Homeಮುಖಪುಟ"ಸಾವರ್ಕರ್‌ ಜೊತೆ ಸುಭಾಷ್‌ ಚಂದ್ರ ಬೋಸ್‌ಗೆ ಸಂಬಂಧ ಕಲ್ಪಿಸಬೇಡಿ": ಸಿನಿಮಾ ಟ್ರೇಲರ್‌ಗೆ ಆಕ್ಷೇಪ ಎತ್ತಿದ ನೇತಾಜಿ...

“ಸಾವರ್ಕರ್‌ ಜೊತೆ ಸುಭಾಷ್‌ ಚಂದ್ರ ಬೋಸ್‌ಗೆ ಸಂಬಂಧ ಕಲ್ಪಿಸಬೇಡಿ”: ಸಿನಿಮಾ ಟ್ರೇಲರ್‌ಗೆ ಆಕ್ಷೇಪ ಎತ್ತಿದ ನೇತಾಜಿ ಮೊಮ್ಮಗ

- Advertisement -
- Advertisement -

ಸ್ವಾತಂತ್ರ್ಯ ಹೋರಾಟ ಸಂದರ್ಭದ ವಿವಾದಾತ್ಮಕ ಮುಖಂಡ ಹಾಗೂ ಬಲಪಂಥೀಯ ನಾಯಕ ಸಾವರ್ಕರ್ ಬಗೆಗಿನ ಹಿಂದಿ ಸಿನಿಮಾ ತಯಾರಾಗಿದ್ದು, ಮಾರ್ಚ್‌ 22ರಂದು ಬಿಡುಗಡೆಯಾಗಲಿದೆ.

‘ಸ್ವಾತಂತ್ರ್ಯ ವೀರ ಸಾವರ್ಕರ್’ ಎಂಬ ಶೀರ್ಷಿಕೆಯ ಈ ಸಿನಿಮಾವನ್ನು ಬಾಲಿವುಡ್ ನಟ ರಣದೀಪ್ ಹೂಡಾ ನಿರ್ದೇಶನ ಮಾಡಿದ್ದು, ಅವರೇ ಸಾವರ್ಕರ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಟ್ರೇಲರ್ ಮಂಗಳವಾರ (ಮಾ.5) ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

ಟ್ರೇಲರ್ ಬಿಡುಗಡೆಯ ಬೆನ್ನಲ್ಲೇ ಆಕ್ಷೇಪ ಎತ್ತಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್, “ಸಾವರ್ಕರ್‌ರೊಂದಿಗೆ ಸುಭಾಷ್ ಚಂದ್ರ ಬೋಸ್‌ನವರಿಗೆ ಸಂಬಂಧ ಕಲ್ಪಿಸಬೇಡಿ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮಂಗಳವಾರ ಸಂಜೆ ಎಕ್ಸ್‌ ಪೋಸ್ಟ್ ಹಾಕಿರುವ ನೇತಾಜಿ ಮೊಮ್ಮಗ, “ನೀವು ಸಾವರ್ಕರ್ ಕುರಿತು ಚಲನಚಿತ್ರವನ್ನು ಮಾಡುತ್ತಿರುವುದನ್ನು ನಾನು ಪ್ರಶಂಸಿಸುವೆ. ಆದರೆ, ನಿಜವಾದ ವ್ಯಕ್ತಿತ್ವವನ್ನು ಪ್ರದರ್ಶಿಸುವುದು ಮುಖ್ಯ” ಎಂದಿದ್ದಾರೆ.

“ದಯವಿಟ್ಟು ಸಾವರ್ಕರ್ ಜೊತೆಗೆ ‘ನೇತಾಜಿ ಸುಭಾಷ್ ಚಂದ್ರ ಬೋಸ್’ ಅವರ ಹೆಸರನ್ನು ಲಿಂಕ್ ಮಾಡಬೇಡಿ. ನೇತಾಜಿ ಅಪ್ಪಟ ಜಾತ್ಯತೀತ ನಾಯಕ ಮತ್ತು ದೇಶ ದೇಶಭಕ್ತರಾಗಿದ್ದರು” ಎಂದು ಟ್ರೇಲರ್‌ನಲ್ಲಿ ನೇತಾಜಿ ಸುಭಾಷ್‌ ಚಂದ್ರ ಬೋಸ್ ಪಾತ್ರಧಾರಿಯು ಸಾವರ್ಕರ್ ಪಾತ್ರಧಾರಿಯಾದ ರಣದೀಪ್‌ ಹೂಡಾ ಅವರನ್ನು ಅಪ್ಪಿಕೊಳ್ಳುವ ದೃಶ್ಯಕ್ಕೆ ಚಂದ್ರ ಕುಮಾರ್ ಬೋಸ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನೇತಾಜಿ ಮೊಮ್ಮಗ ಚಂದ್ರ ಕುಮಾರ್ ಬೋಸ್ ಅವರು 2016ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಳಿಕ 2016ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತ್ತು ನಂತರ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದರು. ಆ ಬಳಿಕ 2023ರ ಸೆಪ್ಟೆಂಬರ್‌ನಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಹೊರ ಬಂದಿದ್ದರು.

“ನಾನು ಬಿಜೆಪಿಗೆ ಸೇರಿದಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಶರತ್ ಚಂದ್ರ ಬೋಸ್ ಅವರ ಸಿದ್ಧಾಂತವನ್ನು ಪ್ರಚಾರ ಮಾಡಲು ನನಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ ಅದ್ಯಾವುದಕ್ಕೂ ಅವಕಾಶವೇ ನೀಡಿರಲಿಲ್ಲ” ಎಂದು ಚಂದ್ರ ಕುಮಾರ್ ಬೋಸ್ ರಾಜೀನಾಮೆ ವೇಳೆ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಶಹಜಹಾನ್ ಶೇಖ್‌ನ್ನು ಸಿಬಿಐಗೆ ಒಪ್ಪಿಸಲು ನಕಾರ: ಸುಪ್ರೀಂ ಮೊರೆ ಹೋದ ಪಶ್ಚಿಮ ಬಂಗಾಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...