Homeಮುಖಪುಟಪೆಟ್ರೋಲ್ ಪಂಪ್‌ಗಳಲ್ಲಿ ʼಮೋದಿ ಕಿ ಗ್ಯಾರಂಟಿʼ ಹೋರ್ಡಿಂಗ್‌ ಅಳವಡಿಸಲು ಸೂಚನೆ: ವರದಿ

ಪೆಟ್ರೋಲ್ ಪಂಪ್‌ಗಳಲ್ಲಿ ʼಮೋದಿ ಕಿ ಗ್ಯಾರಂಟಿʼ ಹೋರ್ಡಿಂಗ್‌ ಅಳವಡಿಸಲು ಸೂಚನೆ: ವರದಿ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ವಿಶ್ವವಿದ್ಯಾನಿಲಯಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌, ರೈಲ್ವೇ ನಿಲ್ಧಾಣಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌, ಪಡಿತರ ಅಕ್ಕಿ ಚೀಲದಲ್ಲಿ ಮೋದಿ ಪೋಟೋ ಕುರಿತ ಆದೇಶಗಳು ಕೇಂದ್ರ ಸರಕಾರದಿಂದ ಬಂದಿದ್ದವು. ಸರಕಾರದ ಬೊಕ್ಕಸದಿಂದ ಇದಕ್ಕೆ ಕೋಟ್ಯಾಂತರ ರೂ. ವೆಚ್ಚವನ್ನು ಮಾಡಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪ್ರತಿಪಕ್ಷಗಳು ಇದು ಬಿಜೆಪಿ ಮತ್ತು ಮೋದಿಯ ಚುನಾವಣಾ ಪ್ರಚಾರದ ಭಾಗ ಎಂದು ಟೀಕೆಯನ್ನು ಮಾಡಿತ್ತು, ಸರಕಾರದ ಬೊಕ್ಕಸದ ಕೋಟ್ಯಾಂತರ ರೂ ಹಣದ ದುರ್ಬಳಕೆ ಎಂದು ವಾಗ್ದಾಳಿಯನ್ನು ನಡೆಸಿತ್ತು. ಇದೀಗ ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಪಂಪ್‌ಗಳು ಮತ್ತು ಇಂಧನ ರಿಟೇಲರ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಹೋರ್ಡಿಂಗ್‌ಗಳು ಮತ್ತು ಬ್ಯಾನರ್‌ಗಳನ್ನು ಹಾಕಲು ನಿರ್ದೇಶಿಸಲಾಗಿದ್ದು, ಸರ್ಕಾರದ ಪ್ರಮುಖ ಯೋಜನೆಯಾದ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸಿಲಿಂಡರ್ ನೀಡುತ್ತಿರುವ ಫೋಟೋ ಹೋರ್ಡಿಂಗ್ಸ್‌ನಲ್ಲಿರಲಿದೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಹೊಸ ಫ್ಲೆಕ್ಸ್ ಹೋರ್ಡಿಂಗ್‌ಗಳು ಬುಧವಾರದೊಳಗೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಎಲ್ಲಾ ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ಗಳಿಗೆ ಹೇಳಲಾಗಿದೆ. ತೈಲ ಕಂಪನಿಗಳು ನಿಯೋಜಿಸಲ್ಪಟ್ಟ ಹೋರ್ಡಿಗ್‌ ಅಳವಡಿಸುವವರು ಬಾರದೇ ಇದ್ದಲ್ಲಿ ಆಯಾ ಮೇಲಧಿಕಾರಿಗಳಿಗೆ ತಿಳಿಸುವಂತೆಯೂ ಮ್ಯಾನೇಜರ್‌ಗಳಿಗೆ ಸೂಚಿಸಲಾಗಿದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅನೌಪಚಾರಿಕ ಸೂಚನೆಯ ಮೇರೆಗೆ ‘ಮೋದಿ ಕಿ ಗ್ಯಾರಂಟಿ’ ಹೋರ್ಡಿಂಗ್‌ಗಳನ್ನು ಹಾಕುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮತ್ತು ಸಾರ್ವಜನಿಕ ವಲಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಭಾರತ್ ಪೆಟ್ರೋಲಿಯಂಗಳಲ್ಲಿ ಹೊಸ ಫ್ಲೆಕ್ಸ್ ಹೋರ್ಡಿಂಗ್‌ಗಳನ್ನು ಹಾಕಲು ಸೂಚಿಸಲಾಗಿದೆ.

ಚುನಾವಣಾ ಆಯೋಗವು ಬಹು ನಿರೀಕ್ಷಿತ ಸಾರ್ವತ್ರಿಕ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರ ಮತ್ತು ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಈ ಹೋರ್ಡಿಂಗ್‌ಗಳನ್ನು ತೆಗೆದುಹಾಕಲಾಗುತ್ತದೆ. ಆದರೆ ಚುನಾವಣೆ ಘೋಷಣೆಗೆ ಮೊದಲು ಸರಕಾರ ತಕ್ಷಣಕ್ಕೆ ಈ ಹೋರ್ಡಿಂಗ್‌ಗಳನ್ನು ಅಳವಡಿಸುವಂತೆ ಕೇಳಿಕೊಂಡಿದೆ.

ಮಾರ್ಚ್ 2021ರಲ್ಲಿ, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ, ತೃಣಮೂಲ ಕಾಂಗ್ರೆಸ್‌ನ ದೂರಿನ ಮೇರೆಗೆ ಚುನಾವಣಾ ಆಯೋಗವು ಪೆಟ್ರೋಲ್ ಪಂಪ್‌ಗಳಲ್ಲಿನ ಪಿಎಂ ಮೋದಿಯವರ ಚಿತ್ರವಿರುವ ಎಲ್ಲಾ ಹೋರ್ಡಿಂಗ್‌ಗಳನ್ನು ತೆಗೆದುಹಾಕುವಂತೆ ಸೂಚಿಸಿತ್ತು. ಇತ್ತೀಚೆಗೆ ನಡೆದ ರಾಜಸ್ಥಾನ ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕೂಡ ಬಿಜೆಪಿ “ಮೋದಿ ಕಿ ಗ್ಯಾರಂಟಿ” ಎಂಬ ಚುನಾವಣಾ ಘೋಷಣೆಯೊಂದಿಗೆ ಪ್ರಚಾರವನ್ನು ಮಾಡಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯಿಂದ ಇಸ್ಲಾಮೋಫೋಬಿಕ್ ಹೇಳಿಕೆ : ತೀವ್ರ ಆಕ್ರೋಶ

ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ 'ಶಾಂತಿ ಸಭೆ'ಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು 'ಇಸ್ಲಾಮೋಫೋಬಿಕ್' ಹೇಳಿಕೆ ನೀಡಿರುವುದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಧಿಕಾರಿಯ ಹೇಳಿಕೆ ರಾಜಕೀಯ ನಾಯಕರು...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...