Homeಮುಖಪುಟಜಾತಿ ತಾರತಮ್ಯ ಆರೋಪ: ದೆಹಲಿ ವಿವಿ ಮುಂದೆ ಪಕೋಡ ಅಂಗಡಿ ತೆರೆದು ಪ್ರತಿಭಟಿಸುತ್ತಿರುವ ಪ್ರಾಧ್ಯಾಪಕಿ

ಜಾತಿ ತಾರತಮ್ಯ ಆರೋಪ: ದೆಹಲಿ ವಿವಿ ಮುಂದೆ ಪಕೋಡ ಅಂಗಡಿ ತೆರೆದು ಪ್ರತಿಭಟಿಸುತ್ತಿರುವ ಪ್ರಾಧ್ಯಾಪಕಿ

- Advertisement -
- Advertisement -

ದೆಹಲಿ ವಿಶ್ವ ವಿದ್ಯಾನಿಲಯದ ವಿರುದ್ಧ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳ ಆರೋಪ ಹೊರಿಸಿ ಪ್ರತಿಭಟನೆ ನಡೆಸುತ್ತಿರುವ ಡಾ. ರೀತು ಸಿಂಗ್ ವಿವಿ ಕ್ಯಾಂಪಸ್ ಬಳಿ ‘ಪಿಹೆಚ್‌ಡಿ ಪಕೋಡ ವಾಲಿ’ ಎಂಬ ಹೆಸರಿನ ಪಕೋಡಾ ಅಂಗಡಿ ತೆರೆದಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ದೌಲತ್ ರಾಮ್ ಕಾಲೇಜಿನಲ್ಲಿ ಈ ಹಿಂದೆ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ಡಾ. ರೀತು ಸಿಂಗ್ ಅವರು, ಜಾತಿ ಕಾರಣಕ್ಕೆ ತನಗೆ ಕಿರುಕುಳ ನೀಡಿ 2020ರಲ್ಲಿ ಪ್ರಾಧ್ಯಾಪಕಿ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ವಿವಿ ವಿರುದ್ಧ ಅವರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳವನ್ನು ಇತ್ತೀಚೆಗೆ ನೆಲಸಮಗೊಳಿಸಿದ ಬಳಿಕ, ಅವರು ಕ್ಯಾಂಪಸ್ ಮುಂದೆ ಪಕೋಡ ಅಂಗಡಿ ತೆರೆದು ತನ್ನ ಹೋರಾಟ ಮುಂದುವರೆಸಿದ್ದಾರೆ.

ದಲಿತ, ಅಂಬೇಡ್ಕರ್‌ವಾದಿ ಹೋರಾಟಗಾರ್ತಿಯಾಗಿರುವ ರೀತು ಸಿಂಗ್ ಅವರು, ಶಿಕ್ಷಣ ಸಂಸ್ಥೆಗಳೊಳಗಿನ ಜಾತಿ ತಾರತಮ್ಯದ ವಿರುದ್ಧ ಧ್ವನಿಯೆತ್ತಿದ್ದ ಕಾರಣಕ್ಕೆ 2020ರಲ್ಲಿ ಪ್ರಾಧ್ಯಾಪಕಿ ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕೆಲಸದಿಂದ ವಜಾಗೊಂಡ ಬಳಿಕ, ದೌಲತ್ ರಾಮ್ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ರಾಯ್ ವಿರುದ್ಧ ರೀತು ಸಿಂಗ್ ಸರಣಿ ಪ್ರತಿಭಟನೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಪ್ರಸ್ತುತ ಅವರ ಹೋರಾಟ ಪಕೋಡ ಅಂಗಡಿಯವರೆಗೆ ಬಂದು ನಿಂತಿದೆ.

