Homeಮುಖಪುಟಚುನಾವಣಾ ಬಾಂಡ್ ಹಗರಣದ ಕೈ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು: ನಟ ಕಿಶೋರ್

ಚುನಾವಣಾ ಬಾಂಡ್ ಹಗರಣದ ಕೈ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು: ನಟ ಕಿಶೋರ್

- Advertisement -
- Advertisement -

ಸುಪ್ರೀಂ ಕೋರ್ಟ್ ಸೂಚನೆಯಂತೆ ಚುನಾವಣಾ ಆಯೋಗಕ್ಕೆ ‘ಎಲೆಕ್ಟೊರಲ್ ಬಾಂಡಿನ’ ಲೆಕ್ಕ ಸಲ್ಲಿಸಲು ಮೂರು ತಿಂಗಳು ಸಮಾಯವಾಕಾಶ ಕೇಳಿರುವ ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ಕಿಡಿಕಾರಿರುವ ಜನಪ್ರಿಯ ನಟ ಕಿಶೋರ್, ‘ಚುನಾವಣಾ ಬಾಂಡ್ ಹಗರಣದ ಕಿಂಗ್ ಪಿನ್ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು’ ಎಂದು ಹೇಳಿದ್ದಾರೆ.

ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಎಸ್‌ಬಿಐ ನಡೆಯನ್ನು ‘ನಾಚಿಕೆಗೇಡು’ ಎಂದು ಕರೆದಿದ್ದಾರೆ. ;ನಂಬಿದರೆ ನಂಬಿ ಬಿಟ್ಟರೆ ಬಿಡಿ.. ಭಿಕ್ಷುಕರೂ ಡಿಜಿಟಲ್ ಬ್ಯಾಂಕಿಂಗ್ ಮಾಡುವ ಭಾರತದಲ್ಲಿ, ದೇಶದ ಅತಿ ದೊಡ್ಡಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಅಸಂವಿಧಾನಿಕ ಹಫ್ತಾ ವಸೂಲಿ ಹಗರಣ ಎಲೆಕ್ಟೊರಲ್ ಬಾಂಡಿನ ಲೆಕ್ಕವನ್ನು ಕೈಯಲ್ಲಿ ಬರೆದಿಟ್ಟಿದೆಯಂತೆ.. ಎಷ್ಟು ಹಾಸ್ಯಾಸ್ಪದ.. ಹಾಗಾಗಿ 22 ಸಾವಿರ ಎಂಟ್ರಿ ವಿವರ ಕೊಡೋಕೆ ಮೂರು ತಿಂಗಳು ಬೇಕಂತೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಳು ಹೇಳಲೂ ಬಾರದ ದಡ್ಡ ಗೂಂಡಾಪಡೆ

‘ಸದಾ ಸುಳ್ಳು ಬೊಗಳುವ ರಾಜನ ಸುಳ್ಳು ಹೇಳಲೂ ಬಾರದ ದಡ್ಡ ಗೂಂಡಾಪಡೆ.. ಇವರೆಲ್ಲ ಸೇರಿ ಯಾರ ಕಿವಿಯ ಮೇಲೆ ಹೂವಿಡಲು ಪ್ರಯತ್ನಿಸುತ್ತಿದ್ದಾರೆ? ಚಿಕ್ಕ ಮಕ್ಕಳೂ ಹೇಳಬಲ್ಲರು ಇದರ ಹಿಂದಿನ ಕೈವಾಡ ಯಾರದೆಂದು.. ಬರೀ ಸುಳ್ಳೇ ಬೊಗಳಿಯೂ ಧರ್ಮಾಂಧತೆಯ ಮಂಕುಬೂದಿಯೆರಚಿ ಯಾಮಾರಿಸುವ ಕಲೆ ಕರಗತಗೊಳಿಸಿರೊಂಡ ಹಗರಣದ ಕಿಂಗ್ ಪಿನ್, ಅತೀ ಭ್ರಷ್ಟ ಖೈದಿ ನಂ.56 ಇಲ್ಲೂ ತಪ್ಪಿಸಿಕೊಂಡರೆ, ಈ ಮೂರ್ಖಾತಿರೇಕಕ್ಕೆ ದೇಶವನ್ನು, ಪ್ರಜಾಪ್ರಭುತ್ವವನ್ನು ಬಲಿಕೊಟ್ಟು ಸುಮ್ಮನೇ ಒಮ್ಮೆ ಕಣ್ಣುಮುಚ್ಚಿ ಕೂಗಿಬಿಡಿ… ‘ಅವನಿ’ದ್ದರೆ ಇದೂ ಸಾಧ್ಯವೆಂದು.. (ಸಬ್ ಕುಚ್ ಮುಮ್ಕಿನ್ ಹೈ)’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಎಸ್‌ಬಿಐ ನಡೆಗೆ ಹಲವರ ವಿರೋಧ:

ಎಸ್‌ಬಿಐ ನಡೆಯ ಬಗ್ಗೆ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಪ್ರತಿಕ್ರಿಯಿಸಿದ್ದು, ಇದು ಸಂಪೂರ್ಣ ದುರುದ್ದೇಶಪೂರಿತವಾಗಿದೆ. ಎಸ್‌ಬಿಐ ಈ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಿದ್ದ ಒಂದು ದಿನ ಮುಂಚಿತವಾಗಿ ಈ ಅರ್ಜಿಯನ್ನು ಸಲ್ಲಿಸಿದೆ. ಮೂರು ದಿನಗಳ ಕಾಲ ಅವರು ಏನೂ ಮಾಡಲಿಲ್ಲ, ಮತ್ತು ಈಗ ಅವರು ಚುನಾವಣೆ ಕಳೆದ ಬಳಿಕ ಅಂದರೆ ಜೂನ್ 30ರವರೆಗೆ ವಿಸ್ತರಣೆಗೆ ಕೋರಿರುವುದು ಏಕೆ? ಏಕೆಂದರೆ ಸರ್ಕಾರ ಅವರನ್ನು ಈ ಅರ್ಜಿಯನ್ನು ಸಲ್ಲಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.

ಎಸ್‌ಬಿಐಯ ಅರ್ಜಿ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿಯವರು ದೇಣಿಗೆ ವ್ಯವಹಾರವನ್ನು ಮರೆಮಾಚಲು ತಮ್ಮ ಕೈಲಾದಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್‌ಗಳ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ದೇಶವಾಸಿಗಳ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿರುವಾಗ, ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಸಾರ್ವಜನಿಕಗೊಳಿಸಬಾರದು ಎಂದು ಏಕೆ ಬಯಸುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...