Homeಮುಖಪುಟಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

ಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

- Advertisement -
- Advertisement -

ಬಿಜೆಪಿ 2024ರ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಗೂಗಲ್ ಸರ್ಚ್ ಮತ್ತು ಯೂಟ್ಯೂಬ್ ಸೇರಿದಂತೆ ಗೂಗಲ್‌ನ ಡಿಸ್‌ಪ್ಲೇ ನೆಟ್‌ವರ್ಕ್ ಮತ್ತು ಆಲ್ಫಾಬೆಟ್ ಪ್ಲಾಟ್‌ಫಾರ್ಮ್‌ಗಳಿಗೆ ಸಾವಿರಾರು ರಾಜಕೀಯ ಜಾಹೀರಾತುಗಳಿಗೆ 30 ದಿನಗಳಲ್ಲಿ 30 ಕೋಟಿ ರೂ. ವೆಚ್ಚವನ್ನು ಮಾಡಿದೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ.

2019ರ ಚುನಾವಣೆಯ ವೇಳೆ ಫೆಬ್ರವರಿಯಿಂದ- ಮೇವರೆಗೆ ನಾಲ್ಕು ತಿಂಗಳುಗಳ ನಡುವೆ ಜಾಹೀರಾತಿಗಾಗಿ ಮಾಡಿದ ವೆಚ್ಚಕ್ಕಿಂತ ಇದು ದುಪ್ಪಟ್ಟಾಗಿದೆ. 2019ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ನಾಲ್ಕು ತಿಂಗಳ ಅವಧಿಯಲ್ಲಿ ಪಕ್ಷವು ಕೇವಲ 12.3 ಕೋಟಿ ರೂ.ವೆಚ್ಚವನ್ನು ಮಾಡಿತ್ತು. ಅದೇ ಅವಧಿಯಲ್ಲಿ ಪ್ರಮುಖ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ವೆಚ್ಚ 2.99 ಕೋಟಿ ರೂ.ಆಗಿತ್ತು. ಫೆಬ್ರವರಿ 2024ರಲ್ಲಿ ಕಾಂಗ್ರೆಸ್‌ ಪಕ್ಷವು Google ಜಾಹೀರಾತುಗಳ ಮೂಲಕ ಯಾವುದೇ ಸಂದೇಶವನ್ನುಪ್ರಚಾರ ಮಾಡಿಲ್ಲ ಎನ್ನುವುದು ತಿಳಿಯುತ್ತದೆ.

30 ದಿನಗಳಲ್ಲಿ ಅಂದರೆ ಜನವರಿ 29ರಿಂದ ಫೆಬ್ರವರಿ 28ರ ನಡುವೆ ಜಾಹೀರಾತಿಗಾಗಿ ಬಿಜೆಪಿ 29.7 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಗೂಗಲ್ ಜಾಹೀರಾತುಗಳ ಕುರಿತ ಡೇಟಾ ತೋರಿಸುತ್ತದೆ. ಗೂಗಲ್‌ 12,600ಕ್ಕೂ ಹೆಚ್ಚು ಜಾಹೀರಾತುಗಳನ್ನು ಸ್ಟ್ರೀಮ್ ಮಾಡಿದೆ. ಹೆಚ್ಚಾಗಿ ವೀಡಿಯೊಗಳನ್ನು ಅಂದರೆ 75%ದಷ್ಟು ವಿಡಿಯೋ ಜಾಹೀರಾತುಗಳನ್ನು ಪ್ರಸಾರ ಮಾಡಿದೆ. ಇದು ಬಹು ಭಾರತೀಯ ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರವನ್ನು ಮಾಡುತ್ತದೆ. ಇವುಗಳಲ್ಲಿ ಹೆಚ್ಚಿನವು ವೀಡಿಯೊ ಜಾಹೀರಾತುಗಳಾಗಿದ್ದು, 50%ಕ್ಕಿಂತ ಹೆಚ್ಚು ಜಾಹೀರಾತುಗಳನ್ನು ಪ್ಲಾಟ್‌ಫಾರ್ಮ್ ನೀತಿಯ ಉಲ್ಲಂಘನೆಗಾಗಿ Googleನಿಂದ ತೆಗೆದುಹಾಕಲಾಗಿದೆ.