‘ಪಿಹೆಚ್‌ಡಿ ಪಕೋಡ ವಾಲಿ’ ಕೇವಲ ಒಂದು ಆಹಾರದ ಅಂಗಡಿಯಲ್ಲ. ಇದು ಜಾತಿ ತಾರತಮ್ಯದ ವಿರುದ್ಧದ ಪ್ರತಿಭಟನೆ ಮತ್ತು ದೃಢತೆಯ ಸಂಕೇತವಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಹೊರಗೆ ಅಂಗಡಿ ಹಾಕುವ ಮೂಲಕ ರಿತು ಸಿಂಗ್ ಅವರು ದಲಿತ ಶಿಕ್ಷಣ ತಜ್ಞರ ದುರವಸ್ಥೆ ಮತ್ತು ಅವರು ಎದುರಿಸುತ್ತಿರುವ ವ್ಯವಸ್ಥಿತ ಅಡೆತಡೆಗಳ ಬಗ್ಗೆ ಗಮನ ಸೆಳೆಯುವ ಗುರಿಯನ್ನು ಹೊಂದಿದ್ದಾರೆ. ಡಾ. ಸಿಂಗ್ ಅವರ ಹೋರಾಟವು ವಿದ್ಯಾರ್ಥಿಗಳು, ಹೋರಾಟಗಾರರು ಸೇರಿದಂತೆ ಬಹು ದೊಡ್ಡ ಸಮುದಾಯದಿಂದ ಬೆಂಬಲ ಗಳಿಸಿದೆ. ಪಿಹೆಚ್‌ಡಿ ಪಕೋಡ ವಾಲಿಯನ್ನು ಒಗ್ಗಟ್ಟಿನ ಮತ್ತು ಜಾಗೃತಿಯ ತಾಣವಾಗಿ ಪರಿವರ್ತಿಸಿದೆ ಎಂದು ಈ ಕುರಿತು ವರದಿ ಮಾಡಿದ bnnbreaking.com ಎಂಬ ಸುದ್ದಿ ವೆಬ್‌ಸೈಟ್ ಬಣ್ಣಿಸಿದೆ.

ಡಾ.ಸಿಂಗ್ ಅವರು ಪ್ರಾಧ್ಯಾಪಕಿ ವೃತ್ತಿ ಬಿಟ್ಟು ಬೀದಿ ಬದಿ ಪಕೋಡ ಮಾರಲು ಹೊರಟಿರುವುದು ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ವಿರುದ್ಧ ದೊಡ್ಡ ಹೋರಾಟವಾಗಿದೆ. ಅವರು ದಲಿತ ಶಿಕ್ಷಣ ತಜ್ಞರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧದ ಪ್ರತಿರೋಧಕ್ಕೆ ಜೀವಂತ ಉದಾಹರಣೆಯಾಗಿದ್ದಾರೆ. ರಿತು ಸಿಂಗ್ ಅವರ ಹೋರಾಟ ಜಾತೀಯತೆ, ನಿರುದ್ಯೋಗ ಮತ್ತು ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯವಸ್ಥಿತ ಬದಲಾವಣೆಯ ಅಗತ್ಯತೆಯ ಬಗ್ಗೆ ಚರ್ಚೆಗಳನ್ನು ಹುಟ್ಟು ಹಾಕಿದೆ. ಪಿಹೆಚ್‌ಡಿ ಪಕೋಡ ವಾಲಿ ಪ್ರಸ್ತುತ ಒಂದು ಅಂಗಡಿಯಾಗಿ ಉಳಿದಿಲ್ಲ. ಅದು ಸಾರ್ವಜನಿಕರಿಗೆ ಶಿಕ್ಷಣ, ನ್ಯಾಯ ಮತ್ತು ಸಮಾನತೆಯ ಹೋರಾಟಕ್ಕೆ ಪ್ರರೇಪಿಸುವ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ವೆಬ್‌ಸೈಟ್‌ ಹೇಳಿದೆ.

ಏನಿದು ಪ್ರಕರಣ, ರೀತು ಸಿಂಗ್ ಯಾರು?

ದೆಹಲಿ ವಿಶ್ವವಿದ್ಯಾನಿಲಯದಿಂದ ಮನೋವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಡಾ.ರೀತು ಸಿಂಗ್ ಅವರು ವಿವಿ ಅಧೀನದ ದೌಲತ್ ರಾಮ್ ಕಾಲೇಜಿನಲ್ಲಿ ತಾತ್ಕಾಲಿಕ ಪ್ರಧ್ಯಾಪಕಿಯಾಗಿದ್ದರು.

ಆಗಸ್ಟ್ 2019ರಲ್ಲಿ, ರೀತು ಸಿಂಗ್ ಅವರು ದೌಲತ್ ರಾಮ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ನೇಮಕಗೊಂಡಿದ್ದರು. ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾದ ತಾತ್ಕಾಲಿಕ ಖಾಲಿ ಹುದ್ದೆಯ ಕಾರ್ಯವಿಧಾನದ ಮೂಲಕ ರೀತು ಸಿಂಗ್ ಆ ಹುದ್ದೆಗೆ ಆಯ್ಕೆಯಾಗಿದ್ದರು. ಒಂದು ವರ್ಷದ ನಂತರ (ಆಗಸ್ಟ್ 2020 ರಲ್ಲಿ) ಅವರನ್ನು ಏಕಾಏಕಿ ಹುದ್ದೆಯಿಂದ ವಜಾಗೊಳಿಸಲಾಗಿತ್ತು.

“ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಕಾಲೇಜು ಪ್ರಾಂಶುಪಾಲೆ ಸವಿತಾ ರಾಯ್ ಜಾತಿ ತಾರತಮ್ಯವೆಸಗಿ ಕೆಲಸದಿಂದ ವಜಾಗೊಳಿಸಿದ್ದಾರೆ. ಕಾಲೇಜಿನಲ್ಲಿ ಜಾತಿ ಮುಂದಿಟ್ಟುಕೊಂಡು  ಪ್ರಾಂಶುಪಾಲೆ ನನಗೆ ಕಿರುಕುಳ ನೀಡಿದ್ದರು” ಎಂದು ರೀತು ಸಿಂಗ್ ಆರೋಪಿಸಿದ್ದರು.

2020ರಲ್ಲಿ ಕೆಲಸದಿಂದ ವಜಾಗೊಂಡ ಬಳಿಕ ರೀತು ಸಿಂಗ್ ಸತತ 10 ದಿನಗಳ ಕಾಲ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದ್ದರು. ಆದರೆ, ಕೋವಿಡ್ ಆವರಿಸಿಕೊಂಡ ಅವರು ತನ್ನ ಹೋರಾಟವನ್ನು ಕೊನೆಗೊಳಿಸಬೇಕಾಯಿತು. ನಂತರ ಅವರು 2023ರ ಸೆಪ್ಟೆಂಬರ್‌ನಿಂದ ಹೋರಾಟ ಮುಂದುವರೆಸಿದ್ದಾರೆ. ಈ ನಡುವೆ ಅವರು ಕಾನೂನು ಹೋರಾಟ ಕೂಡ ನಡೆಸುತ್ತಿದ್ದು, ಪ್ರಸ್ತುತ ಪ್ರಕರಣ ದೆಹಲಿ ಹೈಕೋರ್ಟ್‌ನಲ್ಲಿದೆ.

ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಕಾಲೇಜು ಪ್ರಾಂಶುಪಾಲೆ ಸವಿತಾ ರಾಯ್‌ ಅವರಿಂದ ರೀತು ಸಿಂಗ್ ವಜಾದ ಕುರಿತು ಪ್ರತಿಕ್ರಿಯೆ ಕೇಳಿತ್ತು. ನ್ಯಾಯಾಲಯಕ್ಕೆ ಉತ್ತರ ಕೊಟ್ಟಿದ್ದ ಪ್ರಾಂಶುಪಾಲೆ ಸವಿತಾ ರಾಯ್, ರೀತು ಸಿಂಗ್ ಅವರ ಪಾಠದಿಂದ ವಿದ್ಯಾರ್ಥಿಗಳು ಅತೃಪ್ತರಾಗಿದ್ದರು ಎಂದು ತಿಳಿಸಿದ್ದಾರೆ. ಅಲ್ಲದೆ, ಪ್ರಾಂಶುಪಾಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಪತ್ರಕ್ಕೆ 35 ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಪ್ರಾಂಶುಪಾಲೆಯ ಆರೋಪವನ್ನು ಹಾಕಿರುವ ರೀತು ಸಿಂಗ್, ಪ್ರಾಂಶುಪಾಲರ ಪತ್ರದಲ್ಲಿ ಸಹಿ ಹಾಕಿರುವ 35 ವಿದ್ಯಾರ್ಥಿಗಳಿಗೆ ನಾನು ಪಾಠವೇ ಮಾಡಿಲ್ಲ ಎಂದಿದ್ದಾರೆ. ಪ್ರಸ್ತುತ ಪ್ರಕರಣ ದೆಹಲಿ ಹೈಕೋರ್ಟ್‌ ಮತ್ತು ಪರಿಶಿಷ್ಟ ಜಾತಿ ಆಯೋಗದ ವಿಚಾರಣೆಯಲ್ಲಿದೆ.

ರೀತು ಸಿಂಗ್ ಅವರ ದೂರಿನ ಮೇರೆಗೆ ಪ್ರಾಂಶುಪಾಲೆ ಸವಿತಾ ರಾಯ್ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಕಾಯ್ದೆ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ. ಆದರೆ, ಸವಿತಾ ರಾಯ್ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಾಗಿ ಅವರನ್ನು ಪ್ರಾಂಶುಪಾಲರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಬಡ್ತಿ ನೀಡಿ ನೇಮಿಸಲಾಗಿದೆ. ಆಕೆ ಪ್ರಾಂಶುಪಾಲೆಯಾಗಿಯೂ ಮುಂದುವರೆದಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...