Homeಮುಖಪುಟಬಂಗಾಳದ ಮಾನಹಾನಿಗೆ, ತೃಣಮೂಲ ನಾಯಕರನ್ನು ಬಂಧಿಸಲು ಬಿಜೆಪಿ ಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿ

ಬಂಗಾಳದ ಮಾನಹಾನಿಗೆ, ತೃಣಮೂಲ ನಾಯಕರನ್ನು ಬಂಧಿಸಲು ಬಿಜೆಪಿ ಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಕೋಲ್ಕತ್ತಾಗೆ ಭೇಟಿ ನೀಡಲಿರುವ ಮೊದಲು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯು ರಾಜ್ಯದ ಮಾನಹಾನಿ ಮಾಡಲು ಮತ್ತು ನಮ್ಮ ಪಕ್ಷದ ನಾಯಕರನ್ನು ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಸಂದೇಶಖಾಲಿ ಅಶಾಂತಿ, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಈ ಮಾತುಗಳು ಹೊರಬಿದ್ದಿವೆ.

ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ‘ಬಂಗಾಳದ ಮಾನಹಾನಿ ಮಾಡಲು, ಬಂಗಾಳದ ಅಧಿಕಾರಿಗಳ ಪ್ರತಿಷ್ಠೆಗೆ ಮಸಿ ಬಳಿಯಲು ಪ್ರಯತ್ನಿಸಲಾಗುತ್ತಿದೆ’ ಎಂದು ಹೇಳಿದರು.

‘ತೃಣಮೂಲ ನಾಯಕರನ್ನು ಬಂಧಿಸಲು ಬಿಜೆಪಿ ಸೂಚನೆ ನೀಡಿದೆ ಎಂದು ಏಜೆನ್ಸಿಗಳು ಹೇಳಿಕೊಳ್ಳುವುದನ್ನು ನಾವು ಕೇಳುತ್ತೇವೆ. ಏಜೆನ್ಸಿಯ ಹೆಸರನ್ನು ಬಳಸಿಕೊಂಡು ಅವರು ಬಲವಂತವಾಗಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ಕಳುಹಿಸುತ್ತಾರೆ’ ಎಂದು ಅವರು ಹೇಳಿದ್ದಾರೆ.

‘ನೀವು ಗೆಲ್ಲಲು ಬಯಸಿದರೆ, ಜನರ ವಿಶ್ವಾಸ ಗಳಿಸುವ ಮೂಲಕ ಮುನ್ನಡೆಯಿರಿ. ನಮಗೆ ನಿಷ್ಪಕ್ಷಪಾತ ಚುನಾವಣೆ ಬೇಕು, ಬಿಜೆಪಿಯ ಚುನಾವಣೆ ಅಲ್ಲ. ಬಂಗಾಳವು ನಿಷ್ಪಕ್ಷಪಾತ ಚುನಾವಣೆ ಸಾಧ್ಯವಿರುವ ಸ್ಥಳವಾಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಬಂಗಾಳದ ಬಗ್ಗೆ ದೊಡ್ಡದಾಗಿ ಮಾತನಾಡುವವರಿಗೆ ನಾನು ಹೇಳಲು ಬಯಸುತ್ತೇನೆ, ಉತ್ತರ ಪ್ರದೇಶಕ್ಕೆ ಬನ್ನಿ, ಕಳೆದ ಎರಡು ದಿನಗಳಲ್ಲಿ ಇಬ್ಬರು ಅಪ್ರಾಪ್ತರನ್ನು ಕಟ್ಟಿಹಾಕಿ ಕೊಲೆ ಮಾಡಲಾಗಿದೆ, ಒಮ್ಮೆ ಬಿಲ್ಕಿಸ್‌ನ ಮನೆಯಲ್ಲಿ, ಒಮ್ಮೆ ಹತ್ರಾಸ್‌ನಲ್ಲಿ ನೋಡಿ, ಬಂಗಾಳ ಅದಕ್ಕಿಂತ ಉತ್ತಮವಾಗಿದೆ’ ಎಂದು ಮಮತಾ ಬ್ಯಾನರ್ಜಿ ಹೇಳಿದರು.

‘ಬಿಜೆಪಿಯ ಕುಶಲ ಮಾತುಗಳು ಮತ್ತು ಹಿಂಸೆಯನ್ನು ಪ್ರಚೋದಿಸುವ ಪ್ರಯತ್ನಗಳು ಬಂಗಾಳದ ಮಹಿಳೆಯರನ್ನು ಅವಮಾನಿಸಿದೆ. ಬಂಗಾಳದ ತಾಯಂದಿರು ಮತ್ತು ಸಹೋದರಿಯರು ಇದರಿಂದ ಸಂತೋಷವಾಗಿಲ್ಲ’ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೋಲ್ಕತ್ತಾ ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಹೌರಾ ಮೈದಾನ-ಎಸ್ಪ್ಲಾನೇಡ್ ವಿಭಾಗವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಮಂತ್ರಿಯವರು ಹೊಸ ಗರಿಯಾ-ವಿಮಾನ ನಿಲ್ದಾಣ ಮೆಟ್ರೋದ ಕವಿ ಸುಭಾಷ್-ಹೇಮಂತ ಮುಖೋಪಾಧ್ಯಾಯ ವಿಭಾಗ, ಜೋಕಾ-ಎಸ್ಪ್ಲಾನೇಡ್ ಮೆಟ್ರೋದ ತಾರಾತಲಾ-ಮಜೆರ್ಹತ್ ಮೆಟ್ರೋ ವಿಭಾಗವನ್ನು ಸಹ ಉದ್ಘಾಟಿಸಲಿದ್ದಾರೆ.

ಈ ಬೆಳವಣಿಗೆಗಳ ನಡುವೆ, ಉತ್ತರ 24 ಪರಗಣ ಜಿಲ್ಲೆಯ ಬರಾಸತ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಸಂದೇಶಖಾಲಿಯಿಂದ ಮಹಿಳೆಯರು ಹೊರಟರು. ಆದರೆ, ಪ್ರಧಾನಿಯವರು ಮಹಿಳೆಯರನ್ನು ಭೇಟಿ ಮಾಡುತ್ತಾರೆಯೇ ಎಂಬ ಬಗ್ಗೆ ಅಧಿಕೃತ ದೃಢೀಕರಣವಿಲ್ಲ.

ಇತ್ತೀಚೆಗಷ್ಟೇ, ಸಂದೇಶಖಾಲಿಯಲ್ಲಿ ಇಡಿ ಅಧಿಕಾರಿಗಳ ಮೇಲಿನ ದಾಳಿ ಮತ್ತು ಅಮಾನತುಗೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಅವರ ಕಸ್ಟಡಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ಆದರೆ, ಪಶ್ಚಿಮ ಬಂಗಾಳ ಸರ್ಕಾರವು ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ರಾಜ್ಯ ಪೊಲೀಸರು ಶೇಖ್‌ನನ್ನು ಸಿಬಿಐ ತಂಡಕ್ಕೆ ಹಸ್ತಾಂತರಿಸಲು ನಿರಾಕರಿಸಿದರು.

ಇದನ್ನೂ ಓದಿ; ರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...