Homeಮುಖಪುಟಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

ಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

- Advertisement -
- Advertisement -

ಬಿಜೆಪಿ 2024ರ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಗೂಗಲ್ ಸರ್ಚ್ ಮತ್ತು ಯೂಟ್ಯೂಬ್ ಸೇರಿದಂತೆ ಗೂಗಲ್‌ನ ಡಿಸ್‌ಪ್ಲೇ ನೆಟ್‌ವರ್ಕ್ ಮತ್ತು ಆಲ್ಫಾಬೆಟ್ ಪ್ಲಾಟ್‌ಫಾರ್ಮ್‌ಗಳಿಗೆ ಸಾವಿರಾರು ರಾಜಕೀಯ ಜಾಹೀರಾತುಗಳಿಗೆ 30 ದಿನಗಳಲ್ಲಿ 30 ಕೋಟಿ ರೂ. ವೆಚ್ಚವನ್ನು ಮಾಡಿದೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ.

2019ರ ಚುನಾವಣೆಯ ವೇಳೆ ಫೆಬ್ರವರಿಯಿಂದ- ಮೇವರೆಗೆ ನಾಲ್ಕು ತಿಂಗಳುಗಳ ನಡುವೆ ಜಾಹೀರಾತಿಗಾಗಿ ಮಾಡಿದ ವೆಚ್ಚಕ್ಕಿಂತ ಇದು ದುಪ್ಪಟ್ಟಾಗಿದೆ. 2019ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ನಾಲ್ಕು ತಿಂಗಳ ಅವಧಿಯಲ್ಲಿ ಪಕ್ಷವು ಕೇವಲ 12.3 ಕೋಟಿ ರೂ.ವೆಚ್ಚವನ್ನು ಮಾಡಿತ್ತು. ಅದೇ ಅವಧಿಯಲ್ಲಿ ಪ್ರಮುಖ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ವೆಚ್ಚ 2.99 ಕೋಟಿ ರೂ.ಆಗಿತ್ತು. ಫೆಬ್ರವರಿ 2024ರಲ್ಲಿ ಕಾಂಗ್ರೆಸ್‌ ಪಕ್ಷವು Google ಜಾಹೀರಾತುಗಳ ಮೂಲಕ ಯಾವುದೇ ಸಂದೇಶವನ್ನುಪ್ರಚಾರ ಮಾಡಿಲ್ಲ ಎನ್ನುವುದು ತಿಳಿಯುತ್ತದೆ.

30 ದಿನಗಳಲ್ಲಿ ಅಂದರೆ ಜನವರಿ 29ರಿಂದ ಫೆಬ್ರವರಿ 28ರ ನಡುವೆ ಜಾಹೀರಾತಿಗಾಗಿ ಬಿಜೆಪಿ 29.7 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಗೂಗಲ್ ಜಾಹೀರಾತುಗಳ ಕುರಿತ ಡೇಟಾ ತೋರಿಸುತ್ತದೆ. ಗೂಗಲ್‌ 12,600ಕ್ಕೂ ಹೆಚ್ಚು ಜಾಹೀರಾತುಗಳನ್ನು ಸ್ಟ್ರೀಮ್ ಮಾಡಿದೆ. ಹೆಚ್ಚಾಗಿ ವೀಡಿಯೊಗಳನ್ನು ಅಂದರೆ 75%ದಷ್ಟು ವಿಡಿಯೋ ಜಾಹೀರಾತುಗಳನ್ನು ಪ್ರಸಾರ ಮಾಡಿದೆ. ಇದು ಬಹು ಭಾರತೀಯ ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರವನ್ನು ಮಾಡುತ್ತದೆ. ಇವುಗಳಲ್ಲಿ ಹೆಚ್ಚಿನವು ವೀಡಿಯೊ ಜಾಹೀರಾತುಗಳಾಗಿದ್ದು, 50%ಕ್ಕಿಂತ ಹೆಚ್ಚು ಜಾಹೀರಾತುಗಳನ್ನು ಪ್ಲಾಟ್‌ಫಾರ್ಮ್ ನೀತಿಯ ಉಲ್ಲಂಘನೆಗಾಗಿ Googleನಿಂದ ತೆಗೆದುಹಾಕಲಾಗಿದೆ.

