Homeಮುಖಪುಟಮೋದಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ

ಮೋದಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ

- Advertisement -
- Advertisement -

ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಪಾಲ್ಗೊಳ್ಳುವಂತೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಸುಮಾರು 7,000 ಉದ್ಯೋಗಿಗಳಿಗೆ ಸೂಚಿಸಿದೆ ಎಂದು ವರದಿಯಾಗಿದೆ.

ಶ್ರೀನಗರದಲ್ಲಿ ಕಳೆದ 9 ವರ್ಷಗಳಲ್ಲಿ ಮೋದಿ ಇದೇ ಮೊದಲ ಬಾರಿಗೆ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದು, ಕಾಶ್ಮೀರದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಕೇಸರಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಚಾಲನೆಯನ್ನು ನೀಡಲಿದ್ದಾರೆ. 370ನೇ ವಿಧಿಯನ್ನು ರದ್ದುಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಶ್ಮೀರದಲ್ಲಿ ವ್ಯಾಪಕ ಬೆಂಬಲವನ್ನು ನೀಡುವ ಪ್ರಯತ್ನವಾಗಿ ಜಮ್ಮು-ಕಾಶ್ಮೀರ ಆಡಳಿತವು ಶಿಕ್ಷಣ, ಕ್ರೀಡೆ, ಕೃಷಿ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಇತರ 13 ಇಲಾಖೆಗಳ ನೌಕರರಿಗೆ ಮೋದಿಯ ರ್ಯಾಲಿಯಲ್ಲಿ ಭಾಗವಹಿಸುವಂತೆ ಆದೇಶ ನೀಡಿದೆ. ಶ್ರೀನಗರದ ಖಾಸಗಿ ಶಾಲೆಗಳಿಗೆ ಈ ನೌಕರರನ್ನು ಶಾಲಾ ಬಸ್‌ಗಳಲ್ಲಿ ಬಕ್ಷಿ ಕ್ರೀಡಾಂಗಣಕ್ಕೆ ಕರೆದೊಯ್ಯುವಂತೆ ಆದೇಶಿಸಿದೆ ಎಂದು ವರದಿಯಾಗಿದೆ, ಇದಲ್ಲದೆ ಶ್ರೀನಗರದ ಆಹಾರ ಸುರಕ್ಷತಾ ಇಲಾಖೆಗೆ ಕೂಡ ಇದೇ ರೀತಿಯ ಆದೇಶವನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಭದ್ರತಾ ಏಜೆನ್ಸಿಗಳಿಗೆ, ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಲು ಸೂಚಿಸಲಾದ ನೌಕರರು ಪ್ರತ್ಯೇಕತಾವಾದಿ ಗುಂಪುಗಳು ಅಥವಾ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಯೇ ಎಂದು ಕಂಡುಹಿಡಿಯಲು ಆದೇಶಿಸಲಾಗಿದೆ.

ಸ್ಥಳೀಯ ಸುದ್ದಿ ಮಾದ್ಯಮದ ವರದಿಯ ಪ್ರಕಾರ, ಶ್ರೀನಗರದ 100ಕ್ಕೂ ಹೆಚ್ಚು ಹೋಟೆಲ್‌ಗಳು, ಲಾಡ್ಜ್‌ಗಳು ಮತ್ತು ಅತಿಥಿ ಗೃಹಗಳನ್ನು ಮೋದಿ ಕಾರ್ಯಕ್ರಮದ ಹಿನ್ನೆಲೆ ಮುಂಗಡವಾಗಿ ಕಾಯ್ದಿರಿಸಲಾಗಿದೆ. 1000ಕ್ಕೂ ಹೆಚ್ಚು ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲಾಗಿದೆ.

