Homeಮುಖಪುಟಚುನಾವಣಾ ಬಾಂಡ್‌: SBI ಕಾಲಾವಕಾಶ ಕೋರಿರುವುದರ ವಿರುದ್ಧ ಭುಗಿಲೆದ್ದ ಆಕ್ರೋಶ

ಚುನಾವಣಾ ಬಾಂಡ್‌: SBI ಕಾಲಾವಕಾಶ ಕೋರಿರುವುದರ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಸಾರ್ವಜನಿಕ ಚುನಾವಣಾ ಬಾಂಡ್ ವಿವರಗಳನ್ನು ನೀಡಲು ಜೂನ್ 30ರವರೆಗೆ ಮೂರುವರೆ ತಿಂಗಳಿಗಿಂತ ಹೆಚ್ಚು ಹೆಚ್ಚುವರಿ ಸಮಯವನ್ನು ಕೋರಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅರ್ಜಿ ಬಗ್ಗೆ ವ್ಯಾಪಕವಾದಂತಹ ಆಕ್ರೋಶ ವ್ಯಕ್ತವಾಗಿದೆ. ಸುಪ್ರೀಂಕೋರ್ಟ್‌ ಆದೇಶವಿರುವಾಗ ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಏಕೆ ಸಾರ್ವಜನಿಕಗೊಳಿಸುತ್ತಿಲ್ಲ? ಎಂದು ಪ್ರತಿಪಕ್ಷಗಳ ನಾಯಕರು ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.

ಎಸ್‌ಬಿಐಯ ಅರ್ಜಿ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನರೇಂದ್ರ ಮೋದಿಯವರು ದೇಣಿಗೆ ವ್ಯವಹಾರವನ್ನು ಮರೆಮಾಚಲು ತಮ್ಮ ಕೈಲಾದಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್‌ಗಳ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ದೇಶವಾಸಿಗಳ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿರುವಾಗ, ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಸಾರ್ವಜನಿಕಗೊಳಿಸಬಾರದು ಎಂದು ಏಕೆ ಬಯಸುತ್ತಿದೆ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಒಂದೇ ಕ್ಲಿಕ್‌ನಲ್ಲಿ ಪಡೆಯಬಹುದಾದ ಮಾಹಿತಿಯನ್ನು ನೀಡಲು ಜೂನ್ 30ರವರೆಗೆ ಸಮಯ ಕೇಳುವುದು, ಅದರ ಹಿಂದಿನ ಉದ್ದೇಶವನ್ನು ತೋರಿಸುತ್ತದೆ. ದೇಶದ ಪ್ರತಿಯೊಂದು ಸ್ವತಂತ್ರ ಸಂಸ್ಥೆಗಳು ತಮ್ಮ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ‘ಮೋದಾನಿ’ ಕುಟುಂಬದ ಭಾಗವಾಗುತ್ತಿದೆ. ಚುನಾವಣೆಗೂ ಮುನ್ನ ಮೋದಿಯ ನಿಜಮುಖವನ್ನು ಮರೆ ಮಾಚಲು ಇದು ಕೊನೆಯ ಪ್ರಯತ್ನ ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್‌ಗಳ ಮಾಹಿತಿ ನೀಡಲು ಸಮಯಾವಕಾಶ ಕೇಳಿದ ಎಸ್‌ಬಿಐ ಬೇಡಿಕೆ ವಿಚಾರವನ್ನು ಮುಂದಿಟ್ಟುಕೊಂಡು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಶಿವಸೇನೆ ಸಂಸದ ಸಂಜಯ್ ರಾವತ್, ‘ಇಂಡಿಯಾವನ್ನು ‘ಡಿಜಿಟಲ್ ಇಂಡಿಯಾ’ಕ್ಕೆ ಬದಲಾಯಿಸಿದ ಪ್ರಧಾನಿಯನ್ನು ಬ್ಯಾಂಕ್ ಅಧಿಕಾರಿಗಳು ಅವಮಾನಿಸಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ. ಎಸ್‌ಬಿಐ ಅಧ್ಯಕ್ಷರು ಮತ್ತು ನಿರ್ದೇಶಕರು “ನಮ್ಮ ಪ್ರಧಾನಿ ಮೋದಿಯನ್ನು ಅವಮಾನಿಸಿದ್ದಕ್ಕಾಗಿ ಅವರನ್ನು ಶಿಕ್ಷಿಸಬೇಕು” ಎಂದು ಹೇಳಿದ್ದಾರೆ.

