Homeಮುಖಪುಟಪೆಟ್ರೋಲ್ ಪಂಪ್‌ಗಳಲ್ಲಿ ʼಮೋದಿ ಕಿ ಗ್ಯಾರಂಟಿʼ ಹೋರ್ಡಿಂಗ್‌ ಅಳವಡಿಸಲು ಸೂಚನೆ: ವರದಿ

ಪೆಟ್ರೋಲ್ ಪಂಪ್‌ಗಳಲ್ಲಿ ʼಮೋದಿ ಕಿ ಗ್ಯಾರಂಟಿʼ ಹೋರ್ಡಿಂಗ್‌ ಅಳವಡಿಸಲು ಸೂಚನೆ: ವರದಿ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ವಿಶ್ವವಿದ್ಯಾನಿಲಯಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌, ರೈಲ್ವೇ ನಿಲ್ಧಾಣಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌, ಪಡಿತರ ಅಕ್ಕಿ ಚೀಲದಲ್ಲಿ ಮೋದಿ ಪೋಟೋ ಕುರಿತ ಆದೇಶಗಳು ಕೇಂದ್ರ ಸರಕಾರದಿಂದ ಬಂದಿದ್ದವು. ಸರಕಾರದ ಬೊಕ್ಕಸದಿಂದ ಇದಕ್ಕೆ ಕೋಟ್ಯಾಂತರ ರೂ. ವೆಚ್ಚವನ್ನು ಮಾಡಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪ್ರತಿಪಕ್ಷಗಳು ಇದು ಬಿಜೆಪಿ ಮತ್ತು ಮೋದಿಯ ಚುನಾವಣಾ ಪ್ರಚಾರದ ಭಾಗ ಎಂದು ಟೀಕೆಯನ್ನು ಮಾಡಿತ್ತು, ಸರಕಾರದ ಬೊಕ್ಕಸದ ಕೋಟ್ಯಾಂತರ ರೂ ಹಣದ ದುರ್ಬಳಕೆ ಎಂದು ವಾಗ್ದಾಳಿಯನ್ನು ನಡೆಸಿತ್ತು. ಇದೀಗ ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಪಂಪ್‌ಗಳು ಮತ್ತು ಇಂಧನ ರಿಟೇಲರ್‌ಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಹೋರ್ಡಿಂಗ್‌ಗಳು ಮತ್ತು ಬ್ಯಾನರ್‌ಗಳನ್ನು ಹಾಕಲು ನಿರ್ದೇಶಿಸಲಾಗಿದ್ದು, ಸರ್ಕಾರದ ಪ್ರಮುಖ ಯೋಜನೆಯಾದ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸಿಲಿಂಡರ್ ನೀಡುತ್ತಿರುವ ಫೋಟೋ ಹೋರ್ಡಿಂಗ್ಸ್‌ನಲ್ಲಿರಲಿದೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಹೊಸ ಫ್ಲೆಕ್ಸ್ ಹೋರ್ಡಿಂಗ್‌ಗಳು ಬುಧವಾರದೊಳಗೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಎಲ್ಲಾ ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ಗಳಿಗೆ ಹೇಳಲಾಗಿದೆ. ತೈಲ ಕಂಪನಿಗಳು ನಿಯೋಜಿಸಲ್ಪಟ್ಟ ಹೋರ್ಡಿಗ್‌ ಅಳವಡಿಸುವವರು ಬಾರದೇ ಇದ್ದಲ್ಲಿ ಆಯಾ ಮೇಲಧಿಕಾರಿಗಳಿಗೆ ತಿಳಿಸುವಂತೆಯೂ ಮ್ಯಾನೇಜರ್‌ಗಳಿಗೆ ಸೂಚಿಸಲಾಗಿದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅನೌಪಚಾರಿಕ ಸೂಚನೆಯ ಮೇರೆಗೆ ‘ಮೋದಿ ಕಿ ಗ್ಯಾರಂಟಿ’ ಹೋರ್ಡಿಂಗ್‌ಗಳನ್ನು ಹಾಕುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮತ್ತು ಸಾರ್ವಜನಿಕ ವಲಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಭಾರತ್ ಪೆಟ್ರೋಲಿಯಂಗಳಲ್ಲಿ ಹೊಸ ಫ್ಲೆಕ್ಸ್ ಹೋರ್ಡಿಂಗ್‌ಗಳನ್ನು ಹಾಕಲು ಸೂಚಿಸಲಾಗಿದೆ.

ಚುನಾವಣಾ ಆಯೋಗವು ಬಹು ನಿರೀಕ್ಷಿತ ಸಾರ್ವತ್ರಿಕ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರ ಮತ್ತು ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಈ ಹೋರ್ಡಿಂಗ್‌ಗಳನ್ನು ತೆಗೆದುಹಾಕಲಾಗುತ್ತದೆ. ಆದರೆ ಚುನಾವಣೆ ಘೋಷಣೆಗೆ ಮೊದಲು ಸರಕಾರ ತಕ್ಷಣಕ್ಕೆ ಈ ಹೋರ್ಡಿಂಗ್‌ಗಳನ್ನು ಅಳವಡಿಸುವಂತೆ ಕೇಳಿಕೊಂಡಿದೆ.

ಮಾರ್ಚ್ 2021ರಲ್ಲಿ, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ, ತೃಣಮೂಲ ಕಾಂಗ್ರೆಸ್‌ನ ದೂರಿನ ಮೇರೆಗೆ ಚುನಾವಣಾ ಆಯೋಗವು ಪೆಟ್ರೋಲ್ ಪಂಪ್‌ಗಳಲ್ಲಿನ ಪಿಎಂ ಮೋದಿಯವರ ಚಿತ್ರವಿರುವ ಎಲ್ಲಾ ಹೋರ್ಡಿಂಗ್‌ಗಳನ್ನು ತೆಗೆದುಹಾಕುವಂತೆ ಸೂಚಿಸಿತ್ತು. ಇತ್ತೀಚೆಗೆ ನಡೆದ ರಾಜಸ್ಥಾನ ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕೂಡ ಬಿಜೆಪಿ “ಮೋದಿ ಕಿ ಗ್ಯಾರಂಟಿ” ಎಂಬ ಚುನಾವಣಾ ಘೋಷಣೆಯೊಂದಿಗೆ ಪ್ರಚಾರವನ್ನು ಮಾಡಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್‌ ಮಾಹಿತಿ ಒದಗಿಸಲು ಗಡುವು ವಿಸ್ತರಿಸಿ: ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...