ಮೋದಿಯವರ ಭೇಟಿಗೆ ಮುಂಚಿತವಾಗಿ, ಕೇಂದ್ರ ಗೃಹ ಸಚಿವಾಲಯವು ಎಕ್ಸ್‌ನಲ್ಲಿ ಸ್ವಯಂ-ಅಭಿನಂದನೆಯ ಪೋಸ್ಟ್‌ಗಳನ್ನು ಹಾಕಿಕೊಂಡಿದೆ. ಆರ್ಟಿಕಲ್ 370 ರದ್ದತಿ  “ಶಾಂತಿಯುತ ಮತ್ತು ಸಮೃದ್ಧ” ಜಮ್ಮು ಮತ್ತು ಕಾಶ್ಮೀರವನ್ನು ರಚಿಸಲು ಸಹಾಯ ಮಾಡಿದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ. ಕಲ್ಲು ತೂರಾಟದ ಘಟನೆಗಳಲ್ಲಿ 100 ಪ್ರತಿಶತದಷ್ಟು ಇಳಿಕೆಯಾಗಿದೆ. 2023ರಲ್ಲಿ ಒಂದೇ ಒಂದು ಕಲ್ಲು ತೂರಾಟದ ಘಟನೆಯೂ ವರದಿಯಾಗಿಲ್ಲ. ನಾಗರಿಕರ ಸಾವುಗಳು ಶೇಕಡಾ 81ರಷ್ಟು ಕಡಿಮೆಯಾಗಿದೆ. 69ರಷ್ಟು ಭಯೋತ್ಪಾದಕ ಘಟನೆಗಳು ಕಡಿಮೆಯಾಗಿದೆ. ಭದ್ರತಾ ಸಿಬ್ಬಂದಿಯ ಹತ್ಯೆಗಳು ಶೇಕಡಾ 47ರಷ್ಟು ಕಡಿಮೆಯಾಗಿದೆ ಎಂದು ಗೃಹ ಸಚಿವಾಲಯದ ವರದಿ ತಿಳಿಸಿದೆ.

ಶ್ರೀನಗರದಲ್ಲಿ ಬಿಜೆಪಿಯ ಜಮ್ಮು-ಕಾಶ್ಮೀರ ಘಟಕದ ಅಧ್ಯಕ್ಷ ರವೀಂದರ್ ರೈನಾ ಮಾತನಾಡಿ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಿದ ನಂತರ ಕಾಶ್ಮೀರದಲ್ಲಿ ಪ್ರಧಾನಿಯವರ ಮೊದಲ ರ್ಯಾಲಿಗೆ ಎರಡು ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಬಕ್ಷಿ ಕ್ರೀಡಾಂಗಣವು ಕೇವಲ 18,000 ಆಸನಗಳ ಸಾಮರ್ಥ್ಯವನ್ನು ಹೊಂದಿದೆ ಎಂದು ವರದಿಯಾಗಿದೆ ಮತ್ತು ಮೈದಾನದಲ್ಲಿ ಸುಮಾರು 10,000 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಕ್ರೀಡಾಂಗಣವು ಸುಮಾರು 30,000 ಜನರಿಗೆ ಅವಕಾಶ ಕಲ್ಪಿಸುತ್ತದೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ. ಅದರೆ ಜಮ್ಮು-ಕಾಶ್ಮೀರ ಬಿಜೆಪಿ ಮುಖ್ಯಸ್ಥರ ಹೇಳಿಕೆ ಅನುಮಾನಗಳನ್ನು ಹುಟ್ಟುಹಾಕಿದೆ.

ಮೋದಿ ಶ್ರೀನಗರದ ಭೇಟಿಯ ವೇಳೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ, ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೋದಿ ಭೇಟಿಯ ಹಿನ್ನೆಲೆ ಶ್ರೀನಗರ ನಗರದಾದ್ಯಂತ ಬಿಜೆಪಿ 10,000 ಧ್ವಜಗಳನ್ನು ಹಾಕಿದೆ ಬಿಜೆಪಿಯ ವಕ್ತಾರ ಅಲ್ತಾಫ್ ಠಾಕೂರ್ ಹೇಳಿದ್ದಾರೆ.

ಮೋದಿ ರ್ಯಾಲಿಯ ಹಿನ್ನೆಲೆ ಶ್ರೀನಗರದಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಶ್ರೀನಗರ ವಿಮಾನ ನಿಲ್ದಾಣದಿಂದ ಸ್ಥಳಕ್ಕೆ ಹೋಗುವ ರಸ್ತೆಗಳಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆಗಳಿಂದ ಭದ್ರತೆ ಕಲ್ಪಿಸಲಾಗಿದೆ.

ಇದನ್ನು ಓದಿ: ಇಬ್ಬರು ಯುವಕರನ್ನು ಕಟ್ಟಿ ಹಾಕಿ ಥಳಿಸಿದ ಪೊಲೀಸ್‌ ಪೇದೆ: ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಮಾನವೀಯ ಘಟನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...