ಈ ಬಗ್ಗೆ ಲೇವಡಿ ಮಾಡಿರುವ ರಾವತ್ಮ ‘ಮೋದಿಜಿ ಇಂಡಿಯಾವನ್ನು ಬದಲಾಯಿಸಿದ್ದಾರೆ, ಈಗ ಅದು ಡಿಜಿಟಲ್ ಇಂಡಿಯಾ! ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಲ್ಲಿಸಲು ಎಸ್‌ಬಿಐ ಸುಪ್ರೀಂ ಕೋರ್ಟ್‌ಗೆ 4 ತಿಂಗಳ ಸಮಯವನ್ನು ಕೇಳಿದೆ’ ಎಂದು ಪ್ರಧಾನಿ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

‘365 ದಿನಗಳು 9 ವರ್ಷ 10 ತಿಂಗಳು 20 ಗಂಟೆ ದುಡಿಯುತ್ತಿರುವ ನಮ್ಮ ಪ್ರೀತಿಯ ಪ್ರಧಾನಿ ಮೋದಿಜಿಯನ್ನು ಅವಮಾನಿಸಲು ಅವರಿಗೆ ಎಷ್ಟು ಧೈರ್ಯ!  ಈ ‘ಕಾಮ್ ಚೋರ್‌’ಗೆ 4 ತಿಂಗಳು ಬೇಕೇ? ಅವರೆಲ್ಲರನ್ನೂ ಜೈಲಿಗೆ ಕಳುಹಿಸಿ’ ಎಂದು ಸಂಜಯ್ ರಾವುತ್ ಬರೆದುಕೊಂಡಿದ್ದಾರೆ.

ಈ ಬಗ್ಗೆ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಪ್ರತಿಕ್ರಿಯಿಸಿದ್ದು, ಇದು ಸಂಪೂರ್ಣ ದುರುದ್ದೇಶಪೂರಿತವಾಗಿದೆ. ಎಸ್‌ಬಿಐ ಈ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಿದ್ದ ಒಂದು ದಿನ ಮುಂಚಿತವಾಗಿ ಈ ಅರ್ಜಿಯನ್ನು ಸಲ್ಲಿಸಿದೆ. ಮೂರು ದಿನಗಳ ಕಾಲ ಅವರು ಏನೂ ಮಾಡಲಿಲ್ಲ, ಮತ್ತು ಈಗ ಅವರು ಚುನಾವಣೆ ಕಳೆದ ಬಳಿಕ ಅಂದರೆ ಜೂನ್ 30ರವರೆಗೆ ವಿಸ್ತರಣೆಗೆ ಕೋರಿರುವುದು ಏಕೆ? ಏಕೆಂದರೆ ಸರ್ಕಾರ ಅವರನ್ನು ಈ ಅರ್ಜಿಯನ್ನು ಸಲ್ಲಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.

 

ಈ ಕುರಿತು ಪ್ರತಿಕ್ರಿಯಿಸಿದ ತನಿಖಾ ಪತ್ರಕರ್ತ ಸೌರವ್‌ ದಾಸ್‌, ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ಡೇಟಾವನ್ನು ಎಸ್‌ಬಿಐ ಸುಲಭವಾಗಿ ನಾಶಪಡಿಸಲು ಸಾಧ್ಯವಿದೆ ಎಂಬುದಕ್ಕೆ ಇದು ಪುರಾವೆಯಾಗಿದೆ. ಹೆಚ್ಚು ಸಮಯವನ್ನು ಕೇಳುವ ಮೂಲಕ ಅವರು ಸುಳ್ಳು ಸಾಕ್ಷಿ ಹೇಳುತ್ತಿದ್ದಾರೆಯೇ? ಸಂವಿಧಾನ ಪೀಠ ಈ ಬಗ್ಗೆ ಎಸ್ಬಿಐ ಮುಖ್ಯಸ್ಥರಿಗೆ ಸಮನ್ಸ್ ನೀಡಬೇಕು ಎಂದು ಹೇಳಿದ್ದಾರೆ. 

