆ. ‘ಮತ್ತೆ ಹೊರಡುವ ಮೊದಲು ಹಡಗು ಒಂದು ದಿನ ಬೇಸ್‌ಗೆ ಮರಳಿದೆ ಎಂದು ನಾವು ಕೇಳಿದ್ದೇವೆ. ಅವನು ಹಡಗಿನಿಂದ ನಾಪತ್ತೆಯಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

‘ಘಟನೆ ನಡೆದ 24 ಗಂಟೆಯೊಳಗೆ ಕುಟುಂಬದವರಿಗೆ ಮಾಹಿತಿ ನೀಡಿ, ತನಿಖಾ ಮಂಡಳಿಗೆ ಆದೇಶ ನೀಡಬೇಕಿತ್ತು. ಆದರೆ ಈ ಎರಡೂ ಘಟನೆಗಳು ಎರಡು ದಿನಗಳ ನಂತರ ಸಂಭವಿಸಿದವು’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಇಎನ್‌ಟಿ ಕ್ಲಿನಿಕ್ ಕೂಡ ನನ್ನ ವಾಪಸಾತಿಗಾಗಿ ಕಾಯುತ್ತಿದೆ..’ ರಾಜಕೀಯ ನಿವೃತ್ತಿ ಘೋಷಿಸಿ ಡಾ. ಹರ್ಷವರ್ಧನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...