30 ದಿನಗಳಲ್ಲಿ ಸುಮಾರು 30 ಕೋಟಿ ರೂಪಾಯಿಗಳ ವೆಚ್ಚವು ಭಾರತದಲ್ಲಿ ಆನ್‌ಲೈನ್ ರಾಜಕೀಯ ಜಾಹೀರಾತುಗಳ ಹೆಚ್ಚಳದ ಗಮನಾರ್ಹ ಸೂಚಕವಾಗಿದೆ. 2019 ರಿಂದ 52,000ಕ್ಕೂ ಹೆಚ್ಚು ಜಾಹೀರಾತುಗಳ ಮೂಲಕ ತನ್ನ ಸಂದೇಶಗಳನ್ನು ಹರಡಲು ಬಿಜೆಪಿ ಇದುವರೆಗೆ 79.16 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದೆ, ಇತ್ತೀಚಿನ ಬ್ಯುಸಿನೆಸ್ ಲೈನ್ ವರದಿಯು ಫೆಬ್ರವರಿ 2019 ಮತ್ತು ಫೆಬ್ರವರಿ 2023ರ ನಡುವೆ ಫೇಸ್‌ಬುಕ್ ಜಾಹೀರಾತುಗಳಿಗಾಗಿ ಬಿಜೆಪಿ 33 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ತಿಳಿಸುತ್ತದೆ.

ಕಳೆದ ತಿಂಗಳಲ್ಲಿ ಹೆಚ್ಚಿನ Google ಜಾಹೀರಾತುಗಳು ಬಿಜೆಪಿ ಅಥವಾ ಅದರ ಮೈತ್ರಿ ಪಾಲುದಾರ ಆಡಳಿತವಿರುವ ಉತ್ತರ ಭಾರತದ ರಾಜ್ಯಗಳ ಮತದಾರರನ್ನು ಗುರಿಯಾಗಿಸಿಕೊಂಡಿವೆ. ಕಳೆದ 30 ದಿನಗಳಲ್ಲಿ ಒಂದು ಕೋಟಿ ವೀಕ್ಷಣೆಯ ಒಂದು ವಿಡಿಯೋಗೆ 30 ಲಕ್ಷಕ್ಕೂ ಅಧಿಕ ವ್ಯಯಿಸಲಾಗಿದೆ. ಬಿಜೆಪಿ 10 ಲಕ್ಷದಿಂದ 30 ಲಕ್ಷದವರೆಗೆ 50 ವೀಡಿಯೋಗಳಿಗೆ ವ್ಯಯಿಸಿದೆ, 100 ವೀಡಿಯೋಗಳಿಗೆ 5 ಲಕ್ಷದಿಂದ 10 ಲಕ್ಷದವರೆಗೆ, 124 ವೀಡಿಯೊಗಳಿಗೆ 2.5 ಲಕ್ಷದಿಂದ 5 ಲಕ್ಷದವರೆಗೆ ಮತ್ತು 109 ವಿಡಿಯೋಗಳಿಗೆ 1 ಲಕ್ಷದಿಂದ 2.5 ಲಕ್ಷದವರೆಗೆ ವ್ಯಯಿಸಲಾಗಿದೆ ಎಂದು ವರದಿ ತಿಳಿಸಿದೆ.

2019ರಿಂದ ಕಳೆದ ಐದು ವರ್ಷಗಳ ದತ್ತಾಂಶವು, ಗೂಗಲ್ ಜಾಹೀರಾತುಗಳಿಗಾಗಿ ಬಿಜೆಪಿ ಹೆಚ್ಚು ಹಣವನ್ನು ಖರ್ಚು ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ  8.9 ಕೋಟಿ ವ್ಯಯಿಸಿ ಅಗ್ರಸ್ಥಾನದಲ್ಲಿದೆ ಎನ್ನುವುದನ್ನು ತೋರಿಸುತ್ತದೆ. ಕರ್ನಾಟಕದ ನಂತರ ಉತ್ತರಪ್ರದೇಶ 7.76 ಕೋಟಿ ರೂ. ವ್ಯಯಿಸಿದೆ, ದೆಹಲಿ 6.84 ಕೋಟಿ ವ್ಯಯಿಸಿದೆ, ಗುಜರಾತ್ 6.1 ಕೋಟಿ ರೂ. ವ್ಯಯಿಸಿದೆ, ಮಧ್ಯಪ್ರದೇಶ 5.9 ಕೋಟಿ ರೂ. ವ್ಯಯಿಸಿದೆ, ಬಿಹಾರ  4.38 ಕೋಟಿ ರೂ.ವ್ಯಯಿಸಿದೆ, ಪಶ್ಚಿಮ ಬಂಗಾಳ 3.46 ಕೋಟಿ ರೂ.ವ್ಯಯಿಸಿದೆ, ತೆಲಂಗಾಣ 3.18 ಕೋಟಿ ರೂ ವ್ಯಯಿಸಿದೆ, ಮಹಾರಾಷ್ಟ್ರ 3 ಕೋಟಿ ಮತ್ತು ಹರಿಯಾಣ 2.6 ಕೋಟಿ ರೂ.ವ್ಯಯಿಸಿದೆ ಎಂದು ವರದಿ ತಿಳಿಸಿದೆ.