ಅತ್ಯಂತ ಚಿಕ್ಕ ಬ್ಯಾಂಕ್ ಕೂಡ ಕೆಲವು ವಾರಗಳಲ್ಲಿ ಮೂಲಭೂತ ಮಾಹಿತಿಯನ್ನು (ದಾನಿ ಮತ್ತು ಸ್ವೀಕರಿಸುವವರನ್ನು) ನೀಡಲು ಸಾಧ್ಯವಿಲ್ಲ ಎಂದು ಹೇಳಿದರೆ, ಅದರ ಬ್ಯಾಂಕಿಂಗ್ ಪರವಾನಗಿಯನ್ನು ಮೂಲ ದಾಖಲೆ ರಕ್ಷಣೆ ನಿಯಮಗಳ ಉಲ್ಲಂಘನೆಗೆ ರದ್ದುಗೊಳಿಸಲಾಗುತ್ತದೆ. ಇದು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯ ಅತಿದೊಡ್ಡ ಬ್ಯಾಂಕ್ ಆಗಿದೆ ಎಂದು ತಮಿಳುನಾಡಿನ ಸಚಿವ ತ್ಯಾಗರಾಜನ್‌ ಪೋಸ್ಟ್‌ ಮಾಡಿದ್ದಾರೆ.

 

ಈ ಕುರಿತು ಕಾಂಗ್ರೆಸ್‌ ನಾಯಕಿ ಸುಪ್ರಿಯಾ ಶ್ರೀನಾಟೆ ಪ್ರತಿಕ್ರಿಯಿಸಿದ್ದು, ಎಸ್‌ಬಿಐ ಚುನಾವಣಾ ಬಾಂಡ್‌ಗಳ ಮಾಲೀಕರ ವಿವರಗಳನ್ನು ಬಹಿರಂಗಪಡಿಸುವ 24 ಗಂಟೆಗಳ ಮೊದಲು, ಅವರ ಹೆಸರನ್ನು ಸಾರ್ವಜನಿಕಗೊಳಿಸಲು ಜೂನ್ 30, 2024 ರವರೆಗೆ ಸಮಯ ಕೇಳಿದೆ. ಕೇವಲ 22,217 ಎಲೆಕ್ಟೋರಲ್ ಬಾಂಡ್‌ಗಳ ವಿವರಗಳನ್ನು ನೀಡಲು ದೇಶದ ಅತಿದೊಡ್ಡ ಬ್ಯಾಂಕ್‌ಗೆ 5 ತಿಂಗಳ ಸಮಯ ಏಕೆ ಬೇಕು? ಬಿಜೆಪಿಗೆ ಯಾಕೆ ಇಷ್ಟೊಂದು ಭಯ? ಸಂಸ್ಥೆಗಳು ಬಿಜೆಪಿಗೆ ದೇಣಿಗೆ ನೀಡುವಂತೆ ಕಂಪನಿಗಳನ್ನು ಒತ್ತಾಯಿಸುತ್ತಿವೆಯೇ? ಇದು ವಿವರಗಳನ್ನು ಮರೆಮಾಚಲು ಪ್ರಧಾನಿ ಮೋದಿ ಮತ್ತು ಬಿಜೆಪಿಯ ಆದೇಶದ ಸ್ಪಷ್ಟ ಪ್ರಯತ್ನವಾಗಿದೆ. ಈ ಕೆಟ್ಟ ಸಂಚನ್ನು ಜನರು ನೋಡಬಹುದು. ಎಸ್‌ಬಿಐ ರಾಜಕೀಯ ಪಕ್ಷವೊಂದರ ಕೈಯಲ್ಲಿದ್ದು ಜೊತೆಗೆ ತನ್ನದೇ ಆದ ಖ್ಯಾತಿಯನ್ನು ಹಾಳುಮಾಡಿಕೊಳ್ಳುವುದರ ಜೊತೆಗೆ, ದೇಶದ ಅತಿದೊಡ್ಡ ಬ್ಯಾಂಕ್ ಸುಪ್ರೀಂಕೋರ್ಟ್‌ ಆದೇಶವನ್ನು ಉಲ್ಲಂಘಿಸುತ್ತಿದೆ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡಲು ಜೂನ್ 30ರವರೆಗೆ ಗಡುವನ್ನು ವಿಸ್ತರಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಕಳೆದ ತಿಂಗಳು ಐತಿಹಾಸಿಕ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿತ್ತು ಮತ್ತು ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ (ಇಸಿ) ಬಾಂಡ್‌ಗಳ ಕುರಿತು ಮಾಹಿತಿ ನೀಡುವಂತೆ ಎಸ್‌ಬಿಐಗೆ ಸೂಚಿಸಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಮನೀಶ್‌ ತಿವಾರಿ, ಎಲೆಕ್ಟೋರಲ್ ಬಾಂಡ್‌ಗಳ ಮೇಲಿನ ವಂಚನೆಯಿಂದ ತಪ್ಪಿಸಿಕೊಳ್ಳಲು ಎಸ್‌ಬಿಐ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಅವಕಾಶ ನೀಡಬಾರದು. ಸಾರ್ವತ್ರಿಕ ಚುನಾವಣೆಯ ಮೊದಲು ಯಾರಿಂದ ಏನನ್ನು ಪಡೆದರು ಎಂಬುವುದನ್ನು ಜನರು ಅರಿಯಬೇಕು ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್:

ಜನ ಸಾಮಾನ್ಯರು, ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ನೀಡುವ ಒಂದು ವಿಧದ ದೇಣಿಗೆ ಕ್ರಮವಾಗಿದೆ ಚುನಾವಣಾ ಬಾಂಡ್. ಜನರು 1,000 ರೂ, 10,000 ರೂ, 1 ಲಕ್ಷ ರೂ, 10 ಲಕ್ಷ ರೂ, 1 ಕೋಟಿ ರೂ ಇತ್ಯಾದಿ ಮುಖಬೆಲೆಗಳಲ್ಲಿ ಬಾಂಡ್​ಗಳನ್ನು ಖರೀದಿಸಬಹುದಿತ್ತು. ಈ ಬಾಂಡ್​ಗಳು ಅನಾಮಧೇಯವಾಗಿತ್ತು. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ ಸಂಸ್ಥೆಯ ಹೆಸರು ಬಹಿರಂಗಗೊಳ್ಳುತ್ತಿರಲಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗವಾಗುತ್ತಿರಲಿಲ್ಲ.

ಜನವರಿ 2,2018ರಂದು ಅಂದಿನ ಮೋದಿ ಸರ್ಕಾರ ಚುನಾವಣಾ ಬಾಂಡ್ ಯೋಜನೆಗೆ ಅಧಿಸೂಚನೆ ಹೊರಡಿಸಿತ್ತು. ಚುನಾವಣಾ ಬಾಂಡ್​ಗಳನ್ನು ಹಣಕಾಸು ಕಾಯ್ದೆ 2017ರ ತಿದ್ದುಪಡಿ ಮೂಲಕ ಜಾರಿಗೆ ತರಲಾಗಿತ್ತು. ಈ ಬಾಂಡ್​ಗಳನ್ನು ವರ್ಷಕ್ಕೆ ನಾಲ್ಕು ಬಾರಿ, ಅಂದರೆ ಜನವರಿ, ಏಪ್ರಿಲ್, ಜುಲೈ ಹಾಗೂ ಅಕ್ಟೋಬರ್​ನಲ್ಲಿ ನೀಡಲಾಗುತ್ತಿತ್ತು. ಜನರು ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ಅಥವಾ ವೆಬ್​ಸೈಟ್​ನಲ್ಲಿ ಆನ್​ಲೈನ್​ನಲ್ಲಿ ಇದನ್ನು ಖರೀದಿಸಬಹುದಿತ್ತು.

ಇದನ್ನು ಓದಿ:  ನೀವು ಜೈ ಶ್ರೀರಾಮ್ ಘೋಷಣೆ ಕೂಗಬೇಕು, ಹಸಿವಿನಿಂದ ಸಾಯಬೇಕೆಂದು ಪ್ರಧಾನಿ ಬಯಸುತ್ತಾರೆ: ರಾಹುಲ್‌ ಗಾಂಧಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...