Homeಮುಖಪುಟಹೈಕೋರ್ಟ್ ಜಡ್ಜ್‌ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ?

ಹೈಕೋರ್ಟ್ ಜಡ್ಜ್‌ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ?

- Advertisement -
- Advertisement -

ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ತಮ್ಮ ಕೆಲವು ತೀರ್ಪುಗಳು ಮತ್ತು ಅವಲೋಕನಗಳಿಗಾಗಿ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನಿಂದ ತೀವ್ರ ಟೀಕೆಗಳನ್ನು ಎದುರಿಸಿದ್ದ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ರಾಜೀನಾಮೆಯನ್ನು ನೇರವಾಗಿ ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಿದ್ದು, ಸಂವಿಧಾನದ 217 (1) (ಎ) ವಿಧಿಯ ಅಡಿಯಲ್ಲಿ ರಾಜೀನಾಮೆ ಜಾರಿಗೆ ಬಂದಿದೆ ಎನ್ನಲಾಗಿದೆ.

ನ್ಯಾಯಾಧೀಶನಾಗಿ ನನ್ನ ಅಧಿಕಾರಾವಧಿ ಮುಗಿದಿದೆ ಮತ್ತು ಇದು ದೊಡ್ಡ ಕ್ಷೇತ್ರವನ್ನು ಪ್ರವೇಶಿಸಲು ಮತ್ತು ಜನರ ಸೇವೆ ಮಾಡಲು ಸೂಕ್ತ ಸಮಯವಾಗಿದೆ ಎಂದು ನನ್ನ ಆತ್ಮ ಹೇಳುತ್ತದೆ. ನಾನು ಮಂಗಳವಾರ ರಾಜೀನಾಮೆ ನೀಡುತ್ತೇನೆ ಎಂದು ಅವರು ಈ ಮೊದಲು ಮಾಧ್ಯಮಗಳಿಗೆ ತಿಳಿಸಿದ್ದರು. ನ್ಯಾಯಾಧೀಶರ ಯಾವ ಪಕ್ಷಕ್ಕೆ ಸೇರತ್ತೇನೆ ಎಂದು ಸ್ಪಷ್ಟಪಡಿಸದಿದ್ದರೂ, ಗಂಗೋಪಾಧ್ಯಾಯ ಅವರು ಕೆಲವೇ ದಿನಗಳಲ್ಲಿ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕರೊಬ್ಬರು ಹಿಂದೂಸ್ತಾನ್‌ ಟೈಮ್ಸ್‌ಗೆ ಮಾಹಿತಿ ನೀಡಿದ್ದಾರೆ.

2018ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಹೈಕೋರ್ಟ್‌ಗೆ ನೇಮಕಗೊಂಡಿದ್ದ 62 ವರ್ಷದ ಗಂಗೋಪಾಧ್ಯಾಯ ಜುಲೈ 2020ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು, ಅವರು ಜುಲೈನಲ್ಲಿ ನಿವೃತ್ತಿ ಪಡೆಯಲಿದ್ದರು. ಅವರು ಪಶ್ಚಿಮ ಬಂಗಾಳ ಸಿವಿಲ್ ಸರ್ವಿಸ್ ಅಧಿಕಾರಿಯಾಗಿದ್ದರು ಆದರೆ ವಕೀಲರಾಗಲು 10 ವರ್ಷಗಳ ಹಿಂದೆ ತಮ್ಮ ಸಿವಿಲ್‌ ಸರ್ವಿಸ್‌ ಹುದ್ದೆಯನ್ನು ತೊರೆದಿದ್ದರು.

ಏಪ್ರಿಲ್ 2023ರಲ್ಲಿ, ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾ. ಗಂಗೋಪಾಧ್ಯಾಯ ಅವರು, ಈ ಹಗರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪಾತ್ರದ ಬಗ್ಗೆ ಸ್ಥಳೀಯ ಬಂಗಾಳಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಟಿವಿ ಚಾನೆಲ್‌ಗಳಿಗೆ ಸಂದರ್ಶನ ನೀಡುವುದು ಹಾಲಿ ನ್ಯಾಯಮೂರ್ತಿಗಳ ಕೆಲಸವಲ್ಲ ಎಂದಿತ್ತು.ನ್ಯಾ. ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಕಲ್ಕತ್ತಾ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಅವರಿಂದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ವರದಿ ಕೇಳಿತ್ತು.

ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದು ನಿಜವಾಗಿದ್ದರೆ, ಅರ್ಜಿಗಳ ವಿಚಾರಣೆ ಮುಂದುವರಿಸಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಅಲ್ಲದೆ, ಪ್ರಕರಣವನ್ನು ಮತ್ತೊಂದು ಪೀಠಕ್ಕೆ ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಿಗೆ ಸಿಜೆಐ ಆದೇಶಿಸಿದ್ದರು. ಸುಪ್ರೀಂ ಕೋರ್ಟ್ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ, ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಬಂಗಾಳಿ ಮಾಧ್ಯಮಗಳಿಗೆ ನೀಡಿದ ಸಂದರ್ಶನದ ವರದಿ ಮತ್ತು ಅಧಿಕೃತ ಅನುವಾದವನ್ನು ತಮ್ಮೆದುರು ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿತ್ತು.

ಇದನ್ನು ಓದಿ: ಮೋದಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...