Homeಮುಖಪುಟಜಾತಿ ತಾರತಮ್ಯ ಆರೋಪ: ದೆಹಲಿ ವಿವಿ ಮುಂದೆ ಪಕೋಡ ಅಂಗಡಿ ತೆರೆದು ಪ್ರತಿಭಟಿಸುತ್ತಿರುವ ಪ್ರಾಧ್ಯಾಪಕಿ

ಜಾತಿ ತಾರತಮ್ಯ ಆರೋಪ: ದೆಹಲಿ ವಿವಿ ಮುಂದೆ ಪಕೋಡ ಅಂಗಡಿ ತೆರೆದು ಪ್ರತಿಭಟಿಸುತ್ತಿರುವ ಪ್ರಾಧ್ಯಾಪಕಿ

- Advertisement -
- Advertisement -

ದೆಹಲಿ ವಿಶ್ವ ವಿದ್ಯಾನಿಲಯದ ವಿರುದ್ಧ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳ ಆರೋಪ ಹೊರಿಸಿ ಪ್ರತಿಭಟನೆ ನಡೆಸುತ್ತಿರುವ ಡಾ. ರೀತು ಸಿಂಗ್ ವಿವಿ ಕ್ಯಾಂಪಸ್ ಬಳಿ ‘ಪಿಹೆಚ್‌ಡಿ ಪಕೋಡ ವಾಲಿ’ ಎಂಬ ಹೆಸರಿನ ಪಕೋಡಾ ಅಂಗಡಿ ತೆರೆದಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ದೌಲತ್ ರಾಮ್ ಕಾಲೇಜಿನಲ್ಲಿ ಈ ಹಿಂದೆ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ಡಾ. ರೀತು ಸಿಂಗ್ ಅವರು, ಜಾತಿ ಕಾರಣಕ್ಕೆ ತನಗೆ ಕಿರುಕುಳ ನೀಡಿ 2020ರಲ್ಲಿ ಪ್ರಾಧ್ಯಾಪಕಿ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ವಿವಿ ವಿರುದ್ಧ ಅವರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳವನ್ನು ಇತ್ತೀಚೆಗೆ ನೆಲಸಮಗೊಳಿಸಿದ ಬಳಿಕ, ಅವರು ಕ್ಯಾಂಪಸ್ ಮುಂದೆ ಪಕೋಡ ಅಂಗಡಿ ತೆರೆದು ತನ್ನ ಹೋರಾಟ ಮುಂದುವರೆಸಿದ್ದಾರೆ.

ದಲಿತ, ಅಂಬೇಡ್ಕರ್‌ವಾದಿ ಹೋರಾಟಗಾರ್ತಿಯಾಗಿರುವ ರೀತು ಸಿಂಗ್ ಅವರು, ಶಿಕ್ಷಣ ಸಂಸ್ಥೆಗಳೊಳಗಿನ ಜಾತಿ ತಾರತಮ್ಯದ ವಿರುದ್ಧ ಧ್ವನಿಯೆತ್ತಿದ್ದ ಕಾರಣಕ್ಕೆ 2020ರಲ್ಲಿ ಪ್ರಾಧ್ಯಾಪಕಿ ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕೆಲಸದಿಂದ ವಜಾಗೊಂಡ ಬಳಿಕ, ದೌಲತ್ ರಾಮ್ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ರಾಯ್ ವಿರುದ್ಧ ರೀತು ಸಿಂಗ್ ಸರಣಿ ಪ್ರತಿಭಟನೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಪ್ರಸ್ತುತ ಅವರ ಹೋರಾಟ ಪಕೋಡ ಅಂಗಡಿಯವರೆಗೆ ಬಂದು ನಿಂತಿದೆ.

