Homeಮುಖಪುಟಹೈಕೋರ್ಟ್ ಜಡ್ಜ್‌ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ?

ಹೈಕೋರ್ಟ್ ಜಡ್ಜ್‌ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ?

- Advertisement -
- Advertisement -

ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ತಮ್ಮ ಕೆಲವು ತೀರ್ಪುಗಳು ಮತ್ತು ಅವಲೋಕನಗಳಿಗಾಗಿ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನಿಂದ ತೀವ್ರ ಟೀಕೆಗಳನ್ನು ಎದುರಿಸಿದ್ದ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ರಾಜೀನಾಮೆಯನ್ನು ನೇರವಾಗಿ ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಿದ್ದು, ಸಂವಿಧಾನದ 217 (1) (ಎ) ವಿಧಿಯ ಅಡಿಯಲ್ಲಿ ರಾಜೀನಾಮೆ ಜಾರಿಗೆ ಬಂದಿದೆ ಎನ್ನಲಾಗಿದೆ.

ನ್ಯಾಯಾಧೀಶನಾಗಿ ನನ್ನ ಅಧಿಕಾರಾವಧಿ ಮುಗಿದಿದೆ ಮತ್ತು ಇದು ದೊಡ್ಡ ಕ್ಷೇತ್ರವನ್ನು ಪ್ರವೇಶಿಸಲು ಮತ್ತು ಜನರ ಸೇವೆ ಮಾಡಲು ಸೂಕ್ತ ಸಮಯವಾಗಿದೆ ಎಂದು ನನ್ನ ಆತ್ಮ ಹೇಳುತ್ತದೆ. ನಾನು ಮಂಗಳವಾರ ರಾಜೀನಾಮೆ ನೀಡುತ್ತೇನೆ ಎಂದು ಅವರು ಈ ಮೊದಲು ಮಾಧ್ಯಮಗಳಿಗೆ ತಿಳಿಸಿದ್ದರು. ನ್ಯಾಯಾಧೀಶರ ಯಾವ ಪಕ್ಷಕ್ಕೆ ಸೇರತ್ತೇನೆ ಎಂದು ಸ್ಪಷ್ಟಪಡಿಸದಿದ್ದರೂ, ಗಂಗೋಪಾಧ್ಯಾಯ ಅವರು ಕೆಲವೇ ದಿನಗಳಲ್ಲಿ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕರೊಬ್ಬರು ಹಿಂದೂಸ್ತಾನ್‌ ಟೈಮ್ಸ್‌ಗೆ ಮಾಹಿತಿ ನೀಡಿದ್ದಾರೆ.

2018ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಹೈಕೋರ್ಟ್‌ಗೆ ನೇಮಕಗೊಂಡಿದ್ದ 62 ವರ್ಷದ ಗಂಗೋಪಾಧ್ಯಾಯ ಜುಲೈ 2020ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು, ಅವರು ಜುಲೈನಲ್ಲಿ ನಿವೃತ್ತಿ ಪಡೆಯಲಿದ್ದರು. ಅವರು ಪಶ್ಚಿಮ ಬಂಗಾಳ ಸಿವಿಲ್ ಸರ್ವಿಸ್ ಅಧಿಕಾರಿಯಾಗಿದ್ದರು ಆದರೆ ವಕೀಲರಾಗಲು 10 ವರ್ಷಗಳ ಹಿಂದೆ ತಮ್ಮ ಸಿವಿಲ್‌ ಸರ್ವಿಸ್‌ ಹುದ್ದೆಯನ್ನು ತೊರೆದಿದ್ದರು.

ಏಪ್ರಿಲ್ 2023ರಲ್ಲಿ, ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾ. ಗಂಗೋಪಾಧ್ಯಾಯ ಅವರು, ಈ ಹಗರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪಾತ್ರದ ಬಗ್ಗೆ ಸ್ಥಳೀಯ ಬಂಗಾಳಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಟಿವಿ ಚಾನೆಲ್‌ಗಳಿಗೆ ಸಂದರ್ಶನ ನೀಡುವುದು ಹಾಲಿ ನ್ಯಾಯಮೂರ್ತಿಗಳ ಕೆಲಸವಲ್ಲ ಎಂದಿತ್ತು.ನ್ಯಾ. ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಕಲ್ಕತ್ತಾ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಅವರಿಂದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ವರದಿ ಕೇಳಿತ್ತು.

ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದು ನಿಜವಾಗಿದ್ದರೆ, ಅರ್ಜಿಗಳ ವಿಚಾರಣೆ ಮುಂದುವರಿಸಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಅಲ್ಲದೆ, ಪ್ರಕರಣವನ್ನು ಮತ್ತೊಂದು ಪೀಠಕ್ಕೆ ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಿಗೆ ಸಿಜೆಐ ಆದೇಶಿಸಿದ್ದರು. ಸುಪ್ರೀಂ ಕೋರ್ಟ್ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ, ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಬಂಗಾಳಿ ಮಾಧ್ಯಮಗಳಿಗೆ ನೀಡಿದ ಸಂದರ್ಶನದ ವರದಿ ಮತ್ತು ಅಧಿಕೃತ ಅನುವಾದವನ್ನು ತಮ್ಮೆದುರು ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿತ್ತು.

ಇದನ್ನು ಓದಿ: ಮೋದಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...