Homeಮುಖಪುಟಇಸ್ರೇಲ್-ಹಮಾಸ್ ಯುದ್ಧ: ಕ್ಷಿಪಣಿ ದಾಳಿಗೆ ಬಲಿಯಾದ ಮ್ಯಾಕ್ಸ್‌ವೆಲ್ ಪತ್ನಿ 7 ತಿಂಗಳ ಗರ್ಭಿಣಿ

ಇಸ್ರೇಲ್-ಹಮಾಸ್ ಯುದ್ಧ: ಕ್ಷಿಪಣಿ ದಾಳಿಗೆ ಬಲಿಯಾದ ಮ್ಯಾಕ್ಸ್‌ವೆಲ್ ಪತ್ನಿ 7 ತಿಂಗಳ ಗರ್ಭಿಣಿ

- Advertisement -
- Advertisement -

ಇಸ್ರೇಲ್-ಲೆಬನಾನ್ ಗಡಿಯಲ್ಲಿ ಕ್ಷಿಪಣಿ ದಾಳಿಗೆ ಬಲಿಯಾದ 31 ವರ್ಷದ ಭಾರತೀಯ ವ್ಯಕ್ತಿ ಎರಡು ತಿಂಗಳ ಹಿಂದೆಯಷ್ಟೇ ಕೇರಳದ ಕೊಲ್ಲಂನಲ್ಲಿರುವ ತನ್ನ ಮನೆಯಿಂದ ತೆರಳಿದ್ದ ಎಂದು ತಿಳಿದುಬಂದಿದೆ. ಅವರ ಐದು ವರ್ಷದ ಮಗಳು ಮತ್ತು ಗರ್ಭಿಣಿ ಪತ್ನಿ ಅವರನ್ನು ಇಸ್ರೇಲಿಗೆ ಬೀಳ್ಕೊಟ್ಟಿದ್ದರು. ಇದೇ ಅವರಿಗೆ ಅಂತಿಮ ವಿದಾಯ ಎಂದು ಯಾರಿಗೂ ತಿಳಿದಿರಲಿಲ್ಲ.

ನಿನ್ನೆ ಉತ್ತರ ಇಸ್ರೇಲ್‌ನ ಮಾರ್ಗಲಿಯೋಟ್‌ನ ಹಣ್ಣಿನ ತೋಟದ ಬಳಿ ಕ್ಷಿಪಣಿ ದಾಳಿಯಲ್ಲಿ ಪ್ಯಾಟ್ ನಿಬಿನ್ ಮ್ಯಾಕ್ಸ್‌ವೆಲ್ ಕೊಲ್ಲಲ್ಪಟ್ಟಿದ್ದು, ದಾಳಿಯಲ್ಲಿ ಕೇರಳ ಮೂಲದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಇಡುಕ್ಕಿ ಮೂಲದ ಪಾಲ್ ಮೆಲ್ವಿನ್ ಮತ್ತು ಬುಷ್ ಜೋಸೆಫ್ ಜಾರ್ಜ್ ಇಸ್ರೇಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಈ ಬಗ್ಗೆ ಮಾಹಿತಿ ನೀಡಿ ಹಣ್ಣಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಶಾಂತಿಯುತ ಕೃಷಿ ಕಾರ್ಮಿಕರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ಖಂಡಿಸಿದೆ. ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಅವರು ಮ್ಯಾಕ್ಸ್‌ವೆಲ್ ಅವರ ಸಹೋದರನೊಂದಿಗೆ ಮಾತನಾಡಿದ್ದಾರೆ ಮತ್ತು ಅವರಿಗೆ ಎಲ್ಲಾ ಸಹಾಯದ ಭರವಸೆ ನೀಡಿದ್ದಾರೆ.

ನಿಬಿನ್ ಅವರ ತಂದೆ ಪಾಥ್ರೋಸ್ ಅವರು 31 ವರ್ಷ ವಯಸ್ಸಿನ ಮಗ ತನ್ನ ಹಿರಿಯ ಸಹೋದರನನ್ನು ಜೊತೆ ಇಸ್ರೇಲಿಗೆ ತೆರಳಿದ್ದರು ಎಂದು ಹೇಳಿದರು. ‘ಅವರು ಮಸ್ಕತ್ ಮತ್ತು ದುಬೈನಲ್ಲಿದ್ದರು; ನಂತರ ಮನೆಗೆ ಮರಳಿದರು. ನಂತರ ಅವರು ಇಸ್ರೇಲಿಗೆ ಹೋದರು. ಮೊದಲು ನನ್ನ ಹಿರಿಯ ಮಗ ಅಲ್ಲಿಗೆ ಹೋದನು; ಒಂದು ವಾರದ ನಂತರ ನನ್ನ ಕಿರಿಯ ಮಗ ಅವನನ್ನು ಹಿಂಬಾಲಿಸಿದನು’ ಎಂದು ಅವರು ಹೇಳಿದರು.

ಪಾಥ್ರೋಸ್ ಮ್ಯಾಕ್ಸ್‌ವೆಲ್ ಅವರು ತಮ್ಮ ಸೊಸೆಯಿಂದ ಮಗನ ಸುದ್ದಿ ತಿಳಿದುಕೊಂಡಿದ್ದಾರೆ. ‘ಸೋಮವಾರ ಸಂಜೆ 4.30 ರ ಸುಮಾರಿಗೆ ನನಗೆ ಕರೆ ಮಾಡಿ ನಿಬಿನ್ ಹಲ್ಲೆಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿಸಿದಳು. ನಂತರ ಮಧ್ಯರಾತ್ರಿ 12.45 ರ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ ಎಂದು ನಮಗೆ ಮಾಹಿತಿ ಸಿಕ್ಕಿತು’ ಎಂದು ನೋವು ತೋಡಿಕೊಂಡಿದ್ದಾರೆ.

