Homeಕರ್ನಾಟಕರಾಜ್ಯದಲ್ಲಿ 5,8,9ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್‌ ಮಹತ್ವದ ತೀರ್ಪು

ರಾಜ್ಯದಲ್ಲಿ 5,8,9ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್‌ ಮಹತ್ವದ ತೀರ್ಪು

- Advertisement -
- Advertisement -

5,8,9ನೇ ತರಗತಿಗಳ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಹೈಕೋರ್ಟ್‌ನ ಏಕಸದಸ್ಯ ಪೀಠ ಈ ಮಹತ್ವದ ಆದೇಶವನ್ನು ನೀಡಿದ್ದು, ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದ ರಾಜ್ಯ ಸರ್ಕಾರದ ಸುತ್ತೋಲೆಯನ್ನು ರದ್ದುಪಡಿಸಿದೆ.

ರಾಜ್ಯ ಸರಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಹೈಕೋರ್ಟ್‌ ಈ ತೀರ್ಪನ್ನು ನೀಡಿದೆ. ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ.

ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದೆ.

ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸುವುದು ಸುಲಭವಲ್ಲ. ಆದ್ದರಿಂದ ಎಲ್ಲಾ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವ ನಿರ್ಧಾರವನ್ನು ಹಿಂಪಡೆಯಬೇಕೆಂದು ಕೋರ್ಟ್‌ಗೆ ಮನವಿ ಸಲ್ಲಿಸಲಾಗಿತ್ತು.

ಸರ್ಕಾರದ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವಾಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ನೀಡುವ ನಿರ್ಧಾರ ಸರಿಯಿದೆ. ಬೋರ್ಡ್‌ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಕೋರ್ಟ್‌ನಲ್ಲಿ ಸರಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದರು.

ಇದನ್ನು ಓದಿ: ರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...