‘ಪಿಹೆಚ್‌ಡಿ ಪಕೋಡ ವಾಲಿ’ ಕೇವಲ ಒಂದು ಆಹಾರದ ಅಂಗಡಿಯಲ್ಲ. ಇದು ಜಾತಿ ತಾರತಮ್ಯದ ವಿರುದ್ಧದ ಪ್ರತಿಭಟನೆ ಮತ್ತು ದೃಢತೆಯ ಸಂಕೇತವಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಹೊರಗೆ ಅಂಗಡಿ ಹಾಕುವ ಮೂಲಕ ರಿತು ಸಿಂಗ್ ಅವರು ದಲಿತ ಶಿಕ್ಷಣ ತಜ್ಞರ ದುರವಸ್ಥೆ ಮತ್ತು ಅವರು ಎದುರಿಸುತ್ತಿರುವ ವ್ಯವಸ್ಥಿತ ಅಡೆತಡೆಗಳ ಬಗ್ಗೆ ಗಮನ ಸೆಳೆಯುವ ಗುರಿಯನ್ನು ಹೊಂದಿದ್ದಾರೆ. ಡಾ. ಸಿಂಗ್ ಅವರ ಹೋರಾಟವು ವಿದ್ಯಾರ್ಥಿಗಳು, ಹೋರಾಟಗಾರರು ಸೇರಿದಂತೆ ಬಹು ದೊಡ್ಡ ಸಮುದಾಯದಿಂದ ಬೆಂಬಲ ಗಳಿಸಿದೆ. ಪಿಹೆಚ್‌ಡಿ ಪಕೋಡ ವಾಲಿಯನ್ನು ಒಗ್ಗಟ್ಟಿನ ಮತ್ತು ಜಾಗೃತಿಯ ತಾಣವಾಗಿ ಪರಿವರ್ತಿಸಿದೆ ಎಂದು ಈ ಕುರಿತು ವರದಿ ಮಾಡಿದ bnnbreaking.com ಎಂಬ ಸುದ್ದಿ ವೆಬ್‌ಸೈಟ್ ಬಣ್ಣಿಸಿದೆ.

ಡಾ.ಸಿಂಗ್ ಅವರು ಪ್ರಾಧ್ಯಾಪಕಿ ವೃತ್ತಿ ಬಿಟ್ಟು ಬೀದಿ ಬದಿ ಪಕೋಡ ಮಾರಲು ಹೊರಟಿರುವುದು ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ವಿರುದ್ಧ ದೊಡ್ಡ ಹೋರಾಟವಾಗಿದೆ. ಅವರು ದಲಿತ ಶಿಕ್ಷಣ ತಜ್ಞರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧದ ಪ್ರತಿರೋಧಕ್ಕೆ ಜೀವಂತ ಉದಾಹರಣೆಯಾಗಿದ್ದಾರೆ. ರಿತು ಸಿಂಗ್ ಅವರ ಹೋರಾಟ ಜಾತೀಯತೆ, ನಿರುದ್ಯೋಗ ಮತ್ತು ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯವಸ್ಥಿತ ಬದಲಾವಣೆಯ ಅಗತ್ಯತೆಯ ಬಗ್ಗೆ ಚರ್ಚೆಗಳನ್ನು ಹುಟ್ಟು ಹಾಕಿದೆ. ಪಿಹೆಚ್‌ಡಿ ಪಕೋಡ ವಾಲಿ ಪ್ರಸ್ತುತ ಒಂದು ಅಂಗಡಿಯಾಗಿ ಉಳಿದಿಲ್ಲ. ಅದು ಸಾರ್ವಜನಿಕರಿಗೆ ಶಿಕ್ಷಣ, ನ್ಯಾಯ ಮತ್ತು ಸಮಾನತೆಯ ಹೋರಾಟಕ್ಕೆ ಪ್ರರೇಪಿಸುವ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ವೆಬ್‌ಸೈಟ್‌ ಹೇಳಿದೆ.

ಏನಿದು ಪ್ರಕರಣ, ರೀತು ಸಿಂಗ್ ಯಾರು?

ದೆಹಲಿ ವಿಶ್ವವಿದ್ಯಾನಿಲಯದಿಂದ ಮನೋವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಡಾ.ರೀತು ಸಿಂಗ್ ಅವರು ವಿವಿ ಅಧೀನದ ದೌಲತ್ ರಾಮ್ ಕಾಲೇಜಿನಲ್ಲಿ ತಾತ್ಕಾಲಿಕ ಪ್ರಧ್ಯಾಪಕಿಯಾಗಿದ್ದರು.

ಆಗಸ್ಟ್ 2019ರಲ್ಲಿ, ರೀತು ಸಿಂಗ್ ಅವರು ದೌಲತ್ ರಾಮ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ನೇಮಕಗೊಂಡಿದ್ದರು. ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾದ ತಾತ್ಕಾಲಿಕ ಖಾಲಿ ಹುದ್ದೆಯ ಕಾರ್ಯವಿಧಾನದ ಮೂಲಕ ರೀತು ಸಿಂಗ್ ಆ ಹುದ್ದೆಗೆ ಆಯ್ಕೆಯಾಗಿದ್ದರು. ಒಂದು ವರ್ಷದ ನಂತರ (ಆಗಸ್ಟ್ 2020 ರಲ್ಲಿ) ಅವರನ್ನು ಏಕಾಏಕಿ ಹುದ್ದೆಯಿಂದ ವಜಾಗೊಳಿಸಲಾಗಿತ್ತು.

“ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಕಾಲೇಜು ಪ್ರಾಂಶುಪಾಲೆ ಸವಿತಾ ರಾಯ್ ಜಾತಿ ತಾರತಮ್ಯವೆಸಗಿ ಕೆಲಸದಿಂದ ವಜಾಗೊಳಿಸಿದ್ದಾರೆ. ಕಾಲೇಜಿನಲ್ಲಿ ಜಾತಿ ಮುಂದಿಟ್ಟುಕೊಂಡು  ಪ್ರಾಂಶುಪಾಲೆ ನನಗೆ ಕಿರುಕುಳ ನೀಡಿದ್ದರು” ಎಂದು ರೀತು ಸಿಂಗ್ ಆರೋಪಿಸಿದ್ದರು.

2020ರಲ್ಲಿ ಕೆಲಸದಿಂದ ವಜಾಗೊಂಡ ಬಳಿಕ ರೀತು ಸಿಂಗ್ ಸತತ 10 ದಿನಗಳ ಕಾಲ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದ್ದರು. ಆದರೆ, ಕೋವಿಡ್ ಆವರಿಸಿಕೊಂಡ ಅವರು ತನ್ನ ಹೋರಾಟವನ್ನು ಕೊನೆಗೊಳಿಸಬೇಕಾಯಿತು. ನಂತರ ಅವರು 2023ರ ಸೆಪ್ಟೆಂಬರ್‌ನಿಂದ ಹೋರಾಟ ಮುಂದುವರೆಸಿದ್ದಾರೆ. ಈ ನಡುವೆ ಅವರು ಕಾನೂನು ಹೋರಾಟ ಕೂಡ ನಡೆಸುತ್ತಿದ್ದು, ಪ್ರಸ್ತುತ ಪ್ರಕರಣ ದೆಹಲಿ ಹೈಕೋರ್ಟ್‌ನಲ್ಲಿದೆ.

ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಕಾಲೇಜು ಪ್ರಾಂಶುಪಾಲೆ ಸವಿತಾ ರಾಯ್‌ ಅವರಿಂದ ರೀತು ಸಿಂಗ್ ವಜಾದ ಕುರಿತು ಪ್ರತಿಕ್ರಿಯೆ ಕೇಳಿತ್ತು. ನ್ಯಾಯಾಲಯಕ್ಕೆ ಉತ್ತರ ಕೊಟ್ಟಿದ್ದ ಪ್ರಾಂಶುಪಾಲೆ ಸವಿತಾ ರಾಯ್, ರೀತು ಸಿಂಗ್ ಅವರ ಪಾಠದಿಂದ ವಿದ್ಯಾರ್ಥಿಗಳು ಅತೃಪ್ತರಾಗಿದ್ದರು ಎಂದು ತಿಳಿಸಿದ್ದಾರೆ. ಅಲ್ಲದೆ, ಪ್ರಾಂಶುಪಾಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಪತ್ರಕ್ಕೆ 35 ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಪ್ರಾಂಶುಪಾಲೆಯ ಆರೋಪವನ್ನು ಹಾಕಿರುವ ರೀತು ಸಿಂಗ್, ಪ್ರಾಂಶುಪಾಲರ ಪತ್ರದಲ್ಲಿ ಸಹಿ ಹಾಕಿರುವ 35 ವಿದ್ಯಾರ್ಥಿಗಳಿಗೆ ನಾನು ಪಾಠವೇ ಮಾಡಿಲ್ಲ ಎಂದಿದ್ದಾರೆ. ಪ್ರಸ್ತುತ ಪ್ರಕರಣ ದೆಹಲಿ ಹೈಕೋರ್ಟ್‌ ಮತ್ತು ಪರಿಶಿಷ್ಟ ಜಾತಿ ಆಯೋಗದ ವಿಚಾರಣೆಯಲ್ಲಿದೆ.

ರೀತು ಸಿಂಗ್ ಅವರ ದೂರಿನ ಮೇರೆಗೆ ಪ್ರಾಂಶುಪಾಲೆ ಸವಿತಾ ರಾಯ್ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಕಾಯ್ದೆ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ. ಆದರೆ, ಸವಿತಾ ರಾಯ್ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಾಗಿ ಅವರನ್ನು ಪ್ರಾಂಶುಪಾಲರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಬಡ್ತಿ ನೀಡಿ ನೇಮಿಸಲಾಗಿದೆ. ಆಕೆ ಪ್ರಾಂಶುಪಾಲೆಯಾಗಿಯೂ ಮುಂದುವರೆದಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...