Homeಮುಖಪುಟ5 ವರ್ಷದಲ್ಲಿ 22 ಸಾವಿರ ಚುನಾವಣಾ ಬಾಂಡ್ ಬಿಡುಗಡೆ : ಎಸ್‌ಬಿಐ

5 ವರ್ಷದಲ್ಲಿ 22 ಸಾವಿರ ಚುನಾವಣಾ ಬಾಂಡ್ ಬಿಡುಗಡೆ : ಎಸ್‌ಬಿಐ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿಯನ್ನು ಒದಗಿಸಲು ಜೂನ್ 30, 2024ರವರೆಗೆ ಸಮಯವನ್ನು ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಫೆಬ್ರವರಿ 15ರಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪಿನ ಪ್ರಕಾರ, ಮಾರ್ಚ್ 6ರೊಳಗೆ ಎಸ್‌ಬಿಐ ಬಾಂಡ್‌ಗಳ ಕುರಿತ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಒದಗಿಸಬೇಕಾಗಿದೆ.

ಸಮಯ ವಿಸ್ತರಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಸಲ್ಲಿಸಿರುವ ಅರ್ಜಿಯಲ್ಲಿ, ಏಪ್ರಿಲ್ 12,2019 ರಿಂದ ಫೆಬ್ರವರಿ 15,2024ರ ನಡುವೆ ವಿವಿಧ ಪಕ್ಷಗಳಿಗೆ ದೇಣಿಗೆ ನೀಡಲು 22,217 ಚುನಾವಣಾ ಬಾಂಡ್‌ಗಳನ್ನು ನೀಡಲಾಗಿದೆ ಎಂದು ಹೇಳಿದೆ. ಬಿಡುಗಡೆ ಮಾಡಲಾದ ಚುನಾವಣಾ ಬಾಂಡ್‌ಗಳನ್ನು ಅನುಮತಿ ನೀಡಲಾದ ಶಾಖೆಗಳು ಮುಂಬೈ ಪ್ರಧಾನ ಶಾಖೆಗೆ ಪ್ರತಿ ಹಂತದ ಕೊನೆಯಲ್ಲಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿವೆ. ಎರಡು ಭಿನ್ನ ಮಾಹಿತಿ ಭಾಗಗಳು ಇರುವುದರಿಂದ ಒಟ್ಟು 44,434 ಮಾಹಿತಿ ಸೆಟ್‌ಗಳನ್ನು ಡಿಕೋಡ್ ಮಾಡಿ, ಕ್ರೋಢೀಕರಿಸಿ, ತುಲನೆ ಮಾಡಬೇಕಾಗುತ್ತದೆ ಎಂದು ಎಸ್‌ಬಿಐ ವಿವರಿಸಿದೆ.

ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳ್ಳಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೂರು ವಾರಗಳ ಕಾಲಾವಧಿಯು ಸಾಕಾಗುವುದಿಲ್ಲ ಎಂದು ಎಸ್‌ಬಿಐ ಹೇಳಿದೆ. ಚುನಾವಣಾ ಬಾಂಡ್‌ ಯೋಜನೆಯನ್ನು ‘ಅಸಂವಿಧಾನಿಕ’ ಎಂದು ರದ್ದು ಮಾಡುವಾಗ, ಸುಪ್ರೀಂ ಕೋರ್ಟ್ ಈ ಕೆಳಗಿನ ನಿರ್ದೇಶನಗಳನ್ನು ನೀಡಿತ್ತು:

  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ವಿತರಣೆ ತಕ್ಷಣ ನಿಲ್ಲಿಸಬೇಕು
  • ಎಸ್‌ಬಿಐ ಏಪ್ರಿಲ್ 12,2019ರ ನ್ಯಾಯಾಲಯದ ಮಧ್ಯಂತರ ಆದೇಶದಿಂದ ಇಲ್ಲಿಯವರೆಗೆ ಖರೀದಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಪ್ರತಿ ಚುನಾವಣಾ ಬಾಂಡ್‌ನ ಖರೀದಿಯ ದಿನಾಂಕ, ಬಾಂಡ್‌ ಖರೀದಿದಾರರ ಹೆಸರು ಮತ್ತು ಖರೀದಿಸಿದ ಬಾಂಡ್‌ನ ಮುಖಬೆಲೆಯ ವಿವರ ಅದರಲ್ಲಿ ಒಳಗೊಂಡಿರಬೇಕು.
  • ಎಸ್‌ಬಿಐ ಏಪ್ರಿಲ್ 12,2019ರ ಮಧ್ಯಂತರ ಆದೇಶದಿಂದ ಇಲ್ಲಿಯವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ಕೊಡುಗೆಗಳನ್ನು ಪಡೆದ ರಾಜಕೀಯ ಪಕ್ಷಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಎಸ್‌ಬಿಐ ರಾಜಕೀಯ ಪಕ್ಷಗಳು ಎನ್‌ಕ್ಯಾಶ್ ಮಾಡಿದ ಪ್ರತಿಯೊಂದು ಚುನಾವಣಾ ಬಾಂಡ್‌ನ ವಿವರಗಳನ್ನು ಬಹಿರಂಗಪಡಿಸಬೇಕು. ಇದು ಎನ್‌ಕ್ಯಾಶ್‌ಮೆಂಟ್ ದಿನಾಂಕ ಮತ್ತು ಚುನಾವಣಾ ಬಾಂಡ್‌ನ ಮುಖಬೆಲೆಯನ್ನು ಒಳಗೊಂಡಿರಬೇಕು.
  • ಎಸ್‌ಬಿಐ ಮೇಲಿನ ಮಾಹಿತಿಗಳನ್ನು ಮೂರು ವಾರಗಳಲ್ಲಿ, ಅಂದರೆ ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಮಾರ್ಚ್ 13,2024 ರೊಳಗೆ ಎಸ್‌ಬಿಐನಿಂದ ಪಡೆದ ಮಾಹಿತಿಗಳನ್ನು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು.
  • 15 ದಿನಗಳ ಸಿಂಧುತ್ವದ ಅವಧಿಯೊಳಗೆ ಇರುವ, ಆದರೆ ರಾಜಕೀಯ ಪಕ್ಷಗಳು ಇನ್ನೂ ಎನ್‌ಕ್ಯಾಶ್ ಮಾಡಿರದ ಚುನಾವಣಾ ಬಾಂಡ್‌ಗಳನ್ನು ರಾಜಕೀಯ ಪಕ್ಷವು ಖರೀದಿದಾರರಿಗೆ ಹಿಂತಿರುಗಿಸಬೇಕು. ಎಸ್‌ಬಿಐ ಖರೀದಿದಾರರ ಖಾತೆಗೆ ಅದರ ಮೊತ್ತವನ್ನು ಮರುಪಾವತಿ ಮಾಡಬೇಕು.
  • ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್‌ ) ಮತ್ತು ಡಾ ಜಯ ಠಾಕೂರ್ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು.

ಇದನ್ನೂ ಓದಿ : ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...