Homeಮುಖಪುಟಇಸ್ರೇಲ್-ಹಮಾಸ್ ಯುದ್ಧ: ಕ್ಷಿಪಣಿ ದಾಳಿಗೆ ಬಲಿಯಾದ ಮ್ಯಾಕ್ಸ್‌ವೆಲ್ ಪತ್ನಿ 7 ತಿಂಗಳ ಗರ್ಭಿಣಿ

ಇಸ್ರೇಲ್-ಹಮಾಸ್ ಯುದ್ಧ: ಕ್ಷಿಪಣಿ ದಾಳಿಗೆ ಬಲಿಯಾದ ಮ್ಯಾಕ್ಸ್‌ವೆಲ್ ಪತ್ನಿ 7 ತಿಂಗಳ ಗರ್ಭಿಣಿ

- Advertisement -
- Advertisement -

ಇಸ್ರೇಲ್-ಲೆಬನಾನ್ ಗಡಿಯಲ್ಲಿ ಕ್ಷಿಪಣಿ ದಾಳಿಗೆ ಬಲಿಯಾದ 31 ವರ್ಷದ ಭಾರತೀಯ ವ್ಯಕ್ತಿ ಎರಡು ತಿಂಗಳ ಹಿಂದೆಯಷ್ಟೇ ಕೇರಳದ ಕೊಲ್ಲಂನಲ್ಲಿರುವ ತನ್ನ ಮನೆಯಿಂದ ತೆರಳಿದ್ದ ಎಂದು ತಿಳಿದುಬಂದಿದೆ. ಅವರ ಐದು ವರ್ಷದ ಮಗಳು ಮತ್ತು ಗರ್ಭಿಣಿ ಪತ್ನಿ ಅವರನ್ನು ಇಸ್ರೇಲಿಗೆ ಬೀಳ್ಕೊಟ್ಟಿದ್ದರು. ಇದೇ ಅವರಿಗೆ ಅಂತಿಮ ವಿದಾಯ ಎಂದು ಯಾರಿಗೂ ತಿಳಿದಿರಲಿಲ್ಲ.

ನಿನ್ನೆ ಉತ್ತರ ಇಸ್ರೇಲ್‌ನ ಮಾರ್ಗಲಿಯೋಟ್‌ನ ಹಣ್ಣಿನ ತೋಟದ ಬಳಿ ಕ್ಷಿಪಣಿ ದಾಳಿಯಲ್ಲಿ ಪ್ಯಾಟ್ ನಿಬಿನ್ ಮ್ಯಾಕ್ಸ್‌ವೆಲ್ ಕೊಲ್ಲಲ್ಪಟ್ಟಿದ್ದು, ದಾಳಿಯಲ್ಲಿ ಕೇರಳ ಮೂಲದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಇಡುಕ್ಕಿ ಮೂಲದ ಪಾಲ್ ಮೆಲ್ವಿನ್ ಮತ್ತು ಬುಷ್ ಜೋಸೆಫ್ ಜಾರ್ಜ್ ಇಸ್ರೇಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಈ ಬಗ್ಗೆ ಮಾಹಿತಿ ನೀಡಿ ಹಣ್ಣಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಶಾಂತಿಯುತ ಕೃಷಿ ಕಾರ್ಮಿಕರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ಖಂಡಿಸಿದೆ. ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಅವರು ಮ್ಯಾಕ್ಸ್‌ವೆಲ್ ಅವರ ಸಹೋದರನೊಂದಿಗೆ ಮಾತನಾಡಿದ್ದಾರೆ ಮತ್ತು ಅವರಿಗೆ ಎಲ್ಲಾ ಸಹಾಯದ ಭರವಸೆ ನೀಡಿದ್ದಾರೆ.

ನಿಬಿನ್ ಅವರ ತಂದೆ ಪಾಥ್ರೋಸ್ ಅವರು 31 ವರ್ಷ ವಯಸ್ಸಿನ ಮಗ ತನ್ನ ಹಿರಿಯ ಸಹೋದರನನ್ನು ಜೊತೆ ಇಸ್ರೇಲಿಗೆ ತೆರಳಿದ್ದರು ಎಂದು ಹೇಳಿದರು. ‘ಅವರು ಮಸ್ಕತ್ ಮತ್ತು ದುಬೈನಲ್ಲಿದ್ದರು; ನಂತರ ಮನೆಗೆ ಮರಳಿದರು. ನಂತರ ಅವರು ಇಸ್ರೇಲಿಗೆ ಹೋದರು. ಮೊದಲು ನನ್ನ ಹಿರಿಯ ಮಗ ಅಲ್ಲಿಗೆ ಹೋದನು; ಒಂದು ವಾರದ ನಂತರ ನನ್ನ ಕಿರಿಯ ಮಗ ಅವನನ್ನು ಹಿಂಬಾಲಿಸಿದನು’ ಎಂದು ಅವರು ಹೇಳಿದರು.

ಪಾಥ್ರೋಸ್ ಮ್ಯಾಕ್ಸ್‌ವೆಲ್ ಅವರು ತಮ್ಮ ಸೊಸೆಯಿಂದ ಮಗನ ಸುದ್ದಿ ತಿಳಿದುಕೊಂಡಿದ್ದಾರೆ. ‘ಸೋಮವಾರ ಸಂಜೆ 4.30 ರ ಸುಮಾರಿಗೆ ನನಗೆ ಕರೆ ಮಾಡಿ ನಿಬಿನ್ ಹಲ್ಲೆಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿಸಿದಳು. ನಂತರ ಮಧ್ಯರಾತ್ರಿ 12.45 ರ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ ಎಂದು ನಮಗೆ ಮಾಹಿತಿ ಸಿಕ್ಕಿತು’ ಎಂದು ನೋವು ತೋಡಿಕೊಂಡಿದ್ದಾರೆ.

