Homeಮುಖಪುಟಪೆಟ್ರೋಲ್ ಪಂಪ್‌ಗಳಲ್ಲಿ ʼಮೋದಿ ಕಿ ಗ್ಯಾರಂಟಿʼ ಹೋರ್ಡಿಂಗ್‌ ಅಳವಡಿಸಲು ಸೂಚನೆ: ವರದಿ

ಪೆಟ್ರೋಲ್ ಪಂಪ್‌ಗಳಲ್ಲಿ ʼಮೋದಿ ಕಿ ಗ್ಯಾರಂಟಿʼ ಹೋರ್ಡಿಂಗ್‌ ಅಳವಡಿಸಲು ಸೂಚನೆ: ವರದಿ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ವಿಶ್ವವಿದ್ಯಾನಿಲಯಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌, ರೈಲ್ವೇ ನಿಲ್ಧಾಣಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌, ಪಡಿತರ ಅಕ್ಕಿ ಚೀಲದಲ್ಲಿ ಮೋದಿ ಪೋಟೋ ಕುರಿತ ಆದೇಶಗಳು ಕೇಂದ್ರ ಸರಕಾರದಿಂದ ಬಂದಿದ್ದವು. ಸರಕಾರದ ಬೊಕ್ಕಸದಿಂದ ಇದಕ್ಕೆ ಕೋಟ್ಯಾಂತರ ರೂ. ವೆಚ್ಚವನ್ನು ಮಾಡಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪ್ರತಿಪಕ್ಷಗಳು ಇದು ಬಿಜೆಪಿ ಮತ್ತು ಮೋದಿಯ ಚುನಾವಣಾ ಪ್ರಚಾರದ ಭಾಗ ಎಂದು ಟೀಕೆಯನ್ನು ಮಾಡಿತ್ತು, ಸರಕಾರದ ಬೊಕ್ಕಸದ ಕೋಟ್ಯಾಂತರ ರೂ ಹಣದ ದುರ್ಬಳಕೆ ಎಂದು ವಾಗ್ದಾಳಿಯನ್ನು ನಡೆಸಿತ್ತು. ಇದೀಗ ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಪಂಪ್‌ಗಳು ಮತ್ತು ಇಂಧನ ರಿಟೇಲರ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಹೋರ್ಡಿಂಗ್‌ಗಳು ಮತ್ತು ಬ್ಯಾನರ್‌ಗಳನ್ನು ಹಾಕಲು ನಿರ್ದೇಶಿಸಲಾಗಿದ್ದು, ಸರ್ಕಾರದ ಪ್ರಮುಖ ಯೋಜನೆಯಾದ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸಿಲಿಂಡರ್ ನೀಡುತ್ತಿರುವ ಫೋಟೋ ಹೋರ್ಡಿಂಗ್ಸ್‌ನಲ್ಲಿರಲಿದೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಹೊಸ ಫ್ಲೆಕ್ಸ್ ಹೋರ್ಡಿಂಗ್‌ಗಳು ಬುಧವಾರದೊಳಗೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಎಲ್ಲಾ ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ಗಳಿಗೆ ಹೇಳಲಾಗಿದೆ. ತೈಲ ಕಂಪನಿಗಳು ನಿಯೋಜಿಸಲ್ಪಟ್ಟ ಹೋರ್ಡಿಗ್‌ ಅಳವಡಿಸುವವರು ಬಾರದೇ ಇದ್ದಲ್ಲಿ ಆಯಾ ಮೇಲಧಿಕಾರಿಗಳಿಗೆ ತಿಳಿಸುವಂತೆಯೂ ಮ್ಯಾನೇಜರ್‌ಗಳಿಗೆ ಸೂಚಿಸಲಾಗಿದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅನೌಪಚಾರಿಕ ಸೂಚನೆಯ ಮೇರೆಗೆ ‘ಮೋದಿ ಕಿ ಗ್ಯಾರಂಟಿ’ ಹೋರ್ಡಿಂಗ್‌ಗಳನ್ನು ಹಾಕುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮತ್ತು ಸಾರ್ವಜನಿಕ ವಲಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಭಾರತ್ ಪೆಟ್ರೋಲಿಯಂಗಳಲ್ಲಿ ಹೊಸ ಫ್ಲೆಕ್ಸ್ ಹೋರ್ಡಿಂಗ್‌ಗಳನ್ನು ಹಾಕಲು ಸೂಚಿಸಲಾಗಿದೆ.

ಚುನಾವಣಾ ಆಯೋಗವು ಬಹು ನಿರೀಕ್ಷಿತ ಸಾರ್ವತ್ರಿಕ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರ ಮತ್ತು ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಈ ಹೋರ್ಡಿಂಗ್‌ಗಳನ್ನು ತೆಗೆದುಹಾಕಲಾಗುತ್ತದೆ. ಆದರೆ ಚುನಾವಣೆ ಘೋಷಣೆಗೆ ಮೊದಲು ಸರಕಾರ ತಕ್ಷಣಕ್ಕೆ ಈ ಹೋರ್ಡಿಂಗ್‌ಗಳನ್ನು ಅಳವಡಿಸುವಂತೆ ಕೇಳಿಕೊಂಡಿದೆ.

ಮಾರ್ಚ್ 2021ರಲ್ಲಿ, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ, ತೃಣಮೂಲ ಕಾಂಗ್ರೆಸ್‌ನ ದೂರಿನ ಮೇರೆಗೆ ಚುನಾವಣಾ ಆಯೋಗವು ಪೆಟ್ರೋಲ್ ಪಂಪ್‌ಗಳಲ್ಲಿನ ಪಿಎಂ ಮೋದಿಯವರ ಚಿತ್ರವಿರುವ ಎಲ್ಲಾ ಹೋರ್ಡಿಂಗ್‌ಗಳನ್ನು ತೆಗೆದುಹಾಕುವಂತೆ ಸೂಚಿಸಿತ್ತು. ಇತ್ತೀಚೆಗೆ ನಡೆದ ರಾಜಸ್ಥಾನ ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕೂಡ ಬಿಜೆಪಿ “ಮೋದಿ ಕಿ ಗ್ಯಾರಂಟಿ” ಎಂಬ ಚುನಾವಣಾ ಘೋಷಣೆಯೊಂದಿಗೆ ಪ್ರಚಾರವನ್ನು ಮಾಡಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...