ಮಗನ ಸಾವಿನಿಂದ ಆಘಾತಕ್ಕೊಳಗಾದ ತಂದೆ ನಿಬಿನ್, ‘ನನ್ನ ಮಗ ನಾಲ್ಕೂವರೆ ವರ್ಷದ ಮಗಳನ್ನು ಅಗಲಿದ್ದಾನೆ; ಅತನ ಪತ್ನಿ ತಮ್ಮ ಎರಡನೇ ಮಗುವಿಗೆ ಏಳು ತಿಂಗಳ ಗರ್ಭಿಣಿಯಾಗಿದ್ದಾರೆ’ ಎಂದು ಹೇಳಿದರು.

ದಾಖಲೆ ಪತ್ರಗಳು ಮತ್ತು ವಿಧಿವಿಧಾನಗಳ ನಂತರ ನಿಬಿನ್ ಮೃತದೇಹವನ್ನು ನಾಲ್ಕು ದಿನಗಳಲ್ಲಿ ಕೇರಳಕ್ಕೆ ತರಲಾಗುವುದು ಎಂದು ನಿರೀಕ್ಷಿಸಲಾಗಿದೆ.

ಇಸ್ರೇಲ್-ಹಮಾಸ್ ಯುದ್ಧದಲ್ಲಿ ಮೊದಲ ಭಾರತೀಯ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ, ಇಸ್ರೇಲ್‌ನಲ್ಲಿ ವಾಸಿಸುವ ಭಾರತೀಯರಿಗೆ ಕೇಂದ್ರ ಸರ್ಕಾರ ಹಲವು ಸಲಹೆಯನ್ನು ನೀಡಿದೆ.

‘ಪ್ರಚಲಿತ ಭದ್ರತಾ ಪರಿಸ್ಥಿತಿ ಮತ್ತು ಸ್ಥಳೀಯ ಸುರಕ್ಷತಾ ಸಲಹೆಗಳ ದೃಷ್ಟಿಯಿಂದ, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯರು, ವಿಶೇಷವಾಗಿ ಉತ್ತರ ಮತ್ತು ದಕ್ಷಿಣದ ಗಡಿ ಪ್ರದೇಶಗಳಲ್ಲಿ ಕೆಲಸ ಮಾಡುವ ಅಥವಾ ಭೇಟಿ ನೀಡುವವರು, ಇಸ್ರೇಲ್‌ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ರಾಯಭಾರ ಕಚೇರಿಯು ಕಾರ್ಮಿಕರ ಸಂಪರ್ಕದಲ್ಲಿದೆ. ಇಸ್ರೇಲಿ ಅಧಿಕಾರಿಗಳು ನಮ್ಮ ಎಲ್ಲಾ ಪ್ರಜೆಗಳ ಸುರಕ್ಷತೆಯನ್ನು ಖಾತ್ರಿಪಡಿಸಬೇಕು’ ಎಂದು ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿದೆ.

ಉತ್ತರ ಇಸ್ರೇಲ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಹಮಾಸ್‌ಗೆ ಬೆಂಬಲವಾಗಿ ಹೆಜ್ಬೊಲ್ಲಾದ ಶಿಯಾ ಬಣವು ರಾಕೆಟ್ ದಾಳಿ ಮತ್ತು ಡ್ರೋನ್ ದಾಳಿಗಳನ್ನು ನಡೆಸುತ್ತಿದೆ.

ಇಸ್ರೇಲಿ ನಗರಗಳ ಮೇಲೆ ಅಕ್ಟೋಬರ್ 7 ರ ದಾಳಿಯ ನಂತರ ಸುಮಾರು ಐದು ತಿಂಗಳ ಕಾಲ ಇಸ್ರೇಲ್-ಹಮಾಸ್ ಯುದ್ಧವು ಉಲ್ಬಣಗೊಂಡಿದೆ. ಟೆಲ್ ಅವಿವ್‌ನ ಕ್ರೂರ ಪ್ರತಿದಾಳಿಯು ಗಾಜಾ ಪಟ್ಟಿಯಲ್ಲಿ ಸಾವಿರಾರು ಸಾವುಗಳಿಗೆ ಕಾರಣವಾಗಿದೆ. ಸಂಘರ್ಷ ಮತ್ತು ಅದು ಕಾರಣವಾದ ಮಾನವೀಯ ಬಿಕ್ಕಟ್ಟಿನಿಂದ ತಾನು ತೀವ್ರವಾಗಿ ತೊಂದರೆಗೀಡಾಗಿದೆ ಎಂದು ಭಾರತ ಸರ್ಕಾರ ಹೇಳಿದೆ.

ಇದನ್ನೂ ಓದಿ; ಇಸ್ರೇಲ್-ಹಮಾಸ್ ಯುದ್ಧ: ‘ಹೆಜ್ಬುಲ್ಲಾ’ ಕ್ಷಿಪಣಿ ದಾಳಿಗೆ ಕೇರಳದ ವ್ಯಕ್ತಿ ಬಲಿ; ಮತ್ತಿಬ್ಬರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...