30 ದಿನಗಳಲ್ಲಿ ಸುಮಾರು 30 ಕೋಟಿ ರೂಪಾಯಿಗಳ ವೆಚ್ಚವು ಭಾರತದಲ್ಲಿ ಆನ್‌ಲೈನ್ ರಾಜಕೀಯ ಜಾಹೀರಾತುಗಳ ಹೆಚ್ಚಳದ ಗಮನಾರ್ಹ ಸೂಚಕವಾಗಿದೆ. 2019 ರಿಂದ 52,000ಕ್ಕೂ ಹೆಚ್ಚು ಜಾಹೀರಾತುಗಳ ಮೂಲಕ ತನ್ನ ಸಂದೇಶಗಳನ್ನು ಹರಡಲು ಬಿಜೆಪಿ ಇದುವರೆಗೆ 79.16 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದೆ, ಇತ್ತೀಚಿನ ಬ್ಯುಸಿನೆಸ್ ಲೈನ್ ವರದಿಯು ಫೆಬ್ರವರಿ 2019 ಮತ್ತು ಫೆಬ್ರವರಿ 2023ರ ನಡುವೆ ಫೇಸ್‌ಬುಕ್ ಜಾಹೀರಾತುಗಳಿಗಾಗಿ ಬಿಜೆಪಿ 33 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ತಿಳಿಸುತ್ತದೆ.

ಕಳೆದ ತಿಂಗಳಲ್ಲಿ ಹೆಚ್ಚಿನ Google ಜಾಹೀರಾತುಗಳು ಬಿಜೆಪಿ ಅಥವಾ ಅದರ ಮೈತ್ರಿ ಪಾಲುದಾರ ಆಡಳಿತವಿರುವ ಉತ್ತರ ಭಾರತದ ರಾಜ್ಯಗಳ ಮತದಾರರನ್ನು ಗುರಿಯಾಗಿಸಿಕೊಂಡಿವೆ. ಕಳೆದ 30 ದಿನಗಳಲ್ಲಿ ಒಂದು ಕೋಟಿ ವೀಕ್ಷಣೆಯ ಒಂದು ವಿಡಿಯೋಗೆ 30 ಲಕ್ಷಕ್ಕೂ ಅಧಿಕ ವ್ಯಯಿಸಲಾಗಿದೆ. ಬಿಜೆಪಿ 10 ಲಕ್ಷದಿಂದ 30 ಲಕ್ಷದವರೆಗೆ 50 ವೀಡಿಯೋಗಳಿಗೆ ವ್ಯಯಿಸಿದೆ, 100 ವೀಡಿಯೋಗಳಿಗೆ 5 ಲಕ್ಷದಿಂದ 10 ಲಕ್ಷದವರೆಗೆ, 124 ವೀಡಿಯೊಗಳಿಗೆ 2.5 ಲಕ್ಷದಿಂದ 5 ಲಕ್ಷದವರೆಗೆ ಮತ್ತು 109 ವಿಡಿಯೋಗಳಿಗೆ 1 ಲಕ್ಷದಿಂದ 2.5 ಲಕ್ಷದವರೆಗೆ ವ್ಯಯಿಸಲಾಗಿದೆ ಎಂದು ವರದಿ ತಿಳಿಸಿದೆ.

2019ರಿಂದ ಕಳೆದ ಐದು ವರ್ಷಗಳ ದತ್ತಾಂಶವು, ಗೂಗಲ್ ಜಾಹೀರಾತುಗಳಿಗಾಗಿ ಬಿಜೆಪಿ ಹೆಚ್ಚು ಹಣವನ್ನು ಖರ್ಚು ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ  8.9 ಕೋಟಿ ವ್ಯಯಿಸಿ ಅಗ್ರಸ್ಥಾನದಲ್ಲಿದೆ ಎನ್ನುವುದನ್ನು ತೋರಿಸುತ್ತದೆ. ಕರ್ನಾಟಕದ ನಂತರ ಉತ್ತರಪ್ರದೇಶ 7.76 ಕೋಟಿ ರೂ. ವ್ಯಯಿಸಿದೆ, ದೆಹಲಿ 6.84 ಕೋಟಿ ವ್ಯಯಿಸಿದೆ, ಗುಜರಾತ್ 6.1 ಕೋಟಿ ರೂ. ವ್ಯಯಿಸಿದೆ, ಮಧ್ಯಪ್ರದೇಶ 5.9 ಕೋಟಿ ರೂ. ವ್ಯಯಿಸಿದೆ, ಬಿಹಾರ  4.38 ಕೋಟಿ ರೂ.ವ್ಯಯಿಸಿದೆ, ಪಶ್ಚಿಮ ಬಂಗಾಳ 3.46 ಕೋಟಿ ರೂ.ವ್ಯಯಿಸಿದೆ, ತೆಲಂಗಾಣ 3.18 ಕೋಟಿ ರೂ ವ್ಯಯಿಸಿದೆ, ಮಹಾರಾಷ್ಟ್ರ 3 ಕೋಟಿ ಮತ್ತು ಹರಿಯಾಣ 2.6 ಕೋಟಿ ರೂ.ವ್ಯಯಿಸಿದೆ ಎಂದು ವರದಿ ತಿಳಿಸಿದೆ.

