Homeಮುಖಪುಟಪಾಲ್ಘರ್ ನಕಲಿ ಎನ್‌ಕೌಂಟರ್‌ ಪ್ರಕರಣ: ಇಬ್ಬರು ಪೊಲೀಸರು ಬಂಧನ

ಪಾಲ್ಘರ್ ನಕಲಿ ಎನ್‌ಕೌಂಟರ್‌ ಪ್ರಕರಣ: ಇಬ್ಬರು ಪೊಲೀಸರು ಬಂಧನ

- Advertisement -
- Advertisement -

ಪಾಲ್ಘರ್ ಜಿಲ್ಲೆಯ ನಲಸೋಪಾರಾ ಪ್ರದೇಶದಲ್ಲಿ 2018ರಲ್ಲಿ ಕಳ್ಳತನ ಪ್ರಕರಣದ ಆರೋಪಿಯ ನಕಲಿ ಎನ್‌ಕೌಂಟರ್‌ಗೆ ಸಂಬಂಧಿಸಿ ಇಬ್ಬರು ಪೊಲೀಸರನ್ನು ವಿಶೇಷ ತನಿಖಾ ತಂಡವು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮೀರಾ ಭಯಾಂಡರ್ ವಸಾಯಿ ಪೊಲೀಸ್ ಠಾಣೆಯ ಪೊಲೀಸ್‌ ಮಂಗೇಶ್ ಚವಾಣ್ ಮತ್ತು ಮನೋಜ್ ಸಕ್ಪಾಲ್ ಬಂಧಿತರು ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಜೋಗಿಂದರ್ ರಾಣಾ  ನಕಲಿ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸಲು ಬಾಂಬೆ ಹೈಕೋರ್ಟ್ ಎಸ್‌ಐಟಿಯನ್ನು ಸ್ಥಾಪಿಸಲು ಆದೇಶಿಸಿತ್ತು. ರಾಣಾ ಅವರ ಸಹೋದರ ಸುರೇಂದ್ರ ರಾಣಾ ಅವರು ನಕಲಿ ಎನ್‌ಕೌಂಟರ್‌ನ್ನು ನಲಸೋಪಾರಾದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಸ್ಥಳೀಯ ಅಪರಾಧ ವಿಭಾಗದ ಪೊಲೀಸರಾದ ಮನೋಜ್ ಸಕ್ಪಾಲ್ ಮತ್ತು ಹೆಡ್ ಪೊಲೀಸ್ ಕಾನ್‌ಸ್ಟೆಬಲ್ ಮಂಗೇಶ್ ಚವಾಣ್ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಈ ಕುರಿತು ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಪೊಲೀಸರು 2023ರಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ ಶಿಕ್ಷೆ) ಮತ್ತು 201 (ಸಾಕ್ಷ್ಯ ಕಣ್ಮರೆಯಾಗಲು ಕಾರಣ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಆರೋಪಿ ಪೊಲೀಸರನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಮಾರ್ಚ್ 11 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠವು ತನಿಖೆಯ ಪ್ರಗತಿಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿತ್ತು. 2018ರಲ್ಲಿ ಥಾಣೆ ಪೊಲೀಸ್ ಕಮಿಷನರ್ ಜೈಜೀತ್ ಸಿಂಗ್ ನೇತೃತ್ವದ ಎಸ್‌ಐಟಿ ರಚನೆಯಾದ ನಂತರ ಯಾವುದೇ ಮಹತ್ವದ ಬೆಳವಣಿಗೆ ಪ್ರಕರಣದಲ್ಲಿ ಆಗಿಲ್ಲ ಎಂದು ಗಮನಿಸಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಾದ ನಂತರ ಅತ್ಯಗತ್ಯವಾದ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದ ಪೊಲೀಸರನ್ನು ನ್ಯಾಯಾಲಯ ಟೀಕಿಸಿದೆ. 2023ರ ನವೆಂಬರ್‌ನಲ್ಲಿ 12 ವಾರಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಎಂದು ಉಲ್ಲಾಸ್‌ನಗರದ ಉಪ ಪೊಲೀಸ್ ಆಯುಕ್ತರು ನೀಡಿದ ಭರವಸೆಗಳ ಸಿಂಧುತ್ವವನ್ನು ಸಹ ಕೂಡ ಪ್ರಶ್ನಿಸಿತ್ತು. ತನಿಖೆಯ ಪ್ರತಿಯೊಂದು ಸಣ್ಣ ಅಂಶವನ್ನು ಮೇಲ್ವಿಚಾರಣೆ ಮಾಡಲು ಸಾಧ್ಯವಿಲ್ಲ ಮತ್ತು ಪೊಲೀಸ್ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಜಿಲ್ಲಾಧಿಕಾರಿಯವರೊಂದಿಗೆ ವಿಚಾರಣೆ ನಡೆಸಿ ಮುಂದಿನ ವಿಚಾರಣೆಯಲ್ಲಿ ಪ್ರಕರಣದ ಬೆಳವಣಿಗೆಗಳ ಬಗ್ಗೆ ವಿವರವಾದ ಹೇಳಿಕೆ ನೀಡುವಂತೆ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಪಿಪಿ ಶಿಂಧೆ ಅವರನ್ನು ಕೋರಿದ್ದು, ಸೋಮವಾರಕ್ಕೆ ಪ್ರಕರಣವನ್ನು ಮುಂದೂಡಲಾಗಿತ್ತು.

ಜೋಗಿಂದರ್ ರಾಣಾ ಅವರ ಸಹೋದರ ಸುರೇಂದ್ರ ರಾಣಾ ಅವರು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ತನಿಖೆ ಅಥವಾ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ 2018ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು, ನಂತರ ಪ್ರಕರಣವು ಭಾರೀ ಸುದ್ದು ಮಾಡಿದೆ.

ಎನ್‌ಕೌಂಟರ್‌ಗೆ ಸಂಬಂಧಿಸಿದ ವೀಡಿಯೊಗಳು ಮತ್ತು ಫೋಟೋಗಳು ಸೇರಿದಂತೆ ಸಾಕಷ್ಟು ಪುರಾವೆಗಳ ಹೊರತಾಗಿಯೂ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು ಮತ್ತು ಬದಲಿಗೆ ಆಕಸ್ಮಿಕ ಸಾವು ಎಂದು ವರದಿಯನ್ನು ದಾಖಲಿಸಿದ್ದಾರೆ ಎಂದು ರಾಣಾ ಅವರು ದೂರಿನಲ್ಲಿ ಆರೋಪಿಸಿದ್ದರು.

ಇದನ್ನು ಓದಿ: ಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...