ಮಗನ ಸಾವಿನಿಂದ ಆಘಾತಕ್ಕೊಳಗಾದ ತಂದೆ ನಿಬಿನ್, ‘ನನ್ನ ಮಗ ನಾಲ್ಕೂವರೆ ವರ್ಷದ ಮಗಳನ್ನು ಅಗಲಿದ್ದಾನೆ; ಅತನ ಪತ್ನಿ ತಮ್ಮ ಎರಡನೇ ಮಗುವಿಗೆ ಏಳು ತಿಂಗಳ ಗರ್ಭಿಣಿಯಾಗಿದ್ದಾರೆ’ ಎಂದು ಹೇಳಿದರು.

ದಾಖಲೆ ಪತ್ರಗಳು ಮತ್ತು ವಿಧಿವಿಧಾನಗಳ ನಂತರ ನಿಬಿನ್ ಮೃತದೇಹವನ್ನು ನಾಲ್ಕು ದಿನಗಳಲ್ಲಿ ಕೇರಳಕ್ಕೆ ತರಲಾಗುವುದು ಎಂದು ನಿರೀಕ್ಷಿಸಲಾಗಿದೆ.

ಇಸ್ರೇಲ್-ಹಮಾಸ್ ಯುದ್ಧದಲ್ಲಿ ಮೊದಲ ಭಾರತೀಯ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ, ಇಸ್ರೇಲ್‌ನಲ್ಲಿ ವಾಸಿಸುವ ಭಾರತೀಯರಿಗೆ ಕೇಂದ್ರ ಸರ್ಕಾರ ಹಲವು ಸಲಹೆಯನ್ನು ನೀಡಿದೆ.

‘ಪ್ರಚಲಿತ ಭದ್ರತಾ ಪರಿಸ್ಥಿತಿ ಮತ್ತು ಸ್ಥಳೀಯ ಸುರಕ್ಷತಾ ಸಲಹೆಗಳ ದೃಷ್ಟಿಯಿಂದ, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯರು, ವಿಶೇಷವಾಗಿ ಉತ್ತರ ಮತ್ತು ದಕ್ಷಿಣದ ಗಡಿ ಪ್ರದೇಶಗಳಲ್ಲಿ ಕೆಲಸ ಮಾಡುವ ಅಥವಾ ಭೇಟಿ ನೀಡುವವರು, ಇಸ್ರೇಲ್‌ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ರಾಯಭಾರ ಕಚೇರಿಯು ಕಾರ್ಮಿಕರ ಸಂಪರ್ಕದಲ್ಲಿದೆ. ಇಸ್ರೇಲಿ ಅಧಿಕಾರಿಗಳು ನಮ್ಮ ಎಲ್ಲಾ ಪ್ರಜೆಗಳ ಸುರಕ್ಷತೆಯನ್ನು ಖಾತ್ರಿಪಡಿಸಬೇಕು’ ಎಂದು ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿದೆ.

ಉತ್ತರ ಇಸ್ರೇಲ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಹಮಾಸ್‌ಗೆ ಬೆಂಬಲವಾಗಿ ಹೆಜ್ಬೊಲ್ಲಾದ ಶಿಯಾ ಬಣವು ರಾಕೆಟ್ ದಾಳಿ ಮತ್ತು ಡ್ರೋನ್ ದಾಳಿಗಳನ್ನು ನಡೆಸುತ್ತಿದೆ.

ಇಸ್ರೇಲಿ ನಗರಗಳ ಮೇಲೆ ಅಕ್ಟೋಬರ್ 7 ರ ದಾಳಿಯ ನಂತರ ಸುಮಾರು ಐದು ತಿಂಗಳ ಕಾಲ ಇಸ್ರೇಲ್-ಹಮಾಸ್ ಯುದ್ಧವು ಉಲ್ಬಣಗೊಂಡಿದೆ. ಟೆಲ್ ಅವಿವ್‌ನ ಕ್ರೂರ ಪ್ರತಿದಾಳಿಯು ಗಾಜಾ ಪಟ್ಟಿಯಲ್ಲಿ ಸಾವಿರಾರು ಸಾವುಗಳಿಗೆ ಕಾರಣವಾಗಿದೆ. ಸಂಘರ್ಷ ಮತ್ತು ಅದು ಕಾರಣವಾದ ಮಾನವೀಯ ಬಿಕ್ಕಟ್ಟಿನಿಂದ ತಾನು ತೀವ್ರವಾಗಿ ತೊಂದರೆಗೀಡಾಗಿದೆ ಎಂದು ಭಾರತ ಸರ್ಕಾರ ಹೇಳಿದೆ.

ಇದನ್ನೂ ಓದಿ; ಇಸ್ರೇಲ್-ಹಮಾಸ್ ಯುದ್ಧ: ‘ಹೆಜ್ಬುಲ್ಲಾ’ ಕ್ಷಿಪಣಿ ದಾಳಿಗೆ ಕೇರಳದ ವ್ಯಕ್ತಿ ಬಲಿ; ಮತ್ತಿಬ್ಬರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...