50% ಕ್ಕಿಂತ ಹೆಚ್ಚು ಬಿಜೆಪಿ ವೀಡಿಯೊ ಜಾಹೀರಾತುಗಳನ್ನು ತೆಗೆದು ಹಾಕಿದ ಗೂಗಲ್‌

Googleನ ಜಾಹೀರಾತು ನೀತಿ ಉಲ್ಲಂಘನೆಗಾಗಿ ಬಿಜೆಪಿಯ 50%ಕ್ಕಿಂತ ಹೆಚ್ಚು ವೀಡಿಯೊಗಳನ್ನು Googleನಿಂದ ತೆಗೆದು ಹಾಕಲಾಗಿದೆ. Google ಜಾಹೀರಾತುದಾರರಿಗೆ ಮೂರು ಮುಖ್ಯ ಫ್ಲ್ಯಾಟ್‌ ಫಾರ್ಮ್‌ ನೀಡುತ್ತದೆ. Google ಹುಡುಕಾಟ, ವೆಬ್‌ಸೈಟ್‌ಗಳು ಮತ್ತು ಅಪ್ಲಿಕೇಶನ್‌ಗಳು ಮತ್ತು YouTube ಮೂಲಕ ಜಾಹೀರಾತು ಪ್ರಚಾರ ಮಾಡುತ್ತದೆ. ಅವುಗಳನ್ನು ವಯಸ್ಸು, ಲಿಂಗ ಮತ್ತು ಪೋಸ್ಟಲ್ ಕೋಡ್ ಸೇರಿ ನಿಯಮಗಳಂತೆ ಪ್ರೇಕ್ಷಕರನ್ನು ಸೀಮಿತಗೊಳಿಸುತ್ತದೆ. ಬಿಜೆಪಿಯ ವೀಡಿಯೊಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಏಕೆಂದರೆ Google ಕಾರಣವನ್ನು ಬಹಿರಂಗಪಡಿಸುವುದಿಲ್ಲ ಮತ್ತು ಕೇವಲ ‘ನೀತಿ ಉಲ್ಲಂಘನೆಗಾಗಿ’ ಅವುಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳುತ್ತದೆ. ಅಳಿಸಿದ ವೀಡಿಯೊಗಳನ್ನು ವೀಕ್ಷಿಸಲು ಇದು ಬಳಕೆದಾರರಿಗೆ ಅನುಮತಿಸುವುದಿಲ್ಲ.

ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿರುವ ಸೂಚನೆಗಳ ಪ್ರಕಾರ, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳು ಸೇರಿದಂತೆ ಅಂತರ್ಜಾಲದಲ್ಲಿ ಪೋಸ್ಟ್ ಮಾಡಲಾದ ವಿಷಯಕ್ಕೆ ಮಾದರಿ ನೀತಿ ಸಂಹಿತೆ ಮತ್ತು ಸಂಬಂಧಿತ ಸೂಚನೆಗಳು ಅನ್ವಯಿಸುತ್ತವೆ. 2019ರಲ್ಲಿ ಏಪ್ರಿಲ್ 11ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದವು. ಬಿಜೆಪಿಯು ಏಪ್ರಿಲ್ 6 ರಿಂದ ಮೇ 17 ರವರೆಗೆ ನಿರಂತರವಾಗಿ ರಾಜಕೀಯ ಜಾಹೀರಾತುಗಳೊಂದಿಗೆ ಅನೇಕ ರಾಜ್ಯಗಳಲ್ಲಿ ಮತದಾರರ ಮೇಲೆ ಪ್ರಭಾವ ಬೀರಿದೆ.

ಇದನ್ನು ಓದಿ: 8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...