50% ಕ್ಕಿಂತ ಹೆಚ್ಚು ಬಿಜೆಪಿ ವೀಡಿಯೊ ಜಾಹೀರಾತುಗಳನ್ನು ತೆಗೆದು ಹಾಕಿದ ಗೂಗಲ್‌

Googleನ ಜಾಹೀರಾತು ನೀತಿ ಉಲ್ಲಂಘನೆಗಾಗಿ ಬಿಜೆಪಿಯ 50%ಕ್ಕಿಂತ ಹೆಚ್ಚು ವೀಡಿಯೊಗಳನ್ನು Googleನಿಂದ ತೆಗೆದು ಹಾಕಲಾಗಿದೆ. Google ಜಾಹೀರಾತುದಾರರಿಗೆ ಮೂರು ಮುಖ್ಯ ಫ್ಲ್ಯಾಟ್‌ ಫಾರ್ಮ್‌ ನೀಡುತ್ತದೆ. Google ಹುಡುಕಾಟ, ವೆಬ್‌ಸೈಟ್‌ಗಳು ಮತ್ತು ಅಪ್ಲಿಕೇಶನ್‌ಗಳು ಮತ್ತು YouTube ಮೂಲಕ ಜಾಹೀರಾತು ಪ್ರಚಾರ ಮಾಡುತ್ತದೆ. ಅವುಗಳನ್ನು ವಯಸ್ಸು, ಲಿಂಗ ಮತ್ತು ಪೋಸ್ಟಲ್ ಕೋಡ್ ಸೇರಿ ನಿಯಮಗಳಂತೆ ಪ್ರೇಕ್ಷಕರನ್ನು ಸೀಮಿತಗೊಳಿಸುತ್ತದೆ. ಬಿಜೆಪಿಯ ವೀಡಿಯೊಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಏಕೆಂದರೆ Google ಕಾರಣವನ್ನು ಬಹಿರಂಗಪಡಿಸುವುದಿಲ್ಲ ಮತ್ತು ಕೇವಲ ‘ನೀತಿ ಉಲ್ಲಂಘನೆಗಾಗಿ’ ಅವುಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳುತ್ತದೆ. ಅಳಿಸಿದ ವೀಡಿಯೊಗಳನ್ನು ವೀಕ್ಷಿಸಲು ಇದು ಬಳಕೆದಾರರಿಗೆ ಅನುಮತಿಸುವುದಿಲ್ಲ.

ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿರುವ ಸೂಚನೆಗಳ ಪ್ರಕಾರ, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳು ಸೇರಿದಂತೆ ಅಂತರ್ಜಾಲದಲ್ಲಿ ಪೋಸ್ಟ್ ಮಾಡಲಾದ ವಿಷಯಕ್ಕೆ ಮಾದರಿ ನೀತಿ ಸಂಹಿತೆ ಮತ್ತು ಸಂಬಂಧಿತ ಸೂಚನೆಗಳು ಅನ್ವಯಿಸುತ್ತವೆ. 2019ರಲ್ಲಿ ಏಪ್ರಿಲ್ 11ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದವು. ಬಿಜೆಪಿಯು ಏಪ್ರಿಲ್ 6 ರಿಂದ ಮೇ 17 ರವರೆಗೆ ನಿರಂತರವಾಗಿ ರಾಜಕೀಯ ಜಾಹೀರಾತುಗಳೊಂದಿಗೆ ಅನೇಕ ರಾಜ್ಯಗಳಲ್ಲಿ ಮತದಾರರ ಮೇಲೆ ಪ್ರಭಾವ ಬೀರಿದೆ.

ಇದನ್ನು ಓದಿ: 8 ದಿನ ಕಳೆದರೂ ಪತ್ತೆಯಾಗದ ನೌಕಾಪಡೆ ಯೋಧ; ‘ನನ್ನ ಮಗ ಎಲ್ಲಿದ್ದಾನೆ..?’ ಎಂದು ಕಣ್ಣೀರಿಡುತ್ತಿರುವ ಹೆತ್ತವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...